AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Poorest states of India: ಭಾರತದ ಅತ್ಯಂತ ಬಡ ರಾಜ್ಯಗಳ ಸಾಲಿನಲ್ಲಿ ಬಿಹಾರ, ಜಾರ್ಖಂಡ್ ಮತ್ತು ಉತ್ತರಪ್ರದೇಶ

ಭಾರತದಲ್ಲಿನ ಬಡರಾಜ್ಯಗಳ ಬಗ್ಗೆ ವರದಿ ಇಲ್ಲಿದೆ. ಮೊದಲ ಸ್ಥಾನದಲ್ಲಿ ಬಿಹಾರ ಇದ್ದರೆ, ಆ ನಂತರದಲ್ಲಿ ಜಾರ್ಖಂಡ್​ ಮತ್ತು ಉತ್ತರಪ್ರದೇಶ ಇದೆ. ಇಡೀ ಭಾರತದ ಬಗ್ಗೆ ವರದಿ ಇಲ್ಲಿದೆ.

Poorest states of India: ಭಾರತದ ಅತ್ಯಂತ ಬಡ ರಾಜ್ಯಗಳ ಸಾಲಿನಲ್ಲಿ ಬಿಹಾರ, ಜಾರ್ಖಂಡ್ ಮತ್ತು ಉತ್ತರಪ್ರದೇಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 26, 2021 | 8:15 PM

Share

ನೀತಿ ಆಯೋಗದ ಬಹು ಆಯಾಮದ ಬಡತನ ಸೂಚ್ಯಂಕದ (MPI) ಪ್ರಕಾರವಾಗಿ ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶ ರಾಜ್ಯಗಳು ಭಾರತದ ಅತ್ಯಂತ ಬಡ ರಾಜ್ಯಗಳಾಗಿ ಹೊರಹೊಮ್ಮಿವೆ. ಸೂಚ್ಯಂಕದ ಪ್ರಕಾರ, ಬಿಹಾರದ ಜನಸಂಖ್ಯೆಯ ಶೇ 51.91ರಷ್ಟು ಬಡವರಿದ್ದರೆ, ಜಾರ್ಖಂಡ್‌ನಲ್ಲಿ ಶೇ 42.16ರಷ್ಟು ಮತ್ತು ಉತ್ತರ ಪ್ರದೇಶದಲ್ಲಿ ಶೇ 37.79ರಷ್ಟು ಇದ್ದಾರೆ. ಮಧ್ಯಪ್ರದೇಶ ಶೇ 36.65ರಷ್ಟು ಇರುವ ಮೂಲಕ ನಾಲ್ಕನೇ ಸ್ಥಾನದಲ್ಲಿ ಮತ್ತು ಮೇಘಾಲಯವು ಶೇ 32.67ರೊಂದಿಗೆ ಐದನೇ ಸ್ಥಾನದಲ್ಲಿದೆ. ಭಾರತದಾದ್ಯಂತ ಉಳಿದ ರಾಜ್ಯಗಳು ಕಡಿಮೆ ಬಡತನವನ್ನು ದಾಖಲಿಸಿದ್ದರೂ ಸೂಚ್ಯಂಕದ ಕೆಳಭಾಗದಲ್ಲಿವೆ.

ಕೇರಳವು ಶೇ 0.71, ಗೋವಾ ಶೇ 3.76, ಸಿಕ್ಕಿಂ ಶೇ 3.82, ತಮಿಳುನಾಡು ಶೇ 4.89 ಮತ್ತು ಪಂಜಾಬ್​ನಲ್ಲಿ ಶೇ 5.59ರಷ್ಟಿದೆ. ಆಕ್ಸ್‌ಫರ್ಡ್ ಬಡತನ ಮತ್ತು ಮಾನವ ಅಭಿವೃದ್ಧಿ ಇನಿಶಿಯೇಟಿವ್ (OPHI) ಹಾಗೂ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (UNDP) ಅಭಿವೃದ್ಧಿಪಡಿಸಿದ ಜಾಗತಿಕವಾಗಿ ಅಂಗೀಕರಿಸಿದ ಮತ್ತು ದೃಢವಾದ ವಿಧಾನವನ್ನು ಭಾರತದ ರಾಷ್ಟ್ರೀಯ MPI ಅಳತೆಯು ಬಳಸುತ್ತದೆ. ಇದು ಬಹು ಆಯಾಮದ ಬಡತನದ ಅಳತೆಯಾಗಿ ಹಾಗೂ ಬಹು ಮತ್ತು ಏಕಕಾಲಿಕವಾಗಿ ಕುಟುಂಬಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ದಾಖಲಿಸುತ್ತದೆ ಎಂದು ಸೇರಿಸಲಾಗಿದೆ.

SDG ಚೌಕಟ್ಟು ವಿಶಾಲ ವ್ಯಾಪ್ತಿಯನ್ನು ಹೊಂದಿದೆ ಸುಸ್ಥಿರ ಅಭಿವೃದ್ಧಿ ಗುರಿಗಳು (SDG) ಚೌಕಟ್ಟು ಅಭಿವೃದ್ಧಿ ನೀತಿಗಳು, ಸರ್ಕಾರದ ಆದ್ಯತೆಗಳು ಮತ್ತು ಪ್ರಪಂಚದಾದ್ಯಂತ ಅಭಿವೃದ್ಧಿ ಪ್ರಗತಿಯನ್ನು ಅಳೆಯಲು ಮೆಟ್ರಿಕ್‌ಗಳನ್ನು ಮರು ವ್ಯಾಖ್ಯಾನಿಸಿದೆ. ಇದನ್ನು 2015ರಲ್ಲಿ 193 ದೇಶಗಳು ಅಳವಡಿಸಿಕೊಂಡಿವೆ. 17 ಜಾಗತಿಕ ಗುರಿಗಳು ಮತ್ತು 169 ಟಾರ್ಗೆಟ್​ಗಳೊಂದಿಗೆ SDG ಫ್ರೇಮ್‌ವರ್ಕ್ ಅದರ ಪೂರ್ವ ಆವೃತ್ತಿಯಾದ ಮಿಲೇನಿಯಮ್ ಡೆವಲಪ್‌ಮೆಂಟ್ ಗೋಲ್ಸ್ (MDG)ಗೆ ಹೋಲಿಸಿದರೆ ವ್ಯಾಪ್ತಿ ಮತ್ತು ಪ್ರಮಾಣದಲ್ಲಿ ಗಮನಾರ್ಹವಾಗಿ ವಿಸ್ತಾರವಾಗಿದೆ.

ಬಹು ಆಯಾಮದ ಬಡತನವನ್ನು ಮೇಲ್ವಿಚಾರಣೆ ಮಾಡುವ ಸಾರ್ವಜನಿಕ ನೀತಿ ಸಾಧನವನ್ನು ಸ್ಥಾಪಿಸುವಲ್ಲಿ ಭಾರತದ ರಾಷ್ಟ್ರೀಯ ಬಹು ಆಯಾಮದ ಬಡತನ ಸೂಚ್ಯಂಕದ ಅಭಿವೃದ್ಧಿಯು ಪ್ರಮುಖ ಕೊಡುಗೆಯಾಗಿದೆ. ಸಾಕ್ಷ್ಯಾಧಾರಿತ ಮತ್ತು ಕೇಂದ್ರೀಕೃತ ಮಧ್ಯಸ್ಥಿಕೆಗಳನ್ನು ತಿಳಿಸುತ್ತದೆ. ಇದರಿಂದಾಗಿ ಯಾರೂ ಹಿಂದೆ ಉಳಿಯುವುದಿಲ್ಲ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರ ಮುನ್ನುಡಿಯಲ್ಲಿ ಹೇಳಿದ್ದಾರೆ. ಅಲ್ಲದೆ, 2015-16ರ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ (NFHS) ಉಲ್ಲೇಖದ ಅವಧಿಯನ್ನು ಭಾರತದ ಮೂಲ ಆಧರಿಸಿ ರಾಷ್ಟ್ರೀಯ MPI ಅಳತೆಯ ಕುರಿತು ವರದಿಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Chanakya Niti: ಚಾಣಕ್ಯ ನೀತಿ ಪ್ರಕಾರ ಈ ಮೂರು ಸ್ವಭಾವಗಳನ್ನು ತಕ್ಷಣ ಬದಲಿಸಿಕೊಳ್ಳದಿದ್ದರೆ ಬಡತನ ಅಟ್ಟಿಸಿಕೊಂಡು ಬರುತ್ತದೆ!

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ