AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IBC: ಬ್ಯಾಟರಿ ತಯಾರಿಕಾ ಘಟಕ ಸ್ಥಾಪನೆಗೆ ಕರ್ನಾಟಕ ಸರ್ಕಾರದೊಂದಿಗೆ ಐಬಿಸಿ ಒಪ್ಪಂದ

Battery Factory in Bengaluru: ವಿಶ್ವದ ಅತಿದೊಡ್ಡ ಬ್ಯಾಟರಿ ಕಂಪನಿಗಳಲ್ಲೊಂದಾದ ಅಮೆರಿಕದ ಐಬಿಸಿ ಬೆಂಗಳೂರಿನಲ್ಲಿ ಲಿಥಿಯಮ್ ಅಯಾನ್ ಬ್ಯಾಟರಿ ತಯಾರಿಕಾ ಘಟಕ ಸ್ಥಾಪಿಸಲಿದೆ. ಕರ್ನಾಟಕ ಸರ್ಕಾರ ಮತ್ತು ಐಬಿಸಿ ಮಧ್ಯೆ ಒಪ್ಪಂದಕ್ಕೆ ಸಹಿಬಿದ್ದಿದೆ.

IBC: ಬ್ಯಾಟರಿ ತಯಾರಿಕಾ ಘಟಕ ಸ್ಥಾಪನೆಗೆ ಕರ್ನಾಟಕ ಸರ್ಕಾರದೊಂದಿಗೆ ಐಬಿಸಿ ಒಪ್ಪಂದ
ಇಂಟರ್ನ್ಯಾಷನ್ ಬ್ಯಾಟರಿ ಕಂಪನಿ ಜೊತೆ ಕರ್ನಾಟಕ ಸರ್ಕಾರ ಒಪ್ಪಂದ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 02, 2023 | 10:30 AM

Share

ಬೆಂಗಳೂರು, ಆಗಸ್ಟ್ 02: ಅಮೆರಿಕ ಮೂಲದ ಇಂಟರ್ನ್ಯಾಷನಲ್ ಬ್ಯಾಟರಿ ಕಂಪನಿ (IBC- International Battery Company) ಕರ್ನಾಟಕದಲ್ಲಿ ಬ್ಯಾಟರಿ ತಯಾರಿಕಾ ಘಟಕ ಸ್ಥಾಪಿಸಲು ಮುಂದಾಗಿದೆ. ಐಬಿಸಿ ಮತ್ತು ರಾಜ್ಯ ಸರ್ಕಾರದ ಮಧ್ಯೆ ಒಪ್ಪಂದ ಆಗಿದೆ. 8,000 ಕೋಟಿ ರೂ ಮೌಲ್ಯದ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ವಾಣಿಜ್ಯ ಮತ್ತು ಉದ್ಯಮಗಳ ಸಚಿವ ಎಂಬಿ ಪಾಟೀಲ್ ಆಗಸ್ಟ್ 1ರಂದು ಮಾಹಿತಿ ನೀಡಿದ್ದಾರೆ.

ವಿಶ್ವದ ಅತಿದೊಡ್ಡ ಬ್ಯಾಟರಿ ಕಂಪನಿಗಳಲ್ಲೊಂದಾದ ಐಬಿಸಿ ಬೆಂಗಳೂರಿನಲ್ಲಿ 100 ಎಕರೆ ಪ್ರದೇಶದಲ್ಲಿ ಘಟಕ ಸ್ಥಾಪಿಸಲು ಯೋಜಿಸಿದೆ. ವರದಿಗಳ ಪ್ರಕಾರ ಲಿಥಿಯಮ್ ಅಯಾನ್ ಸೆಲ್​ಗಳನ್ನು ಇಲ್ಲಿ ತಯಾರಿಸಲಿದೆ. 2025ರಷ್ಟರಲ್ಲಿ ಉತ್ಪಾದನೆ ಆರಂಭವಾಗುತ್ತದೆ.

ಇದನ್ನೂ ಓದಿ: GST: ಜುಲೈ ತಿಂಗಳಲ್ಲಿ ಜಿಎಸ್​ಟಿ ಶೇ. 11ರಷ್ಟು ಹೆಚ್ಚು ಸಂಗ್ರಹ; ಕರ್ನಾಟಕದಲ್ಲಿ ಎಷ್ಟಿದೆ ಕಲೆಕ್ಷನ್?

ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತ ಗುಂಜನ್ ಕೃಷ್ಣ ನೀಡಿರುವ ಮಾಹಿತಿ ಪ್ರಕಾರ, ಐಬಿಸಿ ಸಂಸ್ಥೆ ಪ್ರಿಸ್ಮಾಟಿಕ್ ಲಿಥಿಯಮ್ ಅಯಾನ್ ಬ್ಯಾಟರಿಗಳನ್ನು ತಯಾರಿಸುತ್ತದೆ. ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಉತ್ಪಾದನೆ ನಡೆಯಲಿದೆ. ಬಳಿಕ 2028ರಷ್ಟರಲ್ಲಿ 2 ಗಿಗಾವ್ಯಾಟ್​ನಷ್ಟು ಬ್ಯಾಟರಿ ಉತ್ಪಾದನೆಗೆ ಸಾಮರ್ಥ್ಯ ಹೆಚ್ಚಿಸುವ ಗುರಿ ಇದೆ.

ಲಿಥಿಯಮ್ ಅಯಾನ್ ಸೆಲ್​ಗಳಿಂದ ಮಾಡಿರುವ ಪ್ರಿಸ್ಮಾಟಿಕ್ ಬ್ಯಾಟರಿಗಳು ಎಲೆಕ್ಟ್ರಿಕ್ ಕಾರುಗಳಿಗೆ ಬಳಕೆ ಆಗುತ್ತವೆ. ಇವು ಒತ್ತೊತ್ತಾಗಿ ಜೋಡಿತವಾಗಿರುವುದರಿಂದ ಹೆಚ್ಚು ಸ್ಥಳ ಆಕ್ರಮಿಸಿಕೊಳ್ಳುವುದಿಲ್ಲ. ಹೀಗಾಗಿ, ಬಹುತೇಕ ಎಲೆಕ್ಟ್ರಿಕ್ ಕಾರುತಯಾರಕರು ಪ್ರಿಸ್ಮಾಟಿಕ್ ಬ್ಯಾಟರಿಗಳನ್ನು ಬಳಸುತ್ತಾರೆ.

ಇದನ್ನೂ ಓದಿ: ಮುಂದಿನ 7 ವರ್ಷದಲ್ಲಿ ಭಾರತದ ತಲಾದಾಯ ಶೇ. 70ರಷ್ಟು ಏರಿಕೆ ಸಾಧ್ಯತೆ; ಕರ್ನಾಟಕದ ಪಾತ್ರ ಎಷ್ಟು?

ಅಮೆರಿಕದ ಪೆನ್​ಸಿಲ್ವೇನಿಯಾದಲ್ಲಿ ಮುಖ್ಯಕಚೇರಿ ಹೊಂದಿರುವ ಇಂಟರ್ನ್ಯಾಷನಲ್ ಬ್ಯಾಟರಿ ಕಂಪನಿಯ ಈ ಪ್ರಿಸ್ಮಾಟಿಕ್ ಬ್ಯಾಟರಿಗಳು ವಾಹನ ಕ್ಷೇತ್ರದಲ್ಲಷ್ಟೇ ಅಲ್ಲ ವಿವಿಧ ಔದ್ಯಮಿಕ ಮತ್ತು ಮಿಲಿಟರಿ ವಲಯದಲ್ಲೂ ಬಳಕೆಯಾಗುತ್ತವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:29 am, Wed, 2 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ