AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಜಿಡಿಪಿದರ ಈ ವರ್ಷದ ಮೊದಲಾರ್ಧದಲ್ಲಿ ಶೇ. 7.6; ಐಸಿಐಸಿಐ ವರದಿಯಲ್ಲಿ ನಿರೀಕ್ಷೆ

ICICI report predicts Indian GDP growth upto next year: ಭಾರತದ ಆರ್ಥಿಕತೆಯು ಈ ಹಣಕಾಸು ವರ್ಷದಲ್ಲಿ ಶೇ 7ರಷ್ಟು ಹೆಚ್ಚಬಹುದು ಎಂದು ಐಸಿಐಸಿಐ ವರದಿಯೊಂದರಲ್ಲಿ ನಿರೀಕ್ಷಿಸಲಾಗಿದೆ. ಮುಂದಿನ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 6.5ರಷ್ಟು ಮಾತ್ರ ಬೆಳೆಯಬಹುದು ಎಂದೂ ಇದು ಹೇಳಿದೆ. ಈ ವರ್ಷದ ಮೊದಲಾರ್ಧದಲ್ಲಿ ಜಿಡಿಪಿ ಬೆಳವಣಿಗೆ ಶೇ. 7.6ರಷ್ಟು ದಾಖಲಿಸಬಹುದು ಎಂದೆನ್ನಲಾಗಿದೆ.

ಭಾರತದ ಜಿಡಿಪಿದರ ಈ ವರ್ಷದ ಮೊದಲಾರ್ಧದಲ್ಲಿ ಶೇ. 7.6; ಐಸಿಐಸಿಐ ವರದಿಯಲ್ಲಿ ನಿರೀಕ್ಷೆ
ಭಾರತದ ಆರ್ಥಿಕತೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 26, 2025 | 12:59 PM

Share

ನವದೆಹಲಿ, ನವೆಂಬರ್ 26: ಪ್ರಸಕ್ತ ಹಣಕಾಸು ವರ್ಷದ ಮೊದಲಾರ್ಧದಲ್ಲಿ (2025ರ ಏಪ್ರಿಲ್​ನಿಂದ ಸೆಪ್ಟೆಂಬರ್​ವರೆಗೆ) ಭಾರತದ ಜಿಡಿಪಿ ಬೆಳವಣಿಗೆ (GDP) ಶೇ. 7.6ರ ದರದಲ್ಲಿ ಆಗಿರಬಹುದು ಎಂದು ಐಸಿಐಸಿಐ ಬ್ಯಾಂಕ್​ನ ವರದಿಯೊಂದರಲ್ಲಿ ನಿರೀಕ್ಷೆ ಮಾಡಲಾಗಿದೆ. ಮೊದಲ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.8ರಷ್ಟು ಬೆಳವಣಿಗೆ ದಾಖಲಿಸಿದೆ. ಐಸಿಐಸಿಐ ವರದಿಯಲ್ಲಿ ಮಾಡಲಾದ ಅಂದಾಜು ಪ್ರಕಾರ ಎರಡನೇ ಕ್ವಾರ್ಟರ್​ನಲ್ಲಿ ಶೇ. 7.5ರಷ್ಟು ಜಿಡಿಪಿ ಬೆಳೆಯುವ ಸಾಧ್ಯತೆ ಇದೆ.

ಈ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಜಿಡಿಪಿ ಬೆಳವಣಿಗೆ ಮಂದಗತಿಯಲ್ಲಿ ಇರಬಹುದು ಎಂದು ಹೇಳಿರುವ ಈ ವರದಿಯ ಪ್ರಕಾರ ಕೊನೆಯ ಎರಡು ಕ್ವಾರ್ಟರ್​ನಲ್ಲಿ ಶೇ. 6.4ರಷ್ಟು ಮಾತ್ರ ಹೆಚ್ಚಬಹುದು. ಟ್ಯಾರಿಫ್ ಕಾರಣದಿಂದ ರಫ್ತು ಕುಂಠಿತಗೊಂಡಿರುವುದು, ಟ್ಯಾಕ್ಸ್ ಸಂಗ್ರಹ ಕಡಿಮೆ ಇರುವ ಕಾರಣ ಸರ್ಕಾರದ ಬಂಡವಾಳ ವೆಚ್ಚ ಕಡಿಮೆ ಆಗಲಿರುವುದು ದ್ವಿತೀಯಾರ್ಧದ ಆರ್ಥಿಕ ಬೆಳವಣಿಗೆಗೆ ಸ್ವಲ್ಪ ಹಿನ್ನಡೆ ತರಬಹುದು ಎಂದು ಹೇಳಲಾಗಿದೆ. ಆದರೆ, ಅನುಭೋಗ ಪ್ರಮಾಣ ಉತ್ತಮವಾಗಿರುವುದು ಆರ್ಥಿಕತೆಗೆ ಸಕಾರಾತ್ಮಕವಾಗಿರುವ ಸಂಗತಿ ಎನಿಸಿದೆ.

ಇದನ್ನೂ ಓದಿ: ಮುಂದಿನ ವರ್ಷ 5,000 ರೂ ಡಾಲರ್​ಗೆ ಏರಲಿದೆ ಚಿನ್ನದ ಬೆಲೆ; ಭಾರತದಲ್ಲಿ ಎಷ್ಟು ಹೆಚ್ಚಬಹುದು ಇದರ ಬೆಲೆ?

ಐಸಿಐಸಿಐ ವರದಿಯು ಈ ಹಣಕಾಸು ವರ್ಷಕ್ಕೆ ಜಿಡಿಪಿ ಬೆಳವಣಿಗೆ ಸಾಧ್ಯತೆ ಶೇ. 7.0 ಎಂದು ನಿರೀಕ್ಷಿಸಿದೆ. ಹಾಗೆಯೇ, ಮುಂದಿನ ಹಣಕಾಸು ವರ್ಷದಲ್ಲಿ (2026-27) ಆರ್ಥಿಕತೆ ಶೇ 6.5ರಷ್ಟು ಹೆಚ್ಚಬಹುದು.

ಜಿಎಸ್​ಟಿ ಹಾಗೂ ಆದಾಯ ತೆರಿಗೆ ಕಡಿತದಿಂದ ಸರ್ಕಾರಕ್ಕೆ ಆದಾಯ ಕಡಿಮೆ ಆಗಿ, ಸರ್ಕಾರದ ಬಂಡವಾಳ ವೆಚ್ಚಕ್ಕೆ ಹೆಚ್ಚು ಹಣ ಇಲ್ಲದಂತಾಗಿದೆ. ಆದರೆ, ಟ್ಯಾಕ್ಸ್ ಇಳಿಸಿರುವುದರಿಂದ ಅನುಭೋಗ ಹೆಚ್ಚುತ್ತಿರುವುದನ್ನು ತಜ್ಞರು ಗುರುತಿಸಿದ್ದಾರೆ. ಐಸಿಐಸಿಐ ವರದಿಯಲ್ಲೂ ಈ ಅಂಶವನ್ನು ಗುರುತಿಸಲಾಗಿದೆ. ಜಿಎಸ್​ಟಿ ದರ ಇಳಿಕೆಯ ಪರಿಣಾಮವು ಮೂರನೇ ಕ್ವಾರ್ಟರ್​ನಲ್ಲಿ ಅನುಭೋಗದ ಮೇಲೆ ಆಗುತ್ತಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!