AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST Collection: ಜೂನ್ ತಿಂಗಳ ಜಿಎಸ್​​ಟಿ ಸಂಗ್ರಹದಲ್ಲಿ ಭರ್ಜರಿ ಹೆಚ್ಚಳ; ಕಳೆದ ವರ್ಷಕ್ಕಿಂತ ಶೇ 12ರಷ್ಟು ಹೆಚ್ಚು

ಇದರೊಂದಿಗೆ ಮಾಸಿಕ ಜಿಎಸ್‌ಟಿ ಆದಾಯ ಸತತ 15ನೇ ತಿಂಗಳಿನಲ್ಲಿಯೂ 1.4 ಲಕ್ಷ ಕೋಟಿ ರೂ.ಗೂ ಹೆಚ್ಚು ಸಂಗ್ರಹವಾದಂತಾಗಿದೆ. ದೇಶದಲ್ಲಿ ಜಿಎಸ್‌ಟಿ ಜಾರಿಯಾದ ನಂತರ ಒಟ್ಟು ಆದಾಯವು ಆರನೇ ಬಾರಿಗೆ 1.6 ಲಕ್ಷ ಕೋಟಿ ಗಡಿ ದಾಟಿದೆ.

GST Collection: ಜೂನ್ ತಿಂಗಳ ಜಿಎಸ್​​ಟಿ ಸಂಗ್ರಹದಲ್ಲಿ ಭರ್ಜರಿ ಹೆಚ್ಚಳ; ಕಳೆದ ವರ್ಷಕ್ಕಿಂತ ಶೇ 12ರಷ್ಟು ಹೆಚ್ಚು
ಜಿಎಸ್​​ಟಿ
Follow us
Ganapathi Sharma
|

Updated on: Jul 01, 2023 | 3:30 PM

ನವದೆಹಲಿ: ಭಾರತದ ಒಟ್ಟು ಜಿಎಸ್‌ಟಿ ಆದಾಯ ಸಂಗ್ರಹವು (GST Revenue Collection) ಜೂನ್‌ನಲ್ಲಿ 1,61,497 ಕೋಟಿ ರೂಪಾಯಿಗಳಾಗಿದ್ದು, ಕಳೆದ ವರ್ಷದ ಇದೇ ಅವಧಿಗಿಂತ ಶೇಕಡಾ 12 ರಷ್ಟು ಏರಿಕೆಯನ್ನು ದಾಖಲಿಸಿದೆ ಎಂದು ಹಣಕಾಸು ಸಚಿವಾಲಯ (Finance Ministry) ಶನಿವಾರ ತಿಳಿಸಿದೆ. 2023 ರ ಏಪ್ರಿಲ್‌ನಲ್ಲಿ 1.87 ಲಕ್ಷ ಕೋಟಿ ರೂಪಾಯಿಗಳ ಜಿಎಸ್​ಟಿ ಸಂಗ್ರಹವಾಗಿದ್ದು, ಇದು ಈವರೆಗಿನ ಗರಿಷ್ಠ ಸಂಗ್ರಹವಾಗಿದೆ. ಮೇ ತಿಂಗಳಲ್ಲಿ 1,57,090 ಕೋಟಿ ರೂಪಾಯಿ ಪರೋಕ್ಷ ತೆರಿಗೆ ಸಂಗ್ರಹವಾಗಿತ್ತು.

ಇದರೊಂದಿಗೆ ಮಾಸಿಕ ಜಿಎಸ್‌ಟಿ ಆದಾಯ ಸತತ 15ನೇ ತಿಂಗಳಿನಲ್ಲಿಯೂ 1.4 ಲಕ್ಷ ಕೋಟಿ ರೂ.ಗೂ ಹೆಚ್ಚು ಸಂಗ್ರಹವಾದಂತಾಗಿದೆ. ದೇಶದಲ್ಲಿ ಜಿಎಸ್‌ಟಿ ಜಾರಿಯಾದ ನಂತರ ಒಟ್ಟು ಆದಾಯವು ಆರನೇ ಬಾರಿಗೆ 1.6 ಲಕ್ಷ ಕೋಟಿ ಗಡಿ ದಾಟಿದೆ.

2021-22, 22-23 ಮತ್ತು 23-24 ರ ಹಣಕಾಸು ವರ್ಷಗಳ ಮೊದಲ ತ್ರೈಮಾಸಿಕದಲ್ಲಿ ಸರಾಸರಿ, ಮಾಸಿಕ ಒಟ್ಟು ಜಿಎಸ್​ಟಿ ಸಂಗ್ರಹವು ಕ್ರಮವಾಗಿ 1.10 ಲಕ್ಷ ಕೋಟಿ ರೂ., 1.51 ಲಕ್ಷ ಕೋಟಿ ರೂ. ಮತ್ತು 1.69 ಲಕ್ಷ ಕೋಟಿ ರೂ. ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಹೆಚ್ಚಳ: ಸರ್ಕಾರ ಆದೇಶ

ಜೂನ್‌ನಲ್ಲಿ ಸಂಗ್ರಹಿಸಲಾದ ಒಟ್ಟು ಜಿಎಸ್‌ಟಿ ಆದಾಯದಲ್ಲಿ ಸಿಜಿಎಸ್‌ಟಿ (ಕೇಂದ್ರ ಸಂಗ್ರಹ) 31,013 ಕೋಟಿ ರೂ., ಎಸ್‌ಜಿಎಸ್‌ಟಿ (ರಾಜ್ಯ ಸಂಗ್ರಹ) 38,292 ಕೋಟಿ ರೂ., ಐಜಿಎಸ್‌ಟಿ 80,292 ಕೋಟಿ ರೂ. (ಸರಕುಗಳ ಆಮದಿನ ಮೇಲೆ 39,035 ಕೋಟಿ ಸಂಗ್ರಹಿಸಲಾಗಿದೆ) ಮತ್ತು ಸೆಸ್ 11,900 ಕೋಟಿ (ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ ರೂ 1,028 ಕೋಟಿ ಸೇರಿದಂತೆ) ಆಗಿದೆ.

ಜೂನ್​​ನಲ್ಲಿ, ದೇಶೀಯ ವಹಿವಾಟುಗಳಿಂದ (ಸೇವೆಗಳ ಆಮದು ಸೇರಿದಂತೆ) ಸಂಗ್ರಹಿಸಲ್ಪಟ್ಟ ಆದಾಯವು ಕಳೆದ ವರ್ಷದ ಇದೇ ತಿಂಗಳಿನಲ್ಲಿ ಈ ಮೂಲಗಳಿಂದ ಬಂದ ಆದಾಯಕ್ಕಿಂತ ಶೇಕಡಾ 18 ರಷ್ಟು ಹೆಚ್ಚಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ