AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tower Chips: ಇಸ್ರೇಲ್​ನ ಟವರ್ ಸೆಮಿಕಂಡಕ್ಟರ್​ನ ಅತಿದೊಡ್ಡ ಚಿಪ್ ಫ್ಯಾಕ್ಟರಿ ಭಾರತದಲ್ಲಿ ಸ್ಥಾಪನೆ ಸಾಧ್ಯತೆ

Israel's Tower Semiconductor To Make Huge Investment In India: ಸೆಮಿಕಂಡಕ್ಟರ್ ಚಿಪ್ ಉತ್ಪಾದನೆಯ ಕ್ಷೇತ್ರ ಬೆಳೆಸುವ ಭಾರತ ಸರ್ಕಾರದ ಪ್ರಯತ್ನಕ್ಕೆ ಮತ್ತೊಂದು ಯಶಸ್ಸು ಸಿಕ್ಕಿದೆ. ಇಸ್ರೇಲ್​ನ ಪ್ರಮುಖ ಚಿಪ್ ಮ್ಯಾನುಫ್ಯಾಕ್ಚರಿಂಗ್ ಕಂಪನಿ ಎನಿಸಿದ ಟವರ್ ಸೆಮಿಕಂಡಕ್ಟರ್ ಭಾರತದಲ್ಲಿ 8 ಬಿಲಿಯನ್ ಡಾಲರ್ ಹೂಡಿಕೆಗೆ ಮುಂದಾಗಿದೆ. ಭಾರತದಲ್ಲಿ 65ಎನ್​ಎಂ ಮತ್ತು 40 ಎನ್​ಎಂ ಚಿಪ್​ಗಳನ್ನು ತಯಾರಿಸಲು ಹೊರಟಿರುವ ಟವರ್ ಸೆಮಿಕಂಡಕ್ಟರ್ ಈಗ ಇನ್ವೆಸ್ಟ್​ಮೆಂಟ್ ಪಾರ್ಟ್ನರ್​ಗಾಗಿ ಹುಡುಕುತ್ತಿದೆ.

Tower Chips: ಇಸ್ರೇಲ್​ನ ಟವರ್ ಸೆಮಿಕಂಡಕ್ಟರ್​ನ ಅತಿದೊಡ್ಡ ಚಿಪ್ ಫ್ಯಾಕ್ಟರಿ ಭಾರತದಲ್ಲಿ ಸ್ಥಾಪನೆ ಸಾಧ್ಯತೆ
ಸೆಮಿಕಂಡಕ್ಟರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 13, 2024 | 11:38 AM

Share

ನವದೆಹಲಿ, ಫೆಬ್ರುವರಿ 13: ವಿಶ್ವದ ಸೆಮಿಕಂಡಕ್ಟರ್ ಚಿಪ್ ಅಡ್ಡೆಗಳಲ್ಲಿ ಒಂದಾಗಿರಬೇಕೆನ್ನುವ ಭಾರತದ ಕನಸು ಹೆಚ್ಚು ಗಟ್ಟಿಗೊಳ್ಳುತ್ತಿದೆ. ಭಾರತದಲ್ಲಿ ಚಿಪ್ ಫ್ಯಾಕ್ಟರಿ (chip manufacturing) ಸ್ಥಾಪಿಸಲು ಹಲವು ಜಾಗತಿಕ ದೈತ್ಯ ಕಂಪನಿಗಳು ಆಸಕ್ತಿ ತೋರಿವೆ. ಇಸ್ರೇಲ್​ನ ಟವರ್ ಸೆಮಿಕಂಡಕ್ಟರ್ (Tower Semiconductor) ಸಂಸ್ಥೆ ಭಾರತದಲ್ಲಿ ಚಿಪ್ ತಯಾರಿಕೆಯ ಘಟಕ ಸ್ಥಾಪಿಸಲು ಉತ್ಸುಕವಾಗಿದೆ. ಇಂಡಿಯನ್ ಎಕ್ಸ್​ಪ್ರೆಸ್ ವರದಿ ಪ್ರಕಾರ ಇಸ್ರೇಲೀ ಕಂಪನಿ ಭಾರತದಲ್ಲಿ ಎಂಟು ಬಿಲಿಯನ್ ಡಾಲರ್ ಹೂಡಿಕೆ ಮಾಡಬಹುದು ಎನ್ನಲಾಗಿದೆ. ಈ ಯೋಜನೆ ನನಸಾದಲ್ಲಿ ಟವರ್ ಸೆಮಿಕಂಡಕ್ಟರ್​ನ ಅತಿದೊಡ್ಡ ಚಿಪ್ ಫ್ಯಾಕ್ಟರಿ ಭಾರತದಲ್ಲಿ ತಲೆ ಎತ್ತಲಿದೆ. ಈ ಇಸ್ರೇಲೀ ಕಂಪನಿ ಇಷ್ಟೊಂದು ದೊಡ್ಡ ಮೊತ್ತದ ಹೂಡಿಕೆಯನ್ನು ಮಾಡಹೊರಟಿರುವುದು ಇದೇ ಮೊದಲು.

ಟವರ್ ಸೆಮಿಕಂಡಕ್ಟರ್ ಸಂಸ್ಥೆ ಭಾರತದಲ್ಲಿ 65 ನ್ಯಾನೋಮೀಟರ್ ಮತ್ತು 40 ನ್ಯಾನೋಮೀಟರ್ ಚಿಪ್​ಗಳನ್ನು ತಯಾರಿಸಲು ಯೋಜಿಸಿದೆ. ಸೆಮಿಕಂಡಕ್ಟರ್ ಉತ್ಪಾದನೆಗೆಂದು ಭಾರತ ಸರ್ಕಾರ ನಡೆಸುತ್ತಿರುವ 10 ಬಿಲಿಯನ್ ಡಾಲರ್ ಮೊತ್ತದ ಪಿಎಲ್​ಐ ಸ್ಕೀಮ್ ಮೂಲಕ ತಮಗೆ ನೆರವು ಸಿಗಬೇಕೆಂದು ಇಸ್ರೇಲೀ ಕಂಪನಿ ಮನವಿ ಮಾಡಿದೆ. ಒಂದು ವೇಳೆ ಈ ನಿಟ್ಟಿನಲ್ಲಿ ಭರವಸೆ ಸಿಕ್ಕಲ್ಲಿ ಟವರ್ ಸೆಮಿಕಂಡಕ್ಟರ್ ಭಾರತದಲ್ಲಿ ಹೂಡಿಕೆ ಮಾಡುವ ಸಾಧ್ಯತೆ ಇದೆ. ಇದೇ ವೇಳೆ ಈ ಯೋಜನೆಗಾಗಿ ಅದು ಇನ್ವೆಸ್ಟ್​ಮೆಂಟ್ ಪಾರ್ಟ್ನರ್ ಅನ್ನು ಹುಡುಕುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ಗೂಗಲ್ ಸಿಇಒ ಸುಂದರ್ ಪಿಚೈ ಬೆಳಗ್ಗೆ ಎದ್ದು ಮಾಡೋ ಮೊದಲ ಕೆಲಸ ಇದು…

ಟವರ್ ಸೆಮಿಕಂಡಕ್ಟರ್ ಈ ಹಿಂದೆಯೂ ಭಾರತದಲ್ಲಿ ಹೆಜ್ಜೆ ಊರಲು ಆಸಕ್ತಿ ತೋರಿದ್ದಿದೆ. 2007ರಲ್ಲಿ ಇಂಟರ್ನ್ಯಾಷನಲ್ ಸೆಮಿಕಂಡ್ಟರ್ ಕನ್ಸಾರ್ಟಿಯಮ್​ನ ಭಾಗವಾಗಿ ಅದು ಭಾರತದಲ್ಲಿ ಮ್ಯಾನುಫ್ಯಾಕ್ಚರಿಂಗ್ ಯೂನಿಟ್ ಸ್ಥಾಪಿಸಲು ಯತ್ನಿಸಿತ್ತು. ಅದು ಸಾಧ್ಯವಾಗಿರಲಿಲ್ಲ. 2022ರಲ್ಲೂ ಇನ್ನೊಂದು ಯತ್ನವಾಗಿತ್ತು. ಆದರೆ, ಟವರ್ ಸೆಮಿಕಂಡಕ್ಟರ್ ಅನ್ನು ಇಂಟೆಲ್ ಖರೀದಿಸಲು ಮಾತುಕತೆ ನಡೆಯುತ್ತಿದ್ದರಿಂದ ಆ ಪ್ರಯತ್ನ ಕೈಗೂಡಲಿಲ್ಲ. ಈಗ ಇಂಟೆಲ್ ಹಿಂದಕ್ಕೆ ಸರಿದಿದೆ. ಭಾರತದಲ್ಲಿ ಚಿಪ್ ಫ್ಯಾಕ್ಟರಿ ಸ್ಥಾಪನೆಯಿಂದಲೂ ಇಂಟೆಲ್ ಹಿಂದಕ್ಕೆ ಸರಿದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವೇ ಟವರ್ ಸೆಮಿಕಂಡಕ್ಟರ್ ಕಂಪನಿಗೆ ಆಹ್ವಾನ ಕೊಟ್ಟಿದೆ.

ಟವರ್ ಸೆಮಿಕಂಡಕ್ಟರ್ ಸಂಸ್ಥೆ ಜಪಾನ್, ಇಟಲಿ ಮತ್ತು ಅಮೆರಿಕದಲ್ಲಿ ಕಳೆದ ಎಂಟು ವರ್ಷದಲ್ಲಿ ಚಿಪ್ ಕ್ಷೇತ್ರದಲ್ಲಿ ಹೂಡಿಕೆ ಹೆಚ್ಚಿಸಿದೆ. ಆದರೆ, ಭಾರತದಲ್ಲಿ ಮಾಡಲಿರುವ ಅದರ ಹೂಡಿಕೆಯು ಎಲ್ಲಕ್ಕಿಂತ ಹೆಚ್ಚಿದೆ.

ಇದನ್ನೂ ಓದಿ: ಪೇಟಿಎಂ ಜೊತೆ ಕೆಲಸ ಮಾಡಲು ಸಿದ್ಧ ಎಂದ ಎಕ್ಸಿಸ್ ಬ್ಯಾಂಕ್; ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ನಿರ್ದೇಶಕಿ ರಾಜೀನಾಮೆ

ಇನ್ನೊಂದು ಪ್ರಮುಖ ಸಂಗತಿ ಎಂದರೆ ಟವರ್ ಸೆಮಿಕಂಡಕ್ಟರ್ ಸ್ಥಾಪನೆ ಮಾಡಲಿರುವುದು 65 ಎನ್​ಎಂ ಚಿಪ್​ಗಳನ್ನು. ಇದು ಬಹಳ ಮಹತ್ವದ ವಿಚಾರ. ಮುಂದಿನ ತಲೆಮಾರುಗಳ ಟೆಕ್ನಾಲಜಿಗಳಿಗೆ ಸುಲಭವಾಗಿ ಅಪ್​ಗ್ರೇಡ್ ಆಗಲು ಇದು ಸಹಾಯವಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?