Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಫ್ಲೇಷನ್ ವರದಿ ಬಿಡುಗಡೆ; ಅಕ್ಟೋಬರ್​ನಲ್ಲಿ ಹಣದುಬ್ಬರ ಶೇ. 4.87ಕ್ಕೆ ಇಳಿಕೆ; ರಾಯ್ಟರ್ಸ್ ಪೋಲ್ ನಿರೀಕ್ಷೆ ನಿಜ

Inflation In October 2023: ಭಾರತದ ರೀಟೇಲ್ ಹಣದುಬ್ಬರ ದರ ಕಡಿಮೆ ಆಗಿದೆ. ನ್ಯಾಷನಲ್ ಸ್ಟಾಟಿಸ್ಟಿಕ್ಸ್ ಆಫೀಸ್ (ಎನ್​ಎಸ್​ಒ) ಇಂದು ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಅಕ್ಟೋಬರ್ ತಿಂಗಳಲ್ಲಿ ಹಣದುಬ್ಬರ ಶೇ. 4.87ಕ್ಕೆ ಇಳಿದಿದೆ. ಸೆಪ್ಟೆಂಬರ್​ನಲ್ಲಿ ಹಣದುಬ್ಬರ ಶೇ. 5.02ರಷ್ಟಿತ್ತು.

ಇನ್​ಫ್ಲೇಷನ್ ವರದಿ ಬಿಡುಗಡೆ; ಅಕ್ಟೋಬರ್​ನಲ್ಲಿ ಹಣದುಬ್ಬರ ಶೇ. 4.87ಕ್ಕೆ ಇಳಿಕೆ; ರಾಯ್ಟರ್ಸ್ ಪೋಲ್ ನಿರೀಕ್ಷೆ ನಿಜ
ಹಣದುಬ್ಬರ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 13, 2023 | 7:09 PM

ನವದೆಹಲಿ, ನವೆಂಬರ್ 13: ಭಾರತದ ರೀಟೇಲ್ ಹಣದುಬ್ಬರ ದರ (Retail inflation) ಕಡಿಮೆ ಆಗಿದೆ. ನ್ಯಾಷನಲ್ ಸ್ಟಾಟಿಸ್ಟಿಕ್ಸ್ ಆಫೀಸ್ (NSO) ಇಂದು ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಅಕ್ಟೋಬರ್ ತಿಂಗಳಲ್ಲಿ ಹಣದುಬ್ಬರ ಶೇ. 4.87ಕ್ಕೆ ಇಳಿದಿದೆ. ಸೆಪ್ಟೆಂಬರ್​ನಲ್ಲಿ ಹಣದುಬ್ಬರ ಶೇ. 5.02ರಷ್ಟಿತ್ತು. ಕಳೆದ ವಾರ ರಾಯ್ಟರ್ಸ್ ಸಂಸ್ಥೆ ನಡೆಸಿದ 50ಕ್ಕೂ ಹೆಚ್ಚು ಆರ್ಥಿಕ ತಜ್ಞರ ಸಮೀಕ್ಷೆಯಲ್ಲಿ ಅಕ್ಟೋಬರ್​ನಲ್ಲಿ ಹಣದುಬ್ಬರ ಶೇ. 4.80ರಷ್ಟಿರಬಹುದು ಎಂದು ಅಂದಾಜು ಮಾಡಲಾಗಿತ್ತು. ಆ ನಿರೀಕ್ಷೆ ನಿಜವಾಗಿದೆ. ಶೇ. 4.87ರಷ್ಟು ಹಣದುಬ್ಬರವು ಕಳೆದ ಐದು ತಿಂಗಳಲ್ಲೇ ಕನಿಷ್ಠ ಮಟ್ಟವಾಗಿದೆ. ಅದೇ ವೇಳೆ ಆರ್​ಬಿಐನ ಶೇ. 4ರ ಹಣದುಬ್ಬರ ಗುರಿಗೆ ಸಮೀಪ ಇದೆ.

ಗ್ರಾಹಕ ಬೆಲೆ ಅನುಸೂಚಿ ಆಧರಿತ ಹಣದುಬ್ಬರ ಇದಾಗಿದೆ. ಎನ್​ಎಸ್​ಒ ನೀಡಿರುವ ಮಾಹಿತಿ ಪ್ರಕಾರ ಗ್ರಾಮೀಣ ಭಾಗದಲ್ಲಿ ಹಣದುಬ್ಬರ ಅಥವಾ ರೀಟೇಲ್ ಬೆಲೆ ಏರಿಕೆ ಶೇ. 5.12ರಷ್ಟಿದೆ. ನಗರ ಪ್ರದೇಶಗಳಲ್ಲಿ ಈ ದರ ಶೇ. 4.62ರಷ್ಟಿದೆ.

ಹಣದುಬ್ಬರ ನಿರ್ಣಯಿಸುವ ವಿವಿಧ ಅಂಶಗಳ ಪೈಕಿ ಪ್ರಮುಖವಾದುದು ಆಹಾರಗಳ ಗುಂಪು. ಸೆಪ್ಟೆಂಬರ್​ನಲ್ಲಿ ಆಹಾರ ಬೆಲೆಯುಬ್ಬರ ಶೇ. 6.56ರಷ್ಟು ಇದ್ದದ್ದು ಅಕ್ಟೋಬರ್​ನಲ್ಲಿ ಶೇ. 6.61ಕ್ಕೆ ಹೆಚ್ಚಿದೆ. ಅದು ಬಿಟ್ಟರೆ ಉಳಿದಂತೆ ಬೆಲೆ ಏರಿಕೆಯ ಬಿಸಿ ಅಷ್ಟು ತಾಗಿಲ್ಲ.

ಇದನ್ನೂ ಓದಿ: ಅಕ್ಟೋಬರ್​ನಲ್ಲಿ ಭಾರತದ ಹಣದುಬ್ಬರ ಶೇ. 4.80ಕ್ಕೆ ಇಳಿದಿರಬಹುದು: ರಾಯ್ಟರ್ಸ್ ಸಮೀಕ್ಷೆಯಲ್ಲಿ ಅನಿಸಿಕೆ

ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ತರಕಾರಿಗಳ ಬೆಲೆ ಗಗನಕ್ಕೇರಿದ್ದರಿಂದ ಆ ಎರಡು ತಿಂಗಳು ಹಣದುಬ್ಬರ ದರ ಶೇ. 6ಕ್ಕಿಂತಲೂ ಮೇಲೇ ಇತ್ತು. ಸೆಪ್ಟೆಂಬರ್​ನಿಂದೀಚೆ ತರಕಾರಿ ಬೆಲೆಗಳು ತುಸು ಇಳಿಮುಖವಾಗಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 7:09 pm, Mon, 13 November 23

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ