AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

INR vs USD: ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

ಗುರುವಾರ ಆರಂಭಿಕ ವಹಿವಾಟಿನಲ್ಲಿ US ಡಾಲರ್‌ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ 80ಕ್ಕಿಂತ ಕಡಿಮೆಗೆ ಕುಸಿಯಿತು. ಯುಎಸ್ ಡಾಲರ್ ವಿರುದ್ಧ ದೇಶೀಯ ಕರೆನ್ಸಿ 42 ಪೈಸೆಗಳಷ್ಟು ಕುಸಿದು ಸಾರ್ವಕಾಲಿಕ ಕನಿಷ್ಠ 80.38 ಕ್ಕೆ ತಲುಪಿದೆ.

INR vs USD: ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ
ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ
TV9 Web
| Edited By: |

Updated on:Sep 22, 2022 | 10:27 AM

Share

ಗುರುವಾರ ಆರಂಭಿಕ ವಹಿವಾಟಿನಲ್ಲಿ US ಡಾಲರ್‌ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ 80ಕ್ಕಿಂತ ಕಡಿಮೆಗೆ ಕುಸಿಯಿತು. ಆರಂಭಿಕ ವಹಿವಾಟಿನಲ್ಲಿ ಯುಎಸ್ ಡಾಲರ್ ವಿರುದ್ಧ ದೇಶೀಯ ಕರೆನ್ಸಿ 42 ಪೈಸೆಗಳಷ್ಟು ಕುಸಿದು ಸಾರ್ವಕಾಲಿಕ ಕನಿಷ್ಠ 80.38 ಕ್ಕೆ ತಲುಪಿದೆ ಎಂದು ಪಿಟಿಐ ವರದಿ ಮಾಡಿದೆ. ಬೆಳಗ್ಗೆ 10.15 ಗಂಟೆಗೆ ರೂಪಾಯಿ ಮೌಲ್ಯ 80.51 ಆಗಿದೆ. ಬುಧವಾರದಂದು ಅಂತರಬ್ಯಾಂಕ್ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ದೇಶೀಯ ಕರೆನ್ಸಿ ಪ್ರತಿ ಡಾಲರ್​ಗೆ 79.81 ಕ್ಕೆ ಪ್ರಾರಂಭವಾಯಿತು. ಕೊನೆಯಲ್ಲಿ ಯುಎಸ್ ಡಾಲರ್ ಎದುರು ರೂಪಾಯಿ 22 ಪೈಸೆ ಕುಸಿದು 79.96 ಕ್ಕೆ ತಲುಪಿತ್ತು. ಮಂಗಳವಾರ ರೂಪಾಯಿ ಮೌಲ್ಯ 7 ಪೈಸೆ ಏರಿಕೆಯಾಗಿ 79.74ಕ್ಕೆ ತಲುಪಿತ್ತು.

ಅಮೆರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ಬಡ್ಡಿದರವನ್ನು ಮತ್ತೆ 75 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆಯಿತು. ಇದು ಹೆಚ್ಚುತ್ತಿರುವ ಬೆಲೆಗಳನ್ನು ನಿಯಂತ್ರಿಸಲು ಫೆಡರಲ್ ರಿಸರ್ವ್ ಬಡ್ಡಿದರ ಹೆಚ್ಚಳಕ್ಕೆ ಮುಂದಾಗಿದ್ದಕ್ಕೆ ಮಾರುಕಟ್ಟೆ ನೀಡಿರುವ ಪ್ರತಿಕ್ರಿಯೆ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಗುರುವಾರ ರೂಪಾಯಿ ತನ್ನ ಹಿಂದಿನ ಮುಕ್ತಾಯದ 80.28 ಕ್ಕಿಂತ ಶೇ 0.4 ಕಡಿಮೆಯಾಗಿದೆ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ. ಇದಕ್ಕೂ ಮೊದಲು ಆಗಸ್ಟ್ 29 ರಂದು ದೇಶೀಯ ಕರೆನ್ಸಿ 80.12 ಕ್ಕೆ ತಲುಪಿತ್ತು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 am, Thu, 22 September 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು