AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧದಿಂದ ತೈಲ ಪೂರೈಕೆ ನಿಂತು ಹೋದರೆ ಭಾರತಕ್ಕೆ ಗತಿ ಏನು? ದೇಶದಲ್ಲಿರುವ ಪೆಟ್ರೋಲ್ ಎಷ್ಟು ದಿನಕ್ಕೆ ಆಗುತ್ತೆ?

India's strategic petroleum reserves: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವುದರಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಭಾರತಕ್ಕೆ ಆಗುವ ಪರಿಣಾಮವೇನು? ಬಹಳ ಅಧಿಕ ಪೆಟ್ರೋಲ್ ಬಳಸುವ ಭಾರತವು ಪೆಟ್ರೋಲ್​ಗಾಗಿ ಏನು ಮಾಡಬೇಕು? ಇಲ್ಲಿರುವ ಪೆಟ್ರೋಲ್ ಸಂಗ್ರಹ ಎಷ್ಟು ದಿನಗಳಿಗೆ ಆಗುವಷ್ಟು ಇದೆ? ಈ ಬಗ್ಗೆ ಒಂದು ಮಾಹಿತಿ...

ಯುದ್ಧದಿಂದ ತೈಲ ಪೂರೈಕೆ ನಿಂತು ಹೋದರೆ ಭಾರತಕ್ಕೆ ಗತಿ ಏನು? ದೇಶದಲ್ಲಿರುವ ಪೆಟ್ರೋಲ್ ಎಷ್ಟು ದಿನಕ್ಕೆ ಆಗುತ್ತೆ?
ಪೆಟ್ರೋಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 02, 2026 | 1:24 PM

Share

ನವದೆಹಲಿ, ಮಾರ್ಚ್ 2: ಮಧ್ಯಪ್ರಾಚ್ಯ ಹೊತ್ತಿ ಉರಿಯುತ್ತಿದೆ. ಇಸ್ರೇಲ್, ಇರಾನ್ ಸಂಘರ್ಷದಲ್ಲಿ (Middle East crisis) ಅಮೆರಿಕ ಅಖಾಡಕ್ಕೆ ಪ್ರವೇಶ ಮಾಡಿದೆ. ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಸೇರಿದಂತೆ ಹಲವು ಪ್ರಮುಖ ಮುಖಂಡರನ್ನು ಅಮೆರಿಕ ಹಾಗೂ ಇಸ್ರೇಲ್ ಜಂಟಿ ಕಾರ್ಯಾಚರಣೆಯಲ್ಲಿ ಕೊಂದು ಹಾಕಿವೆ. ಗಲ್ಫ್ ದೇಶಗಳಿಂದ ತೈಲ ಪೂರೈಕೆಗೆ ಅಡಚಣೆ ಆಗಿದೆ. ಜಾಗತಿಕವಾಗಿ ತೈಲ ಬೆಲೆ ಹೆಚ್ಚುವ ಮತ್ತು ಪೂರೈಕೆ ಮೊಟಕುಗೊಳ್ಳುವ ಸಾಧ್ಯತೆ ಹೆಚ್ಚು ಕಾಣುತ್ತಿದೆ.

ಒಂದು ವೇಳೆ, ತೈಲ ಪೂರೈಕೆ ನಿಂತು ಹೋದರೆ ಭಾರತಕ್ಕೆ ಏನು ತೊಂದರೆ? ಅತಿಹೆಚ್ಚು ಪೆಟ್ರೋಲ್ ಬಳಸುವ ದೇಶಗಳಲ್ಲಿ ಭಾರತ ಒಂದು. ಒಂದು ವೇಳೆ ತೈಲ ಪೂರೈಕೆ ಸ್ಥಗಿತಗೊಂಡರೆ ಭಾರತದಲ್ಲಿ ಈಗಿರುವ ಪೆಟ್ರೋಲಿಯಂ ಸಂಗ್ರಹ ಎಷ್ಟು ದಿನಕ್ಕೆ ಸಾಕಾಗಬಹುದು? ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಅವರು ಕಳೆದ ತಿಂಗಳು (ಫೆಬ್ರುವರಿ) ಈ ಬಗ್ಗೆ ರಾಜ್ಯಸಭೆಯಲ್ಲಿ ನೀಡಿರುವ ಮಾಹಿತಿ ಪ್ರಕಾರ, ಭಾರತದಲ್ಲಿ ಇರುವ ಪೆಟ್ರೋಲಿಯಂ ಸಂಗ್ರಹವು 74 ದಿನಗಳಿಗೆ ಸಾಕಾಗುವಷ್ಟು ಇದೆಯಂತೆ.

ಅಂತಾರಾಷ್ಟ್ರೀಯ ಇಂಧನ ಸಂಘಟನೆಯಾದ ಐಇಎ (IEA) ಒಂದು ದೇಶದಲ್ಲಿ ಕನಿಷ್ಠ 90 ದಿನಗಳಿಗೆ ಆಗುವಷ್ಟು ಪೆಟ್ರೋಲ್ ಸಂಗ್ರಹ ಇರಬೇಕು ಎಂದು ಶಿಫಾರಸು ಮಾಡಿದೆ. ತೈಲ ನಿಕ್ಷೇಪಗಳಿಲ್ಲದ ದೇಶಗಳಿಗೆ ಈ ನಿಯಮ ಅಥವಾ ಶಿಫಾರಸು ಅನ್ವಯ ಆಗುತ್ತದೆ. ಹಲವು ಐರೋಪ್ಯ ದೇಶಗಳು ಈ ನಿಯಮವನ್ನು ಪಾಲಿಸುತ್ತಿವೆ. ಅವನ್ನು ಬಿಟ್ಟು ಹೆಚ್ಚಿನ ದೇಶಗಳಲ್ಲಿ ಇಷ್ಟು ಸಂಗ್ರಹ ಇಲ್ಲ. ಭಾರತದಲ್ಲಿ ಬಹಳ ಪೆಟ್ರೋಲ್ ಬಳಕೆ ಇದ್ದರೂ 74 ದಿನಗಳಿಗೆ ಆಗುವಷ್ಟು ಸಂಗ್ರಹ ಹೊಂದಿರುವುದು ಗಮನಾರ್ಹ.

ಇದನ್ನೂ ಓದಿ: ಇರಾನ್​ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಎಷ್ಟು ದಿನಗಳವರೆಗೆ ಮುಂದುವರೆಯಬಹುದು, ಟ್ರಂಪ್ ಹೇಳಿದ್ದೇನು?

ಭಾರತದಲ್ಲಿ ಮೂರು ಕಡೆ ತೈಲ ಸಂಗ್ರಹ ಸ್ಥಳಗಳಿವೆ. ಕರ್ನಾಟಕದ ಮಂಗಳೂರು ಮತ್ತು ಉಡುಪಿಯಲ್ಲಿ, ಹಾಗೂ ಆಂಧ್ರದ ವಿಶಾಖಪಟ್ಟಣಂನಲ್ಲಿ ಕ್ಯಾವರ್ನ್​ಗಳು ಅಥವಾ ಭೂಗತ ತೈಲಾಗಾರಗಳಿವೆ. ಒಡಿಶಾದಲ್ಲೂ ಒಂದು ತೈಲ ಸಂಗ್ರಹಗಾರವನ್ನು ಸ್ಥಾಪಿಸಲಾಗುತ್ತಿದೆ. ಒಡಿಶಾದ್ದು ಪೂರ್ಣಗೊಂಡರೆ ಭಾರತದಲ್ಲಿ 90 ದಿನಗಳಿಗಾಗುಷ್ಟು ಪೆಟ್ರೋಲ್ ಸಂಗ್ರಹ ಹೊಂದಿರಲು ಸಾಧ್ಯವಾಗುತ್ತದೆ. ಈಗಿರುವ ಮೂರು ಕ್ಯಾವರ್ನ್​ಗಳಲ್ಲಿ 5 ಎಂಎಂಟಿಗೂ ಅಧಿಕ ಕಚ್ಚಾ ತೈಲವನ್ನು ಇರಿಸಲಾಗಿದೆ. ಇದಲ್ಲದೆ, ದೇಶದ ಹಲವೆಡೆ ರಿಫೈನರಿಗಳಿವೆ. ಅಲ್ಲಿಯೂ ಸಾಕಷ್ಟು ಕಚ್ಚಾ ತೈಲ ಇದ್ದು ಅದನ್ನು ಸಂಸ್ಕರಿಸಿ ಪೆಟ್ರೋಲಿಯಂ ಉತ್ಪನ್ನಗಳನ್ನು ತಯಾರಿಸುವ ಕೆಲಸ ನಿರಂತರವಾಗಿ ನಡೆಯುತ್ತಿರುತ್ತದೆ. ತುರ್ತು ಸ್ಥಿತಿ ಬಂದಾಗ ಈ ರಿಫೈನರಿಯಲ್ಲಿರುವ ಪೆಟ್ರೋಲ್ ಎಲ್ಲವನ್ನೂ ಆಂತರಿಕ ಬಳಕೆಗೆ ಉಪಯೋಗಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?