AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಜಿಡಿಪಿ ಈ ವರ್ಷ ಶೇ. 6.7-6.9ರಷ್ಟು ಬೆಳೆಯಬಹುದು: ಡುಲೋಟ್ ಅಂದಾಜು

Deloitte India report on India's GDP growth: ಭಾರತದ ಆರ್ಥಿಕತೆ ಈ ವರ್ಷ ಶೇ. 6.8ರಷ್ಟು ಬೆಳವಣಿಗೆ ಹೊಂದಬಹುದು ಎಂದು ಡುಲೋಟ್ ಇಂಡಿಯಾದ ಹೊಸ ವರದಿಯಲ್ಲಿ ಹೇಳಲಾಗಿದೆ. ಇಂಡಿಯಾ ಎಕನಾಮಿಕ್ ಔಟ್​ಲುಕ್ ವರದಿ ಪ್ರಕಾರ 2025-26ರಲ್ಲಿ ಭಾರತದ ಆರ್ಥಿಕ ವೃದ್ಧಿ ದರ ಶೇ. 6.7ರಿಂದ ಶೇ. 6.9ರ ಶ್ರೇಣಿಯಲ್ಲಿರಬಹುದು. ಆರ್​ಬಿಐ ಮಾಡಿದ್ದ ಅಂದಾಜು ಪ್ರಕಾರವೂ ಈ ವರ್ಷ ಭಾರತದ ಜಿಡಿಪಿ ಶೇ 6.8ರಷ್ಟು ಹೆಚ್ಚಬಹುದು.

ಭಾರತದ ಜಿಡಿಪಿ ಈ ವರ್ಷ ಶೇ. 6.7-6.9ರಷ್ಟು ಬೆಳೆಯಬಹುದು: ಡುಲೋಟ್ ಅಂದಾಜು
ಜಿಡಿಪಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 23, 2025 | 6:50 PM

Share

ನವದೆಹಲಿ, ಅಕ್ಟೋಬರ್ 23: ಭಾರತದ ಆರ್ಥಿಕತೆ ಈ ವರ್ಷವೂ ಉತ್ತಮ ರೀತಿಯಲ್ಲಿ ಬೆಳೆಯುತ್ತದೆ ಎಂದು ಬಹಳಷ್ಟು ಮಂದಿ ಅಭಿಪ್ರಾಯಪಟ್ಟಿದ್ದಾರೆ. ಈ ಸಾಲಿಗೆ ಡುಲೋಟ್ ಇಂಡಿಯಾ (Deloitte India) ಸೇರಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ (2025-26) ಭಾರತದ ಜಿಡಿಪಿ (GDP) ಶೇ. 6.7ರಿಂದ ಶೇ. 6.9ರಷ್ಟು ಬೆಳೆಯಬಹುದು ಎಂದು ಡುಲೋಟ್ ಇಂಡಿಯಾ ಅಂದಾಜು ಮಾಡಿದೆ. ಅಮೆರಿಕದ ಸುಂಕಗಳ ಹೊರತಾಗಿಯೂ ಭಾರತ ಈ ಮಟ್ಟದ ಬೆಳವಣಿಗೆ ಕಾಯ್ದುಕೊಂಡು ಹೋಗುತ್ತಿರುವುದು ಗಮನಾರ್ಹ.

ಡುಲೋಟ್​ನ ‘ಇಂಡಿಯಾ ಎಕನಾಮಿಕ್ ಔಟ್​ಲುಕ್’ ವರದಿಯಲ್ಲಿ ಈ ಅಂದಾಉ ಮಾಡಲಾಗಿದೆ. ಈ ವರದಿ ಪ್ರಕಾರ ಭಾರತದ ಜಿಡಿಪಿ ಬೆಳವಣಿಗೆ 2025-26ರಲ್ಲಿ ಶೇ. 6.7 ಮತ್ತು ಶೇ. 6.9ರ ಮಧ್ಯೆ ಇರಬಹುದು. ಶೇ. 6.8ರ ಸರಾಸರಿಯಲ್ಲಿ ಬೆಳೆಯಬಹುದು. ಇದೇ ಸಂಸ್ಥೆ ತನ್ನ ಹಿಂದಿನ ವರದಿಯಲ್ಲಿ ಮಾಡಿದುದಕ್ಕಿಂತ 30 ಮೂಲಾಂಕಗಳಷ್ಟು ಹೆಚ್ಚು ಬೆಳವಣಿಗೆ ಹೊಂದಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಸೌದಿಯಲ್ಲಿ ಕರಾಳ ‘ಕಫಾಲ’ಕ್ಕೆ ತೆರೆ; ಜೀತದಿಂದ ಲಕ್ಷಾಂತರ ಭಾರತೀಯರು ಮುಕ್ತ; ಏನಿದು ಕಫಾಲ ಸಿಸ್ಟಂ?

ಆರ್​​ಬಿಐ ಕೂಡ ಭಾರತದ ಆರ್ಥಿಕತೆ ಈ ಹಣಕಾಸು ವರ್ಷ ಶೇ. 6.8ರಷ್ಟು ಹೆಚ್ಚಬಹುದು ಎಂದು ನಿರೀಕ್ಷಿಸಿದೆ. ವಿಶ್ವ ಬ್ಯಾಂಕ್, ಐಎಂಎಫ್ ಮೊದಲಾದ ಅಂತಾರಾಷ್ಟ್ರೀಯ ಸಂಸ್ಥೆಗಳೂ ಕೂಡ ಭಾರತದ ಜಿಡಿಪಿ ಬೆಳವಣಿಗೆ ಬಗ್ಗೆ ತಮ್ಮ ನಿರೀಕ್ಷೆಗಳನ್ನು ಹೆಚ್ಚಿಸಿವೆ.

ಐಎಂಎಫ್​ನ ಇತ್ತೀಚಿನ ವರದಿಯಲ್ಲಿ ಜಿಡಿಪಿ ಶೇ 6.6ರಷ್ಟು ವೃದ್ಧಿಸಬಹುದು ಎಂದು ಹೇಳಲಾಗಿದೆ. ಇದೇ ಐಎಂಎಫ್ ತನ್ನ ಹಿಂದಿನ ವರದಿಯಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಶೇ. 6.4ರಷ್ಟು ಏರಬಹುದು ಎಂದು ಹೇಳಿತ್ತು. ಈಗ ತನ್ನ ಅಭಿಪ್ರಾಯ ಪರಿಷ್ಕರಿಸಿದ್ದು, ಭಾರತ ಹೆಚ್ಚಿನ ಆರ್ಥಿಕ ಬೆಳವಣಿಗೆ ಹೊಂದುವ ಸಾಧ್ಯತೆಯನ್ನು ತೆರೆದಿಟ್ಟಿದೆ.

ಇದನ್ನೂ ಓದಿ: ಭಾರತದ ಆರ್ಥಿಕ ಬೆಳವಣಿಗೆ ಬಗ್ಗೆ ಐಎಂಎಫ್​ನಿಂದಲೂ ನಿರೀಕ್ಷೆ ಹೆಚ್ಚಳ; ಶೇ. 6.4ರಿಂದ ಶೇ. 6.6ಕ್ಕೆ ಅಂದಾಜು ಪರಿಷ್ಕರಣೆ

ಇನ್ನು, ವಿಶ್ವ ಬ್ಯಾಂಕ್ ಕೂಡ ಭಾರತದ ಆರ್ಥಿಕ ಬೆಳವಣಿಗೆ ಬಗ್ಗೆ ತನ್ನ ಅಂದಾಜನ್ನು ಶೇ. 6.3ರಿಂದ ಶೇ. 6.5ಕ್ಕೆ ಹೆಚ್ಚಿಸಿದೆ. ಹೆಚ್ಚಿನ ಸಂಸ್ಥೆಗಳು ಮತ್ತು ಆರ್ಥಿಕ ತಜ್ಞರು ಮಾಡಿರುವ ಅಂದಾಜು ಪ್ರಕಾರ ಭಾರತದ ಆರ್ಥಿಕ ಬೆಳವಣಿಗೆ ಈ ವರ್ಷ ಶೇ. 6.3ರಿಂದ ಶೇ. 6.9ರ ಶ್ರೇಣಿಯಲ್ಲಿ ಇರುವ ಸಾಧ್ಯತೆ ಇದೆ. ಈ ವರ್ಷದ ಮೊದಲ ಕ್ವಾರ್ಟರ್ ಆದ ಏಪ್ರಿಲ್​ನಿಂದ ಜೂನ್​ವರೆಗಿನ ಮೂರು ತಿಂಗಳಲ್ಲಿ ಭಾರತದ ಆರ್ಥಿಕತೆ ಶೇ. 7.8ರ ದರದಲ್ಲಿ ಬೆಳೆದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ