AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನೇಜ್ಮೆಂಟ್ ಸ್ಕೂಲ್​ಗಳಲ್ಲಿ ಕಲಿತವರನ್ನು ಐಎಎಸ್, ಐಪಿಎಸ್ ಹುದ್ದೆಗೆ ನೇಮಿಸಲಿ: ಇನ್ಫೋಸಿಸ್ ನಾರಾಯಣಮೂರ್ತಿ ಸಲಹೆ

ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರು ಭಾರತದ ಆಡಳಿತ ವ್ಯವಸ್ಥೆಯ ಮನಃಸ್ಥಿತಿಯಲ್ಲಿ ಬದಲಾವಣೆ ಆಗಬೇಕು ಎಂದು ಕರೆ ನೀಡಿದ್ದಾರೆ. ಆಡಳಿತಾತ್ಮಕ ಧೋರಣೆಯಿಂದ ಹೊರಬಂದು ನಿರ್ವಹಣಾತ್ಮಕ ಧೋರಣೆ ಅಳವಡಿಸಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ. ಮ್ಯಾನೇಜ್ಮೆಂಟ್ ಮೈಂಡ್​ಸೆಟ್​ನಲ್ಲಿ ಹೊಸತನ, ಹೊಸ ಸಾಧನೆಯ ಹುರುಪನ್ನು ಕಾಣಬಹುದು ಎಂಬುದು ಅವರ ಅನಿಸಿಕೆ.

ಮ್ಯಾನೇಜ್ಮೆಂಟ್ ಸ್ಕೂಲ್​ಗಳಲ್ಲಿ ಕಲಿತವರನ್ನು ಐಎಎಸ್, ಐಪಿಎಸ್ ಹುದ್ದೆಗೆ ನೇಮಿಸಲಿ: ಇನ್ಫೋಸಿಸ್ ನಾರಾಯಣಮೂರ್ತಿ ಸಲಹೆ
ಎನ್ ಆರ್ ನಾರಾಯಣಮೂರ್ತಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 17, 2024 | 11:25 AM

ಮುಂಬೈ, ನವೆಂಬರ್ 17: ಭಾರತದ ಆಡಳಿತ ವ್ಯವಸ್ಥೆಯು ಆಡಳಿತಾತ್ಮಕ ಧೋರಣೆಯಿಂದ ಹೊರಬರಬೇಕು. ನಿರ್ವಹಣಾತ್ಮಕ ಮನಃಸ್ಥಿತಿ ಅಳವಡಿಸಿಕೊಳ್ಳಬೇಕು ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರು ಸಲಹೆ ನೀಡಿದ್ದಾರೆ. ಇದಕ್ಕೆ ಪೂರಕವಾದ ಮತ್ತೊಂದು ಸಲಹೆ ನೀಡಿದ ಅವರು, ಭಾರತದ ಐಪಿಎಸ್, ಐಎಎಸ್ ಇತ್ಯಾದಿ ಉನ್ನತ ಪಬ್ಲಿಕ್ ಸರ್ವಿಸ್ ಹುದ್ದೆಗಳಿಗೆ ಬುಸಿನೆಸ್ ಸ್ಕೂಲ್​ಗಳಲ್ಲಿ ಕಲಿತವರನ್ನೂ ನೇಮಕ ಮಾಡಲಿ ಎಂದಿದ್ದಾರೆ.

ಖಾಸಗಿ ವಾಹಿನಿಯೊಂದರ ಗ್ಲೋಬಲ್ ಲೀಡರ್​ಶಿಪ್ ಸಮಿಟ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಥಿಕ ಪ್ರಗತಿ ಇನ್ನಷ್ಟು ಚುರುಕುಗೊಳ್ಳಬೇಕಾದರೆ ಮತ್ತು 2047ಕ್ಕೆ 50 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿ ಸಾಧಿಸಬೇಕಾದರೆ ಆಡಳಿತ ವ್ಯವಸ್ಥೆಯು ಮ್ಯಾನೇಜ್ಮೆಂಟ್ ಮನೋಭಾವ ಅಳವಡಿಸಿಕೊಳ್ಳುವಂತಾಗಬೇಕು ಎಂದು ಇನ್ಫೋಸಿಸ್ ಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

ಐಎಎಸ್, ಐಪಿಎಸ್​ನಂತಹ ಹುದ್ದೆಗಳಿಗೆ ಯುಪಿಎಸ್​ಸಿ ಪರೀಕ್ಷೆಗಳ ಮೇಲೆ ಮಾತ್ರವೇ ಅವಲಂಬಿತರಾಗದೆ ಬಿಸಿನೆಸ್ ಸ್ಕೂಲ್​ಗಳಿಂದಲೂ ಜನರನ್ನು ನೇಮಕ ಮಾಡಿಕೊಳ್ಳಲಿ. ಆಡಳಿತ ವ್ಯವಸ್ಥೆಯಲ್ಲಿ ಆಡಳಿತಾತ್ಮಕ ಧೋರಣೆ ದೂರವಾಗಬೇಕು. ಆಡಳಿತ ಎಂದರೆ ಬದಲಾವಣೆ ಇಲ್ಲದ ನಿಶ್ಚಲವಾದುದು. ಇನ್ನೊಂದೆಡೆ, ನಿರ್ವಹಣಾತ್ಮಕ ಧೋರಣೆಯಿಂದ ಹೊಸ ಸಾಧನೆಯ ಕೆಚ್ಚು ಬರುತ್ತದೆ ಎಂದು ಎನ್ ಆರ್ ನಾರಾಯಣಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ: ಈ ಸರ್ಕಾರಿ ಇಲಾಖೆಯಲ್ಲಿ ಕೆಲಸಕ್ಕೆ ಮಾನದಂಡಗಳಿವು… ಸೂಪರ್ ಐಕ್ಯು, 80 ಗಂಟೆ ಕೆಲಸ, ಸಂಬಳ ಕೇಳಂಗಿಲ್ಲ…

ಯುಪಿಎಸ್ಸಿ ಪಾಸಾದವರ ಲೋಪವೇನು?

ನಾರಾಯಣಮೂರ್ತಿ ಅವರ ಪ್ರಕಾರ ಯುಪಿಎಸ್​ಸಿ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಆಫೀಸರ್ ಆದವರು ಸಾಮಾನ್ಯ ಆಡಳಿತದಲ್ಲಿ ನೈಪುಣ್ಯತೆ ಪಡೆದಿರುತ್ತಾರೆ. ಆದರೆ, ಬದಲಾಗುತ್ತಿರುವ ವಾತಾವರಣದಲ್ಲಿ ಆಡಳಿತಕ್ಕೆ ಬೇರೆಯೇ ಕೌಶಲ್ಯ ಅಗತ್ಯ ಇದೆ. ದೃಷ್ಟಿಕೋನ, ಉನ್ನತ ಗುರಿ, ವೆಚ್ಚ ನಿಯಂತ್ರಣ, ಹೊಸತನ ಮತ್ತು ಕ್ಷಿಪ್ರ ಕಾರ್ಯಾಚರಣೆ ಇತ್ಯಾದಿ ಗುಣವನ್ನು ಮ್ಯಾನೇಜ್ಮೆಂಟ್ ಶೈಲಿಯ ಆಡಳಿತದಲ್ಲಿ ಕಾಣಬಹುದು ಎಂದು ಮೂರ್ತಿ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು