AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST Collection: ಜೂನ್ ತಿಂಗಳ ಜಿಎಸ್​​ಟಿ ಸಂಗ್ರಹದಲ್ಲಿ ಭರ್ಜರಿ ಹೆಚ್ಚಳ; ಕಳೆದ ವರ್ಷಕ್ಕಿಂತ ಶೇ 12ರಷ್ಟು ಹೆಚ್ಚು

ಇದರೊಂದಿಗೆ ಮಾಸಿಕ ಜಿಎಸ್‌ಟಿ ಆದಾಯ ಸತತ 15ನೇ ತಿಂಗಳಿನಲ್ಲಿಯೂ 1.4 ಲಕ್ಷ ಕೋಟಿ ರೂ.ಗೂ ಹೆಚ್ಚು ಸಂಗ್ರಹವಾದಂತಾಗಿದೆ. ದೇಶದಲ್ಲಿ ಜಿಎಸ್‌ಟಿ ಜಾರಿಯಾದ ನಂತರ ಒಟ್ಟು ಆದಾಯವು ಆರನೇ ಬಾರಿಗೆ 1.6 ಲಕ್ಷ ಕೋಟಿ ಗಡಿ ದಾಟಿದೆ.

GST Collection: ಜೂನ್ ತಿಂಗಳ ಜಿಎಸ್​​ಟಿ ಸಂಗ್ರಹದಲ್ಲಿ ಭರ್ಜರಿ ಹೆಚ್ಚಳ; ಕಳೆದ ವರ್ಷಕ್ಕಿಂತ ಶೇ 12ರಷ್ಟು ಹೆಚ್ಚು
ಜಿಎಸ್​​ಟಿ
Ganapathi Sharma
|

Updated on: Jul 01, 2023 | 3:30 PM

Share

ನವದೆಹಲಿ: ಭಾರತದ ಒಟ್ಟು ಜಿಎಸ್‌ಟಿ ಆದಾಯ ಸಂಗ್ರಹವು (GST Revenue Collection) ಜೂನ್‌ನಲ್ಲಿ 1,61,497 ಕೋಟಿ ರೂಪಾಯಿಗಳಾಗಿದ್ದು, ಕಳೆದ ವರ್ಷದ ಇದೇ ಅವಧಿಗಿಂತ ಶೇಕಡಾ 12 ರಷ್ಟು ಏರಿಕೆಯನ್ನು ದಾಖಲಿಸಿದೆ ಎಂದು ಹಣಕಾಸು ಸಚಿವಾಲಯ (Finance Ministry) ಶನಿವಾರ ತಿಳಿಸಿದೆ. 2023 ರ ಏಪ್ರಿಲ್‌ನಲ್ಲಿ 1.87 ಲಕ್ಷ ಕೋಟಿ ರೂಪಾಯಿಗಳ ಜಿಎಸ್​ಟಿ ಸಂಗ್ರಹವಾಗಿದ್ದು, ಇದು ಈವರೆಗಿನ ಗರಿಷ್ಠ ಸಂಗ್ರಹವಾಗಿದೆ. ಮೇ ತಿಂಗಳಲ್ಲಿ 1,57,090 ಕೋಟಿ ರೂಪಾಯಿ ಪರೋಕ್ಷ ತೆರಿಗೆ ಸಂಗ್ರಹವಾಗಿತ್ತು.

ಇದರೊಂದಿಗೆ ಮಾಸಿಕ ಜಿಎಸ್‌ಟಿ ಆದಾಯ ಸತತ 15ನೇ ತಿಂಗಳಿನಲ್ಲಿಯೂ 1.4 ಲಕ್ಷ ಕೋಟಿ ರೂ.ಗೂ ಹೆಚ್ಚು ಸಂಗ್ರಹವಾದಂತಾಗಿದೆ. ದೇಶದಲ್ಲಿ ಜಿಎಸ್‌ಟಿ ಜಾರಿಯಾದ ನಂತರ ಒಟ್ಟು ಆದಾಯವು ಆರನೇ ಬಾರಿಗೆ 1.6 ಲಕ್ಷ ಕೋಟಿ ಗಡಿ ದಾಟಿದೆ.

2021-22, 22-23 ಮತ್ತು 23-24 ರ ಹಣಕಾಸು ವರ್ಷಗಳ ಮೊದಲ ತ್ರೈಮಾಸಿಕದಲ್ಲಿ ಸರಾಸರಿ, ಮಾಸಿಕ ಒಟ್ಟು ಜಿಎಸ್​ಟಿ ಸಂಗ್ರಹವು ಕ್ರಮವಾಗಿ 1.10 ಲಕ್ಷ ಕೋಟಿ ರೂ., 1.51 ಲಕ್ಷ ಕೋಟಿ ರೂ. ಮತ್ತು 1.69 ಲಕ್ಷ ಕೋಟಿ ರೂ. ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಹೆಚ್ಚಳ: ಸರ್ಕಾರ ಆದೇಶ

ಜೂನ್‌ನಲ್ಲಿ ಸಂಗ್ರಹಿಸಲಾದ ಒಟ್ಟು ಜಿಎಸ್‌ಟಿ ಆದಾಯದಲ್ಲಿ ಸಿಜಿಎಸ್‌ಟಿ (ಕೇಂದ್ರ ಸಂಗ್ರಹ) 31,013 ಕೋಟಿ ರೂ., ಎಸ್‌ಜಿಎಸ್‌ಟಿ (ರಾಜ್ಯ ಸಂಗ್ರಹ) 38,292 ಕೋಟಿ ರೂ., ಐಜಿಎಸ್‌ಟಿ 80,292 ಕೋಟಿ ರೂ. (ಸರಕುಗಳ ಆಮದಿನ ಮೇಲೆ 39,035 ಕೋಟಿ ಸಂಗ್ರಹಿಸಲಾಗಿದೆ) ಮತ್ತು ಸೆಸ್ 11,900 ಕೋಟಿ (ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ ರೂ 1,028 ಕೋಟಿ ಸೇರಿದಂತೆ) ಆಗಿದೆ.

ಜೂನ್​​ನಲ್ಲಿ, ದೇಶೀಯ ವಹಿವಾಟುಗಳಿಂದ (ಸೇವೆಗಳ ಆಮದು ಸೇರಿದಂತೆ) ಸಂಗ್ರಹಿಸಲ್ಪಟ್ಟ ಆದಾಯವು ಕಳೆದ ವರ್ಷದ ಇದೇ ತಿಂಗಳಿನಲ್ಲಿ ಈ ಮೂಲಗಳಿಂದ ಬಂದ ಆದಾಯಕ್ಕಿಂತ ಶೇಕಡಾ 18 ರಷ್ಟು ಹೆಚ್ಚಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ