AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pharma Exports: ಔಷಧ ರಫ್ತಿನಲ್ಲಿ ಭಾರಿ ಹೆಚ್ಚಳ, ಮುಂಚೂಣಿಯಲ್ಲಿ ಭಾರತ; ಮನ್​ಸುಖ್ ಮಾಂಡವೀಯ

Pharma Exports; ಔಷಧ ಉತ್ಪನ್ನಗಳ ರಫ್ತಿಗೆ ಸಂಬಂಧಿಸಿದ ಗ್ರಾಫ್ ಅನ್ನು ಬಿಡುಗಡೆ ಮಾಡಿರುವ ಸಚಿವರು, ಭಾರತದ ಔಷಧ ರಫ್ತು ಪ್ರಮಾಣ ವಿಶ್ವದಲ್ಲೇ ಮುಂಚೂಣಿಯಲ್ಲಿದೆ ಎಂದು ಉಲ್ಲೇಖಿಸಿದ್ದಾರೆ.

Pharma Exports: ಔಷಧ ರಫ್ತಿನಲ್ಲಿ ಭಾರಿ ಹೆಚ್ಚಳ, ಮುಂಚೂಣಿಯಲ್ಲಿ ಭಾರತ; ಮನ್​ಸುಖ್ ಮಾಂಡವೀಯ
ಸಾಂದರ್ಭಿಕ ಚಿತ್ರImage Credit source: Reuters
Follow us
TV9 Web
| Updated By: Ganapathi Sharma

Updated on: Nov 23, 2022 | 12:51 PM

ನವದೆಹಲಿ: ದೇಶದ ಔಷಧ ಉತ್ಪನ್ನಗಳ ರಫ್ತು (Pharma Exports) ಪ್ರಮಾಣ 2022ರ ಏಪ್ರಿಲ್-ಅಕ್ಟೋಬರ್ ಅವಧಿಯಲ್ಲಿ 2013-14ರ ಏಪ್ರಿಲ್-ಅಕ್ಟೋಬರ್ ಅವಧಿಗೆ ಹೋಲಿಸಿದರೆ ಶೇಕಡಾ 138ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್​ಸುಖ್ ಮಾಂಡವೀಯ (Mansukh Mandaviya) ತಿಳಿಸಿದ್ದಾರೆ. 2013-14ರಲ್ಲಿ 37,987.68 ಕೋಟಿ ರೂ. ಮೊತ್ತದ ಔಷಧ ಉತ್ಪನ್ನಗಳನ್ನು ಭಾರತ ರಫ್ತು ಮಾಡಿತ್ತು. 2022ರಲ್ಲಿ 90,324.23 ಕೋಟಿ ರೂ. ಮೊತ್ತದ ಔಷಧ ಉತ್ಪನ್ನಗಳನ್ನು ರಫ್ತು ಮಾಡಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಔಷಧ ಉತ್ಪನ್ನಗಳ ರಫ್ತಿಗೆ ಸಂಬಂಧಿಸಿದ ಗ್ರಾಫ್ ಅನ್ನು ಬಿಡುಗಡೆ ಮಾಡಿರುವ ಸಚಿವರು, ಭಾರತದ ಔಷಧ ರಫ್ತು ಪ್ರಮಾಣ ವಿಶ್ವದಲ್ಲೇ ಮುಂಚೂಣಿಯಲ್ಲಿದೆ ಎಂದು ಉಲ್ಲೇಖಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿತ್ವದ ನಾಯಕತ್ವದಿಂದಾಗಿ ಭಾರತವು ಜಾಗತಿಕ ಔಷಧ ಶಕ್ತಿ ಕೇಂದ್ರವಾಗಿದೆ ಎಂದು ಮಾಂಡವೀಯ ಹೇಳಿದ್ದಾರೆ.

ದಾವೋಸ್ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಭಾರತವು ವಿಶ್ವದ ಔಷಧಾಲಯವಾಗಿದೆ ಎಂದು ಹೇಳಿದ್ದರು. ಔಷಧ ಉತ್ಪನ್ನಗಳನ್ನು ತಯಾರಿಸುವ ವಿಶ್ವದ ಮೂರನೇ ಅತಿದೊಡ್ಡ ದೇಶವಾಗಿ ಭಾರತ ಹೊರಹೊಮ್ಮಿದೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಲಸಿಕೆಗಳನ್ನು ಮತ್ತು ಅಗತ್ಯ ವೈದ್ಯಕೀಯ ಸಾಧನಗಳನ್ನು ಅನೇಕ ದೇಶಗಳಿಗೆ ಕಳುಹಿಸಿಕೊಟ್ಟಿದೆ. ಈ ಮೂಲಕ ‘ಒಂದು ಭೂಮಿ ಒಂದು ಆರೋಗ್ಯ’ ಎಂಬ ಧ್ಯೇಯಕ್ಕೆ ಬದ್ಧವಾಗಿದೆ ಎಂದು ಪ್ರಧಾನಿ ಹೇಳಿದ್ದರು.

ಲಸಿಕೆಗಳನ್ನು ಮತ್ತು ಅಗತ್ಯ ವೈದ್ಯಕೀಯ ಸಾಧನಗಳನ್ನು ಅನೇಕ ದೇಶಗಳಿಗೆ ಕಳುಹಿಸಿಕೊಡುವ ಮೂಲಕ ಭಾರತವು ಕೋಟ್ಯಂತರ ಜೀವಗಳನ್ನು ಉಳಿಸುವಲ್ಲಿ ನೆರವಾಗಿದೆ ಎಂದು ಅವರು ಹೇಳಿದ್ದರು.

ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ದೇಶದಲ್ಲಿ ತಯಾರಿಸಲಾದ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳನ್ನು ಅನೇಕ ದೇಶಗಳಿಗೆ ಭಾರತ ಕಳುಹಿಸಿಕೊಟ್ಟಿತ್ತು. ಕೋಟ್ಯಂತರ ಡೋಸ್ ಲಸಿಕೆಗಳನ್ನು ಕಳುಹಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ