AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜ್ಞಾನ, ತಂತ್ರಜ್ಞಾನ, ಗಣಿತ, ಎಂಜಿನಿಯರಿಂಗ್ ಕ್ಷೇತ್ರಕ್ಕೆ ಬನ್ನಿ: ಹುಡುಗಿಯರಿಗೆ ಅಂಬಾನಿ ಮಗಳ ಕರೆ

Isha Ambani at 'Girls in Information and Communications Technology Day India 2024': ಸೈನ್ಸ್, ಟೆಕ್ನಾಲಜಿ, ಎಂಜಿನಿಯರಿಂಗ್ ಮತ್ತು ಮ್ಯಾಥ್ಸ್ ಕ್ಷೇತ್ರಗಳಿಗೆ ಹೆಚ್ಚೆಚ್ಚು ಹುಡುಗಿಯರು ಪ್ರವೇಶಿಸಬೇಕು ಎಂದು ಮುಕೇಶ್ ಅಂಬಾನಿ ಪುತ್ರಿ ಇಶಾ ಅಂಬಾನಿ ಕರೆ ನೀಡಿದ್ದಾರೆ. ಟೆಕ್ ಕ್ಷೇತ್ರದಲ್ಲಿ ಮಹಿಳೆಯರ ಸಂಖ್ಯೆ ಶೇ. 36ರಷ್ಟಿದೆ. ಆದರೆ, ಎಕ್ಸಿಕ್ಯೂಟಿವ್ ಮಟ್ಟದ ಹುದ್ದೆಗಳಲ್ಲಿ ಮಹಿಳೆಯರ ಸಂಖ್ಯೆ ಶೇ. 7 ಮಾತ್ರವೇ ಇರುವುದು ಎಂದು ರಿಲಾಯನ್ಸ್ ಇಂಡಸ್ಟ್ರೀಸ್​ನ ನಿರ್ದೇಶಕರಲ್ಲೊಬ್ಬರಾದ ಅವರು ವಾಸ್ತವ ಬಿಚ್ಚಿಟ್ಟಿದ್ದಾರೆ.

ವಿಜ್ಞಾನ, ತಂತ್ರಜ್ಞಾನ, ಗಣಿತ, ಎಂಜಿನಿಯರಿಂಗ್ ಕ್ಷೇತ್ರಕ್ಕೆ ಬನ್ನಿ: ಹುಡುಗಿಯರಿಗೆ ಅಂಬಾನಿ ಮಗಳ ಕರೆ
ಇಶಾ ಅಂಬಾನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:May 15, 2024 | 6:17 PM

Share

ನವದೆಹಲಿ, ಮೇ 15: ಭಾರತ ಪ್ರಜ್ವಲಿಸಬೇಕಾದರೆ ಹೆಚ್ಚೆಚ್ಚು ಹುಡುಗಿಯರು ಸ್ಟೆಮ್ (STEM- ವಿಜ್ಞಾನ ತಂತ್ರಜ್ಞಾನ ಎಂಜಿನಿಯರಿಂಗ್, ಗಣಿತ) ವ್ಯಾಪ್ತಿಗೆ ಬರಬೇಕು. ತಂತ್ರಜ್ಞಾನ ವೃತ್ತಿ ಆಯ್ದುಕೊಳ್ಳಬೇಕು ಎಂದು ರಿಲಾಯನ್ಸ್ ಇಂಡಸ್ಟ್ರೀಸ್​ನ ನಿರ್ದೇಶಕಿ ಇಶಾ ಅಂಬಾನಿ (Isha Ambani) ಕರೆ ನೀಡಿದ್ದಾರೆ. ಗರ್ಲ್ಸ್ ಇನ್ ಇನ್ಫಾರ್ಮೇಶನ್ ಅಂಡ್ ಕಮ್ಯೂನಿಕೇಶನ್ಸ್ ಟೆಕ್ನಾಲಜಿ ಡೇ ಇಂಡಿಯಾ 2024 (Girls in ICT India) ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡಿದ್ದ ಇಶಾ ಅಂಬಾನಿ, ‘ನಮ್ಮ ಕನಸಿನ ಭಾರತವನ್ನು ನಿರ್ಮಿಸಲು ಹೊರಡುವುದಾದರೆ ತಂತ್ರಜ್ಞಾನವು ನಮಗೆ ಶಕ್ತಿಯಾಗಬೇಕು. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪುರುಷರು ಮತ್ತು ಮಹಿಳೆಯರು ಇಬ್ಬರೂ ಪೂರ್ಣವಾಗಿ ಕ್ಷಮತೆ ತೋರಬೇಕು. ಭವಿಷ್ಯದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲೇ ಹೆಚ್ಚಿನ ಉದ್ಯೋಗಸೃಷ್ಟಿ ಇರುತ್ತದೆ’ ಎಂದು ಕಿವಿ ಮಾತು ಹೇಳಿದ್ದಾರೆ.

ತಂತ್ರಜ್ಞಾನ ಉದ್ಯಮ ಸದಾ ಬದಲಾಗುತ್ತಿದ್ದರೂ ಉದ್ಯೋಗಿಗಳ ಪೈಕಿ ಮಹಿಳೆಯರ ಪ್ರಮಾಣ ಕಡಿಮೆಯೇ ಇದೆ. ಇದು ವಾಸ್ತವ. ಪುರುಷ ಮತ್ತು ಮಹಿಳಾ ಉದ್ಯೋಗಿಗಳ ಸಂಖ್ಯೆಯಲ್ಲಿರುವ ಅಂತರವು ಲಿಂಗ ತಾರತಮ್ಯತೆಯನ್ನು ಸೂಚಿಸುವುದಷ್ಟೇ ಅಲ್ಲ, ನಾವೀನ್ಯತೆಯ ಹಾದಿಗೆ ತಡೆಯೂ ಆಗಿದೆ. ಈ ಅಂತರವನ್ನು ಕಡಿಮೆ ಮಾಡುವುದು ಉದ್ಯಮಕ್ಕೆ ಮಾತ್ರವಲ್ಲ ಸಾಮಾಜಿಕ ಪ್ರಗತಿಊ ಅಗತ್ಯ ಎಂದು ಮುಕೇಶ್ ಅಂಬಾನಿ ಅವರ ಮಗಳೂ ಆದ ಇಶಾ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಮುಂಬೈನವರು ನೋಡಲು ಚಂದ, ಆದರೆ ಬೆಂಗಳೂರಿಗರು…? ನಿಖಿಲ್ ಕಾಮತ್​ಗೆ ಸಿಲಿಕಾನ್ ಸಿಟಿ ಯಾಕೆ ಇಷ್ಟ ಗೊತ್ತಾ? ಝೀರೋಧ ಮುಖ್ಯಸ್ಥರ ನೇರ ಮಾತು

ಉನ್ನತ ಮಟ್ಟದ ಹುದ್ದೆಗಳಲ್ಲಿ ಮಹಿಳೆಯರ ಸಂಖ್ಯೆ ವಿರಳ

ದೂರ ಸಂಪರ್ಕ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವರ್ಚುವಲ್ ಆಗಿ ಭಾಷಣ ಮಾಡಿದ ಇಶಾ ಅಂಬಾನಿ ಅವರು ಟೆಕ್ ಇಂಡಸ್ಟ್ರಿಯಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಕಡಿಮೆ ಇದ್ದರೂ ಉನ್ನತ ಮಟ್ಟದಲ್ಲಿ ಸಂಖ್ಯೆ ಇನ್ನೂ ಕಡಿಮೆ ಇದೆ ಎನ್ನುವ ಸಂಗತಿಯನ್ನು ಎತ್ತಿ ತೋರಿಸಿದ್ದಾರೆ.

ಇಶಾ ಅಂಬಾನಿ ಮಾತನಾಡಿರುವ ವಿಡಿಯೋ

ಭಾರತದ ತಂತ್ರಜ್ಞಾನ ಕ್ಷೇತ್ರದಲ್ಲಿ ಶೇ. 36ರಷ್ಟು ಮಹಿಳಾ ಉದ್ಯೋಗಿಗಳಿದ್ದಾರೆ. ಸಿಇಒ, ಸಿಎಫ್​ಒ ಇತ್ಯಾದಿ ಎಕ್ಸಿಕ್ಯೂಟಿವ್ ಮಟ್ಟದ ಹುದ್ದೆಗಳಲ್ಲಿ ಶೇ. 7ರಷ್ಟು ಮಾತ್ರವೇ ಮಹಿಳೆಯರು ಇರುವುದು. ನಿರ್ದೇಶಕರ ಮಟ್ಟದ ಹುದ್ದೆಗಳಲ್ಲಿ ಶೇ. 13, ಮಧ್ಯಮ ಮಟ್ಟದ ಮ್ಯಾನೇಜರ್ ಹುದ್ದೆಗಳಲ್ಲಿ ಶೇ. 17ರಷ್ಟು ಮಾತ್ರವೇ ಮಹಿಳಾ ಉದ್ಯೋಗಿಗಳಿದ್ದಾರೆ ಎಂದು ನಾಸ್​ಕಾಮ್ ದತ್ತಾಂಶ ಉಲ್ಲೇಖಿಸಿ ಇಶಾ ಅಂಬಾನಿ ಸಮಸ್ಯೆ ಮೇಲೆ ಬೆಳಕು ಚೆಲ್ಲಿದ್ದಾರೆ.

ಇದನ್ನೂ ಓದಿ: ಎಷ್ಟು ಅಂತ ಸಬ್ಸಿಡಿ ಕೊಡ್ತೀರಿ..! ಹಳೆಯ 28ಎನ್​ಎಂ ಚಿಪ್ ತಯಾರಿಸಿಕೊಂಡು ಏನ್ ಮಾಡ್ತೀರಿ?: ರಘುರಾಮ್ ರಾಜನ್

ನಾಯಕತ್ವ ವಿಚಾರದಲ್ಲಿ ಮತ್ತು ಪರಿವರ್ತನೆ ತರುವ ವಿಚಾರದಲ್ಲಿ ಮಹಿಳೆಯರು ಪುರುಷರಿಗಿಂತ ಕಡಿಮೆ ಇಲ್ಲ. ಆದರೂ ಕೂಡ ಮಹಿಳೆಯೊಬ್ಬಳು ಉನ್ನತ ಸ್ಥಾನಕ್ಕೆ ಏರುವ ಹಾದಿ ಪುರುಷನದಕ್ಕಿಂತ ಕಠಿಣವಾಗಿರುತ್ತದೆ. ನಾಯಕರಾಗಿ ಪುರುಷರಿಗಿಂತ ಮಹಿಳೆಯರೇ ಒಂದು ಮಟ್ಟ ಮೇಲೆ ಇರುತ್ತಾರೆ ಎಂಬುದು ತನ್ನ ವೈಯಕ್ತಿಕ ಭಾವನೆ. ಮಹಿಳೆಯರಲ್ಲಿರುವ ಕರುಣೆಯ ಸ್ವಭಾವವು ಅವರನ್ನು ಉತ್ತಮ ನಾಯಕರನ್ನಾಗಿ ಮಾಡುತ್ತದೆ ಎಂದು ಇಶಾ ಅಂಬಾನಿ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Wed, 15 May 24

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ