AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರುವರಿಯಲ್ಲಿ ಶೇ. 3.21 ಇದ್ದ ರೀಟೇಲ್ ಹಣದುಬ್ಬರ ಮಾರ್ಚ್​ನಲ್ಲಿ ಶೇ. 3.4ಕ್ಕೆ ಏರಿಕೆ

India inflation rate in March 2026: ನ್ಯಾಷನಲ್ ಸ್ಟಾಟಿಸ್ಟಿಕಲ್ ಆಫೀಸ್ (ಎನ್​ಎಸ್​ಓ) ಬಿಡುಗಡೆ ಮಾಡಿರುವ ದತ್ತಾಂಶದ ಪ್ರಕಾರ ಮಾರ್ಚ್ ತಿಂಗಳಲ್ಲಿ ಭಾರತದ ಹಣದುಬ್ಬರ ಅಂದಾಜು ಶೇ 3.4 ಇದೆ. ಫೆಬ್ರುವರಿಯಲ್ಲಿ ಇದು ಶೇ. 3.21 ಇತ್ತು. ಕೆಲ ಆಹಾರವಸ್ತುಗಳು, ಚಿನ್ನ, ಬೆಳ್ಳಿ ಇತ್ಯಾದಿ ಸರಕುಗಳ ಬೆಲೆ ಹೆಚ್ಚಳಗೊಂಡಿದ್ದರಿಂದ ಮಾರ್ಚ್​ನಲ್ಲಿ ಹಣದುಬ್ಬರ ಸ್ವಲ್ಪ ಏರಿದೆ.

ಫೆಬ್ರುವರಿಯಲ್ಲಿ ಶೇ. 3.21 ಇದ್ದ ರೀಟೇಲ್ ಹಣದುಬ್ಬರ ಮಾರ್ಚ್​ನಲ್ಲಿ ಶೇ. 3.4ಕ್ಕೆ ಏರಿಕೆ
ಹಣದುಬ್ಬರImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 13, 2026 | 6:32 PM

Share

ನವದೆಹಲಿ, ಏಪ್ರಿಲ್ 13: ಗ್ರಾಹಕ ಬೆಲೆ ಅನುಸೂಚಿ ಆಧಾರದ ರೀಟೇಲ್ ಹಣದುಬ್ಬರ (Retial Inflation) ಮಾರ್ಚ್ ತಿಂಗಳಲ್ಲಿ ಶೇ. 3.4ಕ್ಕೆ ಏರಿದೆ. ಹಿಂದಿನ ತಿಂಗಳಲ್ಲಿ (2026ರ ಫೆಬ್ರುವರಿ) ಹಣದುಬ್ಬರ ಶೇ. 3.21 ಇತ್ತು. ಮಾರ್ಚ್​ನಲ್ಲಿ ಹಣದುಬ್ಬರ ದರ ಏರಲು ಆಹಾರ ಬೆಲೆಗಳಲ್ಲಿ ಆಗಿರುವ ಏರಿಕೆ ಎಂದು ಹೇಳಲಾಗಿದೆ. ಫೆಬ್ರುವರಿಯಲ್ಲಿ ಶೇ. 3.47ರಷ್ಟಿದ್ದ ಆಹಾರ ಹಣದುಬ್ಬರ ಮಾರ್ಚ್​ನಲ್ಲಿ ಶೇ. 3.87ಕ್ಕೆ ಹೆಚ್ಚದೆ.

ಹಣದುಬ್ಬರ ಮಾರ್ಚ್ ತಿಂಗಳಲ್ಲಿ ಹೆಚ್ಚುವುದು ನಿರೀಕ್ಷಿತವೇ ಆಗಿತ್ತು. ಇರಾನ್ ಯುದ್ಧದಿಂದಾಗಿ ತೈಲ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಇದರ ಪರಿಣಾಮದಿಂದ ಸಾಮಾನ್ಯ ಬೆಲೆ ಏರಿಕೆ ಆಗಿದೆ. ಮಾರ್ಚ್​ನಲ್ಲಿ ದಾಖಲಾಗಿರುವ ಶೇ. 3.4 ಹಣದುಬ್ಬರವು ಹಿಂದಿನ ವರ್ಷದ ಮಾರ್ಚ್​ನಲ್ಲಿದ್ದ ದರಕ್ಕೆ ಹೋಲಿಸಲಾಗಿದೆ. ರಾಷ್ಟ್ರೀಯ ಸಾಂಖ್ಯಿಕ ಕಚೇರಿಯಿಂದ ಬಿಡುಗಡೆ ಮಾಡಲಾದ ಈ ದತ್ತಾಂಶವು 2024 ಅನ್ನು ಆಧಾರ ವರ್ಷವಾಗಿ ಇಟ್ಟುಕೊಂಡು ಎಣಿಸಲಾಗಿದೆ.

ಇದನ್ನೂ ಓದಿ: ಸಂಧಾನ ಮುರಿದುಬಿದ್ದ ಬೆನ್ನಲ್ಲೇ ರಾಕೆಟ್​ನಂತೆ ಮೇಲೇರಿದ ತೈಲ ಬೆಲೆ

ಮಾರ್ಚ್​ನಲ್ಲಿ ಹಣದುಬ್ಬರ ಏರಿಕೆಗೆ ಕಾರಣವಾದ ವಸ್ತುಗಳಲ್ಲಿ ಆಹಾರ ಇದೆ. ಹಾಗೆಯೇ, ಚಿನ್ನ, ಬೆಳ್ಳಿ, ತೆಂಗಿನಕಾಯಿ, ಟೊಮೆಟೋ, ಕೋಸು ಇತ್ಯಾದಿ ವಸ್ತುಗಳ ಬೆಲೆ ಅಧಿಕಗೊಂಡಿದೆ.

ಇನ್ನೊಂದೆಡೆ, ಈರುಳ್ಳಿ, ಆಲೂಗಡ್ಡೆ, ಬೆಳ್ಳುಳ್ಳಿ ಇತ್ಯಾದಿ ಆಹಾರವಸ್ತುಗಳ ಬೆಲೆ ಕಡಿಮೆಗೊಂಡಿದ್ದು, ಹಣದುಬ್ಬರ ಶೇ. 4 ದಾಟದಂತೆ ನೋಡಲು ಸಾಧ್ಯವಾಗಿದೆ.

ಇದನ್ನೂ ಓದಿ: ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಸುಂಕದಲ್ಲಿ ಭರ್ಜರಿ ಹೆಚ್ಚಳ; ಡೀಸಲ್​ಗೆ 55.5 ರೂ, ಎಟಿಎಫ್​ಗೆ 42 ರೂ ಸುಂಕ

ವಿದ್ಯುತ್, ಗ್ಯಾಸ್ ಹಾಗೂ ಇತರ ಇಂಧನಗಳ ಹಣದುಬ್ಬರವು ಫೆಬ್ರುವರಿಯಲ್ಲಿ ಶೇ. 1.52 ಇತ್ತು. ಮಾರ್ಚ್​ನಲ್ಲಿ ಶೇ. 1.65ಕ್ಕೆ ಏರಿದೆ. ಗೃಹ ನಿರ್ಮಾಣ ಹಣದುಬ್ಬರ ದರ ಮಾರ್ಚ್​ನಲ್ಲಿ ಶೇ. 2.11 ಇತ್ತು. ಸರ್ಕಾರವು ಪೆಟ್ರೋಲ್ ಮತ್ತು ಡೀಸಲ್ ಬೆಲೆ ಹೆಚ್ಚಳವಾಗದಂತೆ ಕ್ರಮ ತೆಗೆದುಕೊಂಡಿದ್ದರಿಂದ ಹಣದುಬ್ಬರವು ಮಿತಿಮೀರಿ ಹೋಗಿಲ್ಲ.

ಆರ್​ಬಿಐ ಹಣದುಬ್ಬರವನ್ನು ಶೇ. 4ಕ್ಕೆ ನಿಯಂತ್ರಿಸುವ ಗುರಿ ಹೊಂದಿದೆ. ಕೆಲವಾರು ತಿಂಗಳುಗಳಿಂದ ಹಣದುಬ್ಬರವು ಇದೇ ಗಡಿಯೊಳಗೆ ಇದೆ. ಹಣದುಬ್ಬರ ಏರಿಕೆಯಾಗುವ ಸಾಧ್ಯತೆ ತೋರಿದರೆ ಆರ್​ಬಿಐ ರಿಪೋ ದರ ಏರಿಕೆ ಇತ್ಯಾದಿ ಅಸ್ತ್ರ ಬಳಸಲು ಸಜ್ಜಾಗಬೇಕಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ