AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Infosys CEO Salary: ಇನ್ಫೋಸಿಸ್ ಸಿಇಒ ಸಲಿಲ್ ಪರೇಖ್ ವೇತನ 79.75 ಕೋಟಿ ರೂಪಾಯಿ

ವಿನಿಮಯ ಕೇಂದ್ರಕ್ಕೆ ಸಲ್ಲಿಸಿರುವ ಫೈಲಿಂಗ್ ಪ್ರಕಾರ, ಇನ್ಫೋಸಿಸ್ ಸಿಇಒ ಸಲಿಲ್ ಪರೇಖ್ ಅವರಿಗೆ 2021-22ನೇ ಸಾಲಿನಲ್ಲಿ 79.75 ಕೋಟಿ ರೂಪಾಯಿ ಪಾವತಿಸಲಾಗಿದೆ.

Infosys CEO Salary: ಇನ್ಫೋಸಿಸ್ ಸಿಇಒ ಸಲಿಲ್ ಪರೇಖ್ ವೇತನ 79.75 ಕೋಟಿ ರೂಪಾಯಿ
ಸಲಿಲ್ ಪರೇಖ್ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on:May 27, 2022 | 12:57 PM

ಬೆಂಗಳೂರು ಮೂಲದ ಇನ್ಫೋಸಿಸ್​ನ (Infosys) ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸಲಿಲ್ ಪರೇಖ್ ಅವರಿಗೆ 2021-22ರ ಹಣಕಾಸು ವರ್ಷದಲ್ಲಿ 79.75 ಕೋಟಿ ರೂಪಾಯಿ ವೇತನ ಪಾವತಿಸಲಾಗಿದೆ. ಈ ಬಗ್ಗೆ ಷೇರು ವಿನಿಮಯ ಕೇಂದ್ರದ ಫೈಲಿಂಗ್​ನಲ್ಲಿ ತಿಳಿಸಲಾಗಿದೆ. 2020-21ನೇ ಸಾಲಿನಲ್ಲಿ ಪಾವತಿಸಿದ್ದ 49.68 ಕೋಟಿ ರೂಪಾಯಿಗೆ ಹೋಲಿಸಿದರೆ ಶೇ 88ರಷ್ಟು ಹೆಚ್ಚಳವಾಗಿದೆ. ಇನ್ನು ಇಷ್ಟು ದೊಡ್ಡ ಮೊತ್ತದ ವೇತನದ ಪೈಕಿ ಸ್ಟಾಕ್ ಆಪ್ಷನ್ಸ್ 52.33 ಕೋಟಿ, ನಿಶ್ಚಿತ ವೇತನ 5.69 ಕೋಟಿ ರೂಪಾಯಿ, ಇದರಲ್ಲಿ ನಿವೃತ್ತಿ ಅನುಕೂಲ 38 ಲಕ್ಷ ರೂಪಾಯಿ ಒಳಗೊಂಡಿದೆ.

ವೇತನದಲ್ಲಿ 12.62 ಕೋಟಿ ರೂಪಾಯಿ ವೇರಿಯಬಲ್ ಪೇ ಇದೆ. ಈ ವೇತನದ ಬಗ್ಗೆ ತೀರ್ಮಾನವನ್ನು ಭಾರತದ ಎರಡನೇ ಅತಿದೊಡ್ಡ ಐಟಿ ಸೇವೆಗಳ ಕಂಪೆನಿಯಾದ ಇನ್ಫೋಸಿಸ್ ಸಲಿಲ್ ಪರೇಖ್ ಅವರನ್ನು ಎರಡನೇ ಅವಧಿಗೆ, 2027ರ ಮಾರ್ಚ್ ತನಕ ಸಿಇಒ ಹಾಗೂ ಎಂ.ಡಿ. ಆಗಿ ಮರು ನೇಮಕ ಆಗಿದ್ದಾರೆ.

ಸಲಿಲ್ ಪರೇಖ್ ಅವರನ್ನು 2018ರ ಜನವರಿಯಿಂದ ಇನ್ಫೋಸಿಸ್ ಸಿಇಒ ಮತ್ತು ಎಂ.ಡಿ. ಆಗಿ ಇದ್ದಾರೆ. ಇನ್ಫೋಸಿಸ್ ಮಂಡಳಿಯಿಂದ ಮ್ಯಾನೇಜ್​ಮೆಂಟ್​ನ 6 ಪ್ರಮುಖ ಅಧಿಕಾರಿಗಳಿಗೆ 1,04,000 ಷೇರುಗಳು ಹಾಗೂ ಇತರ 88 ಹಿರಿಯ ಅಧಿಕಾರಿಗಳಿಗೆ 3,75,650 ಷೇರುಗಳನ್ನು ಅನುಮೋದನೆ ನೀಡಿರುವುದರಿಂದ ಸ್ಟಾಕ್ ಆಪ್ಷನ್ ದೊರೆಯುತ್ತಿದೆ.

ಆದರೆ, ಕಾರ್ಯ ನಿರ್ವಾಹಕೇತರ ಅಧ್ಯಕ್ಷರಾದ ನಂದನ್ ನಿಲೇಕಣಿ ಅವರು ಸ್ವಯಂಪ್ರೇರಿತರಾಗಿ ತಮಗೆ ಕಂಪೆನಿಯಿಂದ ಯಾವುದೇ ವೇತನ ಬೇಡ ಎಂದು ತಿಳಿಸಿದ್ದಾರೆ. ​

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Infosys FY22 Q4 Results: ಇನ್ಫೋಸಿಸ್ ಹಣಕಾಸು ವರ್ಷ 2022ರ ನಾಲ್ಕನೇ ತ್ರೈಮಾಸಿಕ ಲಾಭ 5,686 ಕೋಟಿ ರೂ.

Published On - 5:13 pm, Thu, 26 May 22

ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್