AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಚಿಪ್​ಟೂಲ್ ತಯಾರಿಸುವ ಲ್ಯಾಮ್ ರಿಸರ್ಚ್​ನಿಂದ 10,000 ಕೋಟಿ ರೂ ಹೂಡಿಕೆ; ಇನ್ವೆಸ್ಟ್ ಕರ್ನಾಟಕಕ್ಕೆ ಉದ್ಯಮವಲಯದಿಂದ ನಿರೀಕ್ಷೆಮೀರಿ ಸ್ಪಂದನೆ

Invest Karnataka 2025: ಫೆಬ್ರುವರಿ 14ರವರೆಗೆ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ ಹೂಡಿಕೆ ಸಮಾವೇಶಕ್ಕೆ ಒಳ್ಳೆಯ ಸ್ಪಂದನೆ ಸಿಕ್ಕಿದೆ. ಸಾಕಷ್ಟು ಕಂಪನಿಗಳು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿವೆ. ಅಮೆರಿಕದ ಚಿಪ್ ಟೂಲ್ ಮೇಕರ್ ಲ್ಯಾಮ್ ರಿಸರ್ಚ್ ಮುಂದಿನ ಐದು ವರ್ಷ ರಾಜ್ಯದಲ್ಲಿ 10,000 ಕೋಟಿ ರು ಹೂಡಿಕೆ ಮಾಡುವುದಾಗಿ ಎಂಒಯುಗೆ ಸಹಿ ಮಾಡಿದೆ. ಹತ್ತಕ್ಕೂ ಹೆಚ್ಚು ಕಂಪನಿಗಳು ರಿನಿವಬಲ್ ಎನರ್ಜಿ ತಯಾರಕಾ ಘಟಕಗಳನ್ನು ಆರಂಭಿಸಲಿವೆ.

ಅಮೆರಿಕದ ಚಿಪ್​ಟೂಲ್ ತಯಾರಿಸುವ ಲ್ಯಾಮ್ ರಿಸರ್ಚ್​ನಿಂದ 10,000 ಕೋಟಿ ರೂ ಹೂಡಿಕೆ; ಇನ್ವೆಸ್ಟ್ ಕರ್ನಾಟಕಕ್ಕೆ ಉದ್ಯಮವಲಯದಿಂದ ನಿರೀಕ್ಷೆಮೀರಿ ಸ್ಪಂದನೆ
ಹೂಡಿಕೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 12, 2025 | 11:41 AM

Share

ಬೆಂಗಳೂರು, ಫೆಬ್ರುವರಿ 12: ಇಂದಿನಿಂದ ಮೂರು ದಿನಗಳ ಕಾಲ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ ಹೂಡಿಕೆ ಸಮಾವೇಶಕ್ಕೆ ನಿರೀಕ್ಷೆಮೀರಿದ ಉತ್ಸಾಹದ ಸ್ಪಂದನೆ ಸಿಗುತ್ತಿದೆ. ಈ ಸಮಾವೇಶದಲ್ಲಿ ರಾಜ್ಯಕ್ಕೆ ಏಳೂವರೆ ಲಕ್ಷ ಕೋಟಿ ರೂ ಬಂಡವಾಳ ಸಿಗುವ ನಿರೀಕ್ಷೆ ಇತ್ತಾದರೂ, ಈಗಾಗಲೇ ಅದನ್ನು ಮೀರಿಸುವಷ್ಟು ಬಂಡವಾಳ ಹರಿದುಬರುವ ಸಾಧ್ಯತೆ ಇದೆ. ಮೊದಲ ದಿನವೇ ಮೂರು ಲಕ್ಷ ಕೋಟಿ ರೂಗೂ ಅಧಿಕ ಮೊತ್ತದ ಬಂಡವಾಳ ಹೂಡಿಕೆಗೆ ಒಪ್ಪಂದಗಳಾಗಿರುವುದು ತಿಳಿದುಬಂದಿದೆ.

ನವೀಕರಣ ಇಂಧನ ಅಭಿವೃದ್ಧಿ ನಿಗಮ (ಕೆಆರ್​ಇಡಿಎಲ್) 13 ಪ್ರಮುಖ ಕಂಪನಿಗಳೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಂಡಿದೆ. ರಾಜ್ಯದಲ್ಲಿ ಪರ್ಯಾಯ ಇಂಧನ (renewable energy) ಉತ್ಪಾದನೆಗೆ ಈ ಕಂಪನಿಗಳಿಂದ 3.43 ಲಕ್ಷ ಕೋಟಿ ರೂ ಹೂಡಿಕೆ ಆಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಮತ್ತಷ್ಟು ಸೌರಶಕ್ತಿ, ವಾಯುಶಕ್ತಿ ಘಟಕಗಳು ನಿರ್ಮಾಣವಾಗಲಿವೆ. ಜೆಎಸ್​ಡಬ್ಲ್ಯು ನಿಯೋ ಎನರ್ಜಿಯಿಂದ 56,000 ಕೋಟಿ ರೂ; ರಿನ್ಯೂ ಪ್ರೈ ಲಿ ಹಾಗು ಟಾಟಾ ಪವರ್ ರಿನಿವಬಲ್ ಎನರ್ಜಿ ಲಿ ಸಂಸ್ಥೆಗಳಿಂದ ತಲಾ 50,000 ಕೋಟಿ ರೂ ಹೂಡಿಕೆ ಬರಲಿದೆ.

ಇದನ್ನೂ ಓದಿ: ವ್ಹೀಲ್​ ಚೇರ್​ನಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಬಂದ ಸಿಎಂ

ಅಮೆರಿಕದ ಚಿಪ್​ಟೂಲ್ ತಯಾರಕರಿಂದ ಹೂಡಿಕೆ

ಭಾರತದ ಸೆಮಿಕಂಡಕ್ಟರ್ ಉದ್ಯಮಕ್ಕೆ ಬಹಳ ಅಗತ್ಯವಾಗಿರುವ ಚಿಪ್​ಟೂಲ್ ಸಾಮಗ್ರಿಗಳನ್ನು ತಯಾರಿಸುವಂತಹ ಕಂಪನಿ ಕರ್ನಾಟಕಕ್ಕೆ ಆಗಮಿಸುತ್ತಿದೆ. ಅಮೆರಿದಕ ಲ್ಯಾಮ್ ರಿಸರ್ಚ್ ಸಂಸ್ಥೆ ಮುಂದಿನ ಕೆಲ ವರ್ಷಗಳಲ್ಲಿ ಕರ್ನಾಟಕದಲ್ಲಿ 1.2 ಬಿಲಿಯನ್ ಡಾಲರ್ (ಸುಮಾರು 10,000 ಕೋಟಿ ರೂ) ಹೂಡಿಕೆ ಮಾಡಲು ಬದ್ಧವಾಗಿದೆ. ಈ ಸಂಬಂಧ ಕೆಐಎಡಿಬಿ ಜೊತೆ ಅದು ಎಂಒಯು ಮಾಡಿಕೊಂಡಿದೆ.

ಇನ್ವೆಸ್ಟ್ ಕರ್ನಾಟಕ: ರಾಜ್ಯ ಸರ್ಕಾರದ ಹೊಸ ಕೈಗಾರಿಕಾ ನೀತಿ…

ಕರ್ನಾಟಕ ಸರ್ಕಾರ ಮುಂದಿನ ಐದು ವರ್ಷ ಕಾಲ ರಾಜ್ಯದಲ್ಲಿ ಉದ್ಯಮಗಳಿಗೆ ಉತ್ತೇಜನ ನೀಡಲು ಪೂರಕವಾಗಿ ಹೊಸ ಕೈಗಾರಿಕಾ ನೀತಿ ಜಾರಿಗೆ ತರುತ್ತಿದೆ. ಕೈಗಾರಿಕಾ ಬೆಳವಣಿಗೆಗೆ ಮೂರು ವಲಯಗಳನ್ನು ಸೃಷ್ಟಿಸಲಾಗುತ್ತದೆ. ಸನ್​ರೈಸ್ ವಲಯ (ಉದಯೋನ್ಮುಖ ಕ್ಷೇತ್ರಗಳು) ಹಾಗೂ ಲೋಕಲ್ ಮ್ಯಾನುಫ್ಯಾಕ್ಚರಿಂಗ್​ಗೆ ಒತ್ತು ಕೊಡಲಾಗುತ್ತದೆ. ಹಿಂದುಳಿದಿರುವ ಪ್ರದೇಶಗಳಲ್ಲಿ ಕೈಗಾರಿಕಾ ವಲಯಗಳನ್ನು ಸ್ಥಾಪಿಸುವ ಯೋಜನೆ ಇದೆ.

ಇದನ್ನೂ ಓದಿ: ನೊಂದಾಯಿತ ಸ್ಟಾರ್ಟಪ್​ಗಳ ಸಂಖ್ಯೆ 10 ಲಕ್ಷಕ್ಕೆ ಏರಿಸುವ ಗುರಿ: ಪಿಯೂಶ್ ಗೋಯಲ್

ಎಂಎಸ್​ಎಂಇಗಳಿಗೆ ಶೇ. 30ರಷ್ಟು ಸ್ಥಳಾವಕಾಶ ಕೊಡಲಾಗುತ್ತದೆ. ಆರ್ ಅಂಡ್ ಡಿಗೆ ಪ್ರಧಾನ್ಯತೆ ಕೊಡಲಾಗುತ್ತದೆ. ಖಾಸಗಿ ಕೈಗಾರಿಕಾ ಪಾರ್ಕ್​ಗಳ ಅಭಿವೃದ್ಧಿಗೆ ಅವಕಾಶ ಕೊಡಲಾಗುವುದು. ಹೀಗೆ ವಿವಿಧ ಆಲೋಚನೆಗಳು ಕರ್ನಾಟಕ ಸರ್ಕಾರದ ಹೊಸ ಕೈಗಾರಿಕಾ ನೀತಿಯಲ್ಲಿ ಅಡಕವಾಗಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು