AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಟೆಕ್ನಾಲಜಿ ಸೂಪರ್ ಪವರ್ ಕಂಪನಿಯಾಗುವ ಗುರಿ ಕೇಯ್ನೆಸ್ ಟೆಕ್ನಾಲಜಿಯದ್ದು

Kaynes Semicon to get into Fab, GPUs and Design Lab: ಕೇಯ್ನೆಸ್ ಸೆಮಿಕಾನ್ ಕಂಪನಿ ಭಾರತದ ಸಮಿಕಂಡಕ್ಟರ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರಲು ಬೇಕಾದ ಯೋಜನೆಗಳನ್ನು ಹಾಕಿಕೊಂಡಿದೆ. ಫ್ಯಾಬ್ ಯುನಿಟ್, ಡಿಸೈನ್ ಲ್ಯಾಬ್, ಜಿಪಿಯು, ಆರ್ ಅಂಡ್ ಡಿ ಇತ್ಯಾದಿ ಯೋಜನೆಗಳನ್ನು ಹಮ್ಮಿಕೊಂಡಿದೆ. ಮುಂದಿನ ಒಂದು, ಎರಡು ವರ್ಷ, ಮೂರು ವರ್ಷಕ್ಕೆ ವಿವಿಧ ಗುರಿಗಳನ್ನು ನಿಗದಿ ಮಾಡಿಕೊಂಡಿದೆ.

ಭಾರತದ ಟೆಕ್ನಾಲಜಿ ಸೂಪರ್ ಪವರ್ ಕಂಪನಿಯಾಗುವ ಗುರಿ ಕೇಯ್ನೆಸ್ ಟೆಕ್ನಾಲಜಿಯದ್ದು
ಚಿಪ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 21, 2025 | 10:29 PM

Share

ನವದೆಹಲಿ, ಸೆಪ್ಟೆಂಬರ್ 21: ಕೇಯ್ನೆಸ್ ಟೆಕ್ನಾಲಜಿ ಇಂಡಿಯಾದ ಅಂಗಸಂಸ್ಥೆಯಾದ ಕೇಯ್ನ್ಸ್ ಸೆಮಿಕಾನ್ (Kaynes Semicon) ಭಾರತದ ಸೆಮಿಕಂಡಕ್ಟರ್ ಉದ್ಯಮದ ಎಲ್ಲವೂ ಆಗುವ ಗುರಿ ಇಟ್ಟಿದೆ. ಫ್ಯಾಬ್ರಿಕೇಶನ್ ಯೂನಿಟ್, ಕಾಂಪೌಂಡ್ ಫ್ಯಾಬ್, ಡಿಸೈನ್ ಲ್ಯಾಬ್, ಜಿಪಿಯು ಅಭಿವೃದ್ಧಿ ಹೇಗೆ ಹಲವು ಕಾರ್ಯಗಳನ್ನು ತಾನೇ ಸ್ವಂತವಾಗಿ ಮಾಡಲು ಹೊರಟಿದೆ. ಇದಕ್ಕಾಗಿ ಆರ್ ಅಂಡ್ ಡಿ ಸ್ಥಾಪನೆ, ಹಣಕಾಸು ವ್ಯವಸ್ಥೆ ಇವೆಲ್ಲವನ್ನೂ ಮಾಡುತ್ತಿದೆ.

2025-26ರಲ್ಲಿ ಆರ್ ಅಂಡ್ ಡಿ ಕಾರ್ಯಕ್ಕೆ 20 ಮಿಲಿಯನ್ ಡಾಲರ್ ಹೂಡಿಕೆ ಮಾಡುವ ಯೋಜನೆ ಹಾಕಿಕೊಂಡಿದೆ. ಈ ವೇಳೆ 100 ಕೋಟಿ ರೂ ಆದಾಯ ಗಳಿಸುವ ಗುರಿಯನ್ನೂ ಇಟ್ಟಿದೆ. ಕೇಯ್ನ್ಸ್ ಸೆಮಿಕಾನ್ ಕಂಪನಿಯ ಸಿಇಒ ರಘು ಪನಿಕರ್ ಈ ವಿಚಾರ ತಿಳಿಸಿದ್ದಾರೆ.

‘ಮುಂದಿನ ಮೂರು ವರ್ಷದಲ್ಲಿ ಒಂದು ಫ್ಯಾಬ್ ಯೂನಿಟ್ ಅಥವಾ ಕಾಂಪೌಂಡ್ ಫ್ಯಾಬ್ ಯೂನಿಟ್ ಸ್ಥಾಪಿಸುತ್ತೇವೆ. ಜೊತೆಗೆ ಡಿಸೈನ್ ಲ್ಯಾಬ್ ಸ್ಥಾಪಿಸುತ್ತೇವೆ. ಸಿಲಿಕಾನ್ ಫೋಟೋನಿಕ್ಸ್​ನಂತಹ ಹೊಸ ತಂತ್ರಜ್ಞಾನದಲ್ಲಿ ಮುಂದಿನ ಒಂದು ವರ್ಷದಲ್ಲಿ 150 ಮಿಲಿಯನ್ ಡಾಲರ್ ಹೂಡಿಕೆ ಮಾಡುತ್ತಿದ್ದೇವೆ. ಮುಂದಿನ ಎರಡು ವರ್ಷದೊಳಗೆ ಸ್ವಂತವಾಗಿ ಜಿಪಿಯು ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇವೆ. ಮುಂದಿನ ಮೂರು ವರ್ಷದಲ್ಲಿ ಐಪಿಒ ಅನ್ನೂ ಪ್ರವೇಶಿಸುವ ಉದ್ದೇಶ ಇದೆ’ ಎಂದು ಸಿಇಒ ರಘು ಪನಿಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಈ ವಿದೇಶೀ ಕಂಪನಿಗಳಿಗೆ ಭಾರತ ಕೊಡೋ ದುಡ್ಡು ಅದರ ಡಿಫೆನ್ಸ್ ಬಜೆಟ್​ಗೆ ಸಮ?

ಕೇಯ್ನೆಸ್ ಸೆಮಿಕಾನ್ ಕಂಪನಿ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟ್ ಘಟಕವನ್ನು ಗುಜರಾತ್​ನ ಸಾನಂದ್​ನಲ್ಲಿ ಸ್ಥಾಪಿಸಿದೆ. ವಿದ್ಯುತ್ ಕ್ಷೇತ್ರಕ್ಕೆ ಬೇಕಾದ ಚಿಪ್ ತಯಾರಿಸುತ್ತದೆ. ಮುಂದಿನ ತಿಂಗಳು (ಅಕ್ಟೋಬರ್) ಮೊದಲ ಕಮರ್ಷಿಯಲ್ ಚಿಪ್ ಹೊರಬರಲಿದೆ. ಈ ಕಂಪನಿಯು ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ಒಡಿಎಂ (ಮೂಲ ವಿನ್ಯಾಸ ತಯಾರಕ) ಕಂಪನಿಯಾಗುವ ಮಹತ್ವಾಕಾಂಕ್ಷೆ ಹೊಂದಿದೆ.

ಚಿಪ್ ಇಕೋಸಿಸ್ಟಂನಲ್ಲಿ ಎಲ್ಲವನ್ನೂ ಸರಬರಾಜು ಮಾಡುವ ಕಂಪನಿಯಾಗುವುದು ಕೇಯ್ನೆಸ್​ನ ಗುರಿ. ‘ಎಟಿಎಂಪಿ, ಆರ್ ಅಂಡ್ ಡಿ, ರಿಲಯಬಿಲಿಟಿ, ಫೈಲ್ಯೂರ್ ಅನಾಲಿಸಿಸ್, ಸಿಸ್ಟಂ ಸಲ್ಯೂಶನ್ ಗ್ರೂಪ್, ಒಡಿಎಂ, ಹೀಗೆ ಸಿಂಗಲ್ ಸಪ್ಲೈಯರ್ ಆಗಬೇಕೆಂದಿದ್ದೇವೆ’ ಎಂದು ಕೇಯ್ನೆಸ್ ಸೆಮಿಕಾನ್​ನ ಸಿಇಒ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಜಿಎಸ್​ಟಿ ಬಗ್ಗೆ ಹೇಳುವಾಗ ಪ್ರಧಾನಿ ಮೋದಿ ಬೆಂಗಳೂರನ್ನು ಪ್ರಸ್ತಾಪಿಸಿದ್ದು ಯಾಕೆ? ಇಲ್ಲಿದೆ ಅದರ ಹಿನ್ನೆಲೆ

ಈ ಕಂಪನಿಯು ವಿದ್ಯುತ್ ಕ್ಷೇತ್ರಕ್ಕೆ ಚಿಪ್​ಗಳನ್ನು ತಯಾರಿಸುತ್ತಿದೆ. ಕನ್ಸೂಮರ್ ಕ್ಷೇತ್ರದ ಅಗತ್ಯಗಳಿಗೂ ಚಿಪ್ ತಯಾರಿಸಲಿದೆ. ಸಿಲಿಕಾನ್ ಮೈಕ್ರೋಫೋನ್, ಫಿಂಗರ್ ಪ್ರಿಂಟ್ ಸೆನ್ಸರ್ ಇತ್ಯಾದಿ ತಯಾರಿಸಲು ಗಮನ ಹರಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ