Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo: ಏರ್​ಬಸ್​ನಿಂದ 500 ವಿಮಾನ ಖರೀದಿಸಲಿದೆ ಇಂಡಿಗೋ; ದಾಖಲೆಯ ಒಪ್ಪಂದ

ಪ್ಯಾರಿಸ್​​ನಲ್ಲಿ ನಡೆಯುತ್ತಿರುವ ಏರ್​​ ಶೋದಲ್ಲಿ ಈ ಒಪ್ಪಂದ ಏರ್ಪಟ್ಟಿದೆ. ಎಂಡಿ ರಾಹುಲ್ ಭಾಟಿಯಾ ನೇತೃತ್ವದ ಇಂಡಿಗೋ ಪ್ರವರ್ತಕರ ತಂಡ ಮತ್ತು ಏರ್​ಬಸ್​​ನ ಸಿಇಒ ಗುಯಿಲೌಮ್ ಫೌರಿ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

IndiGo: ಏರ್​ಬಸ್​ನಿಂದ 500 ವಿಮಾನ ಖರೀದಿಸಲಿದೆ ಇಂಡಿಗೋ; ದಾಖಲೆಯ ಒಪ್ಪಂದ
ಇಂಡಿಗೋ ವಿಮಾನ
Follow us
Ganapathi Sharma
|

Updated on:Jun 19, 2023 | 10:45 PM

ನವದೆಹಲಿ: ವಿಮಾನಯಾನ ಕ್ಷೇತ್ರದಲ್ಲೇ ಅತಿದೊಡ್ಡದು ಎನ್ನಲಾದ ಒಪ್ಪಂದಕ್ಕೆ ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ (IndiGo) ಸಹಿ ಹಾಕಿದೆ. ಏರ್​​ಬಸ್​​ನಿಂದ (Airbus) 50 ಶತಕೋಟಿ ಡಾಲರ್ ವೆಚ್ಚದಲ್ಲಿ 500 ‘A320’ ವಿಮಾನಗಳನ್ನು ಖರೀದಿಸುವುದಾಗಿ ಇಂಡಿಗೋ ಸೋಮವಾರ ಘೊಷಿಸಿದೆ. ಈ ಒಪ್ಪಂದಕ್ಕೆ ಇಂಡಿಗೋ ಕಂಪನಿಗೆ ಭಾರೀ ರಿಯಾಯಿತಿಯ ಕೊಡುಗೆ ದೊರೆತಿದೆ ಎನ್ನಲಾಗಿದೆ. ಟಾಟಾ ಗ್ರೂಪ್ ಇತ್ತೀಚೆಗೆ ಏರ್ ಇಂಡಿಯಾಗೆ 470 ವಿಮಾನಗಳನ್ನು ಖರೀದಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿತ್ತು. ಇದು ಈವರೆಗಿನ ಅತಿದೊಡ್ಡ ವಿಮಾನ ಖರೀದಿ ಒಪ್ಪಂದವಾಗಿತ್ತು. ಇದೀಗ ಟಾಟಾ ಗ್ರೂಪ್​ ಅನ್ನು ಇಂಡಿಗೋ ಮೀರಿಸಿದೆ.

ಪ್ಯಾರಿಸ್​​ನಲ್ಲಿ ನಡೆಯುತ್ತಿರುವ ಏರ್​​ ಶೋದಲ್ಲಿ ಈ ಒಪ್ಪಂದ ಏರ್ಪಟ್ಟಿದೆ. ಎಂಡಿ ರಾಹುಲ್ ಭಾಟಿಯಾ ನೇತೃತ್ವದ ಇಂಡಿಗೋ ಪ್ರವರ್ತಕರ ತಂಡ ಮತ್ತು ಏರ್​ಬಸ್​​ನ ಸಿಇಒ ಗುಯಿಲೌಮ್ ಫೌರಿ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

2006 ರಲ್ಲಿ ಆರಂಭವಾದಾಗಿನಿಂದ ಇಂಡಿಗೋ ಕಂಪನಿಯು ಈವರೆಗೆ ಏರ್‌ಬಸ್‌ನಿಂದ ಒಟ್ಟು 1,330 ವಿಮಾನಗಳ ಖರೀದಿಗೆ ಒಪ್ಪಂದ ಮಾಡಿಕೊಂಡಿದೆ. ಸದ್ಯ ಇಂಡಿಗೋದ 310 ವಿಮಾನಗಳು ಕಾರ್ಯಾಚರಣೆ ನಡೆಸುತ್ತಿವೆ.

ಇಂಡಿಗೋ ಪ್ರಕಾರ, ಏರ್​ಬಸ್​​ನ ‘A320’ ವಿಮಾನದಿಂದ ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡಲು ಸಾಧ್ಯವಾಗಲಿದೆ ಮತ್ತು ಉತ್ತಮ ಇಂಧನ ದಕ್ಷತೆಯನ್ನು ಕಾಪಾಡಿಕೊಳ್ಳಲು ಸಹಾಯಕವಾಗಲಿದೆ.

ಇದನ್ನೂ ಓದಿ: IndiGo: ಮಂಗಳೂರು- ಮುಂಬೈ ಮಾರ್ಗದಲ್ಲಿ ಹೊಸ ಇಂಡಿಗೋ ವಿಮಾನ ಸಂಚಾರ ಆರಂಭ

ಕೆಲವು ತಿಂಗಳುಗಳ ಹಿಂದಷ್ಟೇ ಫ್ರಾನ್ಸ್ ದೇಶದ ಏರ್​ಬಸ್ ಸಂಸ್ಥೆಯಿಂದ 250 ವಿಮಾನಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಂಡಿದ್ದ ಟಾಟಾ ಗ್ರೂಪ್​ನ ಏರ್ ಇಂಡಿಯಾ ಸಂಸ್ಥೆ ಅದಾಗಿ ಕೆಲವು ದಿನಗಳ ನಂತರ ಅಮೆರಿಕದ ಬೋಯಿಂಗ್​ನಿಂದ 220 ವಿಮಾನಗಳನ್ನು ಖರೀದಿಸುವ ಮತ್ತೊಂದು ಒಪ್ಪಂದಕ್ಕೆ ಸಹಿಹಾಕಿತ್ತು. ಇದರೊಂದಿಗೆ ಒಟ್ಟು 470 ವಿಮಾನಗಳ ಖರೀದಿಗೆ ಒಪ್ಪಂದ ಮಾಡಿಕೊಂಡಂತಾಗಿತ್ತು. ಇದು ದೇಶದ ಇತಿಹಾಸದಲ್ಲಿ ಅತಿದೊಡ್ಡ ವಿಮಾನ ಖರೀದಿ ಒಪ್ಪಂದ ಎನ್ನಲಾಗಿತ್ತು. ಇದೀಗ ಇಂಡಿಗೋ ಇದನ್ನು ಮೀರಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:43 pm, Mon, 19 June 23

ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ