AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1947ರ ನಂತರದ ಆದ ಹೂಡಿಕೆಯಲ್ಲಿ ಅರ್ಧಕ್ಕಿಂತ ಹೆಚ್ಚು ಕಳೆದ 10 ವರ್ಷದಲ್ಲೇ ಆಗಿದೆ: ವರದಿ

14 trillion USD invested in India since independence: 1947ರಿಂದ ಇಲ್ಲಿಯವರೆಗೆ ಭಾರತದ ಆರ್ಥಿಕತೆಗೆ ಉತ್ತೇಜನ ನೀಡಲು 14 ಟ್ರಿಲಿಯನ್ ಡಾಲರ್​ನಷ್ಟು ಹೂಡಿಕೆ ಈ ದೇಶದಲ್ಲಿ ಆಗಿದೆ. ಮೋತಿಲಾಲ್ ಓಸ್ವಾಲ್​ನ ವರದಿ ಪ್ರಕಾರ ಕಳೆದ ಒಂದು ದಶಕದಲ್ಲೇ 8 ಟ್ರಿಲಿಯನ್ ಡಾಲರ್​ಗಿಂತಲೂ ಅಧಿಕ ಹೂಡಿಕೆ ಆಗಿದೆ. ಭಾರತದ ಆರ್ಥಿಕತೆಯ ಬೆಳವಣಿಗೆಯು ಷೇರು ಮಾರುಕಟ್ಟೆಯ ಮೇಲೂ ಸಕಾರಾತ್ಮಕ ಪರಿಣಾಮ ಬೀರಿದೆ.

1947ರ ನಂತರದ ಆದ ಹೂಡಿಕೆಯಲ್ಲಿ ಅರ್ಧಕ್ಕಿಂತ ಹೆಚ್ಚು ಕಳೆದ 10 ವರ್ಷದಲ್ಲೇ ಆಗಿದೆ: ವರದಿ
ಹೂಡಿಕೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 25, 2024 | 4:05 PM

Share

ನವದೆಹಲಿ, ನವೆಂಬರ್ 25: ಆರ್ಥಿಕತೆಗೆ ಉತ್ತೇಜನ ನೀಡಲು ಸರ್ಕಾರ ಸಾಕಷ್ಟು ಬಂಡವಾಳ ಚೆಲ್ಲಬೇಕಾಗುತ್ತದೆ. ಈ ರೀತಿ ಸ್ವಾತಂತ್ರ್ಯಾನಂತರ, ಅಂದರೆ 1947ರಿಂದ ಈಚೆಗೆ ಇಲ್ಲಿಯವರೆಗೆ ಭಾರತದಲ್ಲಿ 14 ಟ್ರಿಲಿಯನ್ ಡಾಲರ್​ನಷ್ಟು ಹೂಡಿಕೆ ಆಗಿದೆ ಎಂದು ಮೋತಿಸಾಲ್ ಓಸ್ವಾಲ್​ನ ವರದಿಯೊಂದು ಹೇಳಿದೆ. ಅಂದರೆ ಸಾವಿರ ಲಕ್ಷ ಕೋಟಿ ರುಪಾಯಿಗೂ ಅಧಿಕ ಮೊತ್ತದ ಹೂಡಿಕೆ ಆಗಿದೆ. ಕಳೆದ ಒಂದು ದಶಕದಲ್ಲೇ ಎಂಟು ಟ್ರಿಲಿಯನ್ ಡಾಲರ್​ಗೂ ಅಧಿಕ ಹೂಡಿಕೆ ಆಗಿದೆ. ಇದರಿಂದ ದೇಶದಲ್ಲಿ ಮೂಲಸೌಕರ್ಯ ವ್ಯವಸ್ಥೆ ವೇಗವಾಗಿ ಬೆಳೆಯಲು ಮತ್ತು ಆಧುನಿಕರಣದ ವೇಗ ಹೆಚ್ಚಲು ಸಾಧ್ಯವಾಗಿದೆ.

ಕೋವಿಡ್ ನಂತರದಲ್ಲಿ ತೀವ್ರವಾಗಿ ಹೆಚ್ಚಾದ ಹೂಡಿಕೆ…

ಜಿಡಿಪಿ ಮತ್ತು ಹೂಡಿಕೆ ಅನುಪಾತ 2011ರಿಂದ ಬಹುತೇಕ ಸ್ಥಿರವಾಗಿತ್ತು. ಆದರೆ, ಕೋವಿಡ್ ನಂತರ ಟ್ರೆಂಡ್ ಬದಲಾಗಿದೆ. ಅಭಿವೃದ್ಧಿ ಯೋಜನೆಗಳು ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಸರ್ಕಾರ ಮಾಡುತ್ತಿರುವ ವೆಚ್ಚ ಅಧಿಕಗೊಂಡಿದೆ. ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ನಂತರದ ಸುಧಾರಣಾ ಕ್ರಮಗಳ ಭಾಗವಾಗಿ ಸರ್ಕಾರದ ಬಂಡವಾಳ ವೆಚ್ಚ ಹೆಚ್ಚಾಗಿದೆ. ಹೀಗಾಗಿ, ಜಿಡಿಪಿ ಮತ್ತು ಹೂಡಿಕೆ ನಡುವಿನ ಅನುಪಾತ ಈಗ ಹೆಚ್ಚಾಗಿದೆ ಎಂದು ಮೋತಿಲಾಲ್ ಓಸ್ವಾಲ್​ನ ವರದಿಯಲ್ಲಿ ತಿಳಿಸಲಾಗಿದೆ.

ಷೇರು ಮಾರುಕಟ್ಟೆಗೂ ತಾಕಿದ ಆರ್ಥಿಕತೆಯ ಸಕಾರಾತ್ಮಕತೆ

ಭಾರತದ ಆರ್ಥಿಕ ಅಭಿವೃದ್ಧಿಯ ಪರಿಣಾಮವು ಷೇರು ಮಾರುಕಟ್ಟೆಯ ಮೇಲೂ ಬಿದ್ದಿದೆ. ಕಳೆದ 33 ವರ್ಷಗಳಲ್ಲಿ ಸಾಂದರ್ಭಿಕ ಏರಿಳಿತಗಳ ನಡುವೆ 26 ವರ್ಷ ಷೇರು ಮಾರುಕಟ್ಟೆ ಪಾಸಿಟಿವ್ ರಿಟರ್ನ್ ಕೊಟ್ಟಿರುವುದು ಗಮನಾರ್ಹ. ಕಿರು ಅವಧಿಯಲ್ಲಿ ಮಾರುಕಟ್ಟೆ ಶೇ. 10ರಿಂದ 12ರಷ್ಟು ಹಿನ್ನಡೆ ಕಂಡಿದೆಯಾದರೂ ದೀರ್ಘಾವಧಿಯಲ್ಲಿ ಅಧಿಕ ಬೆಳವಣಿಗೆ ಕಂಡಿದೆ ಎನ್ನಲಾಗಿದೆ.

ಇದನ್ನೂ ಓದಿ: ನವೆಂಬರ್​ನಲ್ಲಿ ಪಿಎಂಐ ಔಟ್​ಪುಟ್ ಇಂಡೆಕ್ಸ್ 59.5; ಭಾರತದಲ್ಲಿ ಬಿಸಿನೆಸ್ ಚಟುವಟಿಕೆ ತೀವ್ರ

ಪ್ರತೀ ವರ್ಷ ಯಾವುದಾದರೂ ಸಂದರ್ಭದಲ್ಲಿ ಶೇ. 10ರಿಂದ 20ರಷ್ಟು ಹಿನ್ನಡೆ ನಿಶ್ಚಿತವಾಗಿ ಆಗುತ್ತಿದೆ. ಇಂಥ ಕುಸಿತದ ಸಂದರ್ಭದಲ್ಲಿ ಹೂಡಿಕೆದಾರರು ದೃತಿಗೆಡಬಾರದು. ದೀರ್ಘಾವಧಿಯವರೆಗೆ ನಿಮ್ಮ ಹೂಡಿಕೆ ಇರಬೇಕು. ಮಾರುಕಟ್ಟೆ ಮರುಚೇತರಿಕೆಯಿಂದ ಆಗುವ ಲಾಭ ಸಂಪಾದಿಸಬಹುದು ಎಂದು ಮೋತಿಲಾಲ್ ಓಸ್ವಾಲ್ ಸಂಸ್ಥೆಯ ವಿಶ್ಲೇಷಣೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ