AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಷ್ಟೇ ದುಬಾರಿಯಾಗುತ್ತಿದೆ ಹೈದರಾಬಾದ್; ಪ್ರಮುಖ ನಗರಗಳಲ್ಲಿ ಐಷಾರಾಮಿ ಮನೆಗಳಿಗೆ ಬಲು ಬೇಡಿಕೆ

Residential Markets In India: ನೈಟ್ ಫ್ರಾಂಕ್ ಇಂಡಿಯಾ ಸಂಸ್ಥೆ ಬಿಡುಗಡೆ ಮಾಡಿದ ವರದಿಯೊಂದರ ಪ್ರಕಾರ 2023ರ ಜುಲೈನಿಂದ ಸೆಪ್ಟೆಂಬರ್ ಕ್ವಾರ್ಟರ್​ನಲ್ಲಿ ಬೆಂಗಳೂರು ಸೇರಿದಂತೆ ಭಾರತದ ಎಂಟು ಪ್ರಮುಖ ನಗರಗಳಲ್ಲಿ 82,612 ವಾಸದ ಮನೆಗಳು ಮಾರಾಟವಾಗಿವೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಇವುಗಳ ಮಾರಾಟ ಶೇ. 12ರಷ್ಟು ಹೆಚ್ಚಳವಾಗಿದೆ. ಇನ್ನು, ಚದರಡಿಗೆ ಅತಿಹೆಚ್ಚು ಬೆಲೆ ಹೆಚ್ಚಳ ಕಂಡ ನಗರಗಳಲ್ಲಿ ಹೈದರಾಬಾದ್ ನಂಬರ್ ಎನಿಸಿದೆ.

ಬೆಂಗಳೂರಿನಷ್ಟೇ ದುಬಾರಿಯಾಗುತ್ತಿದೆ ಹೈದರಾಬಾದ್; ಪ್ರಮುಖ ನಗರಗಳಲ್ಲಿ ಐಷಾರಾಮಿ ಮನೆಗಳಿಗೆ ಬಲು ಬೇಡಿಕೆ
ಅಪಾರ್ಟ್ಮೆಂಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 09, 2023 | 12:10 PM

Share

ನವದೆಹಲಿ, ಅಕ್ಟೋಬರ್ 9: ಭಾರತದ ಆರ್ಥಿಕತೆ ಗರಿಗೆದರಿದಂತೆಲ್ಲಾ ರಿಯಲ್ ಎಸ್ಟೇಟ್ ಬಲಿಷ್ಠಗೊಳ್ಳುತ್ತಿದೆ. ಪ್ರಮುಖ ನಗರಗಳಲ್ಲಿ ಅಪಾರ್ಟ್ಮೆಂಟ್ ಇತ್ಯಾದಿ ವಾಸಸ್ಥಳಗಳಿಗೆ ಬಹಳ ಬೇಡಿಕೆ ಬಂದಿದೆ. ನೈಟ್ ಫ್ರಾಂಕ್ ಇಂಡಿಯಾ ಸಂಸ್ಥೆ (Knight Frank India) ಬಿಡುಗಡೆ ಮಾಡಿದ ವರದಿಯೊಂದರ ಪ್ರಕಾರ 2023ರ ಜುಲೈನಿಂದ ಸೆಪ್ಟೆಂಬರ್ ಕ್ವಾರ್ಟರ್​ನಲ್ಲಿ ಭಾರತದ ಎಂಟು ಪ್ರಮುಖ ನಗರಗಳಲ್ಲಿ 82,612 ವಾಸದ ಮನೆಗಳು (Residential Property) ಮಾರಾಟವಾಗಿವೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಇವುಗಳ ಮಾರಾಟ ಶೇ. 12ರಷ್ಟು ಹೆಚ್ಚಳವಾಗಿದೆ.

ಮುಂಬೈ, ಬೆಂಗಳೂರು, ದೆಹಲಿ ಎನ್​ಸಿಆರ್, ಚೆನ್ನೈ, ಹೈದರಾಬಾದ್, ಪುಣೆ ಮತ್ತು ಅಹ್ಮದಾಬಾದ್ ನಗರಗಳಲ್ಲಿನ ಮನೆಗಳ (Apartments/flats) ಮಾರಾಟವನ್ನು ಅವಲೋಕಿಸಿ ನೈಟ್ ಫ್ರಾಂಕ್ ವರದಿ ಮಾಡಿದೆ. ಇಲ್ಲಿ ಮನೆಗಳ ಸರಾಸರಿ ಬೆಲೆ ಲೆಕ್ಕಾಚಾರದಲ್ಲಿ ಹೈದರಾಬಾದ್ ಅತಿ ಹೆಚ್ಚಳಕಂಡಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಹೈದರಾಬಾದ್​ನಲ್ಲಿ ಅಪಾರ್ಟ್ಮೆಂಟ್, ಫ್ಲ್ಯಾಟ್ ಬೆಲೆ ಶೇ. 11ರಷ್ಟು ಹೆಚ್ಚಾಗಿದೆ. ಬೆಂಗಳೂರನಲ್ಲಿ ಇದು ಶೇ. 6ರಷ್ಟು ಹೆಚ್ಚಾಗಿದೆ. ಆದರೆ, ಚದರಡಿಗೆ ಅತಿಹೆಚ್ಚು ಬೆಲೆ ಇರುವುದು ಮುಂಬೈನಲ್ಲಿ. ನಂತರದ ಸ್ಥಾನ ಬೆಂಗಳೂರಿನದ್ದು.

ಇದನ್ನೂ ಓದಿ: ಇಸ್ರೇಲ್ ಹಮಾಸ್ ಯುದ್ಧದ ಪರಿಣಾಮ; ಕಚ್ಛಾ ತೈಲಬೆಲೆ ಶೇ. 5ರಷ್ಟು ಹೆಚ್ಚಳ; ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಸಾಧ್ಯತೆ

ವಿವಿಧ ನಗರಗಳಲ್ಲಿ ಮನೆಗಳ ಬೆಲೆ ಚದರಡಿಗೆ

  1. ಮುಂಬೈ: 7,600 ರೂ
  2. ಬೆಂಗಳೂರು: 5,756 ರೂ
  3. ಹೈದರಾಬಾದ್: 5,518 ರೂ
  4. ದೆಹಲಿ ಎನ್​ಸಿಆರ್: 4,669 ರೂ
  5. ಪುಣೆ: 4,463 ರೂ
  6. ಚೆನ್ನೈ: 4,429 ರೂ
  7. ಕೋಲ್ಕತಾ: 3,585 ರೂ
  8. ಅಹ್ಮದಾಬಾದ್: 3,012 ರೂ

ಸಾಕಷ್ಟು ಉದ್ಯಮಗಳನ್ನು ಆಕರ್ಷಿಸುತ್ತಿರುವ ಹೈದರಾಬಾದ್​ನಲ್ಲಿ ಸಹಜವಾಗಿ ರಿಯಲ್ ಎಸ್ಟೇಟ್ ತ್ವರಿತವಾಗಿ ಬೆಳೆಯುತ್ತಿದೆ. ಅದರ ವಾಸಸ್ಥಳ ಮೌಲ್ಯ ಬಹುತೇಕ ಬೆಂಗಳೂರಿಗೆ ಸಮೀಪ ಬಂದಿದೆ.

ಇದನ್ನೂ ಓದಿ: ಬೆರಳೆಣಿಕೆಯ ಕಂಪನಿಗಳು ಭಾರತದ ಅಭಿವೃದ್ಧಿಯ ಹಣೆಬರಹ ಬರೆಯುವಂತಾಗಬಾರದು: ಉದಯ್ ಕೋಟಕ್

ದುಬಾರಿ ಮನೆಗಳು ಹೆಚ್ಚು ಸೇಲ್

ನೈಟ್ ಫ್ರ್ಯಾಂಕ್ ವರದಿಯಲ್ಲಿ ಕುತೂಹಲದ ಅಂಶವೊಂದನ್ನು ಕಾಣಬಹುದು. ಮೇಲಿನ ಈ ಎಂಟು ನಗರಗಳ ರೆಸಿಡೆನ್ಷಿಯಲ್ ಮಾರುಕಟ್ಟೆಯಲ್ಲಿ ಜುಲೈನಿಂದ ಸೆಪ್ಟೆಂಬರ್​ವರೆಗೆ 82,612 ಯೂನಿಟ್​ಗಳು ಮಾರಾಟವಾಗಿವೆ. ಇದರಲ್ಲಿ 1 ಕೋಟಿ ರೂಗಿಂತ ಹೆಚ್ಚಿನ ಬೆಲೆಯ ಪ್ರಾಪರ್ಟಿಗಳು ಮಾರಾಟವಾಗಿದ್ದು 28,642. ಇನ್ನು, 50 ಲಕ್ಷದಿಂದ 1 ಕೋಟಿ ರೂ ಒಳಗಿನ ಬೆಲೆಯ 29,827 ಯೂನಿಟ್​ಗಳು ಸೇಲ್ ಆಗಿವೆ. 50 ಲಕ್ಷದೊಳಗಿನ ಬೆಲೆಯ ಮನೆಗಳು ಮಾರಾಟವಾಗಿದ್ದು 24,143 ಮಾತ್ರವೇ.

ಅಂದರೆ, ಜನರು ಸ್ವಂತ ಮನೆಗಾಗಿ ಹೆಚ್ಚು ಖರ್ಚು ಮಾಡುತ್ತಿರುವುದು ಈ ಅಂಕಿ ಅಂಶದಿಂದ ವೇದ್ಯವಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!