AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raghuram Rajan: ಭಾರತದ ಆರ್ಥಿಕ ಭವಿಷ್ಯದ ಬಗ್ಗೆ ಜನರ ವಿಶ್ವಾಸ ಕುಸಿದಿದೆ ಎಂದ ರಘುರಾಮ್ ರಾಜನ್

ಭಾರತದ ಆರ್ಥಿಕ ಭವಿಷ್ಯದ ಬಗ್ಗೆ ನಾಗರಿಕರ ವಿಶ್ವಾಸ ಈಚಿನ ವರ್ಷಗಳಲ್ಲಿ ಕಡಿಮೆ ಆಗಿದೆ. ಅದಕ್ಕೆ ಕೊವಿಡ್ 19 ಕೂಡ ಕೊಡುಗೆ ನೀಡಿದೆ ಎಂದು ಆರ್​ಬಿಐ ಮಾಜಿ ಗೌರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.

Raghuram Rajan: ಭಾರತದ ಆರ್ಥಿಕ ಭವಿಷ್ಯದ ಬಗ್ಗೆ ಜನರ ವಿಶ್ವಾಸ ಕುಸಿದಿದೆ ಎಂದ ರಘುರಾಮ್ ರಾಜನ್
ರಘುರಾಮ್ ರಾಜನ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 30, 2021 | 2:35 PM

Share

ಇತ್ತೀಚಿನ ವರ್ಷಗಳಲ್ಲಿ ದೇಶದ ಆರ್ಥಿಕ ಭವಿಷ್ಯದ ಬಗ್ಗೆ ಭಾರತೀಯರ ನಂಬಿಕೆ ಕುಸಿದಿದೆ, ಇದರ ಜತೆಗೆ ಈಚೆಗಿನ ಕೊವಿಡ್​-19 ಜಾಗತಿಕ ಬಿಕ್ಕಟ್ಟು ಮಧ್ಯಮ ವರ್ಗದವರನ್ನು ಬಡತನಕ್ಕೆ ದೂಡಿದ್ದರಿಂದ ಆ ಭಾವನೆ ಇನ್ನಷ್ಟು ಹೆಚ್ಚಾಗಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗೌರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ. NALSAR ಯೂನಿವರ್ಸಿಟಿ ಆಫ್ ಲಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವರ್ಚುವಲಿ ಮಾತನಾಡಿ, ದೇಶೀಯ ಷೇರು ಮಾರುಕಟ್ಟೆ ಮೇಲೇರುತ್ತಿದೆ. ಆದರೆ ಹಲವು ಭಾರತೀಯರು ತೀವ್ರ ಸಮಸ್ಯೆಯಲ್ಲಿ ಇದ್ದಾರೆ ಎಂಬ ವಾಸ್ತವವನ್ನು ಪ್ರತಿಬಿಂಬಿಸುತ್ತಿಲ್ಲ ಎಂದಿದ್ದಾರೆ. “ಈಚಿನ ವರ್ಷಗಳಲ್ಲಿ ನಾವು ಸ್ವಲ್ಪ ಮಟ್ಟಿಗೆ ಕಡಿಮೆ ವಿಶ್ವಾಸ ಹೊಂದಿದ್ದೇವೆ. ಆರ್ಥಿಕ ಭವಿಷ್ಯದ ಬಗ್ಗೆ ನಮ್ಮ ನಂಬಿಕೆ ಕುಸಿಯುತ್ತಿದೆ. ಏರಿಕೆ ಆಗುತ್ತಿರುವ ಕೊವಿಡ್​ 19 ನಮ್ಮ ಆತ್ಮವಿಶ್ವಾಸವನ್ನು ಇನ್ನಷ್ಟು ಕಡಿಮೆ ಮಾಡಿದೆ. ಮಧ್ಯಮ ವರ್ಗದವರನ್ನು ಬಡತನಕ್ಕೆ ದೂಡಿದೆ,” ಎಂದು ಅವರು ಹೇಳಿದ್ದಾರೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್​ಬಿಐ) ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಬೆಳವಣಿಗೆ ದರವನ್ನು ಈ ಹಿಂದೆ ಅಂದಾಜು ಮಾಡಿದ್ದ ಶೇ 10.5ರಿಂದ ಶೇ 9.5ಕ್ಕೆ ಇಳಿಸಿತ್ತು. ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) 2021ನೇ ಇಸವಿಗೆ ಶೇ 9.5 ಹಾಗೂ 2022ಕ್ಕೆ ಶೇ 8.5ರಷ್ಟು ಅಂದಾಜು ಮಾಡಿದೆ. ರಘುರಾಮ್ ರಾಜನ್ ಇನ್ನೂ ಮುಂದುವರಿದು, ಉದ್ಯೋಗ ಸೃಷ್ಟಿಗೆ ಬೇಡಿಕೆ ಹೆಚ್ಚಾಗಿದೆ. ಸ್ಥಳೀಯರಿಗೆ ಉದ್ಯೋಗ ದೊರಕಿಸುವ ಕಡೆಗೆ ರಾಜ್ಯ ಸರ್ಕಾರಗಳು ಕೆಲಸ ಮೀಸಲಿಡುತ್ತಿವೆ ಎಂದಿದ್ದಾರೆ.

ನಮ್ಮ ಆರ್ಥಿಕತೆಯ ಪ್ರದರ್ಶನ ಕುಸಿಯುತ್ತಿದ್ದು, ನಮ್ಮ ಪ್ರಜಾಪ್ರಭುತ್ವದ ವಿಶ್ವಾಸಾರ್ಹತೆ, ಚರ್ಚೆ ನಡೆಸುವಂಥ ಸಾಮರ್ಥ್ಯ, ಗೌರವ ನೀಡವುದು ಮತ್ತು ವ್ಯತ್ಯಾಸಗಳನ್ನು ಸಹಿಸುವುದು ಇವೆಲ್ಲಕ್ಕೂ ಪೆಟ್ಟು ಬಿದ್ದಿದೆ. ಇದು ಕೇಂದ್ರದಿಂದ ಮಾತ್ರ ಅಲ್ಲ, ಹಲವು ರಾಜ್ಯಗಳಲ್ಲಿ ಹೀಗೇ ಇದೆ. ನಿಮಗೆ ಗೊತ್ತು ಸಮುದಾಯದ ಭಾವನೆ ಬಹಳ ಬೇಗ ಘಾಸಿ ಆಗುತ್ತದೆ ಎಂದು ಹೇಳಿದ್ದಾರೆ. ಇದೇ ವೇಳೆ ಭಾರತವು ಅಂತರರಾಷ್ಟ್ರೀಯ ವಾಣಿಜ್ಯ ಒಪ್ಪಂದಕ್ಕೆ ಸಹಿ ಹಾಕುವುದರ ಅಗತ್ಯವನ್ನು ಕೂಡ ಒತ್ತಿ ಹೇಳಿದ್ದಾರೆ. ಸದ್ಯಕ್ಕೆ ರಘುರಾಮ್ ರಾಜನ್ ಅವರು ಶಿಕಾಗೋ ಬೂತ್ ಸ್ಕೂಲ್ ಆಫ್ ಬಿಜಿನೆಸ್​ನಲ್ಲಿ ಪ್ರೊಫೆಸರ್ ಆಗಿದ್ದಾರೆ. “ಬೆಳವಣಿಗೆ ಎಂಬುದು ಪ್ರತಿಯೊಬ್ಬರನ್ನೂ ಒಟ್ಟಿಗೆ ಕರೆದುಕೊಂಡು ಹೋಗಲಿಲ್ಲ ಅಂತಾದಲ್ಲಿ ಅದು ಸುಸ್ಥಿರವಾಗಲು ಸಾಧ್ಯವಿಲ್ಲ,” ಎಂದು ಅಭಿಪ್ರಾಯ ಪಟ್ಟಿದ್ದಾರೆ. ಇನ್ನು ಯಾವುದೇ ಸಂದರ್ಭದಲ್ಲಿ ಮೂಲಭೂತ ಹಕ್ಕುಗಳ ರಕ್ಷಣೆ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Raghuram Rajan: ಖಾಸಗೀಕರಣದ ಬದಲು ಆಡಳಿತ ಸುಧಾರಿಸಿ, ಉತ್ತಮ ನಿಯಮ ರೂಪಿಸಿ ಎಂದ ರಘುರಾಮ್ ರಾಜನ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ