AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo: ಏರ್​ಬಸ್​ನಿಂದ 500 ವಿಮಾನ ಖರೀದಿಸಲಿದೆ ಇಂಡಿಗೋ; ದಾಖಲೆಯ ಒಪ್ಪಂದ

ಪ್ಯಾರಿಸ್​​ನಲ್ಲಿ ನಡೆಯುತ್ತಿರುವ ಏರ್​​ ಶೋದಲ್ಲಿ ಈ ಒಪ್ಪಂದ ಏರ್ಪಟ್ಟಿದೆ. ಎಂಡಿ ರಾಹುಲ್ ಭಾಟಿಯಾ ನೇತೃತ್ವದ ಇಂಡಿಗೋ ಪ್ರವರ್ತಕರ ತಂಡ ಮತ್ತು ಏರ್​ಬಸ್​​ನ ಸಿಇಒ ಗುಯಿಲೌಮ್ ಫೌರಿ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

IndiGo: ಏರ್​ಬಸ್​ನಿಂದ 500 ವಿಮಾನ ಖರೀದಿಸಲಿದೆ ಇಂಡಿಗೋ; ದಾಖಲೆಯ ಒಪ್ಪಂದ
ಇಂಡಿಗೋ ವಿಮಾನ
Ganapathi Sharma
|

Updated on:Jun 19, 2023 | 10:45 PM

Share

ನವದೆಹಲಿ: ವಿಮಾನಯಾನ ಕ್ಷೇತ್ರದಲ್ಲೇ ಅತಿದೊಡ್ಡದು ಎನ್ನಲಾದ ಒಪ್ಪಂದಕ್ಕೆ ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ (IndiGo) ಸಹಿ ಹಾಕಿದೆ. ಏರ್​​ಬಸ್​​ನಿಂದ (Airbus) 50 ಶತಕೋಟಿ ಡಾಲರ್ ವೆಚ್ಚದಲ್ಲಿ 500 ‘A320’ ವಿಮಾನಗಳನ್ನು ಖರೀದಿಸುವುದಾಗಿ ಇಂಡಿಗೋ ಸೋಮವಾರ ಘೊಷಿಸಿದೆ. ಈ ಒಪ್ಪಂದಕ್ಕೆ ಇಂಡಿಗೋ ಕಂಪನಿಗೆ ಭಾರೀ ರಿಯಾಯಿತಿಯ ಕೊಡುಗೆ ದೊರೆತಿದೆ ಎನ್ನಲಾಗಿದೆ. ಟಾಟಾ ಗ್ರೂಪ್ ಇತ್ತೀಚೆಗೆ ಏರ್ ಇಂಡಿಯಾಗೆ 470 ವಿಮಾನಗಳನ್ನು ಖರೀದಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿತ್ತು. ಇದು ಈವರೆಗಿನ ಅತಿದೊಡ್ಡ ವಿಮಾನ ಖರೀದಿ ಒಪ್ಪಂದವಾಗಿತ್ತು. ಇದೀಗ ಟಾಟಾ ಗ್ರೂಪ್​ ಅನ್ನು ಇಂಡಿಗೋ ಮೀರಿಸಿದೆ.

ಪ್ಯಾರಿಸ್​​ನಲ್ಲಿ ನಡೆಯುತ್ತಿರುವ ಏರ್​​ ಶೋದಲ್ಲಿ ಈ ಒಪ್ಪಂದ ಏರ್ಪಟ್ಟಿದೆ. ಎಂಡಿ ರಾಹುಲ್ ಭಾಟಿಯಾ ನೇತೃತ್ವದ ಇಂಡಿಗೋ ಪ್ರವರ್ತಕರ ತಂಡ ಮತ್ತು ಏರ್​ಬಸ್​​ನ ಸಿಇಒ ಗುಯಿಲೌಮ್ ಫೌರಿ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

2006 ರಲ್ಲಿ ಆರಂಭವಾದಾಗಿನಿಂದ ಇಂಡಿಗೋ ಕಂಪನಿಯು ಈವರೆಗೆ ಏರ್‌ಬಸ್‌ನಿಂದ ಒಟ್ಟು 1,330 ವಿಮಾನಗಳ ಖರೀದಿಗೆ ಒಪ್ಪಂದ ಮಾಡಿಕೊಂಡಿದೆ. ಸದ್ಯ ಇಂಡಿಗೋದ 310 ವಿಮಾನಗಳು ಕಾರ್ಯಾಚರಣೆ ನಡೆಸುತ್ತಿವೆ.

ಇಂಡಿಗೋ ಪ್ರಕಾರ, ಏರ್​ಬಸ್​​ನ ‘A320’ ವಿಮಾನದಿಂದ ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡಲು ಸಾಧ್ಯವಾಗಲಿದೆ ಮತ್ತು ಉತ್ತಮ ಇಂಧನ ದಕ್ಷತೆಯನ್ನು ಕಾಪಾಡಿಕೊಳ್ಳಲು ಸಹಾಯಕವಾಗಲಿದೆ.

ಇದನ್ನೂ ಓದಿ: IndiGo: ಮಂಗಳೂರು- ಮುಂಬೈ ಮಾರ್ಗದಲ್ಲಿ ಹೊಸ ಇಂಡಿಗೋ ವಿಮಾನ ಸಂಚಾರ ಆರಂಭ

ಕೆಲವು ತಿಂಗಳುಗಳ ಹಿಂದಷ್ಟೇ ಫ್ರಾನ್ಸ್ ದೇಶದ ಏರ್​ಬಸ್ ಸಂಸ್ಥೆಯಿಂದ 250 ವಿಮಾನಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಂಡಿದ್ದ ಟಾಟಾ ಗ್ರೂಪ್​ನ ಏರ್ ಇಂಡಿಯಾ ಸಂಸ್ಥೆ ಅದಾಗಿ ಕೆಲವು ದಿನಗಳ ನಂತರ ಅಮೆರಿಕದ ಬೋಯಿಂಗ್​ನಿಂದ 220 ವಿಮಾನಗಳನ್ನು ಖರೀದಿಸುವ ಮತ್ತೊಂದು ಒಪ್ಪಂದಕ್ಕೆ ಸಹಿಹಾಕಿತ್ತು. ಇದರೊಂದಿಗೆ ಒಟ್ಟು 470 ವಿಮಾನಗಳ ಖರೀದಿಗೆ ಒಪ್ಪಂದ ಮಾಡಿಕೊಂಡಂತಾಗಿತ್ತು. ಇದು ದೇಶದ ಇತಿಹಾಸದಲ್ಲಿ ಅತಿದೊಡ್ಡ ವಿಮಾನ ಖರೀದಿ ಒಪ್ಪಂದ ಎನ್ನಲಾಗಿತ್ತು. ಇದೀಗ ಇಂಡಿಗೋ ಇದನ್ನು ಮೀರಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:43 pm, Mon, 19 June 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ