AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತವನ್ನು ಸರ್ವಶ್ರೇಷ್ಠ ದೇಶವನ್ನಾಗಿ ಮಾಡಲು ದೇವರೇ ಅವತರಿಸಿದ್ದಾನೆ: ನರೇಂದ್ರ ಮೋದಿ ಬಗ್ಗೆ ವಿವಿಧ ಉದ್ಯಮಿಗಳು ಹೇಳಿದ್ದು…

Mukesh Ambani and other industry leaders praise Narendra Modi: 1950ರ ಸೆಪ್ಟೆಂಬರ್ 17ರಂದು ಗುಜರಾತ್​ನ ಮೆಹ್ಸಾನ ಪಟ್ಟಣದಲ್ಲಿ ಜನಿಸಿದ ನರೇಂದ್ರ ಮೋದಿ ಅವರ ವಯಸ್ಸು ಇಂದಿಗೆ 75 ವರ್ಷ ಆಗಿದೆ. 2001ರಿಂದ 2014ರವರೆಗೆ ಗುಜರಾತ್ ಸಿಎಂ, 2014ರಿಂದ ಇಲ್ಲಿವರೆಗೆ ಪಿಎಂ, ಒಟ್ಟು 24 ವರ್ಷದಿಂದ ಅಧಿಕಾರದಲ್ಲಿದ್ದಾರೆ. ಅವರ ನಾಯಕತ್ವದಲ್ಲಿ ಉದ್ಯಮ ಕ್ಷೇತ್ರ ಬೆಳೆದಿದೆ. ಬಹಳಷ್ಟು ಉದ್ಯಮಿಗಳು ಪ್ರಧಾನಿಗಳನ್ನು ಹೊಗಳಿದ್ದಾರೆ.

ಭಾರತವನ್ನು ಸರ್ವಶ್ರೇಷ್ಠ ದೇಶವನ್ನಾಗಿ ಮಾಡಲು ದೇವರೇ ಅವತರಿಸಿದ್ದಾನೆ: ನರೇಂದ್ರ ಮೋದಿ ಬಗ್ಗೆ ವಿವಿಧ ಉದ್ಯಮಿಗಳು ಹೇಳಿದ್ದು...
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 17, 2025 | 1:19 PM

Share

ನವದೆಹಲಿ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನ ಇಂದು. ದೇಶ ವಿದೇಶಗಳಿಂದ ಬಹಳಷ್ಟು ಜನರು ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ. ನರೇಂದ್ರ ಮೋದಿ (Narendra Modi) ಅವರ ನಾಯಕತ್ವದಲ್ಲಿ ಭಾರತದಲ್ಲಿ ಉದ್ಯಮ ವಲಯ ಹುಲುಸಾಗಿ ಬೆಳೆಯುತ್ತಿದೆ. ಅಂತೆಯೇ ಹಲವು ಉದ್ಯಮಿಗಳು ನರೇಂದ್ರ ಮೋದಿ ಅವರನ್ನು ಪ್ರಶಂಸಿಸಿದ್ದಾರೆ. ಮುಕೇಶ್ ಅಂಬಾನಿ ಅವರು ಮೋದಿಯನ್ನು ಅವತಾರ ಪುರುಷ ಎಂದೂ ಬಣ್ಣಿಸಿದ್ದಾರೆ.

ಮೋದಿ ರೂಪದಲ್ಲಿ ದೇವರೇ ಅವತರಿಸಿದ್ದಾನೆ: ಅಂಬಾನಿ

‘ಭಾರತದ ಅಮೃತ ಘಳಿಗೆಯಲ್ಲಿ ನರೇಂದ್ರ ಮೋದಿ ಅವರ ಅಮೃತ ಮಹೋತ್ಸವ ಬಂದಿರುವುದು ಕಾಕತಾಳೀಯ ಅಲ್ಲ. ಭಾರತವನ್ನು ಈ ಭೂಮಿಯ ಸರ್ವಶ್ರೇಷ್ಠ ದೇಶವನ್ನಾಗಿ ಮಾಡಲು ಆ ದೇವರೇ ಮೋದಿಯವರನ್ನು ಅವತಾರ ಪುರುಷರನ್ನಾಗಿ ಮಾಡಿ ಕಳುಹಿಸಿದ್ದಾನೆ. ಅವರ ಜನ್ಮದಿನವನ್ನು ಉತ್ಸವವಾಗಿ ಆಚರಿಸಬೇಕು’ ಎಂದು ಮುಕೇಶ್ ಅಂಬಾನಿ ಹೊಗಳಿದ್ದಾರೆ.

ಅಂಬಾನಿ ಮಾತನಾಡಿರುವ ವಿಡಿಯೋ

‘ಮೂರು ದಶಕಗಳಿಗೂ ಹೆಚ್ಚು ಕಾಲ ಅವರೊಂದಿಗೆ ನಿಕಟವಾಗಿರುವುದು ನನ್ನ ಸೌಭಾಗ್ಯ. ದೇಶದ ಏಳ್ಗೆಗಾಗಿ ಇಷ್ಟು ದಣಿವರಿಯದೆ ಕೆಲಸ ಮಾಡಿದ ಇನ್ನೊಬ್ಬ ನಾಯಕನನ್ನು ನಾನು ನೋಡಿಯೇ ಇಲ್ಲ’ ಎಂದೂ ರಿಲಾಯನ್ಸ್ ಇಂಡಸ್ಟ್ರೀಸ್ ಛೇರ್ಮನ್ ಹೇಳಿದ್ದಾರೆ.

ಇದನ್ನೂ ಓದಿ: PM Modi at 75: ಪ್ರಧಾನಿ ನರೇಂದ್ರ ಮೋದಿ ಜನ್ಮದಿನಕ್ಕೆ ಶುಭ ಕೋರಿದ ವಿರೋಧ ಪಕ್ಷದ ನಾಯಕರು

ಮೋದಿ ಅವರನ್ನು ಪ್ರಶಂಸಿಸಿದ ಇತರ ಉದ್ಯಮ ಗಣ್ಯರು…

‘ಭಾರತದ ಬಗ್ಗೆ ನಿಮಗಿರುವ ಪ್ರೀತಿ ಮತ್ತು ದೇಶದ ಘನತೆ ಹೆಚ್ಚಿಸಲು ನಿಮಗಿರುವ ಬದ್ಧತೆ ಬಗ್ಗೆ ಯಾವ ಸಂದೇಹವೂ ಇಲ್ಲ. ನಿಮ್ಮ ಅವಿರತ ಶ್ರಮ ಪ್ರತಿಯೊಬ್ಬ ಭಾರತೀಯನಿಗೂ ಕಾಣುತ್ತಿದೆ’ ಎಂದು ಮಹೀಂದ್ರ ಗ್ರೂಪ್ ಮುಖ್ಯಸ್ಥ ಆನಂದ್ ಮಹೀಂದ್ರ ಅಭಿಪ್ರಾಯಪಟ್ಟಿದ್ದಾರೆ.

‘ನರೇಂದ್ರ ಮೋದಿ ಅವರು ಸದಾ ಕಾಲ ಕೆಲಸ ಮಾಡುತ್ತಲೇ ಇರುತ್ತಾರೆ, ದೇಶದ ಬಗ್ಗೆ ಯೋಚಿಸುತ್ತಲೇ ಇರುತ್ತಾರೆ. ಅಪಾರ ಬುದ್ಧಿಮತ್ತೆ ಮತ್ತು ಅದ್ಭುತ ದೃಷ್ಟಿಕೋನದ ಜೊತೆಗೆ ನಿಸ್ವಾರ್ಥ ಗುಣ ಮೇಳೈಸಿರುವ ವ್ಯಕ್ತಿತ್ವ ಮೋದಿಯವರದ್ದು’ ಎಂದು ಆರ್​ಪಿಜಿ ಗ್ರೂಪ್​ನ ಸಂಜೀವ್ ಗೋಯಂಕಾ ಹೇಳಿದ್ದಾರೆ.

ನರೇಂದ್ರ ಮೋದಿ ಅವರು ಯುವಜನರಿಗೆ ಸ್ಪೂರ್ತಿಯಾಗಿದ್ದಾರೆ. ಭಾರತದ ಅಭಿವೃದ್ಧಿ ಬಗ್ಗೆ ಅವರಿಗಿರುವ ಬದ್ಧತೆಗೆ ಸರಿಸಾಟಿ ಇಲ್ಲ ಎಂದು ಪೇಟಿಎಂ ಸಂಸ್ಥಾಪಕ ವಿಜಯ್ ಶೇಖರ್ ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: ‘ಮೋದಿ ಮೀಟ್ ಮಾಡೋಕೆ ಎಷ್ಟು ಹಣ ಪಡೆದ್ರಿ’ ಎಂದವರಿಗೆ ಅಯ್ಯೋ ಶ್ರದ್ಧಾ ಕೊಟ್ಟ ಖಡಕ್ ಉತ್ತರ ಇದು

ಮೋದಿ ಜೊತೆಗಿನ ಪ್ರತೀ ಮಾತುಕತೆಯೂ ಕಲಿಕೆಯ ಅನುಭವ ಕೊಡುತ್ತದೆ. ಹೊಸದನ್ನು ಅನ್ವೇಷಿಸುವ ಕುತೂಹಲ, ಕಾರ್ಯಗತಗೊಳಸುವ ದೃಷ್ಟಿಕೋನ ನಿಜಕ್ಕೂ ಪ್ರಶಂಸನೀಯ. ಜಪಾನ್​ಗೆ ಹೋದಾಗ ಬ್ರೇಲ್ ಟೈಲ್ಸ್​ನಂತಹ ಐಡಿಯಾಗಳನ್ನು ತಲೆಯಲ್ಲಿ ಇಟ್ಟುಕೊಂಡು ಬಂದು ಅಹ್ಮದಾಬಾದ್​ನಲ್ಲಿ ಅದನ್ನು ಜಾರಿಗೆ ತಂದಿದ್ದರು ಎಂದು ಕೋಟಕ್ ಮಹೀಂದ್ರ ಬ್ಯಾಂಕ್​ನ ಉದಯ್ ಕೋಟಕ್ ಸ್ಮರಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ