AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Stock Market | ಒಂದೇ ವಾರದಲ್ಲಿ ಟಾಪ್ 9 ಕಂಪೆನಿಗಳ ಮೌಲ್ಯ 2.19 ಲಕ್ಷ ಕೋಟಿ ರೂ. ಇಳಿಕೆ

ಕಳೆದ ವಾರ (ಫೆ.22ರಿಂದ 26ರ ಮಧ್ಯೆ) ಭಾರತದ 10 ಅತ್ಯಂತ ಮೌಲ್ಯಯುತ ಕಂಪೆನಿಗಳ ಪೈಕಿ 9 ಕಂಪೆನಿಗಳ ಮಾರುಕಟ್ಟೆ ಮೌಲ್ಯ ₹ 2,19,920.71 ಕೋಟಿ ಕಡಿಮೆಯಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಕರ್ನಾಟಕ ಸರ್ಕಾರದ ಬಜೆಟ್ ಮೊತ್ತವೇ ₹ 2.37 ಲಕ್ಷ ಕೋಟಿ.

Indian Stock Market | ಒಂದೇ ವಾರದಲ್ಲಿ ಟಾಪ್ 9 ಕಂಪೆನಿಗಳ ಮೌಲ್ಯ 2.19 ಲಕ್ಷ ಕೋಟಿ ರೂ. ಇಳಿಕೆ
ಸಾಂದರ್ಭಿಕ ಚಿತ್ರ
Srinivas Mata
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Feb 28, 2021 | 2:45 PM

Share

ಕಳೆದ ವಾರ (ಫೆಬ್ರವರಿ 22ರಿಂದ 26ರ ಮಧ್ಯೆ) ಭಾರತದ ಷೇರು ಮಾರ್ಕೆಟ್​​ನಲ್ಲಿ ಹೂಡಿಕೆದಾರರು ಭಾರೀ ಮೊತ್ತದ ಹಣವನ್ನು ಕಳೆದುಕೊಂಡಿದ್ದಾರೆ. ಅತ್ಯಂತ ಮೌಲ್ಯಯುತ 10 ಕಂಪೆನಿಗಳ ಪೈಕಿ 9 ಕಂಪೆನಿಗಳು ತಮ್ಮ ಮಾರುಕಟ್ಟೆ ಮೌಲ್ಯದಲ್ಲಿ 2,19,920.71 ಕೋಟಿ ರೂಪಾಯಿ (₹ 2.19 ಲಕ್ಷ ಕೋಟಿ) ಕಳೆದುಕೊಂಡಿವೆ. ಇದು ಒಂದೇ ವಾರದಲ್ಲಿ ಇಳಿಕೆ ಆಗಿರುವ ಮೊತ್ತ. ಪ್ರಸಕ್ತ ಹಣಕಾಸು ವರ್ಷದಲ್ಲಿ ಕರ್ನಾಟಕ ಸರ್ಕಾರದ ಬಜೆಟ್ ಮೊತ್ತವೇ 2.37 ಲಕ್ಷ ಕೋಟಿ ರೂಪಾಯಿ ಇತ್ತು. ಅಂದರೆ, ಕರ್ನಾಟಕ ರಾಜ್ಯದ ಒಂದು ವರ್ಷದ ಬಜೆಟ್ ಮೊತ್ತಕ್ಕೆ ಇಪ್ಪತ್ತು ಸಾವಿರ ಕೋಟಿ ರೂಪಾಯಿ ಕಡಿಮೆ ಹಣ ಒಂದೇ ವಾರದಲ್ಲಿ ಷೇರು ಮಾರ್ಕೆಟ್​​ನಲ್ಲಿ ಕೇವಲ ಹತ್ತು ಕಂಪೆನಿಗಳು ಕಳೆದುಕೊಂಡಿವೆ. ಸೆನ್ಸೆಕ್ಸ್ ಸೂಚ್ಯಂಕ ಶೇ 3ಕ್ಕೂ ಹೆಚ್ಚು ಕುಸಿತ ಕಂಡಿದೆ.

ಟಾಪ್ 10 ಮೌಲ್ಯಯುತ ಕಂಪೆನಿಗಳ ಪೈಕಿ ರಿಲಯನ್ಸ್ ಇಂಡಸ್ಟ್ರೀಸ್ ಮಾತ್ರ ಗಳಿಕೆ ಕಂಡಿದೆ. ಇನ್ನು ನಷ್ಟದ ವಿಚಾರಕ್ಕೆ ಬಂದರೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಮಾರುಕಟ್ಟೆ ಮೌಲ್ಯ 81,506.34 ಕೋಟಿ ರೂ. ಇಳಿಕೆಯಾಗಿ, ಒಟ್ಟಾರೆ ಮೌಲ್ಯ 10,71,263.77 ಕೋಟಿಗೆ ತಲುಪಿದೆ.

ಯಾವ ಕಂಪೆನಿಯ ಮೌಲ್ಯ ಎಷ್ಟು ಕಡಿಮೆ

ಎಚ್​ಡಿಎಫ್​ಸಿ ಬ್ಯಾಂಕ್- ₹ 2,202.12 ಕೋಟಿ, ಐಸಿಐಸಿಐ ಬ್ಯಾಂಕ್ ₹ 18,098.57 ಕೋಟಿ, ಹಿಂದೂಸ್ತಾನ್ ಯುನಿಲಿವರ್ ₹ 11,536.32, ಎಚ್​ಡಿಎಫ್​ಸಿ ₹ 35,389.88, ಇನ್ಫೋಸಿಸ್ ₹ 16,613.57 ಕೋಟಿ, ಬಜಾಜ್ ಫೈನಾನ್ಸ್  ₹ 15,172.46 ಕೋಟಿ, ಕೊಟಕ್ ಮಹೀಂದ್ರಾ ಬ್ಯಾಂಕ್ ₹ 30,695.43  ಕೋಟಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ₹ 8,166.02 ಕೋಟಿ.

ಷೇರುಪೇಟೆ ಬಂಡವಾಳ ಗಾತ್ರದ ಮಾನದಂಡದಲ್ಲಿ ಟಾಪ್ 10 ಎನಿಸಿರುವ ಕಂಪೆನಿಗಳ ಪೈಕಿ ಮೌಲ್ಯ ಏರಿಕೆ ಆಗಿರುವುದು ರಿಲಯನ್ಸ್ ಇಂಡಸ್ಟ್ರೀಸ್​ನಲ್ಲಿ ಮಾತ್ರ. ಕಂಪೆನಿಯ ಮೌಲ್ಯ ₹ 2,092.01 ಕೋಟಿ ಹೆಚ್ಚಾಗಿದೆ. ಒಟ್ಟಾರೆ ಮಾರುಕಟ್ಟೆ ಮೌಲ್ಯ ₹ 13,21,044.35 ಕೋಟಿಗೆ ತಲುಪಿದೆ.

ಇದನ್ನೂ ಓದಿ: ಷೇರು ಮಾರ್ಕೆಟ್​ನಲ್ಲಿ ಹಣ ಮಾಡುವುದು ಹೇಗೆ ಎಂಬುದಕ್ಕೆ ಇಲ್ಲಿವೆ 10 ಸಿಂಪಲ್ ಟಿಪ್ಸ್

Published On - 2:37 pm, Sun, 28 February 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!