AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST Collection: ಜೂನ್ ತಿಂಗಳ ಜಿಎಸ್​​ಟಿ ಸಂಗ್ರಹದಲ್ಲಿ ಭರ್ಜರಿ ಹೆಚ್ಚಳ; ಕಳೆದ ವರ್ಷಕ್ಕಿಂತ ಶೇ 12ರಷ್ಟು ಹೆಚ್ಚು

ಇದರೊಂದಿಗೆ ಮಾಸಿಕ ಜಿಎಸ್‌ಟಿ ಆದಾಯ ಸತತ 15ನೇ ತಿಂಗಳಿನಲ್ಲಿಯೂ 1.4 ಲಕ್ಷ ಕೋಟಿ ರೂ.ಗೂ ಹೆಚ್ಚು ಸಂಗ್ರಹವಾದಂತಾಗಿದೆ. ದೇಶದಲ್ಲಿ ಜಿಎಸ್‌ಟಿ ಜಾರಿಯಾದ ನಂತರ ಒಟ್ಟು ಆದಾಯವು ಆರನೇ ಬಾರಿಗೆ 1.6 ಲಕ್ಷ ಕೋಟಿ ಗಡಿ ದಾಟಿದೆ.

GST Collection: ಜೂನ್ ತಿಂಗಳ ಜಿಎಸ್​​ಟಿ ಸಂಗ್ರಹದಲ್ಲಿ ಭರ್ಜರಿ ಹೆಚ್ಚಳ; ಕಳೆದ ವರ್ಷಕ್ಕಿಂತ ಶೇ 12ರಷ್ಟು ಹೆಚ್ಚು
ಜಿಎಸ್​​ಟಿ
ಗಣಪತಿ ಶರ್ಮಾ
|

Updated on: Jul 01, 2023 | 3:30 PM

Share

ನವದೆಹಲಿ: ಭಾರತದ ಒಟ್ಟು ಜಿಎಸ್‌ಟಿ ಆದಾಯ ಸಂಗ್ರಹವು (GST Revenue Collection) ಜೂನ್‌ನಲ್ಲಿ 1,61,497 ಕೋಟಿ ರೂಪಾಯಿಗಳಾಗಿದ್ದು, ಕಳೆದ ವರ್ಷದ ಇದೇ ಅವಧಿಗಿಂತ ಶೇಕಡಾ 12 ರಷ್ಟು ಏರಿಕೆಯನ್ನು ದಾಖಲಿಸಿದೆ ಎಂದು ಹಣಕಾಸು ಸಚಿವಾಲಯ (Finance Ministry) ಶನಿವಾರ ತಿಳಿಸಿದೆ. 2023 ರ ಏಪ್ರಿಲ್‌ನಲ್ಲಿ 1.87 ಲಕ್ಷ ಕೋಟಿ ರೂಪಾಯಿಗಳ ಜಿಎಸ್​ಟಿ ಸಂಗ್ರಹವಾಗಿದ್ದು, ಇದು ಈವರೆಗಿನ ಗರಿಷ್ಠ ಸಂಗ್ರಹವಾಗಿದೆ. ಮೇ ತಿಂಗಳಲ್ಲಿ 1,57,090 ಕೋಟಿ ರೂಪಾಯಿ ಪರೋಕ್ಷ ತೆರಿಗೆ ಸಂಗ್ರಹವಾಗಿತ್ತು.

ಇದರೊಂದಿಗೆ ಮಾಸಿಕ ಜಿಎಸ್‌ಟಿ ಆದಾಯ ಸತತ 15ನೇ ತಿಂಗಳಿನಲ್ಲಿಯೂ 1.4 ಲಕ್ಷ ಕೋಟಿ ರೂ.ಗೂ ಹೆಚ್ಚು ಸಂಗ್ರಹವಾದಂತಾಗಿದೆ. ದೇಶದಲ್ಲಿ ಜಿಎಸ್‌ಟಿ ಜಾರಿಯಾದ ನಂತರ ಒಟ್ಟು ಆದಾಯವು ಆರನೇ ಬಾರಿಗೆ 1.6 ಲಕ್ಷ ಕೋಟಿ ಗಡಿ ದಾಟಿದೆ.

2021-22, 22-23 ಮತ್ತು 23-24 ರ ಹಣಕಾಸು ವರ್ಷಗಳ ಮೊದಲ ತ್ರೈಮಾಸಿಕದಲ್ಲಿ ಸರಾಸರಿ, ಮಾಸಿಕ ಒಟ್ಟು ಜಿಎಸ್​ಟಿ ಸಂಗ್ರಹವು ಕ್ರಮವಾಗಿ 1.10 ಲಕ್ಷ ಕೋಟಿ ರೂ., 1.51 ಲಕ್ಷ ಕೋಟಿ ರೂ. ಮತ್ತು 1.69 ಲಕ್ಷ ಕೋಟಿ ರೂ. ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಹೆಚ್ಚಳ: ಸರ್ಕಾರ ಆದೇಶ

ಜೂನ್‌ನಲ್ಲಿ ಸಂಗ್ರಹಿಸಲಾದ ಒಟ್ಟು ಜಿಎಸ್‌ಟಿ ಆದಾಯದಲ್ಲಿ ಸಿಜಿಎಸ್‌ಟಿ (ಕೇಂದ್ರ ಸಂಗ್ರಹ) 31,013 ಕೋಟಿ ರೂ., ಎಸ್‌ಜಿಎಸ್‌ಟಿ (ರಾಜ್ಯ ಸಂಗ್ರಹ) 38,292 ಕೋಟಿ ರೂ., ಐಜಿಎಸ್‌ಟಿ 80,292 ಕೋಟಿ ರೂ. (ಸರಕುಗಳ ಆಮದಿನ ಮೇಲೆ 39,035 ಕೋಟಿ ಸಂಗ್ರಹಿಸಲಾಗಿದೆ) ಮತ್ತು ಸೆಸ್ 11,900 ಕೋಟಿ (ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ ರೂ 1,028 ಕೋಟಿ ಸೇರಿದಂತೆ) ಆಗಿದೆ.

ಜೂನ್​​ನಲ್ಲಿ, ದೇಶೀಯ ವಹಿವಾಟುಗಳಿಂದ (ಸೇವೆಗಳ ಆಮದು ಸೇರಿದಂತೆ) ಸಂಗ್ರಹಿಸಲ್ಪಟ್ಟ ಆದಾಯವು ಕಳೆದ ವರ್ಷದ ಇದೇ ತಿಂಗಳಿನಲ್ಲಿ ಈ ಮೂಲಗಳಿಂದ ಬಂದ ಆದಾಯಕ್ಕಿಂತ ಶೇಕಡಾ 18 ರಷ್ಟು ಹೆಚ್ಚಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ