ಐಟಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೆಯ ದಿನ; ಡೆಡ್​ಲೈನ್ ವಿಸ್ತರಣೆ ಸಾಧ್ಯತೆ ಕಡಿಮೆ

IT returns filing, deadline update: ಐಟಿ ರಿಟರ್ನ್ಸ್ ಫೈಲ್ ಮಾಡಲು ಜುಲೈ 31ಕ್ಕೆ ಡೆಡ್​ಲೈನ್ ಫಿಕ್ಸ್ ಮಾಡಲಾಗಿದೆ. ಯಾವುದೇ ದಂಡ ಇಲ್ಲದೇ ನೀವು ಸಲ್ಲಿಸಬಹುದು. ಜುಲೈ 31ರ ಬಳಿಕ ಪಾವತಿಸಿದರೆ ತಡ ಪಾವತಿ ಶುಲ್ಕ ಅಥವಾ ಲೇಟ್ ಫೀ ಕಟ್ಟಡಬೇಕಾಗುತ್ತದೆ. ಕಳೆದ ವರ್ಷ ಈ ಡೆಡ್​ಲೈನ್ ಅನ್ನು ವಿಸ್ತರಿಸಿರಲಿಲ್ಲ. ಈ ಬಾರಿಯೂ ಜುಲೈ 31ರ ಈ ಗಡುವು ವಿಸ್ತರಣೆಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಐಟಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೆಯ ದಿನ; ಡೆಡ್​ಲೈನ್ ವಿಸ್ತರಣೆ ಸಾಧ್ಯತೆ ಕಡಿಮೆ
ಆದಾಯ ತೆರಿಗೆ ರಿಟರ್ನ್ಸ್
Follow us
|

Updated on: Jul 28, 2024 | 5:49 PM

ನವದೆಹಲಿ, ಜುಲೈ 28: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31ರವರೆಗೆ ಕಾಲಾವಕಾಶ ಕೊಡಲಾಗಿದೆ. ಈ ಡೆಡ್​ಲೈನ್ ವಿಸ್ತರಿಸಬಹುದು ಎಂದು ನೀವು ಇನ್ನೂ ಐಟಿಆರ್ ಸಲ್ಲಿಸದೇ ಹೋಗಿದ್ದರೆ ಕಷ್ಟವಾದೀತು. ಕಳೆದ ವರ್ಷದಂತೆ ಈ ಬಾರಿಯೂ ಡೆಡ್​ಲೈನ್ ವಿಸ್ತರಿಸುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಹಣಕಾಸು ಸಚಿವಾಲಯವಾಗಲೀ, ಅಥವಾ ಆದಾಯ ತೆರಿಗೆ ಇಲಾಖೆಯಾಗಲೀ ಅಧಿಕೃತವಾಗಿ ಏನನ್ನೂ ತಿಳಿಸಿಲ್ಲ. ಒಂದು ವೇಳೆ ಐಟಿಆರ್ ಸಲ್ಲಿಕೆಗೆ ಗಡುವನ್ನು ಹೆಚ್ಚಿಸುವುದೇ ಆದಲ್ಲಿ ಸಾಮಾನ್ಯವಾಗಿ ಜುಲೈ 30 ಅಥವಾ 31ರಂದು ಘೋಷಿಸಲಾಗುತ್ತದೆ.

ಕಳೆದ ವರ್ಷ ಜುಲೈ 25ಕ್ಕೆ ಐಟಿಆರ್ ಸಲ್ಲಿಸಿದವರ ಸಂಖ್ಯೆ 4 ಕೋಟಿ ದಾಟಿತ್ತು. ಈ ವರ್ಷ ಜುಲೈ 22ಕ್ಕೆಯೇ ಆ ಸಂಖ್ಯೆ ದಾಟಿದೆ. ಕಳೆದ ವರ್ಷ ಜುಲೈ 31ರ ಡೆಡ್​ಲೈನ್​ನೊಳಗೆ 6.77 ತೆರಿಗೆ ಪಾವತಿದಾರರು ಐಟಿ ರಿಟರ್ನ್ಸ್ ಸಲ್ಲಿಸಿದ್ದರು. ಈ ವರ್ಷ ಐದು ಕೋಟಿ ಜನರು ಈಗಾಗಲೇ ರಿಟರ್ನ್ಸ್ ಫೈಲ್ ಮಾಡಿದ್ದಾರೆ. ಜುಲೈ ಅಂತ್ಯದೊಳಗೆ ಐಟಿಆರ್​​ಗಳ ಸಂಖ್ಯೆ 7 ಕೋಟಿ ದಾಟುವ ನಿರೀಕ್ಷೆ ಇದೆ.

ಜುಲೈ 31ರ ಬಳಿಕ ಐಟಿಆರ್ ಸಲ್ಲಿಸಲು ಆಗಲ್ಲವಾ?

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31ರವರೆಗೆ ಕಾಲಾವಕಾಶ ಕೊಡಲಾಗಿದೆ. ಅದಾದ ಬಳಿಕವೂ ಸಲ್ಲಿಸಬಹುದು, ಆದರೆ, ದಂಡ ತೆರಬೇಕಾಗುತ್ತದೆ. ಲೇಟ್ ಫೀ ಎಂದು ನಿರ್ದಿಷ್ಟ ಮೊತ್ತದ ಶುಲ್ಕ ಕಟ್ಟಿಸಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ದೇಶ ಬಿಟ್ಟುಹೋಗುವವರಿಗೆ ಟ್ಯಾಕ್ಸ್ ಕ್ಲಿಯರೆನ್ಸ್ ನಿಯಮ; ಇದು ಎಲ್ಲರಿಗೂ ಕಡ್ಡಾಯವಲ್ಲ ಎಂದ ಸಿಬಿಡಿಟಿ

ಈ ರೀತಿ ತಡವಾಗಿ ಕಟ್ಟಲೂ ಡಿಸೆಂಬರ್ 31ರವರೆಗೆ ಅವಕಾಶ ಇದೆ. ಈ ಡಿಸೆಂಬರ್ 31ರ ಗಡುವು ಮೀರಿ ಹೋದರೆ ಆದಾಯ ತೆರಿಗೆ ಸೆಕ್ಷನ್ 234ಎ ಮತ್ತು 234ಬಿ ಅಡಿಯಲ್ಲಿ ತಡ ಪಾವತಿ ಶುಲ್ಕದ ಜೊತೆಗೆ ಬಾಕಿ ಮೊತ್ತವನ್ನು ಬಡ್ಡಿ ಸಮೇತ ಕಟ್ಟಬೇಕಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ