AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Invest Karnataka 2022: ಕರ್ನಾಟಕದಲ್ಲಿ 1 ಲಕ್ಷ ಕೋಟಿ‌ ರೂ. ಹೂಡಿಕೆ, ಸಜ್ಜನ್ ಜಿಂದಾಲ್ ಘೋಷಣೆ

ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ 1 ಲಕ್ಷ ಕೋಟಿ‌ ರೂ. ಹೂಡಿಕೆ ಮಾಡುವುದಾಗಿ ಜೆಎಸ್​ಡಬ್ಲ್ಯೂ ಗ್ರೂಪ್ ಅಧ್ಯಕ್ಷ ಸಜ್ಜನ್ ಜಿಂದಾಲ್ ಬುಧವಾರ ಘೋಷಿಸಿದ್ದಾರೆ. ಇವರ ಜತೆಗೆ ಇನ್ನೂ ಅನೇಕ ಉದ್ಯಮಿಗಳು ಕರ್ನಾಟಕದಲ್ಲಿ ಹೂಡಿಕೆಗೆ ಆಸಕ್ತಿ ವಹಿಸಿದ್ದಾರೆ.

Invest Karnataka 2022: ಕರ್ನಾಟಕದಲ್ಲಿ 1 ಲಕ್ಷ ಕೋಟಿ‌ ರೂ. ಹೂಡಿಕೆ, ಸಜ್ಜನ್ ಜಿಂದಾಲ್ ಘೋಷಣೆ
ಸಜ್ಜನ್ ಜಿಂದಾಲ್ Image Credit source: IANS
TV9 Web
| Updated By: Ganapathi Sharma|

Updated on: Nov 02, 2022 | 1:25 PM

Share

ಬೆಂಗಳೂರು: ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ 1 ಲಕ್ಷ ಕೋಟಿ‌ ರೂ. ಹೂಡಿಕೆ ಮಾಡುವುದಾಗಿ ಜೆಎಸ್​ಡಬ್ಲ್ಯೂ ಗ್ರೂಪ್ ಅಧ್ಯಕ್ಷ ಸಜ್ಜನ್ ಜಿಂದಾಲ್ (Sajjan Jindal) ಬುಧವಾರ ಘೋಷಿಸಿದ್ದಾರೆ. ಬೆಂಗಳೂರಿನ (Bengaluru) ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (Invest Karnataka 2022) ಅವರು ಈ ಘೋಷಣೆ ಮಾಡಿದರು. ಕರ್ನಾಟಕದಲ್ಲಿ ಹೂಡಿಕೆಗೆ ಅನೇಕ ಉದ್ಯಮಿಗಳು ಆಸಕ್ತಿ ತೋರಿದ್ದಾರೆ.

ಇದರ ಬೆನ್ನಲ್ಲೇ, ರಾಜ್ಯದಲ್ಲಿ ನಾವು 50 ಸಾವಿರ ಕೋಟಿ ರೂ. ಹೂಡಿಕೆ ಮಾಡುತ್ತೇವೆ ಎಂದು ಸ್ಟರ್ಲೈಟ್ ಪವರ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಪ್ರತೀಕ್ ಅಗರ್ವಾಲ್ ಘೋಷಿಸಿದ್ದಾರೆ. ಇಂಧನ ಕ್ಷೇತ್ರ ಹಾಗೂ ಹಸಿರು ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಸಂಶೋಧನೆಯಲ್ಲಿ ಹೂಡಿಕೆ ಮಾಡುವುದಾಗಿ ಅವರು ತಿಳಿಸಿದ್ದಾರೆ.

1 ಲಕ್ಷ ಕೋಟಿ ರೂ. ಹೂಡಿಕೆ: ಅದಾನಿ ಗ್ರೂಪ್

ಇದನ್ನೂ ಓದಿ
Image
Petrol, Diesel Price Cut: ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ 2 ರೂ. ಇಳಿಕೆ ಸಾಧ್ಯತೆ: ವರದಿ
Image
Petrol Price on November 2: ಕಚ್ಚಾ ತೈಲದ ಬೆಲೆ ಏರಿಕೆ; ಇಂದಿನ ಪೆಟ್ರೋಲ್- ಡೀಸೆಲ್ ದರವೆಷ್ಟು?
Image
Gold Price Today: ಬೆಳ್ಳಿ ದರದಲ್ಲಿ ₹2,000 ಜಿಗಿತ, ಚಿನ್ನದ ದರ ತುಸು ಇಳಿಕೆ
Image
Stock Market Updates: 61000 ಗಡಿ ದಾಟಿದ ಸೆನ್ಸೆಕ್ಸ್, 9 ತಿಂಗಳ ಬಳಿಕ ಗರಿಷ್ಠ ಗಳಿಕೆ; ನಾಲ್ಕನೇ ದಿನವೂ ಮುಂದುವರಿದ ಓಟ

ಕರ್ನಾಟಕದಲ್ಲಿ ಮುಂದಿನ 7 ವರ್ಷಗಳಲ್ಲಿ 1 ಲಕ್ಷ ಕೋಟಿ ರೂ. ಹೂಡಿಕೆ ಮಾಡುವುದಾಗಿ ಅದಾನಿ ಗ್ರೂಪ್ ಸಿಇಒ ಕರಣ್ ಅದಾನಿ ಘೋಷಣೆ ಮಾಡಿದ್ದಾರೆ. ಮಲ್ಟಿಪಲ್ ಲಾಜಿಸ್ಟಿಕ್ ಪಾರ್ಕ್ ಅಭಿವೃದ್ಧಿ, ಆಹಾರ ಸಂಸ್ಕರಣೆ, ಇಂಧನ, ನವೀಕರಿಸಬಹುದಾದ ಇಂಧನ, ಸೌರ ಶಕ್ತಿ, ಜಲಸಾರಿಗೆ ಹಾಗೂ ಲಾಜಿಸ್ಟಿಕ್ ಕ್ಷೇತ್ರದಲ್ಲೂ ಹೂಡಿಕೆ ಮಾಡುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Invest Karnataka 2022: ಹೂಡಿಕೆದಾರರಿಗೆ ರೆಡ್ ಕಾರ್ಪೆಟ್ ಹಾಸಿದ್ದೇವೆ; ಪ್ರಧಾನಿ ಮೋದಿ

ಮೂರು ದಿನಗಳ ಕಾಲ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಿಗ್ಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದರು. ಸಮಾವೇಶದಲ್ಲಿ ಭಾಗಿಯಾದ ವಿಶ್ವದ ಎಲ್ಲ ಮೂಲೆ ಮೂಲೆಗಳಿಂದ ಬಂದಿರುವ ಹೂಡಿಕೆದಾರರಿಗೂ ಆತ್ಮೀಯ ಸ್ವಾಗತ ಎಂದಿದ್ದ ಮೋದಿ, ಕರ್ನಾಟಕದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಮಾಡುವಂತೆ ಉದ್ಯಮಿಗಳಲ್ಲಿ ಮನವಿ ಮಾಡಿದ್ದರು.

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಿಂದಾಗಿ 7 ಲಕ್ಷ ಕೋಟಿ ರೂ. ಹೂಡಿಕೆ ಹರಿದು ಬರುವ ಸಾಧ್ಯತೆ ಇದೆ. ಖಾಸಗಿ ವಲಯದಲ್ಲಿ 3 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾವೇಶದ ಪೂರ್ವಭಾವಿ ಹೇಳಿಕೆಯಲ್ಲಿ ತಿಳಿಸಿದ್ದರು. ಕೋವಿಡ್ ನಂತರ ರಾಜ್ಯದ ಆರ್ಥಿಕತೆ ಸಾಕಷ್ಟು ಸುಧಾರಿಸಿದೆ ಎಂದು ಅವರು ಹೇಳಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ