AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1947ರ ನಂತರದ ಆದ ಹೂಡಿಕೆಯಲ್ಲಿ ಅರ್ಧಕ್ಕಿಂತ ಹೆಚ್ಚು ಕಳೆದ 10 ವರ್ಷದಲ್ಲೇ ಆಗಿದೆ: ವರದಿ

14 trillion USD invested in India since independence: 1947ರಿಂದ ಇಲ್ಲಿಯವರೆಗೆ ಭಾರತದ ಆರ್ಥಿಕತೆಗೆ ಉತ್ತೇಜನ ನೀಡಲು 14 ಟ್ರಿಲಿಯನ್ ಡಾಲರ್​ನಷ್ಟು ಹೂಡಿಕೆ ಈ ದೇಶದಲ್ಲಿ ಆಗಿದೆ. ಮೋತಿಲಾಲ್ ಓಸ್ವಾಲ್​ನ ವರದಿ ಪ್ರಕಾರ ಕಳೆದ ಒಂದು ದಶಕದಲ್ಲೇ 8 ಟ್ರಿಲಿಯನ್ ಡಾಲರ್​ಗಿಂತಲೂ ಅಧಿಕ ಹೂಡಿಕೆ ಆಗಿದೆ. ಭಾರತದ ಆರ್ಥಿಕತೆಯ ಬೆಳವಣಿಗೆಯು ಷೇರು ಮಾರುಕಟ್ಟೆಯ ಮೇಲೂ ಸಕಾರಾತ್ಮಕ ಪರಿಣಾಮ ಬೀರಿದೆ.

1947ರ ನಂತರದ ಆದ ಹೂಡಿಕೆಯಲ್ಲಿ ಅರ್ಧಕ್ಕಿಂತ ಹೆಚ್ಚು ಕಳೆದ 10 ವರ್ಷದಲ್ಲೇ ಆಗಿದೆ: ವರದಿ
ಹೂಡಿಕೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 25, 2024 | 4:05 PM

Share

ನವದೆಹಲಿ, ನವೆಂಬರ್ 25: ಆರ್ಥಿಕತೆಗೆ ಉತ್ತೇಜನ ನೀಡಲು ಸರ್ಕಾರ ಸಾಕಷ್ಟು ಬಂಡವಾಳ ಚೆಲ್ಲಬೇಕಾಗುತ್ತದೆ. ಈ ರೀತಿ ಸ್ವಾತಂತ್ರ್ಯಾನಂತರ, ಅಂದರೆ 1947ರಿಂದ ಈಚೆಗೆ ಇಲ್ಲಿಯವರೆಗೆ ಭಾರತದಲ್ಲಿ 14 ಟ್ರಿಲಿಯನ್ ಡಾಲರ್​ನಷ್ಟು ಹೂಡಿಕೆ ಆಗಿದೆ ಎಂದು ಮೋತಿಸಾಲ್ ಓಸ್ವಾಲ್​ನ ವರದಿಯೊಂದು ಹೇಳಿದೆ. ಅಂದರೆ ಸಾವಿರ ಲಕ್ಷ ಕೋಟಿ ರುಪಾಯಿಗೂ ಅಧಿಕ ಮೊತ್ತದ ಹೂಡಿಕೆ ಆಗಿದೆ. ಕಳೆದ ಒಂದು ದಶಕದಲ್ಲೇ ಎಂಟು ಟ್ರಿಲಿಯನ್ ಡಾಲರ್​ಗೂ ಅಧಿಕ ಹೂಡಿಕೆ ಆಗಿದೆ. ಇದರಿಂದ ದೇಶದಲ್ಲಿ ಮೂಲಸೌಕರ್ಯ ವ್ಯವಸ್ಥೆ ವೇಗವಾಗಿ ಬೆಳೆಯಲು ಮತ್ತು ಆಧುನಿಕರಣದ ವೇಗ ಹೆಚ್ಚಲು ಸಾಧ್ಯವಾಗಿದೆ.

ಕೋವಿಡ್ ನಂತರದಲ್ಲಿ ತೀವ್ರವಾಗಿ ಹೆಚ್ಚಾದ ಹೂಡಿಕೆ…

ಜಿಡಿಪಿ ಮತ್ತು ಹೂಡಿಕೆ ಅನುಪಾತ 2011ರಿಂದ ಬಹುತೇಕ ಸ್ಥಿರವಾಗಿತ್ತು. ಆದರೆ, ಕೋವಿಡ್ ನಂತರ ಟ್ರೆಂಡ್ ಬದಲಾಗಿದೆ. ಅಭಿವೃದ್ಧಿ ಯೋಜನೆಗಳು ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಸರ್ಕಾರ ಮಾಡುತ್ತಿರುವ ವೆಚ್ಚ ಅಧಿಕಗೊಂಡಿದೆ. ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ನಂತರದ ಸುಧಾರಣಾ ಕ್ರಮಗಳ ಭಾಗವಾಗಿ ಸರ್ಕಾರದ ಬಂಡವಾಳ ವೆಚ್ಚ ಹೆಚ್ಚಾಗಿದೆ. ಹೀಗಾಗಿ, ಜಿಡಿಪಿ ಮತ್ತು ಹೂಡಿಕೆ ನಡುವಿನ ಅನುಪಾತ ಈಗ ಹೆಚ್ಚಾಗಿದೆ ಎಂದು ಮೋತಿಲಾಲ್ ಓಸ್ವಾಲ್​ನ ವರದಿಯಲ್ಲಿ ತಿಳಿಸಲಾಗಿದೆ.

ಷೇರು ಮಾರುಕಟ್ಟೆಗೂ ತಾಕಿದ ಆರ್ಥಿಕತೆಯ ಸಕಾರಾತ್ಮಕತೆ

ಭಾರತದ ಆರ್ಥಿಕ ಅಭಿವೃದ್ಧಿಯ ಪರಿಣಾಮವು ಷೇರು ಮಾರುಕಟ್ಟೆಯ ಮೇಲೂ ಬಿದ್ದಿದೆ. ಕಳೆದ 33 ವರ್ಷಗಳಲ್ಲಿ ಸಾಂದರ್ಭಿಕ ಏರಿಳಿತಗಳ ನಡುವೆ 26 ವರ್ಷ ಷೇರು ಮಾರುಕಟ್ಟೆ ಪಾಸಿಟಿವ್ ರಿಟರ್ನ್ ಕೊಟ್ಟಿರುವುದು ಗಮನಾರ್ಹ. ಕಿರು ಅವಧಿಯಲ್ಲಿ ಮಾರುಕಟ್ಟೆ ಶೇ. 10ರಿಂದ 12ರಷ್ಟು ಹಿನ್ನಡೆ ಕಂಡಿದೆಯಾದರೂ ದೀರ್ಘಾವಧಿಯಲ್ಲಿ ಅಧಿಕ ಬೆಳವಣಿಗೆ ಕಂಡಿದೆ ಎನ್ನಲಾಗಿದೆ.

ಇದನ್ನೂ ಓದಿ: ನವೆಂಬರ್​ನಲ್ಲಿ ಪಿಎಂಐ ಔಟ್​ಪುಟ್ ಇಂಡೆಕ್ಸ್ 59.5; ಭಾರತದಲ್ಲಿ ಬಿಸಿನೆಸ್ ಚಟುವಟಿಕೆ ತೀವ್ರ

ಪ್ರತೀ ವರ್ಷ ಯಾವುದಾದರೂ ಸಂದರ್ಭದಲ್ಲಿ ಶೇ. 10ರಿಂದ 20ರಷ್ಟು ಹಿನ್ನಡೆ ನಿಶ್ಚಿತವಾಗಿ ಆಗುತ್ತಿದೆ. ಇಂಥ ಕುಸಿತದ ಸಂದರ್ಭದಲ್ಲಿ ಹೂಡಿಕೆದಾರರು ದೃತಿಗೆಡಬಾರದು. ದೀರ್ಘಾವಧಿಯವರೆಗೆ ನಿಮ್ಮ ಹೂಡಿಕೆ ಇರಬೇಕು. ಮಾರುಕಟ್ಟೆ ಮರುಚೇತರಿಕೆಯಿಂದ ಆಗುವ ಲಾಭ ಸಂಪಾದಿಸಬಹುದು ಎಂದು ಮೋತಿಲಾಲ್ ಓಸ್ವಾಲ್ ಸಂಸ್ಥೆಯ ವಿಶ್ಲೇಷಣೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ