AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಫ್ಲೇಷನ್ ವರದಿ ಬಿಡುಗಡೆ; ಅಕ್ಟೋಬರ್​ನಲ್ಲಿ ಹಣದುಬ್ಬರ ಶೇ. 4.87ಕ್ಕೆ ಇಳಿಕೆ; ರಾಯ್ಟರ್ಸ್ ಪೋಲ್ ನಿರೀಕ್ಷೆ ನಿಜ

Inflation In October 2023: ಭಾರತದ ರೀಟೇಲ್ ಹಣದುಬ್ಬರ ದರ ಕಡಿಮೆ ಆಗಿದೆ. ನ್ಯಾಷನಲ್ ಸ್ಟಾಟಿಸ್ಟಿಕ್ಸ್ ಆಫೀಸ್ (ಎನ್​ಎಸ್​ಒ) ಇಂದು ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಅಕ್ಟೋಬರ್ ತಿಂಗಳಲ್ಲಿ ಹಣದುಬ್ಬರ ಶೇ. 4.87ಕ್ಕೆ ಇಳಿದಿದೆ. ಸೆಪ್ಟೆಂಬರ್​ನಲ್ಲಿ ಹಣದುಬ್ಬರ ಶೇ. 5.02ರಷ್ಟಿತ್ತು.

ಇನ್​ಫ್ಲೇಷನ್ ವರದಿ ಬಿಡುಗಡೆ; ಅಕ್ಟೋಬರ್​ನಲ್ಲಿ ಹಣದುಬ್ಬರ ಶೇ. 4.87ಕ್ಕೆ ಇಳಿಕೆ; ರಾಯ್ಟರ್ಸ್ ಪೋಲ್ ನಿರೀಕ್ಷೆ ನಿಜ
ಹಣದುಬ್ಬರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 13, 2023 | 7:09 PM

Share

ನವದೆಹಲಿ, ನವೆಂಬರ್ 13: ಭಾರತದ ರೀಟೇಲ್ ಹಣದುಬ್ಬರ ದರ (Retail inflation) ಕಡಿಮೆ ಆಗಿದೆ. ನ್ಯಾಷನಲ್ ಸ್ಟಾಟಿಸ್ಟಿಕ್ಸ್ ಆಫೀಸ್ (NSO) ಇಂದು ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಅಕ್ಟೋಬರ್ ತಿಂಗಳಲ್ಲಿ ಹಣದುಬ್ಬರ ಶೇ. 4.87ಕ್ಕೆ ಇಳಿದಿದೆ. ಸೆಪ್ಟೆಂಬರ್​ನಲ್ಲಿ ಹಣದುಬ್ಬರ ಶೇ. 5.02ರಷ್ಟಿತ್ತು. ಕಳೆದ ವಾರ ರಾಯ್ಟರ್ಸ್ ಸಂಸ್ಥೆ ನಡೆಸಿದ 50ಕ್ಕೂ ಹೆಚ್ಚು ಆರ್ಥಿಕ ತಜ್ಞರ ಸಮೀಕ್ಷೆಯಲ್ಲಿ ಅಕ್ಟೋಬರ್​ನಲ್ಲಿ ಹಣದುಬ್ಬರ ಶೇ. 4.80ರಷ್ಟಿರಬಹುದು ಎಂದು ಅಂದಾಜು ಮಾಡಲಾಗಿತ್ತು. ಆ ನಿರೀಕ್ಷೆ ನಿಜವಾಗಿದೆ. ಶೇ. 4.87ರಷ್ಟು ಹಣದುಬ್ಬರವು ಕಳೆದ ಐದು ತಿಂಗಳಲ್ಲೇ ಕನಿಷ್ಠ ಮಟ್ಟವಾಗಿದೆ. ಅದೇ ವೇಳೆ ಆರ್​ಬಿಐನ ಶೇ. 4ರ ಹಣದುಬ್ಬರ ಗುರಿಗೆ ಸಮೀಪ ಇದೆ.

ಗ್ರಾಹಕ ಬೆಲೆ ಅನುಸೂಚಿ ಆಧರಿತ ಹಣದುಬ್ಬರ ಇದಾಗಿದೆ. ಎನ್​ಎಸ್​ಒ ನೀಡಿರುವ ಮಾಹಿತಿ ಪ್ರಕಾರ ಗ್ರಾಮೀಣ ಭಾಗದಲ್ಲಿ ಹಣದುಬ್ಬರ ಅಥವಾ ರೀಟೇಲ್ ಬೆಲೆ ಏರಿಕೆ ಶೇ. 5.12ರಷ್ಟಿದೆ. ನಗರ ಪ್ರದೇಶಗಳಲ್ಲಿ ಈ ದರ ಶೇ. 4.62ರಷ್ಟಿದೆ.

ಹಣದುಬ್ಬರ ನಿರ್ಣಯಿಸುವ ವಿವಿಧ ಅಂಶಗಳ ಪೈಕಿ ಪ್ರಮುಖವಾದುದು ಆಹಾರಗಳ ಗುಂಪು. ಸೆಪ್ಟೆಂಬರ್​ನಲ್ಲಿ ಆಹಾರ ಬೆಲೆಯುಬ್ಬರ ಶೇ. 6.56ರಷ್ಟು ಇದ್ದದ್ದು ಅಕ್ಟೋಬರ್​ನಲ್ಲಿ ಶೇ. 6.61ಕ್ಕೆ ಹೆಚ್ಚಿದೆ. ಅದು ಬಿಟ್ಟರೆ ಉಳಿದಂತೆ ಬೆಲೆ ಏರಿಕೆಯ ಬಿಸಿ ಅಷ್ಟು ತಾಗಿಲ್ಲ.

ಇದನ್ನೂ ಓದಿ: ಅಕ್ಟೋಬರ್​ನಲ್ಲಿ ಭಾರತದ ಹಣದುಬ್ಬರ ಶೇ. 4.80ಕ್ಕೆ ಇಳಿದಿರಬಹುದು: ರಾಯ್ಟರ್ಸ್ ಸಮೀಕ್ಷೆಯಲ್ಲಿ ಅನಿಸಿಕೆ

ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ತರಕಾರಿಗಳ ಬೆಲೆ ಗಗನಕ್ಕೇರಿದ್ದರಿಂದ ಆ ಎರಡು ತಿಂಗಳು ಹಣದುಬ್ಬರ ದರ ಶೇ. 6ಕ್ಕಿಂತಲೂ ಮೇಲೇ ಇತ್ತು. ಸೆಪ್ಟೆಂಬರ್​ನಿಂದೀಚೆ ತರಕಾರಿ ಬೆಲೆಗಳು ತುಸು ಇಳಿಮುಖವಾಗಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 7:09 pm, Mon, 13 November 23

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ