AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಐಪಿಎಲ್ ಟ್ರೆಂಡ್​! ಟಿವಿ ಮಾಧ್ಯಮ ಬಿಟ್ಟು ಠೀವಿಯಿಂದ ಡಿಜಿಟಲ್ ಕಡೆಗೆ ಮುಖ ಮಾಡಿದ ಐಪಿಎಲ್ ವೀಕ್ಷಕರು, ಜಾಹೀರಾತುದಾರರು!

ಭಾರತದಲ್ಲಿ ವಯಾಕಾಮ್-18 ಜಿಯೋ ಸಿನಿಮಾ ಅಪ್ಲಿಕೇಷನ್‌ನಲ್ಲಿ ಐಪಿಲ್ 2023 ಪಂದ್ಯಗಳನ್ನು ನೇರ ಪ್ರಸಾರ ಮಾಡುತ್ತಿದೆ. ಒಟ್ಟು 20,500 ಕೋಟಿ ರೂಪಾಯಿಗೆ ವಯಾಕಾಮ್-18 ಭಾರತದಲ್ಲಿ ಡಿಜಿಟಲ್ ನೇರ ಪ್ರಸಾರ ಪಂದ್ಯಗಳ ಹಕ್ಕುಗಳನ್ನು ಪಡೆದುಕೊಂಡಿದೆ.

ಇದು ಐಪಿಎಲ್ ಟ್ರೆಂಡ್​! ಟಿವಿ ಮಾಧ್ಯಮ ಬಿಟ್ಟು ಠೀವಿಯಿಂದ ಡಿಜಿಟಲ್ ಕಡೆಗೆ ಮುಖ ಮಾಡಿದ ಐಪಿಎಲ್ ವೀಕ್ಷಕರು, ಜಾಹೀರಾತುದಾರರು!
ಡಿಜಿಟಲ್ ಕಡೆಗೆ ಮುಖ ಮಾಡಿದ ಐಪಿಎಲ್ ವೀಕ್ಷಕರು, ಜಾಹೀರಾತುದಾರರು! Image Credit source: medianews4u
ಸಾಧು ಶ್ರೀನಾಥ್​
|

Updated on:Apr 10, 2023 | 11:48 AM

Share

ನವದೆಹಲಿ: ಜನಪ್ರಿಯತೆಯ ಉತ್ತುಂಗದಲ್ಲಿರುವ ಇಂಡಿಯನ್ ಪ್ರೀಮಿಯಂ ಲೀಗ್​ (IPL 2023) ಋತುವಿನಲ್ಲಿ ಈ ಬಾರಿ ಹೊಸ ಟ್ರೆಂಡ್ ಕಂಡುಬಂದಿದೆ. ಜಾಹೀರಾತುದಾರರು ಟೆಲಿವಿಶನ್​ ಮಾಧ್ಯಮವನ್ನು (IPL Broadcasting) ಬಿಟ್ಟು ಡಿಜಿಟಲ್ ಕಡೆ ಮುಖ ಮಾಡಿದ್ದಾರೆ. ಬಾರ್ಕ್ ಇಂಡಿಯಾದ ಟೀವಿ ರೇಟಿಂಗ್‌ನಲ್ಲಿ (TVR), ಕಳೆದ ವರ್ಷ ಮೊದಲ ಪಂದ್ಯದಲ್ಲಿ ಸುಮಾರು 52 ಜಾಹೀರಾತುದಾರರು (Advertisers) ಟಿವಿಯಲ್ಲಿ ಜಾಹೀರಾತುಗಳನ್ನು ನೀಡಿದ್ದರು. ಈ ವರ್ಷ ಕೇವಲ 31 ಜಾಹೀರಾತುದಾರರು ಕಾಣಿಸಿಕೊಂಡರು. ಅಂದರೆ ಶೇ 40ರಷ್ಟು ಜಾಹೀರಾತುದಾರರು ಟಿವಿ ಜಾಹೀರಾತು ಪ್ರಸಾರದಿಂದ ವಿಮುಖರಾಗಿದ್ದಾರೆ.

ಕಳೆದ ಐಪಿಎಲ್ ಋತುವಿನಲ್ಲಿ ಟಿವಿ ಜಾಹೀರಾತುದಾರರ ಸಂಖ್ಯೆ ಸುಮಾರು 100 ಆಗಿತ್ತು. ಈ ಬಾರಿ 100 ಜಾಹೀರಾತುದಾರರ ಅಂಕಿಯನ್ನು ಮುಟ್ಟಲು ಸಾಧ್ಯವಾಗಬಹುದಾ ಅನ್ನೋ ಅನುಮಾನ ಕಾಡತೊಡಗಿದೆ. ಹಾಗೆ ನೋಡಿದಲ್ಲಿ, ಇದು ತುಂಬಾ ಕಷ್ಟಕರವೆಂದು ತೋರುತ್ತದೆ. ಟಿವಿಯಲ್ಲಿ ಪ್ರಾಯೋಜಕರ ಸಂಖ್ಯೆಯೂ ಕಡಿಮೆಯಾಗಿದೆ. ಕಳೆದ ವರ್ಷ ಇದ್ದ 16 ರಿಂದ ಈ ವರ್ಷ 12 ಕ್ಕೆ ಇಳಿದಿದೆ. ಈ 12ರಲ್ಲಿ ಒಬ್ಬ ಪ್ರಾಯೋಜಕರು ತಡವಾಗಿ ಮೂರನೇ ಪಂದ್ಯದೊಂದಿಗೆ ತಳುಕು ಹಾಕಿಕೊಂಡಿದ್ದಾರೆ.

ರಿಲಯನ್ಸ್‌ಗೆ ಸಂಬಂಧಿಸಿದ ಕಂಪನಿಗಳು ಜಾಹೀರಾತುದಾರರ ಪಟ್ಟಿಯಿಂದ ಸಂಪೂರ್ಣವಾಗಿ ಕಾಣೆಯಾಗಿವೆ. ಕಾರಣ ರಿಲಯನ್ಸ್ ಗ್ರೂಪ್‌ನ ವಯಾಕಾಮ್-18 ಐಪಿಎಲ್‌ನ ಡಿಜಿಟಲ್ ಪ್ರಸಾರ ಹಕ್ಕುಗಳನ್ನು ಪಡೆದುಕೊಂಡಿದೆ. ಬೈಜೂಸ್, ಕ್ರೆಡ್, ಮುತ್ತೂಟ್, ನೆಟ್‌ಮೆಡ್ಸ್, ಸ್ವಿಗ್ಗಿ, ಫ್ಲಿಪ್‌ಕಾರ್ಟ್, ಫೋನ್‌ಪೇ, ಮೀಶೋ, ಸ್ಯಾಮ್‌ಸಂಗ್, ಒನ್‌ಪ್ಲಸ್, ವೇದಾಂಟು, ಸ್ಪಾಟಿಫೈ ಮತ್ತು ಹ್ಯಾವೆಲ್ಸ್ ಇವು ಟೀವಿಯಿಂದ ವಿಮುಖವಾದ ಇತರ ದೊಡ್ಡ ಟಿವಿ ಜಾಹೀರಾತುದಾರರು. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಭಾರತದಲ್ಲಿ ಟಿವಿಯಲ್ಲಿ ಐಪಿಎಲ್ ಪಂದ್ಯಗಳನ್ನು ನೇರ ಪ್ರಸಾರ ಮಾಡುತ್ತಿದೆ.

ಟಿವಿ ಜಾಹೀರಾತು ಆದಾಯದ ಪ್ರಮುಖ ಭಾಗವನ್ನು ಡಿಜಿಟಲ್ ಆವರಿಸಿಕೊಂಡಿದೆ. 125ಕ್ಕೂ ಹೆಚ್ಚು ಜಾಹೀರಾತುದಾರರು ಟಿವಿಯನ್ನು ದಾಟಿ ಡಿಜಿಟಲ್ ಜಾಹೀರಾತಿಗಾಗಿ ವಯಾಕಾಮ್-18 ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಇವುಗಳಲ್ಲಿ ಅಮೆಜಾನ್, ಫೋನ್ ಪೇ, ಸ್ಯಾಮ್‌ಸಂಗ್, ಜಿಯೋಮಾರ್ಟ್, ಯುಬಿ, ಟಿವಿಎಸ್, ಕ್ಯಾಸ್ಟ್ರಾಲ್, ಇಟಿ ಮನಿ, ಪೂಮಾ, ಅಜಿಯೋನಂತಹ ಕಂಪನಿಗಳು ಸೇರಿವೆ.

ಟಿವಿಯಲ್ಲಿ ಜಾಹೀರಾತುದಾರರು ಕಡಿಮೆಯಾಗುತ್ತಿದ್ದು, ಇದು ಟಿವಿ ಪ್ರಸಾರಕರ ಆದಾಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಐಪಿಎಲ್ ಆದಾಯದ ಸಂಪೂರ್ಣ ಅಂಕಿ- ಅಂಶಗಳೊಂದಿಗೆ ಹೊರಬರಲು ಇನ್ನೂ ಸಮಯವಿದೆ, ಐಪಿಎಲ್ ಮುಂದುವರಿದಂತೆ ಚಿತ್ರಣವು ಹೆಚ್ಚು ಸ್ಪಷ್ಟವಾಗುತ್ತದೆ.

ಭಾರತದಲ್ಲಿ ವಯಾಕಾಮ್-18 ಜಿಯೋ ಸಿನಿಮಾ ಅಪ್ಲಿಕೇಷನ್‌ನಲ್ಲಿ (Jio Cinema App) ಐಪಿಲ್ 2023 ಪಂದ್ಯಗಳನ್ನು ನೇರ ಪ್ರಸಾರ ಮಾಡುತ್ತಿದೆ. ಒಟ್ಟು 20,500 ಕೋಟಿ ರೂಪಾಯಿಗೆ ವಯಾಕಾಮ್-18 ಭಾರತದಲ್ಲಿ ಡಿಜಿಟಲ್ ನೇರ ಪ್ರಸಾರ ಪಂದ್ಯಗಳ ಹಕ್ಕುಗಳನ್ನು ಪಡೆದುಕೊಂಡಿದೆ. ಜಿಯೋ ಚಂದಾದಾರಿಕೆ ಹೊಂದಿರುವ ಎಲ್ಲ ಟೆಲಿಕಾಂ ಪೂರೈಕೆದಾರರ ಬಳಕೆದಾರರು ಉಚಿತವಾಗಿ ಜಿಯೋ ಸಿನಿಮಾ ಅಪ್ಲಿಕೇಷನ್‌ಗೆ ಲಾಗ್ ಇನ್ ಮಾಡುವ ಮೂಲಕ ಐಪಿಎಲ್ ಪಂದ್ಯಗಳನ್ನು ಆನಂದಿಸಬಹುದು.

ಒಂದೇ ದಿನದಲ್ಲಿ ಅತಿ ಹೆಚ್ಚು ಡೌನ್​ಲೋಡ್ ಕಂಡ ಜಿಯೋ ಸಿನಿಮಾ ಆ್ಯಪ್

ಇದೇ ವೇಳೆ, ಐಪಿಎಲ್ ಅನ್ನು ಡಿಜಿಟಲ್ ಆಗಿ ಪ್ರಸಾರ ಮಾಡುವ ಹಕ್ಕು ಜಿಯೋಗೆ ಸಿಕ್ಕಿದೆ. ಹೆಚ್ಚು ಮಂದಿಗೆ ಪರಿಚಯ ಇಲ್ಲದ ಜಿಯೋ ಸಿನಿಮಾ ಆ್ಯಪ್​ನಲ್ಲಿ ಐಪಿಎಲ್ ಪಂದ್ಯಗಳ ಉಚಿತ ಪ್ರಸಾರ ಲಭ್ಯ ಇದೆ. ಜಿಯೋದ ಈ ನಡೆ ಸಖತ್ತಾಗಿ ಫಲ ಕೊಟ್ಟಿದೆ. ಐಪಿಎಲ್ ಉದ್ಘಾಟನೆಯ ಮೊದಲ ದಿನವೇ 2.5 ಕೋಟಿ ಜನರು ಜಿಯೋ ಸಿನಿಮಾ ಆ್ಯಪ್ ಡೌನ್​ಲೋಡ್ ಮಾಡಿಕೊಂಡಿದ್ದಾರೆ. ಒಂದೇ ದಿನದಲ್ಲಿ ಅತಿ ಹೆಚ್ಚು ಡೌನ್​ಲೋಡ್ ಆದ ಹೊಸ ದಾಖಲೆಯನ್ನು ಜಿಯೋ ಸಿನಿಮಾ ಬರೆದಿದೆ.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:27 am, Mon, 10 April 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು