AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್-ಹಮಾಸ್ ಯುದ್ಧ; ದುಬಾರಿಯಾಗುತ್ತಾ ಚಿನ್ನ?; ಭಾರತದ ಷೇರುಪೇಟೆ ಮೇಲೇನು ಪರಿಣಾಮ?

Israel Hamas War Effects: ಇಸ್ರೇಲ್ ಮತ್ತು ಹಮಾಸ್ ಯುದ್ಧ ಜಾಗತಿಕ ಭೌಗೋಳಿಕ ರಾಜಕೀಯ ಬಿಕ್ಕಟ್ಟಾಗಿ ಪರಿಣಮಿಸಬಹುದು. ಷೇರುಮಾರುಕಟ್ಟೆಗಳಿಗೆ ಹಿನ್ನಡೆ ಆಗುವ ಸಾಧ್ಯತೆ ಇದೆ. ಬಹಳಷ್ಟು ಹೂಡಿಕೆದಾರರು ಚಿನ್ನ ಖರೀದಿಗೆ ಮುಗಿಬೀಳಬಹುದು. ಬಿಕ್ಕಟ್ಟು ಬಂದಾಗೆಲ್ಲಾ ಚಿನ್ನದ ಮೇಲಿನ ಹೂಡಿಕೆ ಹೆಚ್ಚುವುದನ್ನು ಗಮನಿಸಿರಬಹುದು. ಇದರ ಪರಿಣಾಮವಾಗಿ, ಕಳೆದೆರಡು ವಾರದಿಂದ ಕುಸಿಯುತ್ತಾ ಬರುತ್ತಿದ್ದ ಚಿನ್ನದ ಬೆಲೆ ಮತ್ತೆ ಏರುಗತಿಗೆ ಬರುವ ಸಾಧ್ಯತೆ ಇದೆ.

ಇಸ್ರೇಲ್-ಹಮಾಸ್ ಯುದ್ಧ; ದುಬಾರಿಯಾಗುತ್ತಾ ಚಿನ್ನ?; ಭಾರತದ ಷೇರುಪೇಟೆ ಮೇಲೇನು ಪರಿಣಾಮ?
ಷೇರುಮಾರುಕಟ್ಟೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 08, 2023 | 3:56 PM

Share

ರಷ್ಯಾ ಉಕ್ರೇನ್ ಯುದ್ಧದಿಂದ ಇಡೀ ಜಗತ್ತು ಬಾಧೆ ಪಡುತ್ತಿರುವುದು ಇನ್ನೂ ನಿಂತೇ ಇಲ್ಲ. ಈಗ ಮತ್ತೊಂದು ಭೀಕರ ಯುದ್ಧವನ್ನು ಈ ಜಗತ್ತು ನೋಡುತ್ತಿದೆ. ಇಸ್ರೇಲ್ ಮತ್ತು ಹಮಾಸ್ ಉಗ್ರರ ಮಧ್ಯೆ ಸುದೀರ್ಘ ಯುದ್ಧ (Israel and Hamas war) ನಡೆಯುವ ಸಾಧ್ಯತೆ ದಟ್ಟವಾಗಿದೆ. ಮೊದಲೇ ಆರ್ಥಿಕ ಹಿನ್ನಡೆಯಿಂದ ನಲುಗುತ್ತಿರುವ ಅನೇಕ ರಾಷ್ಟ್ರಗಳಿಗೆ ಈಗ ಈ ಬೆಳವಣಿಗೆ ಇನ್ನಷ್ಟು ಉತ್ಸಾಹ ತಗ್ಗಿಸಿದೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಸಮರದಿಂದ ಯಾವೆಲ್ಲಾ ತೊಂದರೆಗಳು ಆಗಬಹುದು, ಭಾರತಕ್ಕೆ ಏನು ಹಿನ್ನಡೆ ಆಗಬಹುದು ಎಂಬ ಬಗ್ಗೆ ಒಂದು ಸಂಕ್ಷಿಪ್ತ ನೋಟ ಇಲ್ಲಿದೆ…

ಇಸ್ರೇಲ್ ಹಮಾಸ್ ಯುದ್ಧದಿಂದ ಏನು ಪರಿಣಾಮ ಸಾಧ್ಯತೆ?

  • ಚಿನ್ನ, ಬೆಳ್ಳಿ ಬೆಲೆ ಏರಿಕೆ
  • ಡಾಲರ್ ಬಲವೃದ್ಧಿ
  • ರುಪಾಯಿ ಇನ್ನಷ್ಟು ದುರ್ಬಲ
  • ಫಾರೆಕ್ಸ್ ನಿಧಿ ಇನ್ನಷ್ಟು ಸಂಕುಚಿತ
  • ಭಾರತೀಯ ಷೇರುಪೇಟೆಗೆ ಹಿನ್ನಡೆ

ಇದನ್ನೂ ಓದಿ: ಬೆರಳೆಣಿಕೆಯ ಕಂಪನಿಗಳು ಭಾರತದ ಅಭಿವೃದ್ಧಿಯ ಹಣೆಬರಹ ಬರೆಯುವಂತಾಗಬಾರದು: ಉದಯ್ ಕೋಟಕ್

ಇಸ್ರೇಲ್ ಮತ್ತು ಹಮಾಸ್ ಯುದ್ಧ ಜಾಗತಿಕ ಭೌಗೋಳಿಕ ರಾಜಕೀಯ ಬಿಕ್ಕಟ್ಟಾಗಿ ಪರಿಣಮಿಸಬಹುದು. ಷೇರುಮಾರುಕಟ್ಟೆಗಳಿಗೆ ಹಿನ್ನಡೆ ಆಗುವ ಸಾಧ್ಯತೆ ಇದೆ. ಬಹಳಷ್ಟು ಹೂಡಿಕೆದಾರರು ಚಿನ್ನ ಖರೀದಿಗೆ ಮುಗಿಬೀಳಬಹುದು. ಬಿಕ್ಕಟ್ಟು ಬಂದಾಗೆಲ್ಲಾ ಚಿನ್ನದ ಮೇಲಿನ ಹೂಡಿಕೆ ಹೆಚ್ಚುವುದನ್ನು ಗಮನಿಸಿರಬಹುದು. ಇದರ ಪರಿಣಾಮವಾಗಿ, ಕಳೆದೆರಡು ವಾರದಿಂದ ಕುಸಿಯುತ್ತಾ ಬರುತ್ತಿದ್ದ ಚಿನ್ನದ ಬೆಲೆ ಮತ್ತೆ ಏರುಗತಿಗೆ ಬರುವ ಸಾಧ್ಯತೆ ಇದೆ.

ಹಾಗೆಯೇ, ಅಮೆರಿಕದ ಡಾಲರ್ ಕರೆನ್ಸಿಗೂ ಬೇಡಿಕೆ ಬರಲಿದೆ. ಚಿನ್ನದಂತೆ ಡಾಲರ್ ಕೂಡ ಬಿಕ್ಕಟ್ಟಿನ ಸಂದರ್ಭದಲ್ಲಿ ಹೆಚ್ಚು ಬೇಡಿಕೆ ಪಡೆಯುತ್ತದೆ. ಹೀಗಾಗಿ, ಭಾರತದ ರುಪಾಯಿ ಕರೆನ್ಸಿ ಮತ್ತಷ್ಟು ಹಿನ್ನಡೆ ಕಾಣಬಹುದು. ಈಗಾಗಲೇ ಡಾಲರ್ ಎದುರು ಸತತವಾಗಿ ಇಳಿಮುಖವಾಗುತ್ತಿದ್ದ ರುಪಾಯಿಗೆ ಕೆಟ್ಟಕಾಲ ಇನ್ನಷ್ಟು ಹೆಚ್ಚಾಗಬಹುದು. ರುಪಾಯಿ ಕುಸಿತ ತಡೆಗಟ್ಟಲು ಫಾರೆಕ್ಸ್ ನಿಧಿಯಿಂದ ಒಂದಷ್ಟು ಡಾಲರ್ ಅನ್ನು ಆರ್​ಬಿಐ ಮಾರಾಟ ಮಾಡಬಹುದು.

ಇದನ್ನೂ ಓದಿ: ಧೀರೂಭಾಯ್ ಅಂಬಾನಿ ಮೊಮ್ಮಗ ವಿಕ್ರಮ್ ಸಲ್ಗಾಂವ್ಕರ್; ಮುಕೇಶ್ ಅಂಬಾನಿ ಮಕ್ಕಳಷ್ಟು ಪ್ರಚಾರ ಗಿಟ್ಟಿಸದ ವಿಕ್ರಮ್ ಏನ್ ಮಾಡ್ತಾರೆ?

ಇನ್ನು, ಜಾಗತಿಕ ರಾಜಕೀಯ ಅನಿಶ್ಚಿತತೆಯಿಂದಾಗಿ ಆರ್ಥಿಕತೆಯ ಬಗ್ಗೆಯೂ ಸಂಶಯ ಬಂದು ಹೂಡಿಕೆದಾರರು ಷೇರುಗಳನ್ನು ಬಿಟ್ಟು ಚಿನ್ನ, ಡಾಲರ್ ಬೆಂಬತ್ತಿ ಹೋಗಬಹುದು. ಇದರಿಂದಾಗಿ ಭಾರತದ ಷೇರು ಮಾರುಕಟ್ಟೆ ಹಿನ್ನಡೆ ಕಂಡರೂ ಕಂಡೀತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ