AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರೈಮಾಸಿಕ ವರದಿ ಪ್ರಕಟವಾದ ಬೆನ್ನಲ್ಲೇ ಎಚ್​ಸಿಎಲ್ ಷೇರಿಗೆ ಬೇಡಿಕೆ, ಇನ್ಫೋಸಿಸ್ ಷೇರುಬೆಲೆ ಕುಸಿತ

Infosys and HCL Technologies Updates: ಎಚ್​ಸಿಎಲ್ ಟೆಕ್ನಾಲಜೀಸ್ ಸಂಸ್ಥೆ ಸೆಪ್ಟೆಂಬರ್ ಅಂತ್ಯದ ತ್ರೈಮಾಸಿಕ ಅವಧಿಯಲ್ಲಿ ಭರ್ಜರಿ ಲಾಭ ಹೆಚ್ಚಳ ಕಂಡಿದೆ. ತನ್ನ ಷೇರುದಾರರಿಗೆ 12 ರೂ ಮಧ್ಯಂತರ ಡಿವಿಡೆಂಡ್ ಘೋಷಿಸಿದೆ. ಇದರ ಬೆನ್ನಲ್ಲೇ ಅದರ ಷೇರಿಗೆ ಬೇಡಿಕೆ ಹೆಚ್ಚಿದೆ. ಇನ್ನು, ಇನ್ಫೋಸಿಸ್​ನ ನಿವ್ವಳ ಲಾಭದಲ್ಲಿ ಗಮನಾರ್ಹ ಹೆಚ್ಚಳವಾಗಿಲ್ಲ. ಹೀಗಾಗಿ, ಇನ್ಫೋಸಿಸ್​ನಿಂದ ಹೂಡಿಕೆದಾರರು ಹಿಂದಕ್ಕೆ ಸರಿಯುತ್ತಿರುವಂತೆ ಕಾಣುತ್ತಿದೆ.

ತ್ರೈಮಾಸಿಕ ವರದಿ ಪ್ರಕಟವಾದ ಬೆನ್ನಲ್ಲೇ ಎಚ್​ಸಿಎಲ್ ಷೇರಿಗೆ ಬೇಡಿಕೆ, ಇನ್ಫೋಸಿಸ್ ಷೇರುಬೆಲೆ ಕುಸಿತ
ಷೇರುಮಾರುಕಟ್ಟೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 13, 2023 | 10:38 AM

Share

ನವದೆಹಲಿ, ಅಕ್ಟೋಬರ್ 13: ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್ ಮತ್ತು ಎಚ್​ಸಿಎಲ್ ಟೆಕ್ನಾಲಜೀಸ್ ಸಂಸ್ಥೆಗಳು ತಮ್ಮ ಲಾಭದ ವರದಿ (quarterly statement) ಪ್ರಕಟಿಸಿವೆ. ಶಿವ್ ನಾದರ್ ಮಾಲಕತ್ವದ ಎಚ್​ಸಿಎಲ್ ಟೆಕ್ನಾಲಜೀಸ್ ಈ ಹಣಕಾಸು ವರ್ಷದ ಎರಡನೇ ಕ್ವಾರ್ಟರ್​ನಲ್ಲಿ (2023-24ರ ಜುಲೈನಿಂದ ಸೆಪ್ಟೆಂಬರ್ ಅವಧಿ) 3,832 ಕೋಟಿ ರೂ ನಿವ್ವಳ ಲಾಭ ತೋರಿಸಿದೆ. ಇದು ಕಳೆದ ವರ್ಷದ ಇದೇ ಕ್ವಾರ್ಟರ್​ನಲ್ಲಿ ಗಳಿಸಿದ್ದಕ್ಕಿಂತ ಶೇ. 9.8ರಷ್ಟು ನಿವ್ವಳ ಲಾಭ ಹೆಚ್ಚಳ ಕಂಡಿದೆ. ಇನ್ನು, ಇನ್ಫೋಸಿಸ್ ಸಂಸ್ಥೆಯ ನಿವ್ವಳ ಲಾಭದಲ್ಲಿ ಶೇ. 3.2ರಷ್ಟು ಆಗಿದೆ. ಇದರ ಪರಿಣಾಮವಾಗಿ ಷೇರುಪೇಟೆಯಲ್ಲಿ ಎಚ್​ಸಿಎಲ್ ಷೇರುಗಳಿಗೆ ಬೇಡಿಕೆ ಹೆಚ್ಚಿದರೆ, ಇನ್ಫೋಸಿಸ್ ಷೇರುಕುಸಿತ ಇನ್ನಷ್ಟು ವೇಗ ಪಡೆದುಕೊಂಡಿದೆ.

ಇನ್ಫೋಸಿಸ್ ನಿವ್ವಳ ಲಾ 6,212 ಕೋಟಿ ರೂ

ಭಾರತದ ಎರಡನೇ ಅತಿದೊಡ್ಡ ಐಟಿ ಸಂಸ್ಥೆ ಎನಿಸಿರುವ ಇನ್ಫೋಸಿಸ್ ಜುಲೈನಿಂದ ಸೆಪ್ಟೆಂಬರ್​ವರೆಗಿನ ತ್ರೈಮಾಸಿಕ ಅವಧಿಯಲ್ಲಿ 6,212 ಕೋಟಿ ರೂ ನಿವ್ವಳ ಲಾಭ ಪಡೆದಿದೆ. ಕಳೆದ ವರ್ಷದ ಇದೇ ಕ್ವಾರ್ಟರ್​ನಲ್ಲಿ ಅದರ ನಿವ್ವಳ ಲಾಭ 6,021 ಕೋಟಿ ರೂ ಇತ್ತು. ಈ ಬಾರಿ ಶೇ. 3.2ರಷ್ಟು ಹೆಚ್ಚಾಗಿದೆ. ಆದರೆ, ಇನ್ಫೋಸಿಸ್​ಗೆ ನಿವ್ವಳ ಲಾಭಕ್ಕಿಂತ ಆದಾಯದಲ್ಲಿ ಹೆಚ್ಚು ವೃದ್ಧಿ ಕಂಡಿದೆ.

ಇದನ್ನೂ ಓದಿ: ಸೆಪ್ಟೆಂಬರ್​ನಲ್ಲಿ ಭಾರತದ ರೀಟೇಲ್ ಹಣದುಬ್ಬರ ಶೇ. 5.02ಕ್ಕೆ ಇಳಿಕೆ; 3 ತಿಂಗಳಲ್ಲೇ ಕನಿಷ್ಠ ದರ

ಕಳೆದ ವರ್ಷದ ಕ್ವಾರ್ಟರ್​ನಲ್ಲಿ 36,538 ಕೋಟಿ ರೂ ಆದಾಯ ಹೊಂದಿದ್ದ ಇನ್ಫೋಸಿಸ್ ಈ ವರ್ಷ ಸೆಪ್ಟೆಂಬರ್ ಅಂತ್ಯದ ಕ್ವಾರ್ಟರ್​ನಲ್ಲಿ 38,994 ಕೋಟಿ ರೂ ಗಿಟ್ಟಿಸಿದೆ. ಅಂದರೆ ಆದಾಯದಲ್ಲಿ ಶೇ. 6.7 ರಷ್ಟು ಹೆಚ್ಚಳವಾಗಿದೆ.

ಇನ್ಫೋಸಿಸ್​ನಿಂದ 18 ರೂ ಲಾಭಾಂಶ ಪ್ರಕಟ

ತ್ರೈಮಾಸಿಕ ವರದಿ ಪ್ರಕಟದ ಜೊತೆಗೆ ಇನ್ಫೋಸಿಸ್ ತನ್ನ ಷೇರುದಾರರಿಗೆ ಮಧ್ಯಂತರ ಲಾಭಾಂಶವನ್ನೂ ಘೋಷಿಸಿದೆ. ಒಂದು ಈಕ್ವಿಟಿ ಷೇರಿಗೆ 18 ರೂ ಇಂಟೆರಿಮ್ ಡಿವಿಡೆಂಡ್ ಎಂದು ನಿಗದಿ ಮಾಡಿದೆ. ಇದರ ರೆಕಾರ್ಡ್ ದಿನ ಅಕ್ಟೋಬರ್ 25 ಎಂದಿದ್ದು, ನವೆಂಬರ್ 6ಕ್ಕೆ ಪಾವತಿ ಮಾಡಲಾಗುತ್ತದೆ.

ಎಚ್​ಸಿಎಲ್ ಟೆಕ್ನಾಲಜೀಸ್​ನಿಂದ 12 ರೂ ಲಾಭಾಂಶ

ಕಳೆದ ತ್ರೈಮಾಸಿಕ ಅವಧಿಯಲ್ಲಿ ನಿವ್ವಳ ಲಾಭದಂತೆ ಆದಾಯದಲ್ಲೂ ಎಚ್​ಸಿಎಲ್ ಟೆಕ್ನಾಲಜೀಸ್ ಭರ್ಜರಿ ಏರಿಕೆ ಕಂಡಿದೆ. ಇದರ ಬೆನ್ನಲ್ಲೇ ಪ್ರತೀ ಈಕ್ವಿಟಿ ಷೇರಿಗೆ 12 ರೂ ಮಧ್ಯಂತರ ಡಿವಿಡೆಂಡ್ ಘೋಷಿಸಿದೆ.

ಇದನ್ನೂ ಓದಿ: Pranjali Awasthi: 16 ವರ್ಷದ ಬಾಲಕಿ ಪ್ರಾಂಜಲಿ ಅವಸ್ಥಿ ಬಳಿ 100 ಕೋಟಿ ರೂ ಮೌಲ್ಯದ ಕಂಪನಿ

ಎಚ್​ಸಿಎಲ್ ಷೇರಿಗೆ ಡಿಮ್ಯಾಂಡ್, ಇನ್ಫೋಸಿಸ್ ಷೇರುಕುಸಿತ

ನಿನ್ನೆ ತ್ರೈಮಾಸಿಕ ವರದಿ ಪ್ರಕಟವಾದ ಬೆನ್ನಲ್ಲೇ ಇಂದು (ಅ. 13) ಷೇರುಪೇಟೆಯಲ್ಲಿ ಎಚ್​​ಸಿಎಲ್ ಟೆಕ್ನಾಲಜೀಸ್ ಷೇರಿಗೆ ಭರ್ಜರಿ ಡಿಮ್ಯಾಂಡ್ ಬಂದಿದೆ. ಇವತ್ತು ಬೆಳಗ್ಗೆಯಿಂದ ಅದರ ಷೇರುಬೆಲೆ ಶೇ. 3ರಷ್ಟು ಹೆಚ್ಚಳ ಕಂಡಿದೆ. ಬೆಳಗಿನ ವಹಿವಾಟಿನಲ್ಲಿ ಅದರ ಷೇರು 1,258 ರೂಗೆ ಬಿಕರಿಯಾಗುತ್ತಿತ್ತು. ಕಳೆದ ಒಂದು ವರ್ಷದಿಂದಲೂ ಎಚ್​ಸಿಎಲ್ ಷೇರು ಭರ್ಜರಿ ಏರಿಕೆ ಕಾಣುತ್ತಿದೆ. ಈಗ ಅದು ಇನ್ನೂ ವೇಗ ಪಡೆದುಕೊಳ್ಳಬಹುದು.

ಅತ್ತ, ಇನ್ಫೋಸಿಸ್​ನ ನಿವ್ವಳ ಆದಾಯದಲ್ಲಿ ಗಮನಾರ್ಹ ಹೆಚ್ಚಳವಾಗದ ಹಿನ್ನೆಲೆಯಲ್ಲಿ ಅದರ ಷೇರಿಗೆ ಬೇಡಿಕೆ ಕುಗ್ಗಿದಂತೆ ಕಾಣುತ್ತಿದೆ. ಇವತ್ತು ಬೆಳಗಿನ ವಹಿವಾಟಿನಲ್ಲಿ ಇನ್ಫೋಸಿಸ್ ಷೇರುಬೆಲೆ 40 ರೂಗಿಂತ ಹೆಚ್ಚು ಮೊತ್ತದಷ್ಟು ಕುಸಿತ ಕಂಡಿದೆ. ಈಗ ಅದರ ಷೇರುಬೆಲೆ 1,422ರೂಗೆ ಬಂದಿಳಿದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!