AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಜವಳಿ ಉದ್ಯಮಕ್ಕೆ ನೆರವಾದ ಬಾಂಗ್ಲಾದೇಶ ಬಿಕ್ಕಟ್ಟು; ಹೊಸ ಆರ್ಡರ್ಸ್ ಪ್ರಮಾಣ ಹೆಚ್ಚಳ

Indian textile industry gain from Bangla crisis: ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದ ಹಿನ್ನೆಲೆಯಲ್ಲಿ ಹಲವು ಜಾಗತಿಕ ಉಡುಪು ಬ್ರ್ಯಾಂಡ್​ಗಳು ಭಾರತೀಯ ಗಾರ್ಮೆಂಟ್ಸ್ ಉದ್ದಿಮೆಗಳತ್ತ ತಿರುತ್ತಿವೆ. ಹಲವು ಐರೋಪ್ಯ ದೇಶಗಳ ಕಂಪನಿಗಳಿಂದ ಭಾರತೀಯ ಕಂಪನಿಗಳಿಗೆ ಆರ್ಡರ್ಸ್ ಬರುವುದು ಹೆಚ್ಚಾಗಿದೆ. ತಿರುಪ್ಪೂರ್, ನೋಯ್ಡಾದ ಗಾರ್ಮೆಂಟ್ಸ್ ಉದ್ದಿಮೆಗಳು ಬಿಸಿನೆಸ್ ಹೆಚ್ಚಳ ಕಂಡಿವೆ.

ಭಾರತದ ಜವಳಿ ಉದ್ಯಮಕ್ಕೆ ನೆರವಾದ ಬಾಂಗ್ಲಾದೇಶ ಬಿಕ್ಕಟ್ಟು; ಹೊಸ ಆರ್ಡರ್ಸ್ ಪ್ರಮಾಣ ಹೆಚ್ಚಳ
ಝಾರಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 08, 2024 | 11:47 AM

Share

ನವದೆಹಲಿ, ಸೆಪ್ಟೆಂಬರ್ 8: ಚೀನಾದಲ್ಲಿ ಅತಿಹೆಚ್ಚು ನೆಲೆ ನಿಂತಿರುವ ಜಾಗತಿಕ ಉತ್ಪಾದನಾ ವಲಯದಲ್ಲಿ ಹಲವು ಕಂಪನಿಗಳು ಬೇರೆ ಕಡೆಯೂ ಹರಡಿಕೊಳ್ಳುತ್ತಿವೆ. ಇದರ ಫಲವಾಗಿ ಭಾರತದಲ್ಲೂ ಎಲೆಕ್ಟ್ರಾನಿಕ್ಸ್ ಇತ್ಯಾದಿ ಉತ್ಪಾದನೆ ಹೆಚ್ಚಾಗತೊಡಗಿದೆ. ಈ ಮಧ್ಯೆ ಬಾಂಗ್ಲಾದೇಶದಲ್ಲಿ ಇರುವ ಬಿಕ್ಕಟ್ಟೂ ಕೂಡ ಭಾರತಕ್ಕೆ ತುಸು ಲಾಭ ತಂದಿದೆ. ಬಾಂಗ್ಲಾದೇಶ ಜವಳಿ, ಉಡುಪು ಉತ್ಪಾದನೆಯಲ್ಲಿ ಬಲವಾಗಿದೆ. ಹಲವು ಐರೋಪ್ಯ ದೇಶಗಳಿಂದ ಸಾಕಷ್ಟು ಆರ್ಡರ್ಸ್ ಬರುತ್ತದೆ. ಈ ಕ್ಷೇತ್ರದಲ್ಲಿ ಭಾರತಕ್ಕಿಂತ ಬಾಂಗ್ಲಾದ ಒಂದು ಕೈ ಮೇಲಿದೆ. ಈಗ ಆ ದೇಶದಲ್ಲಿ ರಾಜಕೀಯ ಮತ್ತು ನಾಗರಿಕ ಬಿಕ್ಕಟ್ಟು ತಲೆದೋರಿರುವ ಹಿನ್ನೆಲೆಯಲ್ಲಿ ಹಲವು ದೇಶಗಳ ಉಡುಪು ಕಂಪನಿಗಳು ಭಾರತೀಯ ಕಂಪನಿಗಳತ್ತ ಮುಖ ಮಾಡುತ್ತಿವೆ.

ನೋಯ್ಡಾದ ಜವಳಿ ಕ್ಲಸ್ಟರ್​ನ ಹಲವು ಸಂಸ್ಥೆಗಳು, ತಮಿಳುನಾಡಿನ ತಿರುಪ್ಪೂರ್ ಉದ್ಯಮಗಳಿಗೆ ವಿದೇಶಗಳಿಂದ ಆರ್ಡರ್ಸ್ ಬರುವ ಪ್ರಮಾಣ ಹೆಚ್ಚಾಗಿದೆ. ಕಳೆದ ಎರಡು ವಾರಗಳಿಂದ ತಿರುಪ್ಪೂರ್​ನ ಜವಳಿ ಉದ್ಯಮಕ್ಕೆ ಜರ್ಮನಿ, ನೆದರ್​ಲ್ಯಾಂಡ್ಸ್ ಮತ್ತು ಪೋಲ್ಯಾಂಡ್ ದೇಶಗಳ ಸುಪ್ರಸಿದ್ಧ ಉಡುಪು ಬ್ರ್ಯಾಂಡ್​ಗಳು 450 ಕೋಟಿ ರೂ ಮೊತ್ತದ ಬಟ್ಟೆಗಳಿಗೆ ಆರ್ಡರ್ಸ್ ಕೊಟ್ಟಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಸೆಬಿ vs ಉದ್ಯೋಗಿಗಳ ‘ಟಾಕ್ಸಿಕ್’ ಫೈಟ್; ಆರಂಭಿಕ ಸಂಬಳವೇ 34 ಲಕ್ಷ ಕೊಡ್ತೀವಿ; ಇದೆಲ್ಲಾ ಹೊರಗಿನವರ ಚಿತಾವಣೆ ಎಂದ ಸೆಬಿ

ಕೆಐಕೆ, ಝೀಮ್ಯಾನ್, ಪೆಪ್ಕೋ ಮೊದಲಾದ ಅಂತಾರಾಷ್ಟ್ರೀಯ ಉಡುಪು ಮಾರಾಟಗಾರರು ತುರ್ತಾಗಿ ಡೆಲಿವರಿ ಬೇಕೆಂದು ತಿರುಪ್ಪೂರ್​ನ ಗಾರ್ಮೆಂಟ್ ಉದ್ದಿಮೆಗಳಿಗೆ ಆರ್ಡರ್ಸ್ ಕೊಟ್ಟಿವೆ. ಒಂದೊಂದು ಉಡುಪಿನ ಬೆಲೆ 3 ಡಾಲರ್ ಇದೆ. ಅಂದರೆ ಸುಮಾರು 250 ರೂ ಮೌಲ್ಯದ ಬಟ್ಟೆಗಳನ್ನು ತಯಾರಿಸಿಕೊಡಬೇಕಿದೆ. ಕ್ರಿಸ್ಮಸ್ ಮತ್ತು ಹೊಸ ವರ್ಷದೊಳಗೆ ಇವುಗಳ ಡೆಲಿವರಿ ಆಗಬೇಕು. ತಿರುಪ್ಪೂರ್​ನ ರಫ್ತು ಸಂಸ್ಥೆ (ಟಿಇಎ) ಅಧ್ಯಕ್ಷ ಕೆಎಂ ಸುಬ್ರಮಣಿಯನ್ ಈ ವಿಚಾರವನ್ನು ತಿಳಿಸಿದರೆಂದು ಬಿಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ವರದಿ ಮಾಡಿ.

ಸಾಮಾನ್ಯವಾಗಿ ಖ್ಯಾತ ಉಡುಪು ಬ್ರ್ಯಾಂಡ್​ಗಳು ಎರಡು ಸೀಸನ್​ಗೆ ಆರ್ಡರ್ಸ್ ಕೊಡುತ್ತವೆ. ಸ್ಪ್ರಿಂಗ್ ಸೀಸನ್​ಗೆಂದು ಡಿಸೆಂಬರ್ ಮತ್ತು ಜನವರಿಯಲ್ಲಿ ಆರ್ಡರ್ಸ್ ನೀಡುತ್ತವೆ. ಬೇಸಿಗೆ ಸೀಸನ್​ಗೆಂದು ಜೂನ್ ಮತ್ತು ಜುಲೈನಲ್ಲಿ ಆರ್ಡರ್ಸ್ ಬರುತ್ತವೆ. ಕ್ರಿಸ್ಮಸ್​ಗೆ ಮುನ್ನವೇ ತಿರುಪ್ಪೂರ್ ಗಾರ್ಮೆಂಟ್ಸ್ ಉದ್ಯಮಕ್ಕೆ ದಿಢೀರನೇ ಆರ್ಡರ್ಸ್ ಹೆಚ್ಚಾಗಿರುವುದು ಇದೇ ಮೊದಲು ಎನ್ನಲಾಗುತ್ತಿದೆ.

ಇದನ್ನೂ ಓದಿ: ರಫ್ತು ಕ್ಷೇತ್ರದಲ್ಲಿ ಭಾರತವನ್ನು ಹಿಂದಿಕ್ಕುತ್ತಿವೆ ವಿಯೆಟ್ನಾಂ, ಬಾಂಗ್ಲಾದಂಥ ಸಣ್ಣ ಪುಟ್ಟ ದೇಶಗಳು: ವಿಶ್ವಬ್ಯಾಂಕ್ ವರದಿ

ತಿರುಪ್ಪೂರ್ ಮಾತ್ರವಲ್ಲ ನೋಯ್ಡಾದಲ್ಲಿರುವ ಗಾರ್ಮೆಂಟ್ಸ್ ಉದ್ಯಮ ಕೂಡ ಈ ಬಾರಿ ಹೆಚ್ಚು ಆರ್ಡರ್ಸ್ ಪಡೆದಿದೆ. ಸ್ಪೇನ್​ನ ವಿಶ್ವಖ್ಯಾತ ಉಡುಪು ಬ್ರ್ಯಾಂಡ್ ಆದ ಝಾರಾದಿಂದ ನೋಯ್ಡಾದ ಜವಳಿ ಕ್ಲಸ್ಟರ್ ಆದ ಎನ್​ಎಇಸಿಯ ಉದ್ದಿಮೆಗಳಿಗೆ ಕೊಡಲಾದ ಆರ್ಡರ್ಸ್​ನಲ್ಲಿ ಕಳೆದ ಒಂದು ತಿಂಗಳಲ್ಲಿ ಶೇ. 15ರಷ್ಟು ಹೆಚ್ಚಾಗಿದೆ. ಅಂದರೆ ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ. 15ರಷ್ಟು ಹೆಚ್ಚು ಬುಕಿಂಗ್ ಆಗಿದೆ. ಮಹಿಳೆಯರ ಟಾಪ್ಸ್ ಮತ್ತು ಡ್ರೆಸ್​ಗಳಿಗೆ 5 ಮತ್ತು 9 ಡಾಲರ್ ಬೆಲೆಗೆ ಆರ್ಡರ್ಸ್ ಬಂದಿದೆ. ಡೆಲಿವರಿ ಅವಧಿ 60 ದಿನ ನೀಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್