AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Insurance On Deposits: ಬ್ಯಾಂಕ್​ಗಳ ಹಣಕಾಸು ನಿರ್ಬಂಧ, ವಂಚನೆಯಾದಲ್ಲಿ 90 ದಿನದೊಳಗೆ 5 ಲಕ್ಷ ರೂ. ಇನ್ಷೂರೆನ್ಸ್

ಆರ್​ಬಿಐ ನಿರ್ಬಂಧ ಹೇರಿದ ಬ್ಯಾಂಕ್​ಗಳಿಂದ ಇನ್ನು ಮುಂದೆ 90 ದಿನದೊಳಗಾಗಿ ಗ್ರಾಹಕರಿಗೆ 5 ಲಕ್ಷ ರೂ. ಇನ್ಷೂರೆನ್ಸ್ ಬರುವಂಥ ತಿದ್ದುಪಡಿಗೆ ಸಂಪುಟ ಒಪ್ಪಿಕೊಂಡಿದೆ.

Insurance On Deposits: ಬ್ಯಾಂಕ್​ಗಳ ಹಣಕಾಸು ನಿರ್ಬಂಧ, ವಂಚನೆಯಾದಲ್ಲಿ 90 ದಿನದೊಳಗೆ 5 ಲಕ್ಷ ರೂ. ಇನ್ಷೂರೆನ್ಸ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 28, 2021 | 6:38 PM

Share

ಬ್ಯಾಂಕ್​ಗಳ ಠೇವಣಿದಾರರಿಗೆ (Depositors) ದೊಡ್ಡ ಸಮಾಧಾನವೊಂದು ದೊರೆತಿದೆ. ಹಣಕಾಸು ವಂಚನೆಗೆ ಗುರಿಯಾದ ಅಥವಾ ಸಂಕಷ್ಟಕ್ಕೆ ಈಡಾದ ಬ್ಯಾಂಕ್​ಗಳ ಠೇವಣಿದಾರರಿಗೆ ಇದರಿಂದ ನಿರಾಳ ದೊರೆಯಲಿದೆ. ಡೆಪಾಸಿಟ್ ಇನ್ಷೂರೆನ್ಸ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್​ (DICGC) ಕಾಯ್ದೆಗೆ ತಿದ್ದುಪಡಿಯನ್ನು ಬುಧವಾರ ಕೇಂದ್ರ ಸಂಪುಟವು ಅಂಗೀಕಾರ ಮಾಡಿದೆ. ಈ ಮೂಲಕವಾಗಿ ಠೇವಣಿದಾರರು ಇಟ್ಟಂಥ ಒಟ್ಟು ಮೊತ್ತದ ಪೈಕಿ ಇನ್ಷೂರೆನ್ಸ್ ಹಣವಾದ 5 ಲಕ್ಷ ರೂಪಾಯಿಯನ್ನು ಸಮಸ್ಯೆಗೆ ಈಡಾದ ಬ್ಯಾಂಕ್​ ಮೇಲೆ ನಿರ್ಬಂಧ ಹೇರಿದ 90 ದಿನದ ಒಳಗಾಗಿ ಪಡೆಯುತ್ತಾರೆ. “ಆರ್​ಬಿಐನಿಂದ ಬ್ಯಾಂಕ್​ ಮೇಲೆ ನಿರ್ಬಂಧ ಹೇರಿದ ನಂತರ ಕಷ್ಟಕ್ಕೆ ಎದುರಾದ ಜನರಿಗೆ ಸಹಾಯ ಒದಗಿಸುವ ಉದ್ದೇಶದಿಂದ ಡೆಪಾಸಿಟ್ ಇನ್ಷೂರೆನ್ಸ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ ಸೃಷ್ಟಿಸಲಾಗಿದೆ. ಸಂಪುಟ ಸಭೆಯ ವೇಳೆ ತೀರ್ಮಾನಿಸಿದಂತೆ 90 ದಿನದೊಳಗಾಗಿ ತಮ್ಮ ಹಣದ 5 ಲಕ್ಷ ರೂಪಾಯಿ ಠೇವಣಿದಾರರಿಗೆ ದೊರೆಯಲಿದೆ,” ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದಂತೆ, ಕಾನೂನಿನ ಅಡಿಯಲ್ಲಿ ಶೇ 98.3ರಷ್ಟು ಬ್ಯಾಂಕ್​ ಖಾತೆಗಳು ಸಂಪೂರ್ಣ ಸುರಕ್ಷಿತವಾಗಿರಲಿದೆ. ಅಂದಹಾಗೆ ಡಿಐಸಿಜಿಸಿ ಎಂಬುದು ರಿಸರ್ವ್​ ಬ್ಯಾಂಕ್ ಆಫ್ ಇಂಡಿಯಾದ ಅಂಗ ಸಂಸ್ಥೆ. ಇದು ಬ್ಯಾಂಕ್ ಠೇವಣಿಗೆ ಇನ್ಷೂರೆನ್ಸ್ ಒದಗಿಸುತ್ತದೆ. ಡಿಐಸಿಜಿಸಿ ಕಾಯ್ದೆಯು ಪಿಎಂಸಿ ಅಥವಾ ಯೆಸ್​ ಬ್ಯಾಂಕ್​ನಂಥ ಸಮಸ್ಯೆಗೆ ಸಿಲುಕಿದ ಬ್ಯಾಂಕ್​ಗಳ ಠೇವಣಿದಾರರಿಗೆ ಆತಂಕವನ್ನು ಕಡಿಮೆ ಮಾಡುತ್ತದೆ. ಇನ್ನು ಈ ಡೆಪಾಸಿಟ್ ಇನ್ಷೂರೆನ್ಸ್ ವ್ಯವಸ್ಥೆಯು ಭಾರತದಲ್ಲಿನ ಎಲ್ಲ ಸಾರ್ವಜನಿಕ, ಖಾಸಗಿ, ಕೋ ಆಪರೇಟಿವ್ ಹಾಗೂ ವಿದೇಶೀ ಬ್ಯಾಂಕ್​ಗಳನ್ನು ಕವರ್ ಮಾಡುತ್ತದೆ. ಆದರೆ ಕೆಲವು ಡೆಪಾಸಿಟ್​ಗಳು ಇದರಿಂದ ಹೊರತಾಗಿವೆ.

ಇಲ್ಲಿಯ ತನಕ ಹೇಗಿದೆ ಅಂದರೆ, ಯಾವುದಾದರೂ ಬ್ಯಾಂಕ್​ನಲ್ಲಿ ಹಣಕಾಸು ಅವ್ಯವಹಾರ ಅಥವಾ ಸಮಸ್ಯೆಗಳ ಬಗ್ಗೆ ದೂರುಗಳು ಬಂದಲ್ಲಿ ಅಥವಾ ಕಂಡುಬಂದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ನಿರ್ಬಂಧ ಹೇರಲಾಗುತ್ತದೆ. ಠೇವಣಿದಾರರು ಆ ಅವಧಿಯಲ್ಲಿ ತಮ್ಮ ಹಣವನ್ನು ಪಡೆದುಕೊಳ್ಳುವುದು ಕಷ್ಟವಾಗುತ್ತದೆ. ಆರ್​ಬಿಐನಿಂದ ನಿರ್ಬಂಧವನ್ನು ತೆರವುಗೊಳಿಸುವ ತನಕ ಠೇವಣಿದಾರರಿಗೆ ವಿಪರೀತ ಸಮಸ್ಯೆ ಉಂಟಾಗುತ್ತದೆ. ಈಗ ಕೇಂದ್ರ ಸಂಪುಟದಲ್ಲಿ ಅಂಗೀಕಾರವಾಗಿರುವ ತಿದ್ದುಪಡಿ ಜಾರಿಗೆ ಬಂದ ಮೇಲೆ ಆರ್​ಬಿಐ ನಿರ್ಬಂಧ ಹೇರಿದ 90 ದಿನದೊಳಗಾಗಿ ಇನ್ಷೂರೆನ್ಸ್ ವಿಲೇವಾರಿ ಆಗಬೇಕಾಗುತ್ತದೆ. ಹೀಗೆ ಕಾಲಮಿತಿ ವಿಧಿಸಿರುವುದು ಒಳ್ಳೆಯ ಬೆಳವಣಿಗೆ ಆಗಿದೆ.

ಇದನ್ನೂ ಓದಿ: Bank deposit insurance: ಬ್ಯಾಂಕ್​ ಠೇವಣಿ ಮೇಲೆ ಗರಿಷ್ಠ ಇನ್ಷೂರೆನ್ಸ್ 5 ಲಕ್ಷ ರೂ.; ಅದಕ್ಕೂ ಹೆಚ್ಚು ಮೊತ್ತಕ್ಕೆ ಕವರೇಜ್ ಹೇಗೆ?

(Insurance On Bank Deposit Rs 5 Lakhs Settle To Customers In 90 Days Of RBI Moratorium Amendment Accepted By Cabinet)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ