AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar Linking: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾ? ಲಿಂಕ್ ಅಗಿರುವುದನ್ನು ಖಾತ್ರಿಪಡಿಸಿಕೊಳ್ಳುವುದು ಹೇಗೆ?

Bank Account and Aadhaar: ಆಧಾರ್ ಅನ್ನು ಎಲ್ಲಾ ಸೇವೆಗಳಿಗೂ ಅಗತ್ಯ ದಾಖಲೆ ಎಂದು ಕಡ್ಡಾಯಪಡಿಸುವಂತಿಲ್ಲ. ಆಧಾರ್ ಕಾರ್ಡ್ ಎಲ್ಲೆಲ್ಲಿ ಕಡ್ಡಾಯ ಇದೆ? ಬ್ಯಾಂಕ್ ಖಾತೆ ತೆರೆಯಲು ಆಧಾರ್ ದಾಖಲೆ ನೀಡಲೇಬೇಕಾ? ಕೆಲ ಸಂದೇಹಗಳಿಗೆ ಇಲ್ಲಿದೆ ಉತ್ತರ.

Aadhaar Linking: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾ? ಲಿಂಕ್ ಅಗಿರುವುದನ್ನು ಖಾತ್ರಿಪಡಿಸಿಕೊಳ್ಳುವುದು ಹೇಗೆ?
ಆಧಾರ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 26, 2023 | 11:51 AM

ಆಧಾರ್ ಕಾರ್ಡ್ ವಿಚಾರದಲ್ಲಿ ಜನಸಾಮಾನ್ಯರಿಗೆ ಕೆಲವೊಂದಿಷ್ಟು ಗೊಂದಲಗಳಿವೆ. ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ (Aadhaar and PAN Linking) ಮಾಡುವುದು ಕಡ್ಡಾಯಪಡಿಸಿದ ಬಳಿಕ ಗೊಂದಲ ಹೆಚ್ಚಾಗಿರಬಹುದು. ಆದರೆ, ಆಧಾರ್ ಅನ್ನು ಎಲ್ಲಾ ಸೇವೆಗಳಿಗೂ ಅಗತ್ಯ ದಾಖಲೆ ಎಂದು ಕಡ್ಡಾಯಪಡಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್​ನಿಂದಲೇ ನಿರ್ದೇಶನ ಬಂದಿದೆ. ಆದಾಗ್ಯೂ ಆಧಾರ್ ಕಾರ್ಡ್ ನಾಗರಿಕರ ಗುರುತಿಸಿ ಚೀಟಿ ಜೊತೆಗೆ ಹಲವು ಸೇವೆಗಳಿಗೆ ಅಗತ್ಯ ದಾಖಲೆಗಳಲ್ಲಿ ಒಂದಾಗಿದೆ. ಆದಾಯ ತೆರಿಗೆ ಪಾವತಿ ಮಾಡಲು ಆಧಾರ್ ಮತ್ತು ಪ್ಯಾನ್ ಲಿಂಕ್ ಅಗುವುದು ಕಡ್ಡಾಯವೇ. ಆಧಾರ್ ಕಾರ್ಡ್ ಎಲ್ಲೆಲ್ಲಿ ಕಡ್ಡಾಯ ಇದೆ? ಬ್ಯಾಂಕ್ ಖಾತೆ (Bank Account) ತೆರೆಯಲು ಆಧಾರ್ ದಾಖಲೆ ನೀಡಲೇಬೇಕಾ? ಕೆಲ ಸಂದೇಹಗಳಿಗೆ ಇಲ್ಲಿದೆ ಉತ್ತರ:

ಆಧಾರ್ ಸಲ್ಲಿಸುವುದು ಎಲ್ಲೆಲ್ಲಿ ಕಡ್ಡಾಯ?

ಸರ್ಕಾರದಿಂದ ಸಬ್ಸಿಡಿ ಇತ್ಯಾದಿ ಸೌಲಭ್ಯ ಸಿಗುವ ಸ್ಕೀಮ್​ಗಳಲ್ಲಿ ಆಧಾರ್ ದಾಖಲೆ ನೀಡುವುದು ಮತ್ತು ಲಿಂಕ್ ಮಾಡುವುದು ಕಡ್ಡಾಯ ಇದೆ. 2019ರ ಹಣ ದುರುಪಯೋಗ ನಿಯಂತ್ರಣ ಕಾಯ್ದೆಯ ಮೂರನೇ ತಿದ್ದುಪಡಿ ನಿಯಮಗಳ ಪ್ರಕಾರ ಸರ್ಕಾರೀ ಸಬ್ಸಿಡಿ ಮತ್ತಿತರ ನೆರವು ಬರುವ ನಿರ್ದಿಷ್ಟ ಯೋಜನೆಗಳಿಗೆ ಆಧಾರ್ ಕಾರ್ಡ್ ದಾಖಲೆ ಸಲ್ಲಿಸುವುದು ಕಡ್ಡಾ ಇದೆ.

ಪಿಎಂ ಕಿಸಾನ್ ಯೋಜನೆ, ಗ್ಯಾಸ್ ಏಜೆನ್ಸಿ ಇತ್ಯಾದಿ ಕಡೆ ಆಧಾರ್ ಕಾರ್ಡ್ ದಾಖಲೆ ಸಲ್ಲಿಸುವುದು ಕಡ್ಡಾಯ. ಪಿಎಂ ಜನ್ ಧನ್ ಯೋಜನೆ ಅಡಿ ಬ್ಯಾಂಕ್ ಖಾತೆ ತೆರೆಯಲೂ ಆಧಾರ್ ಕಾರ್ಡ್ ಕಡ್ಡಾಯ ಇದೆ.

ಇದನ್ನೂ ಓದಿEPFO E-Passbook Website: ಇಪಿಎಫ್​ನ ಪಾಸ್​ಬುಕ್ ಸರ್ವಿಸ್​ಗೆ ಲಾಗಿನ್ ಅಗಲು ತೊಡಕು, ಸದಸ್ಯರ ಅಳಲು

ಸರ್ಕಾರದ ಕೆಲ ಸಮಾಜ ಕಲ್ಯಾಣ ಯೋಜನೆಗಳಾದ ವೃದ್ಧಾಪ್ಯ ಪಿಂಚಣಿ, ವಿಧವಾ ಪಿಂಚಣಿ ಇತ್ಯಾದಿಗೆ ಆಧಾರ್ ಕಾರ್ಡ್ ಕಡ್ಡಾಯ ಇಲ್ಲ. ಈ ಎರಡು ಪಿಂಚಣಿ ಯೋಜನೆಗಳಲ್ಲಿ ಸರ್ಕಾರ ತಿಂಗಳಿಗೆ ನಿರ್ದಿಷ್ಟ ಮೊತ್ತದ ಹಣವನ್ನು ಪಿಂಚಣಿಯಾಗಿ ಫಲಾನುಭವಿಗಳಿಗೆ ನೀಡುತ್ತದೆ.

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾ?

ಬ್ಯಾಂಕುಗಳಲ್ಲಿ ಖಾತೆ ತೆರೆಯಲು ಅಥವಾ ಕೆವೈಸಿ ಅಪ್​ಡೇಟ್ ಮಾಡಲು ಆಧಾರ್ ದಾಖಲೆಗೆ ಪ್ರಾಮುಖ್ಯತೆ ನೀಡಲಾಗುತ್ತದಾದರೂ ಅದನ್ನು ಕಡ್ಡಾಯಪಡಿಸುವಂತಿಲ್ಲ. ಸರ್ಕಾರದ ಸಬ್ಸಿಡಿ ಹಣ ಬರುವ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಸಾಕು. ಬೇರೆ ಬ್ಯಾಂಕುಗಳಲ್ಲಿ ನೀವು ಆಧಾರ್ ಸಲ್ಲಿಸುವುದು ಐಚ್ಛಿಕ ಮಾತ್ರ. ವೋಟರ್ ಐಡಿ, ಪಾಸ್​ಪೋರ್ಟ್, ಡಿಎಲ್, ರೇಷನ್ ಕಾರ್ಡ್ ಇತ್ಯಾದಿ ಬೇರೆ ದಾಖಲೆಗಳನ್ನು ಕೆವೈಸಿಗೆ ಒದಗಿಸಬಹುದು.

ಇದನ್ನೂ ಓದಿHigh Returns: ಸುಳ್ಳಲ್ಲ; 2-4 ವರ್ಷಕ್ಕೆ ಹಣ ಡಬಲ್ ಮಾಡುತ್ತಿರುವ ಮ್ಯೂಚುವಲ್ ಫಂಡ್ ಸ್ಕೀಮ್​ಗಳಿವು; ಶುರುವಾದಾಗಿನಿಂದ ಇವುಗಳ ರಿಟರ್ನ್ಸ್ ಶೇ. 20ಕ್ಕಿಂತ ಕೆಳಗಿಳಿದೇ ಇಲ್ಲ

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯಾ ಎಂದು ಆನ್​ಲೈನ್​​ನಲ್ಲೇ ತಿಳಿದುಕೊಳ್ಳುವುದು ಹೇಗೆ?

ಸರ್ಕಾರದ ಸಬ್ಸಿಡಿಗಳು ಬರುವ ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಲಿಂಕ್ ಆಗಿದೆಯಾ ಇಲ್ಲವಾ ಎಂಬುದನ್ನು ಸುಲಭವಾಗಿ ಖಾತ್ರಿಪಡಿಸಿಕೊಳ್ಳಬಹುದು. ನಿಮ್ಮ ಬ್ಯಾಂಕ್ ಕಚೇರಿಗೆ ಹೋಗಿ ವಿಚಾರಿಸಿದರೆ ಮಾಹಿತಿ ಸಿಗುತ್ತದೆ. ಅಥವಾ ಆನ್​ಲೈನ್​ನಲ್ಲಿ ಈ ಕೆಳಗಿನ ವಿಧಾನದ ಮೂಲಕ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರುವುದನ್ನು ಪರಿಶೀಲಿಸಬಹುದು:

  • ಆಧಾರ್ ಸಂಸ್ಥೆಯ ಅಧಿಕೃತ ವೆಬ್​ಸೈಟ್ uidai.gov.in ಇಲ್ಲಿಗೆ ಭೇಟಿ ನೀಡಿ
  • ಇಲ್ಲಿ ‘ಮೈ ಆಧಾರ್’ ಟ್ಯಾಬ್ ಕ್ಲಿಕ್ ಮಾಡಿ ಡ್ರಾಪ್ ಡೌನ್ ಮೆನುನಿಂದ ‘ಆಧಾರ್ ಸರ್ವಿಸಸ್’ ಆಯ್ಕೆ ಮಾಡಿ
  • ಆಧಾರ್ ಸರ್ವಿಸಸ್ ಸೆಕ್ಷನ್ ಅಡಿಯಲ್ಲಿ ‘ಚೆಕ್ ಆಧಾರ್ ಅಂಡ್ ಬ್ಯಾಂಕ್ ಅಕೌಂಟ್ ಲಿಂಕಿಂಗ್ ಸ್ಟೇಟಸ್’ ಮೇಲೆ ಕ್ಲಿಕ್ ಮಾಡಿ
  • ಈಗ ಹೊಸ ಪುಟ ತೆರೆದುಕೊಳ್ಳುತ್ತದೆ. ಇಲ್ಲಿ ಆಧಾರ್ ಸಂಖ್ಯೆ ಹಾಕಿ ಸೆಕ್ಯೂರಿಟಿ ಕೋಡ್ ಕೇಳಿದ್ದರೆ ಅದನ್ನು ಟೈಪ್ ಮಾಡಬೇಕು
  • ಓಟಿಪಿ ಸ್ವೀಕರಿಸಿ ಅದನ್ನು ಎಂಟ್ರಿ ಮಾಡಿ ಲಾಗಿನ್ ಆಗಬೇಕು.
  • ಈಗ ನಿಮ್ಮ ಆಧಾರ್ ಜೊತೆ ಯಾವ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆ ಎಂಬ ಮಾಹಿತಿ ಸಿಗುತ್ತದೆ.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ