AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ. 7.8 ಹೆಚ್ಚಳ; ಉತ್ತಮ ವೇಗದ ಆರ್ಥಿಕ ಬೆಳವಣಿಗೆ ಸಾಧನೆ

India's GDP registers strong 7.8pc growth in 2026 April-June quarter: ಭಾರತದ ಆರ್ಥಿಕತೆಯು ಮೊದಲ ತ್ರೈಮಾಸಿಕವಾದ ಏಪ್ರಿಲ್-ಜೂನ್ ಅವಧಿಯಲ್ಲಿ ಶೇ. 7.8ರಷ್ಟು ಅಚ್ಚರಿ ಬೆಳವಣಿಗೆ ಸಾಧಿಸಿದೆ. ಇದು ಆರ್​ಬಿಐ ಒಳಗೊಂಡಂತೆ ಹೆಚ್ಚಿನ ಏಜೆನ್ಸಿಗಳು, ಆರ್ಥಿಕ ತಜ್ಞರು ನಿರೀಕ್ಷಿಸಿದುದಕ್ಕಿಂತಲೂ ಉತ್ತಮ ಬೆಳವಣಿಗೆ ದರವಾಗಿದೆ. ಕಳೆದ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್​ನಲ್ಲಿ ಕಂಡ ಬೆಳವಣಿಗೆಯೇ ವರ್ಷದ ಮೊದಲ ಕ್ವಾರ್ಟರ್​ನಲ್ಲಿ ದಾಖಲಾಗಿದೆ.

ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ. 7.8 ಹೆಚ್ಚಳ; ಉತ್ತಮ ವೇಗದ ಆರ್ಥಿಕ ಬೆಳವಣಿಗೆ ಸಾಧನೆ
ಜಿಡಿಪಿImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 31, 2026 | 4:49 PM

Share

ನವದೆಹಲಿ, ಆಗಸ್ಟ್ 31: ಪ್ರಸಕ್ತ 2026-27ರ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) ಭಾರತದ ಆರ್ಥಿಕತೆಯು ಶೇ. 7.8 ರಷ್ಟು ಜಿಡಿಪಿ (GDP) ಬೆಳವಣಿಗೆ ಸಾಧಿಸುವ ಮೂಲಕ ಜಾಗತಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನವನ್ನು ಕಾಯ್ದುಕೊಂಡಿದೆ. ಜಾಗತಿಕವಾಗಿ ಯುದ್ಧ, ಆರ್ಥಿಕ ಹಿನ್ನಡೆ ಹಾಗೂ ವಿವಿಧ ಬಿಕ್ಕಟ್ಟುಗಳ ನಡುವೆಯೂ ಭಾರತ ನಿರೀಕ್ಷೆಮೀರಿದ ವೇಗದಲ್ಲಿ ಆರ್ಥಿಕ ಬೆಳವಣಿಗೆ ಸಾಧಿಸಿದೆ.

ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ (2025ರ ಏಪ್ರಿಲ್-ಜೂನ್) ಭಾರತದ ಜಿಡಿಪಿ ಶೇ. 6.9ರಷ್ಟು ಏರಿತ್ತು. ಹಿಂದಿನ ಕ್ವಾರ್ಟರ್​ನಲ್ಲಿ (2026ರ ಜನವರಿ-ಮಾರ್ಚ್) ಜಿಡಿಪಿ ಬೆಳವಣಿಗೆ ದರ ಶೇ. 7.8ರಷ್ಟು ಇತ್ತು. ಅದೇ ದರವನ್ನು ಹೊಸ ಹಣಕಾಸು ವರ್ಷದ ಮೊದಲ ಕ್ವಾರ್ಟರ್​ನಲ್ಲಿ ಕಾಯ್ದುಕೊಂಡಿದೆ.

ಇದನ್ನೂ ಓದಿ: ಜೊಮಾಟೊದಲ್ಲಿ ‘ಅನಲಾಗ್ ಡೈರಿ’ ಆಹಾರ ಪದಾರ್ಥಗಳಿಗೆ ನಿಷೇಧ: ಗ್ರಾಹಕರು ಮತ್ತು ರೆಸ್ಟೋರೆಂಟ್‌ಗಳ ಮೇಲಾಗುವ ಪರಿಣಾಮಗಳು

ಇನ್ನು, ಜಿವಿಎ (Gross Value Added) ಅಥವಾ ಸಮಗ್ರ ಆರ್ಥಿಕ ಮೌಲ್ಯವು ಶೇ. 8.2ರಷ್ಟಿದೆ. ಜಿವಿಎ ಎಂಬುದು, ತೆರಿಗೆ ಹಾಗೂ ಸಬ್ಸಿಡಿಗಳನ್ನು ಕಳೆದು ಉಳಿಯುವ ಆರ್ಥಿಕ ಮೌಲ್ಯ. ಇದು ಹಿಂದಿನ ತ್ರೈಮಾಸಿಕಕ್ಕಿಂತ 50 ಮೂಲಾಂಕಗಳಷ್ಟು ಕಡಿಮೆ ಆಗಿದ್ದರೂ, ಹಿಂದಿನ ವರ್ಷದಕ್ಕೆ ಹೋಲಿಸಿದರೆ ಉತ್ತಮ ಬೆಳವಣಿಗೆ ಸಾಧಿಸಿದೆ.

ಬಲವಾದ ಸೇವಾ ಮತ್ತು ತಯಾರಿಕಾ ವಲಯ: ಸೇವಾ ವಲಯ (Services Sector) ಮತ್ತು ತಯಾರಿಕಾ ರಂಗದಲ್ಲಿ (Manufacturing Sector) ಕಂಡುಬಂದ ಬಲವಾದ ಚೇತರಿಕೆಯು ಈ ಭಾರಿ ಜಿಡಿಪಿ ಬೆಳವಣಿಗೆಗೆ ಪ್ರಮುಖ ಕಾರಣವಾಗಿದೆ.

ಖಾಸಗಿ ಬಳಕೆ ಮತ್ತು ಮೂಲಸೌಕರ್ಯ ಹೂಡಿಕೆ: ದೇಶೀಯ ಮಾರುಕಟ್ಟೆಯಲ್ಲಿ ಖಾಸಗಿ ಬಳಕೆ ಹೆಚ್ಚಾಗಿರುವುದು ಹಾಗೂ ಕೇಂದ್ರ ಸರ್ಕಾರವು ಮೂಲಸೌಕರ್ಯ (Infrastructure) ಅಭಿವೃದ್ಧಿಗೆ ಭಾರಿ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿರುವುದು ಆರ್ಥಿಕತೆಗೆ ಬಲ ನೀಡಿದೆ.

ಇದನ್ನೂ ಓದಿ: ದಕ್ಷಿಣ ಕೊರಿಯಾದಲ್ಲಿ ಎಲ್ಲಾ ವ್ಯಕ್ತಿಗಳಿಗೂ ಉಚಿತ ಎಐ ಸೇವೆ; ಟೋಕನ್​ಗಳಿಗೂ ಮಿತಿ ಇಲ್ಲ

ದೇಶೀಯ ಮತ್ತು ಜಾಗತಿಕ ಸವಾಲುಗಳ ನಡುವೆಯೂ ಭಾರತೀಯ ರಿಸರ್ವ್ ಬ್ಯಾಂಕ್ (RBI) ಅಂದಾಜಿಸಿದ್ದಕ್ಕಿಂತ ಹೆಚ್ಚಿನ ದರದಲ್ಲಿ ಭಾರತದ ಜಿಡಿಪಿ ವೃದ್ಧಿಯಾಗಿದೆ. ಪ್ರಪಂಚದ ಪ್ರಮುಖ ದೊಡ್ಡ ಆರ್ಥಿಕತೆಗಳು ಹಿಂಜರಿತದ ಭೀತಿಯಲ್ಲಿದ್ದರೆ, ಭಾರತದ ಈ ಕ್ಷಿಪ್ರ ಪ್ರಗತಿಯು ಜಾಗತಿಕ ಹೂಡಿಕೆದಾರರ ಗಮನ ಸೆಳೆದಿದೆ.

ಈ ದೃಢವಾದ ಆರ್ಥಿಕ ಬೆಳವಣಿಗೆಯು ಮುಂದಿನ ತ್ರೈಮಾಸಿಕಗಳಲ್ಲೂ ದೇಶದ ಉದ್ಯೋಗ ಸೃಷ್ಟಿ ಹಾಗೂ ಕೈಗಾರಿಕಾ ಪ್ರಗತಿಗೆ ಧನಾತ್ಮಕ ವೇಗ ನೀಡಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ