AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ರಿಟರ್ನ್ಸ್ ವೇಳೆ ಸುಳ್ಳು ಮಾಹಿತಿ ಕೊಟ್ಟು ತೆರಿಗೆ ವಂಚಿಸುವವರನ್ನು ಜಾಲಾಡುತ್ತಿದೆ ಇನ್ಕಮ್ ಟ್ಯಾಕ್ಸ್ ಇಲಾಖೆ

Income Tax department crackdown on bogus tax claims: ಇನ್ಕಮ್ ಟ್ಯಾಕ್ಸ್ ವ್ಯವಸ್ಥೆಯಲ್ಲಿ ತೆರಿಗೆ ಪಾವತಿದಾರರಿಗೆ ನೀಡಲಾಗಿರುವ ವಿವಿಧ ಟ್ಯಾಕ್ಸ್ ಬೆನಿಫಿಟ್​ಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇಂಥ ಪ್ರಕರಣಗಳನ್ನು ಗುರುತಿಸಲು ಆದಾಯ ತೆರಿಗೆ ಇಲಾಖೆ ದೇಶಾದ್ಯಂತ ಪರಿಶೀಲನಾ ಕಾರ್ಯಾಚರಣೆ ನಡೆಸಿದೆ. ಅತ್ಯಾಧುನಿಕ ಎಐ ಟೆಕ್ನಾಲಜಿ, ಗ್ರೌಂಡ್ ಲೆವೆಲ್ ಇಂಟೆಲಿಜೆನ್ಸ್ ಇತ್ಯಾದಿ ಮೂಲಗಳಿಂದ ಸಂಗ್ರಹಿಸಿದ ಮಾಹಿತಿಯನ್ನು ಬಳಸಿ ಬಲೆ ಬೀಸಿದೆ.

ಐಟಿ ರಿಟರ್ನ್ಸ್ ವೇಳೆ ಸುಳ್ಳು ಮಾಹಿತಿ ಕೊಟ್ಟು ತೆರಿಗೆ ವಂಚಿಸುವವರನ್ನು ಜಾಲಾಡುತ್ತಿದೆ ಇನ್ಕಮ್ ಟ್ಯಾಕ್ಸ್ ಇಲಾಖೆ
ಆದಾಯ ತೆರಿಗೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 15, 2025 | 6:48 PM

Share

ನವದೆಹಲಿ, ಜುಲೈ 15: ಆದಾಯ ತೆರಿಗೆಯಲ್ಲಿ (Income Tax) ಲಭ್ಯ ಇರುವ ವಿವಿಧ ಡಿಡಕ್ಷನ್, ಎಕ್ಸೆಂಪ್ಷನ್ ಇತ್ಯಾದಿ ಸೌಲಭ್ಯವನ್ನು ದುರ್ಬಳಕೆ ಮಾಡಿಕೊಂಡು ತೆರಿಗೆ ವಂಚಿಸಲಾಗುತ್ತಿರುವ ಪ್ರಕರಣಗಳನ್ನು ಐಟಿ ಇಲಾಖೆ ಜಾಲಾಡುತ್ತಿದೆ. ವೃತ್ತಿಪರ ಮಧ್ಯವರ್ತಿಗಳೊಂದಿಗೆ ಶಾಮೀಲಾಗಿ ಟ್ಯಾಕ್ಸ್ ಬೆನಿಫಿಟ್​ಗಳ ದುರ್ಬಳಕೆ ಆಗುತ್ತಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ದೊಡ್ಡ ಮಟ್ಟದಲ್ಲಿ ಪರಿಶೀಲನಾ ಕಾರ್ಯಾಚರಣೆ ಆರಂಭಿಸಿದೆ ಎಂದು ಹಣಕಾಸು ಸಚಿವಾಲಯ ಹೇಳಿಕೆ ಮಾಡಿದೆ.

ಹೊಸ ಎಐ ಟೂಲ್​ಗಳು, ತಳಮಟ್ಟದ ಗುಪ್ತಚರ ವ್ಯವಸ್ಥೆ, ಥರ್ಡ್ ಪಾರ್ಟಿ ಮೂಲಗಳು ಹೀಗೆ ವಿವಿಧೆಡೆಯಿಂದ ಪಡೆಯಲಾದ ಹಣಕಾಸು ಮಾಹಿತಿಯನ್ನು ಆಧರಿಸಿ ಐಟಿ ಇಲಾಖೆ ತನ್ನ ಕೆಂಪೇನ್ ನಡೆಸಿದೆ. ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಗುಜರಾತ್, ಪಂಜಾಬ್, ಮಧ್ಯಪ್ರದೇಶ ರಾಜ್ಯಗಳಲ್ಲಿ ಇತ್ತೀಚೆಗೆ ನಡೆಸಲಾದ ರೇಡ್​ಗಳಲ್ಲಿ ಐಟಿ ಇಲಾಖೆಗೆ ಈ ಸಂಬಂಧ ಕೆಲ ಪ್ರಮುಖ ಪುರಾವೆಗಳು ಲಭಿಸಿವೆ ಎನ್ನಲಾಗಿದೆ.

ಇದನ್ನೂ ಓದಿ
Image
ಇಪಿಎಫ್ ಹಣಕ್ಕೆ ಟ್ಯಾಕ್ಸ್ ಕಟ್ಟಬೇಕಾ?
Image
ಸಿಐಐ 376ಕ್ಕೆ ಏರಿಕೆ; ತಗ್ಗಲಿದೆ ಟ್ಯಾಕ್ಸ್ ಹೊರೆ
Image
ತಡವಾಗಿ ಐಟಿಆರ್ ಸಲ್ಲಿಸಿದರೆ ಎಷ್ಟು ಬಡ್ಡಿ, ದಂಡ?
Image
ಐಟಿ ರೀಫಂಡ್ ಬರದೇ ಹೋದರೆ ಹೀಗೆ ಮಾಡಿ

ಇದನ್ನೂ ಓದಿ: ಇಪಿಎಫ್ ಠೇವಣಿ ಮತ್ತು ಬಡ್ಡಿಗೆ ಟ್ಯಾಕ್ಸ್ ಇರುತ್ತಾ? ಎಷ್ಟು ಟಿಡಿಎಸ್ ಕಡಿತವಾಗುತ್ತೆ? ಇಲ್ಲಿದೆ ಡೀಟೇಲ್ಸ್

ಐಟಿ ಇಲಾಖೆ ಅಡಿಯಲ್ಲಿ ಬುರವ 10(13ಎ), 80ಜಿಜಿಸಿ, 80ಇ, 80ಡಿ, 80ಇಇ, 80ಇಇಬಿ, 80ಜಿ, 80ಡಿಡಿಬಿ ಸೆಕ್ಷನ್​ಗಳಲ್ಲಿ ಸಿಗುವ ಡಿಡಕ್ಷನ್​ಗಳನ್ನು ಸಾಕಷ್ಟು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ತೆರಿಗೆ ಪಾವತಿದಾರರಿಗೆ ಪೂರ್ಣ ರೀಫಂಡ್ ಕೊಡಿಸುವುದಾಗಿ ಆಮಿಷವೊಡ್ಡಿ ಕಮಿಷನ್ ಪಡೆದು ಮಧ್ಯವರ್ತಿಗಳು ಈ ವಂಚನೆಯ ಕೆಲಸ ಮಾಡುತ್ತಿದ್ದಾರೆ. ಇವರುಗಳು ತಾತ್ಕಾಲಿಕ ಇಮೇಲ್ ಐಡಿಗಳನ್ನು ರಚಿಸಿ ಅವುಗಳ ಮೂಲಕ ಬಲ್ಕ್ ರಿಟರ್ನ್ಸ್ ಫೈಲ್ ಮಾಡುತ್ತಾರೆ. ಬಳಿಕ ಈ ಇಮೇಲ್ ಐಡಿಗಳನ್ನು ತ್ಯಜಿಸುತ್ತಾರೆ. ಇದರಿಂದಾಗಿ, ಐಟಿ ಇಲಾಖೆಯಿಂದ ಹೋಗುವ ನೋಟೀಸ್​ಗಳು ಯಾರ ಗಮನಕ್ಕೂ ಬರುವುದಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಹಣಕಾಸು ಸಚಿವಾಲಯವು ವಿವರಿಸಿದೆ.

ಆದಾಯ ತೆರಿಗೆಯ ಎಕ್ಸ್ ಪೋಸ್ಟ್

ಐಟಿ ರಿಟರ್ನ್ಸ್ ಅನ್ನು ತೆರಿಗೆ ಪಾವತಿದಾರರು ಸ್ವಯಂ ಆಗಿ ಮಾಡುವ ತೆರಿಗೆ ಘೋಷಣೆ. ಆದರೂ ಕೂಡ ಇಲಾಖೆಯು ಕಳೆದ ಒಂದು ವರ್ಷದಿಂದ ತೆರಿಗೆ ಪಾವತಿದಾರರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಸುತ್ತಿದೆ. ತಪ್ಪಾಗಿ ಐಟಿಆರ್ ಸಲ್ಲಿಸಿದವರನ್ನು ಎಸ್ಸೆಮ್ಮೆಸ್, ಇಮೇಲ್ ಇತ್ಯಾದಿ ಮೂಲಕ ಸಂಪರ್ಕಿಸಿ ಪರಿಷ್ಕೃತ ರಿಟರ್ನ್ ಸಲ್ಲಿಸಿ, ಸರಿಯಾದ ಪ್ರಮಾಣದ ತೆರಿಗೆ ಪಾವತಿಸುವಂತೆ ತಿಳಿಸುವ ಕೆಲಸ ಮಾಡುತ್ತಿದೆ.

ಇದನ್ನೂ ಓದಿ: ಜುಲೈ 31ರ ಬಳಿಕ ಐಟಿ ರಿಟರ್ನ್ಸ್ ಸಲ್ಲಿಸಿದರೆ ಬಡ್ಡಿ, ದಂಡ ಸೇರಿಸಿ ಕಟ್ಟಬೇಕಾಗುತ್ತದಾ? ಇಲ್ಲಿದೆ ಮಾಹಿತಿ

ಒಂದು ಅಂದಾಜು ಪ್ರಕಾರ, ಕಳೆದ ನಾಲ್ಕು ತಿಂಗಳಲ್ಲಿ ಈ ಅಭಿಯಾನದ ಪರಿಣಾಮವಾಗಿ ದೇಶಾದ್ಯಂತ 40,000 ತೆರಿಗೆ ಪಾವತಿದಾರರು ತಮ್ಮ ಐಟಿಆರ್ ಅನ್ನು ಅಪ್​ಡೇಟ್ ಮಾಡಿದ್ದಾರೆ. 1,045 ಕೋಟಿ ರೂ ಮೊತ್ತಕ್ಕೆ ತಪ್ಪಾಗಿ ಮಾಡಿದ್ದ ಕ್ಲೇಮ್ ಅನ್ನು ವಿತ್​ಡ್ರಾ ಮಾಡಿದ್ದಾರೆ. ಆದರೂ ಕೂಡ ಬಹಳಷ್ಟು ಮಂದಿ ಸ್ಪಂದಿಸಿಲ್ಲ ಎಂಬುದು ಇಲಾಖೆ ಹೇಳಿಕೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:47 pm, Tue, 15 July 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ