AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಜಿಡಿಪಿದರ ಈ ವರ್ಷದ ಮೊದಲಾರ್ಧದಲ್ಲಿ ಶೇ. 7.6; ಐಸಿಐಸಿಐ ವರದಿಯಲ್ಲಿ ನಿರೀಕ್ಷೆ

ICICI report predicts Indian GDP growth upto next year: ಭಾರತದ ಆರ್ಥಿಕತೆಯು ಈ ಹಣಕಾಸು ವರ್ಷದಲ್ಲಿ ಶೇ 7ರಷ್ಟು ಹೆಚ್ಚಬಹುದು ಎಂದು ಐಸಿಐಸಿಐ ವರದಿಯೊಂದರಲ್ಲಿ ನಿರೀಕ್ಷಿಸಲಾಗಿದೆ. ಮುಂದಿನ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 6.5ರಷ್ಟು ಮಾತ್ರ ಬೆಳೆಯಬಹುದು ಎಂದೂ ಇದು ಹೇಳಿದೆ. ಈ ವರ್ಷದ ಮೊದಲಾರ್ಧದಲ್ಲಿ ಜಿಡಿಪಿ ಬೆಳವಣಿಗೆ ಶೇ. 7.6ರಷ್ಟು ದಾಖಲಿಸಬಹುದು ಎಂದೆನ್ನಲಾಗಿದೆ.

ಭಾರತದ ಜಿಡಿಪಿದರ ಈ ವರ್ಷದ ಮೊದಲಾರ್ಧದಲ್ಲಿ ಶೇ. 7.6; ಐಸಿಐಸಿಐ ವರದಿಯಲ್ಲಿ ನಿರೀಕ್ಷೆ
ಭಾರತದ ಆರ್ಥಿಕತೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 26, 2025 | 12:59 PM

Share

ನವದೆಹಲಿ, ನವೆಂಬರ್ 26: ಪ್ರಸಕ್ತ ಹಣಕಾಸು ವರ್ಷದ ಮೊದಲಾರ್ಧದಲ್ಲಿ (2025ರ ಏಪ್ರಿಲ್​ನಿಂದ ಸೆಪ್ಟೆಂಬರ್​ವರೆಗೆ) ಭಾರತದ ಜಿಡಿಪಿ ಬೆಳವಣಿಗೆ (GDP) ಶೇ. 7.6ರ ದರದಲ್ಲಿ ಆಗಿರಬಹುದು ಎಂದು ಐಸಿಐಸಿಐ ಬ್ಯಾಂಕ್​ನ ವರದಿಯೊಂದರಲ್ಲಿ ನಿರೀಕ್ಷೆ ಮಾಡಲಾಗಿದೆ. ಮೊದಲ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.8ರಷ್ಟು ಬೆಳವಣಿಗೆ ದಾಖಲಿಸಿದೆ. ಐಸಿಐಸಿಐ ವರದಿಯಲ್ಲಿ ಮಾಡಲಾದ ಅಂದಾಜು ಪ್ರಕಾರ ಎರಡನೇ ಕ್ವಾರ್ಟರ್​ನಲ್ಲಿ ಶೇ. 7.5ರಷ್ಟು ಜಿಡಿಪಿ ಬೆಳೆಯುವ ಸಾಧ್ಯತೆ ಇದೆ.

ಈ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಜಿಡಿಪಿ ಬೆಳವಣಿಗೆ ಮಂದಗತಿಯಲ್ಲಿ ಇರಬಹುದು ಎಂದು ಹೇಳಿರುವ ಈ ವರದಿಯ ಪ್ರಕಾರ ಕೊನೆಯ ಎರಡು ಕ್ವಾರ್ಟರ್​ನಲ್ಲಿ ಶೇ. 6.4ರಷ್ಟು ಮಾತ್ರ ಹೆಚ್ಚಬಹುದು. ಟ್ಯಾರಿಫ್ ಕಾರಣದಿಂದ ರಫ್ತು ಕುಂಠಿತಗೊಂಡಿರುವುದು, ಟ್ಯಾಕ್ಸ್ ಸಂಗ್ರಹ ಕಡಿಮೆ ಇರುವ ಕಾರಣ ಸರ್ಕಾರದ ಬಂಡವಾಳ ವೆಚ್ಚ ಕಡಿಮೆ ಆಗಲಿರುವುದು ದ್ವಿತೀಯಾರ್ಧದ ಆರ್ಥಿಕ ಬೆಳವಣಿಗೆಗೆ ಸ್ವಲ್ಪ ಹಿನ್ನಡೆ ತರಬಹುದು ಎಂದು ಹೇಳಲಾಗಿದೆ. ಆದರೆ, ಅನುಭೋಗ ಪ್ರಮಾಣ ಉತ್ತಮವಾಗಿರುವುದು ಆರ್ಥಿಕತೆಗೆ ಸಕಾರಾತ್ಮಕವಾಗಿರುವ ಸಂಗತಿ ಎನಿಸಿದೆ.

ಇದನ್ನೂ ಓದಿ: ಮುಂದಿನ ವರ್ಷ 5,000 ರೂ ಡಾಲರ್​ಗೆ ಏರಲಿದೆ ಚಿನ್ನದ ಬೆಲೆ; ಭಾರತದಲ್ಲಿ ಎಷ್ಟು ಹೆಚ್ಚಬಹುದು ಇದರ ಬೆಲೆ?

ಐಸಿಐಸಿಐ ವರದಿಯು ಈ ಹಣಕಾಸು ವರ್ಷಕ್ಕೆ ಜಿಡಿಪಿ ಬೆಳವಣಿಗೆ ಸಾಧ್ಯತೆ ಶೇ. 7.0 ಎಂದು ನಿರೀಕ್ಷಿಸಿದೆ. ಹಾಗೆಯೇ, ಮುಂದಿನ ಹಣಕಾಸು ವರ್ಷದಲ್ಲಿ (2026-27) ಆರ್ಥಿಕತೆ ಶೇ 6.5ರಷ್ಟು ಹೆಚ್ಚಬಹುದು.

ಜಿಎಸ್​ಟಿ ಹಾಗೂ ಆದಾಯ ತೆರಿಗೆ ಕಡಿತದಿಂದ ಸರ್ಕಾರಕ್ಕೆ ಆದಾಯ ಕಡಿಮೆ ಆಗಿ, ಸರ್ಕಾರದ ಬಂಡವಾಳ ವೆಚ್ಚಕ್ಕೆ ಹೆಚ್ಚು ಹಣ ಇಲ್ಲದಂತಾಗಿದೆ. ಆದರೆ, ಟ್ಯಾಕ್ಸ್ ಇಳಿಸಿರುವುದರಿಂದ ಅನುಭೋಗ ಹೆಚ್ಚುತ್ತಿರುವುದನ್ನು ತಜ್ಞರು ಗುರುತಿಸಿದ್ದಾರೆ. ಐಸಿಐಸಿಐ ವರದಿಯಲ್ಲೂ ಈ ಅಂಶವನ್ನು ಗುರುತಿಸಲಾಗಿದೆ. ಜಿಎಸ್​ಟಿ ದರ ಇಳಿಕೆಯ ಪರಿಣಾಮವು ಮೂರನೇ ಕ್ವಾರ್ಟರ್​ನಲ್ಲಿ ಅನುಭೋಗದ ಮೇಲೆ ಆಗುತ್ತಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!