AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IBC: ಬ್ಯಾಟರಿ ತಯಾರಿಕಾ ಘಟಕ ಸ್ಥಾಪನೆಗೆ ಕರ್ನಾಟಕ ಸರ್ಕಾರದೊಂದಿಗೆ ಐಬಿಸಿ ಒಪ್ಪಂದ

Battery Factory in Bengaluru: ವಿಶ್ವದ ಅತಿದೊಡ್ಡ ಬ್ಯಾಟರಿ ಕಂಪನಿಗಳಲ್ಲೊಂದಾದ ಅಮೆರಿಕದ ಐಬಿಸಿ ಬೆಂಗಳೂರಿನಲ್ಲಿ ಲಿಥಿಯಮ್ ಅಯಾನ್ ಬ್ಯಾಟರಿ ತಯಾರಿಕಾ ಘಟಕ ಸ್ಥಾಪಿಸಲಿದೆ. ಕರ್ನಾಟಕ ಸರ್ಕಾರ ಮತ್ತು ಐಬಿಸಿ ಮಧ್ಯೆ ಒಪ್ಪಂದಕ್ಕೆ ಸಹಿಬಿದ್ದಿದೆ.

IBC: ಬ್ಯಾಟರಿ ತಯಾರಿಕಾ ಘಟಕ ಸ್ಥಾಪನೆಗೆ ಕರ್ನಾಟಕ ಸರ್ಕಾರದೊಂದಿಗೆ ಐಬಿಸಿ ಒಪ್ಪಂದ
ಇಂಟರ್ನ್ಯಾಷನ್ ಬ್ಯಾಟರಿ ಕಂಪನಿ ಜೊತೆ ಕರ್ನಾಟಕ ಸರ್ಕಾರ ಒಪ್ಪಂದ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 02, 2023 | 10:30 AM

ಬೆಂಗಳೂರು, ಆಗಸ್ಟ್ 02: ಅಮೆರಿಕ ಮೂಲದ ಇಂಟರ್ನ್ಯಾಷನಲ್ ಬ್ಯಾಟರಿ ಕಂಪನಿ (IBC- International Battery Company) ಕರ್ನಾಟಕದಲ್ಲಿ ಬ್ಯಾಟರಿ ತಯಾರಿಕಾ ಘಟಕ ಸ್ಥಾಪಿಸಲು ಮುಂದಾಗಿದೆ. ಐಬಿಸಿ ಮತ್ತು ರಾಜ್ಯ ಸರ್ಕಾರದ ಮಧ್ಯೆ ಒಪ್ಪಂದ ಆಗಿದೆ. 8,000 ಕೋಟಿ ರೂ ಮೌಲ್ಯದ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ವಾಣಿಜ್ಯ ಮತ್ತು ಉದ್ಯಮಗಳ ಸಚಿವ ಎಂಬಿ ಪಾಟೀಲ್ ಆಗಸ್ಟ್ 1ರಂದು ಮಾಹಿತಿ ನೀಡಿದ್ದಾರೆ.

ವಿಶ್ವದ ಅತಿದೊಡ್ಡ ಬ್ಯಾಟರಿ ಕಂಪನಿಗಳಲ್ಲೊಂದಾದ ಐಬಿಸಿ ಬೆಂಗಳೂರಿನಲ್ಲಿ 100 ಎಕರೆ ಪ್ರದೇಶದಲ್ಲಿ ಘಟಕ ಸ್ಥಾಪಿಸಲು ಯೋಜಿಸಿದೆ. ವರದಿಗಳ ಪ್ರಕಾರ ಲಿಥಿಯಮ್ ಅಯಾನ್ ಸೆಲ್​ಗಳನ್ನು ಇಲ್ಲಿ ತಯಾರಿಸಲಿದೆ. 2025ರಷ್ಟರಲ್ಲಿ ಉತ್ಪಾದನೆ ಆರಂಭವಾಗುತ್ತದೆ.

ಇದನ್ನೂ ಓದಿ: GST: ಜುಲೈ ತಿಂಗಳಲ್ಲಿ ಜಿಎಸ್​ಟಿ ಶೇ. 11ರಷ್ಟು ಹೆಚ್ಚು ಸಂಗ್ರಹ; ಕರ್ನಾಟಕದಲ್ಲಿ ಎಷ್ಟಿದೆ ಕಲೆಕ್ಷನ್?

ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತ ಗುಂಜನ್ ಕೃಷ್ಣ ನೀಡಿರುವ ಮಾಹಿತಿ ಪ್ರಕಾರ, ಐಬಿಸಿ ಸಂಸ್ಥೆ ಪ್ರಿಸ್ಮಾಟಿಕ್ ಲಿಥಿಯಮ್ ಅಯಾನ್ ಬ್ಯಾಟರಿಗಳನ್ನು ತಯಾರಿಸುತ್ತದೆ. ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಉತ್ಪಾದನೆ ನಡೆಯಲಿದೆ. ಬಳಿಕ 2028ರಷ್ಟರಲ್ಲಿ 2 ಗಿಗಾವ್ಯಾಟ್​ನಷ್ಟು ಬ್ಯಾಟರಿ ಉತ್ಪಾದನೆಗೆ ಸಾಮರ್ಥ್ಯ ಹೆಚ್ಚಿಸುವ ಗುರಿ ಇದೆ.

ಲಿಥಿಯಮ್ ಅಯಾನ್ ಸೆಲ್​ಗಳಿಂದ ಮಾಡಿರುವ ಪ್ರಿಸ್ಮಾಟಿಕ್ ಬ್ಯಾಟರಿಗಳು ಎಲೆಕ್ಟ್ರಿಕ್ ಕಾರುಗಳಿಗೆ ಬಳಕೆ ಆಗುತ್ತವೆ. ಇವು ಒತ್ತೊತ್ತಾಗಿ ಜೋಡಿತವಾಗಿರುವುದರಿಂದ ಹೆಚ್ಚು ಸ್ಥಳ ಆಕ್ರಮಿಸಿಕೊಳ್ಳುವುದಿಲ್ಲ. ಹೀಗಾಗಿ, ಬಹುತೇಕ ಎಲೆಕ್ಟ್ರಿಕ್ ಕಾರುತಯಾರಕರು ಪ್ರಿಸ್ಮಾಟಿಕ್ ಬ್ಯಾಟರಿಗಳನ್ನು ಬಳಸುತ್ತಾರೆ.

ಇದನ್ನೂ ಓದಿ: ಮುಂದಿನ 7 ವರ್ಷದಲ್ಲಿ ಭಾರತದ ತಲಾದಾಯ ಶೇ. 70ರಷ್ಟು ಏರಿಕೆ ಸಾಧ್ಯತೆ; ಕರ್ನಾಟಕದ ಪಾತ್ರ ಎಷ್ಟು?

ಅಮೆರಿಕದ ಪೆನ್​ಸಿಲ್ವೇನಿಯಾದಲ್ಲಿ ಮುಖ್ಯಕಚೇರಿ ಹೊಂದಿರುವ ಇಂಟರ್ನ್ಯಾಷನಲ್ ಬ್ಯಾಟರಿ ಕಂಪನಿಯ ಈ ಪ್ರಿಸ್ಮಾಟಿಕ್ ಬ್ಯಾಟರಿಗಳು ವಾಹನ ಕ್ಷೇತ್ರದಲ್ಲಷ್ಟೇ ಅಲ್ಲ ವಿವಿಧ ಔದ್ಯಮಿಕ ಮತ್ತು ಮಿಲಿಟರಿ ವಲಯದಲ್ಲೂ ಬಳಕೆಯಾಗುತ್ತವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:29 am, Wed, 2 August 23

KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ