AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಫೋಸಿಸ್ ಉದ್ಯೋಗಿಗಳ ಸ್ಯಾಲರಿ ಹೈಕ್​ಗೆ ತಡೆ; ಸಿಇಒಗೆ 52 ಕೋಟಿ ರೂ ಮೌಲ್ಯದ ಸ್ಟಾಕ್ ಭತ್ಯೆ

Infosys approves stock incentives of worth Rs 52 crore for CEO: ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಅವರಿಗೆ 52 ಕೋಟಿ ರೂ ಮೌಲ್ಯದ ಸ್ಟಾಕ್ ಆಪ್ಷನ್ಸ್ ಅನ್ನು ಮಂಜೂರು ಮಾಡಲಾಗಿದೆ. ಸಿಇಒ ಅವರ ಪರ್ಫಾರ್ಮೆನ್ಸ್ ಜೋಡಿತ ವೇತನ ರಚನೆಯ ಭಾಗವಾಗಿ ಈ ಭತ್ಯೆ ಕೊಡಲಾಗಿದೆ. ಇನ್ಫೋಸಿಸ್ ಸಂಸ್ಥೆ ನಿನ್ನೆ (ಏ. 23) ಸ್ಟಾಕ್ ಎಕ್ಸ್​ಚೇಂಜ್ ಫೈಲಿಂಗ್​ನಲ್ಲಿ ಈ ಮಾಹಿತಿ ತಿಳಿಸಿದೆ.

ಇನ್ಫೋಸಿಸ್ ಉದ್ಯೋಗಿಗಳ ಸ್ಯಾಲರಿ ಹೈಕ್​ಗೆ ತಡೆ; ಸಿಇಒಗೆ 52 ಕೋಟಿ ರೂ ಮೌಲ್ಯದ ಸ್ಟಾಕ್ ಭತ್ಯೆ
ಇನ್ಫೋಸಿಸ್Image Credit source: Reuters
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 24, 2026 | 4:30 PM

Share

ಬೆಂಗಳೂರು, ಏಪ್ರಿಲ್ 24: ಇನ್ಫೋಸಿಸ್ (Infosys) ಸಂಸ್ಥೆಯು ತನ್ನ ಸಿಇಒ ಸಲೀಲ್ ಪರೇಖ್ (Salil Parekh) ಅವರಿಗೆ ಭಾರಿ ಮೊತ್ತದ ಸ್ಟಾಕ್ ಆಪ್ಷನ್ಸ್ (ESOPs) ನೀಡಿದ್ದು, ಅದೇ ಸಮಯದಲ್ಲಿ ಉದ್ಯೋಗಿಗಳ ವೇತನ ಹೆಚ್ಚಳವನ್ನು ತಡೆಹಿಡಿದಿರುವ ಬಗ್ಗೆ ವರದಿಯಾಗಿದೆ. ಸಿಇಒ ಮತ್ತು ಎಂಡಿಯಾಗಿರುವ ಸಲೀಲ್ ಪರೇಖ್ ಅವರಿಗೆ ಸುಮಾರು 52 ಕೋಟಿ ರೂಪಾಯಿ (51.75 ಕೋಟಿ ರೂ) ಮೌಲ್ಯದ ಎಂಪ್ಲಾಯಿ ಸ್ಟಾಕ್ ಓನರ್‌ಶಿಪ್ ಪ್ಲಾನ್ (ESOPs) ಅಥವಾ ರೆಸ್ಟ್ರಿಕ್ಟೆಡ್ ಸ್ಟಾಕ್ ಯೂನಿಟ್‌ಗಳನ್ನು (RSUs) ಮಂಜೂರು ಮಾಡಿದೆ.

ಇದು ಕಂಪನಿಯ 2015 ರ ಸ್ಟಾಕ್ ಇನ್ಸೆಂಟಿವ್ ಯೋಜನೆ ಮತ್ತು ವಿಸ್ತರಿತ ಸ್ಟಾಕ್ ಮಾಲೀಕತ್ವದ ಕಾರ್ಯಕ್ರಮದ ಭಾಗವಾಗಿದೆ. ಅವರ ಉತ್ತಮ ಕಾರ್ಯಕ್ಷಮತೆ ಮತ್ತು ಕಂಪನಿಯ ಬೆಳವಣಿಗೆಯ ಆಧಾರದ ಮೇಲೆ ಈ ಷೇರುಗಳನ್ನು ನೀಡಲಾಗಿದೆ. ಇನ್ಫೋಸಿಸ್ ಅನ್ನು ಲಾಭದಾಯಕ ಸ್ಥಿತಿಯಲ್ಲಿ ಸ್ಥಿರವಾಗಿ ಮುನ್ನಡೆಸಿದ್ದಕ್ಕೆ ಸಿಇಒಗೆ ಸಿಕ್ಕಿರುವ ಗಿಫ್ಟ್ ಇದು. ಮಾರ್ಚ್ ಕ್ವಾರ್ಟರ್​ನಲ್ಲಿ ಇನ್ಫೋಸಿಸ್​ನ ನಿವ್ವಳ ಲಾಭ 8,501 ಕೋಟಿ ರೂ ದಾಖಲಾಗಿದೆ. ಹಿಂದಿನ ಕ್ವಾರ್ಟರ್​ಗಿಂತ ಶೇ. 27.8ರಷ್ಟು ಲಾಭದಲ್ಲಿ ಏರಿಕೆ ಆಗಿದೆ. ಅದರ ಆದಾಯ 46,402 ಕೋಟಿ ರೂ ಇದೆ.

ಇದನ್ನೂ ಓದಿ: ಭಾರತದ ಆರ್ಥಿಕ ಪ್ರಗತಿಗೆ ತೊಡಕಾಗಿರುವ ಅಂಶಗಳೇನು? ಬರ್ನ್​ಸ್ಟೈನ್ ಸಲಹೆ ನೀಡಿರುವ ಪರಿಹಾರಗಳೇನು?

ಉದ್ಯೋಗಿಗಳ ವೇತನ ಹೆಚ್ಚಳ ವಿಳಂಬ

ಒಂದು ಕಡೆ ಸಿಇಒಗೆ ಭಾರಿ ಮೊತ್ತದ ಷೇರುಗಳನ್ನು ನೀಡಲಾಗಿದ್ದರೆ, ಮತ್ತೊಂದು ಕಡೆ ಕಂಪನಿಯು ತನ್ನ ಸಾಮಾನ್ಯ ಉದ್ಯೋಗಿಗಳ ವೇತನ ಹೆಚ್ಚಳವನ್ನು (Salary Hike) ಸದ್ಯಕ್ಕೆ ತಡೆಹಿಡಿದಿದೆ ಅಥವಾ ವಿಳಂಬಗೊಳಿಸಿದೆ.

ಐಟಿ ಕ್ಷೇತ್ರದಲ್ಲಿನ ಪ್ರಸ್ತುತ ಆರ್ಥಿಕ ಅನಿಶ್ಚಿತತೆ ಮತ್ತು ಬೇಡಿಕೆಯಲ್ಲಿನ ಕುಸಿತದಿಂದಾಗಿ ವೆಚ್ಚ ಕಡಿತದ ಭಾಗವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಪ್ರತೀ ಷೇರಿಗೆ 22 ರೂ ಡಿವಿಡೆಂಡ್

ಇನ್ಫೋಸಿಸ್ ತನ್ನ ನಾಲ್ಕನೇ ತ್ರೈಮಾಸಿಕದ ಫಲಿತಾಂಶದ ವೇಳೆ ಪ್ರತಿ ಷೇರಿಗೆ ₹22 ಅಂತಿಮ ಲಾಭಾಂಶವನ್ನು (Dividend) ಘೋಷಿಸಿದೆ. ಆದರೂ, ಕಂಪನಿಯ ಆದಾಯದ ಬೆಳವಣಿಗೆಯ ಮುನ್ಸೂಚನೆಯು ನಿರೀಕ್ಷೆಗಿಂತ ಕಡಿಮೆಯಿರುವುದು ಹೂಡಿಕೆದಾರರಲ್ಲಿ ಮತ್ತು ಉದ್ಯೋಗಿಗಳಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ: ಏಪ್ರಿಲ್‌ನಲ್ಲಿ ಭಾರತದ ಖಾಸಗಿ ವಲಯ ಭರ್ಜರಿ ಏರಿಕೆ: ಉತ್ಪಾದನಾ, ಸೇವಾ ವಲಯಗಳ PMI ವರದಿಯಲ್ಲಿ ಗಮನಾರ್ಹ ಸಂಗತಿಗಳು

ಸಿಇಒಗೆ ಮಾತ್ರವೇ ಕೊಡುಗೆ: ಉದ್ಯೋಗಿಗಳ ಅಸಮಾಧಾನ

ಸಿಇಒ ಅವರ ಸಂಭಾವನೆ ಮತ್ತು ಸಾಮಾನ್ಯ ಉದ್ಯೋಗಿಗಳ ವೇತನದ ನಡುವಿನ ಈ ಭಾರಿ ವ್ಯತ್ಯಾಸವು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಐಟಿ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕಂಪನಿಯ ಲಾಭದಲ್ಲಿ ಉದ್ಯೋಗಿಗಳ ಪಾತ್ರವೂ ದೊಡ್ಡದಿದೆ, ಆದರೆ ಅವರಿಗೆ ಸಿಗಬೇಕಾದ ವೇತನ ಹೆಚ್ಚಳ ವಿಳಂಬವಾಗುತ್ತಿರುವುದು ಟೀಕೆಗೆ ಗುರಿಯಾಗಿದೆ.

ಒಟ್ಟಾರೆಯಾಗಿ, ಇನ್ಫೋಸಿಸ್ ತನ್ನ ಉನ್ನತ ಮಟ್ಟದ ನಾಯಕತ್ವವನ್ನು ಉಳಿಸಿಕೊಳ್ಳಲು ದೊಡ್ಡ ಮೊತ್ತದ ಹೂಡಿಕೆ ಮಾಡುತ್ತಿದ್ದರೂ, ಕೆಳಹಂತದ ಉದ್ಯೋಗಿಗಳ ಆರ್ಥಿಕ ಹಿತಾಸಕ್ತಿಯನ್ನು ಸದ್ಯಕ್ಕೆ ಕಡೆಗಣಿಸಿದೆ ಎಂಬುದು ಚರ್ಚೆಯ ವಿಚಾರ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!