AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MB Patil: ಇನ್ವೆಸ್ಟ್ ಕರ್ನಾಟಕ ಸಮಾವೇಶ ಮೂಲಕ ರಾಜ್ಯಕ್ಕೆ ಹರಿದುಬರಲಿದೆ 5.4 ಲಕ್ಷ ಕೋಟಿ ರೂ ಹೂಡಿಕೆ

Invest Karnataka and FMCG Investers Meet: ಬೆಂಗಳೂರಿನಲ್ಲಿ ನಡೆದ 2022ರ ಇನ್ವೆಸ್ಟ್ ಕರ್ನಾಟಕ ಸಮಾವೇಶದಿಂದ 57 ಕಂಪನಿಗಳು ರಾಜ್ಯ ಸರ್ಕಾರದೊಂದಿಗೆ 5.14 ಲಕ್ಷಕೋಟಿ ರೂ ಮೊತ್ತದ ಎಂಒಯು ಮಾಡಿಕೊಂಡಿವೆ. ಹುಬ್ಬಳ್ಳಿಯಲ್ಲಿ ನಡೆದ ಎಫ್​ಎಂಸಿಜಿ ಹೂಡಿಕೆದಾರರ ಸಮಾವೇಶದಿಂದ 16 ಕಂಪನಿಗಳು 1,275 ಕೋಟಿ ರೂ ಮೊತ್ತದ ಒಡಂಬಡಿಕೆ ಮಾಡಿಕೊಂಡಿವೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಈ ಮಾಹಿತಿ ನೀಡಿದ್ದಾರೆ.

MB Patil: ಇನ್ವೆಸ್ಟ್ ಕರ್ನಾಟಕ ಸಮಾವೇಶ ಮೂಲಕ ರಾಜ್ಯಕ್ಕೆ ಹರಿದುಬರಲಿದೆ 5.4 ಲಕ್ಷ ಕೋಟಿ ರೂ ಹೂಡಿಕೆ
ಎಂಬಿ ಪಾಟೀಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 08, 2023 | 3:02 PM

Share

ಬೆಳಗಾವಿ, ಡಿಸೆಂಬರ್ 8: ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಭರ್ಜರಿ ಬಂಡವಾಳ ಹರಿದುಬರುತ್ತಿರುವ ವಿಚಾರವನ್ನು ಸರ್ಕಾರ ಬಹಿರಂಗಪಡಿಸಿದೆ. ಬೆಂಗಳೂರಿನಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮಾವೇಶದ ಮೂಲಕ 57 ಕಂಪನಿಗಳೊಂದಿಗೆ ರಾಜ್ಯ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದೆ ಎಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಈ ಎಲ್ಲಾ 57 ಒಡಂಬಡಿಕೆಗಳ ಮೊತ್ತ 5,51,369 ಕೋಟಿ ರೂ ಆಗುತ್ತದೆ. ಈ ಎಲ್ಲಾ ಯೋಜನೆಗಳು ಜಾರಿಯಾಗಲು 3ರಿಂದ 4 ವರ್ಷ ಆಗಬಹುದು ಎಂದೂ ಅವರು ಹೇಳದ್ದಾರೆ.

ಇದರ ಜೊತೆಗೆ ಹುಬ್ಬಳ್ಳಿಯಲ್ಲಿ ನಡೆದ ಎಫ್​ಎಂಸಿಜಿ ಹೂಡಿಕೆದಾರರ ಸಮಾವೇಶದಲ್ಲಿ 16 ಕಂಪನಿಗಳ ಜೊತೆ 1,275 ಕೋಟಿ ರೂ ಮೊತ್ತದ ಹೂಡಿಕೆಗೆ ಒಪ್ಪಂದಾಗಿವೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ. ಇನ್ವೆಸ್ಟ್ ಕರ್ನಾಟಕ ಬೆಂಗಳೂರಿನಲ್ಲಿ 2022ರ ನವೆಂಬರ್​ನಲ್ಲಿ ನಡೆದಿತ್ತು. ಎಫ್​ಎಂಸಿಜಿ ಹೂಡಿಕೆದಾರರ ಸಮಾವೇಶ ಹುಬ್ಬಳ್ಳಿಯಲ್ಲಿ ನಡೆದಿತ್ತು.

ಇದನ್ನೂ ಓದಿ: Narendra Modi: ಭಾರತ ಎಐ ತಂತ್ರಜ್ಞಾನ ಕ್ಷೇತ್ರದಲ್ಲಿ ಜಿಗಿಯುತ್ತಿದೆ; ಬನ್ನಿ GPAI ಸಮಿಟ್​ನಲ್ಲಿ ಭಾಗಿಯಾಗಿ: ನರೇಂದ್ರ ಮೋದಿ ಕರೆಯೋಲೆ

ಇನ್ವೆಸ್ಟ್ ಕರ್ನಾಟಕದಲ್ಲಿ ಕುದುರಿಸಲಾದ 57 ಒಡಂಬಡಿಕೆ (ಎಂಒಯು) ಪೈಕಿ 7 ಯೋಜನೆಗಳಿಗೆ ಎಕಗವಾಕ್ಷಿ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದೆ. ಇವುಗಳಿಗೆ ಭೂಮಿ, ನೀರು ಮತ್ತು ವಿದ್ಯುತ್ ಪೂರೈಕೆ ಒದಗಿಸಲಾಗುವುದು. ಇವು ಬೃಹತ್ ಯೋಜನೆಗಳಾದ್ದರಿಂದ ಕಾರ್ಯಾರಂಭಕ್ಕೆ 3-4 ವರ್ಷ ಆಗುತ್ತದೆ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

ಇನ್ನು, ಹುಬ್ಬಳ್ಳಿಯ ಎಫ್​ಎಂಸಿಜಿ ಹೂಡಿಕೆದಾರರ ಸಮಾವೇಶದಲ್ಲಿ ಆಗಿರುವ 16 ಒಪ್ಪಂದಗಳ ಪೈಕಿ 3 ಯೋಜನೆಗಳಿಗೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಅನುಮೋದನೆ ನೀಡಲಾಗಿದೆ ಎಂದೂ ಸಚಿವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Onion Export Ban: ಮಾರ್ಚ್​ವರೆಗೂ ಈರುಳ್ಳಿ ರಫ್ತು ನಿಷೇಧ; ಕೇಂದ್ರ ಸರ್ಕಾರದ ಕ್ರಮಕ್ಕೆ ಮಹಾರಾಷ್ಟ್ರದಲ್ಲಿ ವಿರೋಧ

ಹಿಂದಿನ ಸರ್ಕಾರ ಇದ್ದಾಗ ಇನ್ವೆಸ್ಟ್ ಕರ್ನಾಟಕ 2022 ನಡೆದಿತ್ತು. ಅದಕ್ಕೆ 74.99 ಕೋಟಿ ರೂ ವೆಚ್ಚವಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಎಫ್​ಎಂಸಿಜಿ ಇನ್ವೆಸ್ಟರ್ಸ್ ಸಮಾವೇಶದಲ್ಲಿ 12.23 ಲಕ್ಷ ರೂ ಅನ್ನು ಸರ್ಕಾರ ವ್ಯಯಿಸಿದೆ ಎಂಬ ಮಾಹಿತಿಯನ್ನು ಪ್ರಶ್ನೋತ್ತರ ವೇಳೆ ಎಂಬಿ ಪಾಟೀಲ್ ನೀಡಿದ್ದಾರೆ.

ಇದೇ ವೇಳೆ ಹೊಳಲ್ಕೆರೆ ಶಾಸಕ ಎಂ ಚಂದ್ರಪ್ಪ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ‘ಈ ಉದ್ಯಮದಲ್ಲಿ ಡಿ ಗ್ರೂಪ್ ಹುದ್ದೆಗಳನ್ನು ಕನ್ನಡಿಗರಿಗೆ ಶೇ. 100ರಷ್ಟು ಉದ್ಯೋಗ ಕೊಡಬೇಕು. ಒಟ್ಟಾರೆ ಶೇ. 70ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಕೊಡಬೇಕು ಎನ್ನುವ ನಿಯಮ ರೂಪಿಸಲಾಗಿದೆ,’ ಎಂದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು