AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ITR Filing Deadline: ಜುಲೈ 31ರೊಳಗೆ ಐಟಿ ರಿಟರ್ನ್ಸ್ ಸಲ್ಲಿಸದಿದ್ದರೆ ಏನಾಗುತ್ತೆ?

Consequences of missing ITR filing deadline: 2023-24ರ ಹಣಕಾಸು ವರ್ಷದ ಆದಾಯ ತೆರಿಗೆಗೆ ರಿಟರ್ನ್ಸ್ ಸಲ್ಲಿಸಲು ಜುಲೈ 31ರವರೆಗೂ ಕಾಲಾವಕಾಶ ಇದೆ. ಈ ಡೆಡ್​ಲೈನ್​ನೊಳಗೆ ಕಟ್ಟಡಿದ್ದರೆ ಕೆಲ ಗಂಭೀರ ಪರಿಣಾಮ ಎದುರಿಸಬೇಕಾಗಬಹುದು. 5,000 ರೂವರೆಗೆ ದಂಡ, ಬಾಕಿ ಮೊತ್ತಕ್ಕೆ ಬಡ್ಡಿ ಹೇರಿಕೆ ಇತ್ಯಾದಿ ಕ್ರಮಗಳು ಎದುರಾಗಬಹುದು.

ITR Filing Deadline: ಜುಲೈ 31ರೊಳಗೆ ಐಟಿ ರಿಟರ್ನ್ಸ್ ಸಲ್ಲಿಸದಿದ್ದರೆ ಏನಾಗುತ್ತೆ?
ಐಟಿ ರಿಟರ್ನ್ಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 29, 2024 | 12:50 PM

Share

ನವದೆಹಲಿ, ಜುಲೈ 29: ಹಿಂದಿನ ಹಣಕಾಸು ವರ್ಷದ ಆದಾಯ ತೆರಿಗೆಯ ರಿಟರ್ನ್ಸ್ ಅನ್ನು ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಒಂದು ವೇಳೆ ಗಡುವಿನೊಳಗೆ ಐಟಿಆರ್ ಸಲ್ಲಿಸದಿದ್ದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜುಲೈ 31ರ ಗಡುವು ತಪ್ಪಿ ಹೋದರೂ ಡಿಸೆಂಬರ್ 31ರವರೆಗೆ ಫೈಲಿಂಗ್ ಮಾಡುವ ಅವಕಾಶ ಇದೆ. ಆದರೆ, ಕೆಲ ಅನನುಕೂಲಗಳು ಆಗಬಹುದು. ದಂಡ ಪಾವತಿಸುವುದರಿಂದ ಹಿಡಿದು, ಡೀಫಾಲ್ಟ್ ಟ್ಯಾಕ್ಸ್ ರೆಜಿಮೆವರೆಗೆ ಕ್ರಮಗಳಿಗೆ ನೀವು ಒಳಗಾಗಬೇಕಾಗುತ್ತದೆ.

ಹಳೆಯ ಟ್ಯಾಕ್ಸ್ ರೆಜಿಮೆ ಬಳಸಲು ಆಗಲ್ಲ

ನೀವು ಗಡುವಿನೊಳಗೆ ಐಟಿ ರಿಟರ್ನ್ಸ್ ಸಲ್ಲಿಸದೇ ಇದ್ದರೆ, ಅಥವಾ ಗಡುವಿನ ಬಳಿಕ ರಿಟರ್ನ್ಸ್ ಫೈಲ್ ಮಾಡಿದರೆ ಹಳೆಯ ಟ್ಯಾಕ್ಸ್ ರೆಜಿಮೆಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಇರುವುದಿಲ್ಲ. ಡೀಫಾಲ್ಟ್ ಆಗಿ ಹೊಸ ಟ್ಯಾಕ್ಸ್ ರೆಜಿಮೆಯೇ ಇರುತ್ತದೆ. ನೀವು ಸಾಕಷ್ಟು ಡಿಡಕ್ಷನ್ಸ್ ಇರುವ ಓಲ್ಡ್ ಟ್ಯಾಕ್ಸ್ ರೆಜಿಮೆಯನ್ನು ಐಟಿಆರ್ ಸಲ್ಲಿಕೆಗೆ ಬಳಸುತ್ತಿದ್ದೇ ಆದಲ್ಲಿ ಖಂಡಿತವಾಗಿ ಜುಲೈ 31ರ ಡೆಡ್​ಲೈನ್ ತಪ್ಪಿಸದಿರಿ.

ಇದನ್ನೂ ಓದಿ: ಐಟಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೆಯ ದಿನ; ಡೆಡ್​ಲೈನ್ ವಿಸ್ತರಣೆ ಸಾಧ್ಯತೆ ಕಡಿಮೆ

ಐದು ಸಾವಿರ ರೂವರೆಗೆ ತಡಪಾವತಿ ಶುಲ್ಕ

ಜುಲೈ 31ರ ಡೆಡ್​ಲೈನ್ ಮಿಸ್ ಆದರೆ ಡಿಸೆಂಬರ್ 31ರವರೆಗೂ ಐಟಿಆರ್ ಸಲ್ಲಿಕೆಗೆ ಕಾಲಾವಕಾಶ ಇರುತ್ತದೆ. ಆದರೆ, ಲೇಟ್ ಪೇಮೆಂಟ್ ಫೀ ಕಟ್ಟಬೇಕು. ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 234ಎಫ್ ಅಡಿಯಲ್ಲಿ ತಡವಾಗಿ ರಿಟರ್ನ್ ಫೈಲ್ ಮಾಡಿದರೆ 5,000 ರೂ ಶುಲ್ಕ ವಸೂಲಿ ಮಾಡಬಹುದು.

ನಿಮ್ಮ ಆದಾಯ ವರ್ಷಕ್ಕೆ 5 ಲಕ್ಷ ರೂ ಒಳಗಿದ್ದರೆ ತಡ ಪಾವತಿ ಶುಲ್ಕ 1,000 ರೂ ಇರುತ್ತದೆ. ಐದು ಲಕ್ಷ ರೂಗಿಂತ ಮೇಲಿದ್ದರೆ ಹೆಚ್ಚಿನ 5,000 ರೂವರೆಗೆ ದಂಡ ಹಾಕಬಹುದು.

ಅಲ್ಲದೇ, ನಿಮ್ಮ ತೆರಿಗೆ ಪಾವತಿ ಬಾಕಿ ಉಳಿಸಿಕೊಂಡಿರುವ ಮೊತ್ತಕ್ಕೆ ತಿಂಗಳಿಗೆ ಶೇ. 1ರಂತೆ ಬಡ್ಡಿಯನ್ನೂ ಹಾಕಲಾಗುತ್ತದೆ. ನೀವು ತಡ ಮಾಡಿದಷ್ಟೂ ಬಡ್ಡಿಯೂ ಏರುತ್ತಾ ಹೋಗುತ್ತದೆ. ಆದರೆ, ನಿಮಗೆ ವಿಧಿಸಲಾಗುವ ಬಡ್ಡಿ, ದಂಡ ಇತ್ಯಾದಿ ಮೊತ್ತವು ನಿಮ್ಮ ತೆರಿಗೆ ಬಾಕಿ ಹಣಕ್ಕಿಂತ ಹೆಚ್ಚಿರುವುದಿಲ್ಲ.

ಇದನ್ನೂ ಓದಿ: PM Surya Ghar Yojana: ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಪಿಎಂ ಸೂರ್ಯಘರ್ ಯೋಜನೆಯ ಪೂರ್ಣ ವಿವರ

ಹಣಕಾಸು ವಹಿವಾಟು ನಷ್ಟ ವರ್ಗಾಯಿಸಲು ಆಗುವುದಿಲ್ಲ…

ಷೇರು, ಸೈಟು ಇತ್ಯಾದಿ ಮಾರಾಟದಿಂದ ಬಂದ ಲಾಭವನ್ನು ಕ್ಯಾಪಿಟಲ್ ಗೇನ್ ಎನ್ನುತ್ತಾರೆ. ಇದಕ್ಕೆ ಕ್ಯಾಪಿಟಲ್ ಗೇನ್ ಟ್ಯಾಕ್ಸ್ ಇರುತ್ತದೆ. ಹಾಗೆಯೇ, ಮೇಲಿನ ವಹಿವಾಟುಗಳಲ್ಲಿ ನಷ್ಟವಾದರೆ ಕ್ಯಾಪಿಟಲ್ ಲಾಸ್ ಎನ್ನುತ್ತಾರೆ. ನೀವು ಗಳಿಸಿದ ಲಾಭಕ್ಕೆ ಈ ನಷ್ಟವನ್ನು ಕಳೆದು, ಉಳಿದ ಮೊತ್ತಕ್ಕೆ ಮಾತ್ರ ತೆರಿಗೆ ಪಾವತಿಸಬಹುದು. ನೀವು ತಡವಾಗಿ ಐಟಿಆರ್ ಸಲ್ಲಿಸಿದರೆ ಈ ಕ್ಯಾಪಿಟಲ್ ಲಾಸ್ ಅನ್ನು ಮುಂದಿನ ಫೈಲಿಂಗ್​ಗೆ ಕ್ಯಾರಿ ಫಾರ್ವರ್ಡ್ ಮಾಡಲು ಆಗುವುದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!