AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7th Pay Commission: ತುಟ್ಟಿ ಭತ್ಯೆ ಹೆಚ್ಚಳದೊಂದಿಗೆ ಏರಿಕೆ ಆಗಲಿದೆಯೇ ಈ ನಾಲ್ಕು ಭತ್ಯೆಗಳು?

ಕೇಂದ್ರ ಸರ್ಕಾರದಿಂದ ಈಚೆಗೆ ಡಿಎ ಹೆಚ್ಚಳ ಮಾಡಲಾಗಿದೆ. ಇದರರಿಂದ ಇತರ ನಾಲ್ಕು ಭತ್ಯೆಗಳು ಸಹ ಏರಿಕೆ ಆಗಲಿವೆಯಾ? ಆ ಬಗ್ಗೆ ವರದಿ ನಿಮ್ಮೆದುರು ಇದೆ.

7th Pay Commission: ತುಟ್ಟಿ ಭತ್ಯೆ ಹೆಚ್ಚಳದೊಂದಿಗೆ ಏರಿಕೆ ಆಗಲಿದೆಯೇ ಈ ನಾಲ್ಕು ಭತ್ಯೆಗಳು?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 26, 2022 | 5:57 PM

Share

ತುಟ್ಟಿಭತ್ಯೆ (Dearness Allowance) ಏರಿಕೆಗೆ ಇತ್ತೀಚಿನ ಕೇಂದ್ರ ಸಂಪುಟ ಅನುಮೋದನೆಯ ನಂತರ ಡಿಎ ಈಗ ಮೂಲ ವೇತನದ ಶೇ 34ರಷ್ಟು ಆಗಿದೆ. ಈ ಹೆಚ್ಚಳದೊಂದಿಗೆ ಡಿಎ ಮಟ್ಟವನ್ನು ಆಧರಿಸಿ ನಿರ್ಧರಿಸುವ ಇತರ 4 ಭತ್ಯೆಗಳು ಸಹ ಹೆಚ್ಚಾಗಬಹುದು ಎಂದು ಈಗ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವರದಿಗಳು ಪ್ರಸಾರ ಆಗುತ್ತಿವೆ. ಆ ಬಗ್ಗೆ ಪಟ್ಟಿ ಇಲ್ಲಿದೆ.

1. ಮೂಲ ವೇತನದ ಅನುಪಾತದಲ್ಲಿ ಡಿಎ ಇರುತ್ತದೆ. ಪರಿಣಾಮವಾಗಿ ಡಿಎ ಹೆಚ್ಚಳವು ಕೇಂದ್ರ ಸರ್ಕಾರಿ ನೌಕರರ ಮಾಸಿಕ ಭವಿಷ್ಯ ನಿಧಿ (ಪಿಎಫ್) ಅನ್ನು ಸಹ ಹೆಚ್ಚಿಸುತ್ತದೆ.

2. ಡಿಎ ಹೆಚ್ಚಳದಿಂದಾಗಿ ಉದ್ಯೋಗಿಗಳ ಗ್ರಾಚ್ಯುಟಿ ಮೊತ್ತವು ಸಹ ಹೆಚ್ಚಳ ಆಗುತ್ತದೆ.

3. ತುಟ್ಟಿಭತ್ಯೆ ಹೆಚ್ಚಳವು ಉದ್ಯೋಗಿಗಳ ಪ್ರಯಾಣ/ಸಾರಿಗೆ ಭತ್ಯೆ ಮತ್ತು ನಗರ ಭತ್ಯೆಗಳ ಹೆಚ್ಚಳಕ್ಕೆ ಮಾರ್ಗವನ್ನು ಸರಾಗಗೊಳಿಸಿದೆ.

4. ಡಿಎ ಹೆಚ್ಚಿಸಿರುವುದರಿಂದ ಎಚ್‌ಆರ್‌ಎ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ಊಹಾಪೋಹಗಳು ಕೂಡ ಹರಿದಾಡಿವೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಮಾರ್ಚ್ 30, 2022ರಂದು ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ಕಂತು ತುಟ್ಟಿ ಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ಡಿಯರ್‌ನೆಸ್ ರಿಲೀಫ್ (ಡಿಆರ್) ಬಿಡುಗಡೆ ಮಾಡಲು ಅನುಮೋದನೆ ನೀಡಿತು. 1.1.2022ರಿಂದ ಜಾರಿಗೆ ಬರುತ್ತದೆ. ಬೆಲೆ ಏರಿಕೆಯನ್ನು ಸರಿದೂಗಿಸಲು, ಮೂಲ ವೇತನ/ಪಿಂಚಣಿಯ ಅಸ್ತಿತ್ವದಲ್ಲಿರುವ ಶೇ 31ರ ದರಕ್ಕಿಂತ ಶೇ 3ರಷ್ಟು ಹೆಚ್ಚಳವನ್ನು ಪ್ರತಿನಿಧಿಸುತ್ತದೆ. 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಅಂಗೀಕೃತ ಸೂತ್ರಕ್ಕೆ ಅನುಗುಣವಾಗಿ ಈ ಹೆಚ್ಚಳವನ್ನು ಅನುಮೋದಿಸಲಾಗಿದೆ.

ಡಿಯರ್​ನೆಸ್ ಅಲೋವೆನ್ಸ್ ಮತ್ತು ಡಿಯರ್​ನೆಸ್ ರಿಲೀಫ್ ಎರಡರ ಖಾತೆಯಲ್ಲಿನ ಬೊಕ್ಕಸದ ಮೇಲಿನ ಒಟ್ಟಾರೆ ಪರಿಣಾಮವು ವಾರ್ಷಿಕ ರೂ. 9,544.50 ಕೋಟಿಗಳಾಗಿರುತ್ತದೆ. ಇದರಿಂದ ಸುಮಾರು 47.68 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ.

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್