Sign In

By signing in or creating an account, you agree with Associated Broadcasting Company's Terms & Conditions and Privacy Policy.

2028ರಷ್ಟರಲ್ಲಿ ಜಾಗತಿಕ ಬೆಳವಣಿಗೆಯಲ್ಲಿ ಭಾರತದ ಪಾಲು ಶೇ. 18ಕ್ಕೆ ಏರಿಕೆ: ಐಎಂಎಫ್ ಅಂದಾಜು

India Contribution to Global Growth: ಜಾಗತಿಕ ಬೆಳವಣಿಗೆಯಲ್ಲಿ ಚೀನಾದ್ದು ಸಿಂಹಪಾಲಿದೆ. 2023 ಮತ್ತು 2024ರ ವರ್ಷಗಳಲ್ಲಿ ಜಾಗತಿಕ ಬೆಳವಣಿಗೆಯಲ್ಲಿ ಅರ್ಧಕ್ಕಿಂತ ಹೆಚ್ಚು ಪಾಲು ಚೀನಾ ಮತ್ತು ಭಾರತದ್ದಾಗಿತ್ತು. ಚೀನಾದ ಪ್ರಾಬಲ್ಯವು ಮುಂದಿನ ಐದು ವರ್ಷವೂ ಮುಂದುವರಿಯಲಿದೆ. ಮುಂದಿನ ಐದು ವರ್ಷಗಳಲ್ಲಿ ಜಾಗತಿಕ ಬೆಳವಣಿಗೆಯಲ್ಲಿ ಭಾರತದ ಪಾಲು ಹೆಚ್ಚಾಗಲಿದೆ ಎಂದು ಐಎಂಎಫ್ ಹೇಳಿದೆ.

2028ರಷ್ಟರಲ್ಲಿ ಜಾಗತಿಕ ಬೆಳವಣಿಗೆಯಲ್ಲಿ ಭಾರತದ ಪಾಲು ಶೇ. 18ಕ್ಕೆ ಏರಿಕೆ: ಐಎಂಎಫ್ ಅಂದಾಜು
ಭಾರತದ ಆರ್ಥಿಕ ಬೆಳವಣಿಗೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 22, 2023 | 12:59 PM

ಮುಂಬೈ, ಅಕ್ಟೋಬರ್ 22: ಭಾರತದ ಆರ್ಥಿಕ ಬೆಳವಣಿಗೆಯ ಸಾಧ್ಯತೆ ಬಗ್ಗೆ ಬಹಳ ಸಂಸ್ಥೆಗಳು ಸಕಾರಾತ್ಮಕವಾಗಿ ಅಭಿಪ್ರಾಯ ನೀಡಿವೆ. ಅಂತಾರಾಷ್ಟ್ರಿಯ ಹಣಕಾಸು ನಿಧಿ (ಐಎಂಎಫ್) ಅಂದಾಜು ಪ್ರಕಾರ, ಮುಂದಿನ ಐದು ವರ್ಷಗಳಲ್ಲಿ ಜಾಗತಿಕ ಬೆಳವಣಿಗೆಯಲ್ಲಿ ಭಾರತದ ಪಾಲು ಹೆಚ್ಚಾಗಲಿದೆ. ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಐಎಂಎಫ್​ನ ಏಷ್ಯಾ ಪೆಸಿಫಿಕ್ ವಿಭಾಗದ ನಿರ್ದೇಶಕ ಕೃಷ್ಣ ಶ್ರೀನಿವಾಸನ್, 2028ರಲ್ಲಿ ವಿಶ್ವ ಬೆಳವಣಿಗೆಯಲ್ಲಿ ಭಾರತದ ಪಾಲು (India’s contribution to global growth) ಶೇ. 18ರಷ್ಟಿರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸದ್ಯ ಜಾಗತಿಕ ಬೆಳವಣಿಗೆಯಲ್ಲಿ ಭಾರತದ ಪಾಲಿರುವುದು ಶೇ. 16ರಷ್ಟು. ಮುಂದಿನ ಐದು ವರ್ಷಗಳಲ್ಲಿ ಭಾರತದ ಆರ್ಥಿಕ ವೃದ್ಧಿ ಆಗಲಿರುವುದರ ಸೂಚನೆ ಇದು.

ಜಾಗತಿಕ ಬೆಳವಣಿಗೆಯಲ್ಲಿ ಚೀನಾದ್ದು ಸಿಂಹಪಾಲಿದೆ. 2023 ಮತ್ತು 2024ರ ವರ್ಷಗಳಲ್ಲಿ ಜಾಗತಿಕ ಬೆಳವಣಿಗೆಯಲ್ಲಿ ಅರ್ಧಕ್ಕಿಂತ ಹೆಚ್ಚು ಪಾಲು ಚೀನಾ ಮತ್ತು ಭಾರತದ್ದಾಗಿತ್ತು. ಚೀನಾದ ಪ್ರಾಬಲ್ಯವು ಮುಂದಿನ ಐದು ವರ್ಷವೂ ಮುಂದುವರಿಯಲಿದೆ. ಐಎಂಎಫ್ ಅಂದಾಜು ಪ್ರಕಾರ 2028ರಷ್ಟರಲ್ಲಿ ಚೀನಾದ ಜಿಡಿಪಿ 23.61 ಟ್ರಿಲಿಯನ್ ಡಾಲರ್​ಗೆ ಏರಲಿದೆ. ಭಾರತದ ಜಿಡಿಪಿ 5.95 ಟ್ರಿಲಿಯನ್ ಡಾಲರ್​ಗೆ ಏರಲಿದೆ.

ಇದನ್ನೂ ಓದಿ: ಭಾರತದ ಸೆಮಿಕಂಡಕ್ಟರ್ ಮಹತ್ವಾಕಾಂಕ್ಷೆಗೆ ಇಸ್ರೇಲೀ ಶಕ್ತಿ; ಭಾರತದಲ್ಲಿ ಚಿಪ್ ಫ್ಯಾಕ್ಟರಿ ಸ್ಥಾಪಿಸಲು ಟವರ್ ಸೆಮಿಕಂಡಕ್ಟರ್ ಆಸಕ್ತಿ

ಚೀನಾ ಬೆಳವಣಿಗೆ ಭಾರತ ಸದ್ಯ ಸಾಟಿ ಇಲ್ಲ…

ಭಾರತದ ಜಿಡಿಪಿ ವೃದ್ಧಿದರ ಚೀನಾಗಿಂತಲೂ ಹೆಚ್ಚಿದೆಯಾದರೂ ಆರ್ಥಿಕತೆಯ ಬೆಳವಣಿಗೆಯ ಪ್ರಮಾಣದಲ್ಲಿ ಚೀನಾಗಿಂತ ಭಾರತ ಬಹಳ ಹಿಂದಿದೆ. ಚೀನಾದ ಆರ್ಥಿಕತೆ ಬಹಳ ದೊಡ್ಡದಿರುವುದರಿಂದ ಮತ್ತು ಜಾಗತಿಕ ಹೂಡಿಕೆಯಲ್ಲಿ ಹೆಚ್ಚು ಪಾಲಿರುವುದರಿಂದ ಭಾರತವು ಚೀನಾವನ್ನು ಸರಿಗಟ್ಟುವ ದಿನ ಬಹಳ ದೂರ ಇದೆ ಎಂಬುದು ಹಲವು ಆರ್ಥಿಕ ತಜ್ಞರ ಅಭಿಮತ.

ಆದರೆ, ಇನ್ನು 50 ವರ್ಷದಲ್ಲಿ ಭಾರತದ ಆರ್ಥಿಕತೆಯು ಚೀನಾದ ಸಮಕ್ಕೆ ಬರಬಹುದು ಎಂಬ ಅನಿಸಿಕೆಯಂತೂ ತಜ್ಞರು ವ್ಯಕ್ತಪಡಿಸಿರುವುದುಂಟು. ಭಾರತದ ಆರ್ಥಿಕತೆಯ ವೇಗ ಸ್ಥಿರವಾಗಿ ಸಾಗಿದರೆ ಮಾತ್ರ ಇದು ಸಾಧ್ಯ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ