AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೆಯ ದಿನ; ಡೆಡ್​ಲೈನ್ ವಿಸ್ತರಣೆ ಸಾಧ್ಯತೆ ಕಡಿಮೆ

IT returns filing, deadline update: ಐಟಿ ರಿಟರ್ನ್ಸ್ ಫೈಲ್ ಮಾಡಲು ಜುಲೈ 31ಕ್ಕೆ ಡೆಡ್​ಲೈನ್ ಫಿಕ್ಸ್ ಮಾಡಲಾಗಿದೆ. ಯಾವುದೇ ದಂಡ ಇಲ್ಲದೇ ನೀವು ಸಲ್ಲಿಸಬಹುದು. ಜುಲೈ 31ರ ಬಳಿಕ ಪಾವತಿಸಿದರೆ ತಡ ಪಾವತಿ ಶುಲ್ಕ ಅಥವಾ ಲೇಟ್ ಫೀ ಕಟ್ಟಡಬೇಕಾಗುತ್ತದೆ. ಕಳೆದ ವರ್ಷ ಈ ಡೆಡ್​ಲೈನ್ ಅನ್ನು ವಿಸ್ತರಿಸಿರಲಿಲ್ಲ. ಈ ಬಾರಿಯೂ ಜುಲೈ 31ರ ಈ ಗಡುವು ವಿಸ್ತರಣೆಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಐಟಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೆಯ ದಿನ; ಡೆಡ್​ಲೈನ್ ವಿಸ್ತರಣೆ ಸಾಧ್ಯತೆ ಕಡಿಮೆ
ಆದಾಯ ತೆರಿಗೆ ರಿಟರ್ನ್ಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 28, 2024 | 5:49 PM

Share

ನವದೆಹಲಿ, ಜುಲೈ 28: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31ರವರೆಗೆ ಕಾಲಾವಕಾಶ ಕೊಡಲಾಗಿದೆ. ಈ ಡೆಡ್​ಲೈನ್ ವಿಸ್ತರಿಸಬಹುದು ಎಂದು ನೀವು ಇನ್ನೂ ಐಟಿಆರ್ ಸಲ್ಲಿಸದೇ ಹೋಗಿದ್ದರೆ ಕಷ್ಟವಾದೀತು. ಕಳೆದ ವರ್ಷದಂತೆ ಈ ಬಾರಿಯೂ ಡೆಡ್​ಲೈನ್ ವಿಸ್ತರಿಸುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಹಣಕಾಸು ಸಚಿವಾಲಯವಾಗಲೀ, ಅಥವಾ ಆದಾಯ ತೆರಿಗೆ ಇಲಾಖೆಯಾಗಲೀ ಅಧಿಕೃತವಾಗಿ ಏನನ್ನೂ ತಿಳಿಸಿಲ್ಲ. ಒಂದು ವೇಳೆ ಐಟಿಆರ್ ಸಲ್ಲಿಕೆಗೆ ಗಡುವನ್ನು ಹೆಚ್ಚಿಸುವುದೇ ಆದಲ್ಲಿ ಸಾಮಾನ್ಯವಾಗಿ ಜುಲೈ 30 ಅಥವಾ 31ರಂದು ಘೋಷಿಸಲಾಗುತ್ತದೆ.

ಕಳೆದ ವರ್ಷ ಜುಲೈ 25ಕ್ಕೆ ಐಟಿಆರ್ ಸಲ್ಲಿಸಿದವರ ಸಂಖ್ಯೆ 4 ಕೋಟಿ ದಾಟಿತ್ತು. ಈ ವರ್ಷ ಜುಲೈ 22ಕ್ಕೆಯೇ ಆ ಸಂಖ್ಯೆ ದಾಟಿದೆ. ಕಳೆದ ವರ್ಷ ಜುಲೈ 31ರ ಡೆಡ್​ಲೈನ್​ನೊಳಗೆ 6.77 ತೆರಿಗೆ ಪಾವತಿದಾರರು ಐಟಿ ರಿಟರ್ನ್ಸ್ ಸಲ್ಲಿಸಿದ್ದರು. ಈ ವರ್ಷ ಐದು ಕೋಟಿ ಜನರು ಈಗಾಗಲೇ ರಿಟರ್ನ್ಸ್ ಫೈಲ್ ಮಾಡಿದ್ದಾರೆ. ಜುಲೈ ಅಂತ್ಯದೊಳಗೆ ಐಟಿಆರ್​​ಗಳ ಸಂಖ್ಯೆ 7 ಕೋಟಿ ದಾಟುವ ನಿರೀಕ್ಷೆ ಇದೆ.

ಜುಲೈ 31ರ ಬಳಿಕ ಐಟಿಆರ್ ಸಲ್ಲಿಸಲು ಆಗಲ್ಲವಾ?

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31ರವರೆಗೆ ಕಾಲಾವಕಾಶ ಕೊಡಲಾಗಿದೆ. ಅದಾದ ಬಳಿಕವೂ ಸಲ್ಲಿಸಬಹುದು, ಆದರೆ, ದಂಡ ತೆರಬೇಕಾಗುತ್ತದೆ. ಲೇಟ್ ಫೀ ಎಂದು ನಿರ್ದಿಷ್ಟ ಮೊತ್ತದ ಶುಲ್ಕ ಕಟ್ಟಿಸಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ದೇಶ ಬಿಟ್ಟುಹೋಗುವವರಿಗೆ ಟ್ಯಾಕ್ಸ್ ಕ್ಲಿಯರೆನ್ಸ್ ನಿಯಮ; ಇದು ಎಲ್ಲರಿಗೂ ಕಡ್ಡಾಯವಲ್ಲ ಎಂದ ಸಿಬಿಡಿಟಿ

ಈ ರೀತಿ ತಡವಾಗಿ ಕಟ್ಟಲೂ ಡಿಸೆಂಬರ್ 31ರವರೆಗೆ ಅವಕಾಶ ಇದೆ. ಈ ಡಿಸೆಂಬರ್ 31ರ ಗಡುವು ಮೀರಿ ಹೋದರೆ ಆದಾಯ ತೆರಿಗೆ ಸೆಕ್ಷನ್ 234ಎ ಮತ್ತು 234ಬಿ ಅಡಿಯಲ್ಲಿ ತಡ ಪಾವತಿ ಶುಲ್ಕದ ಜೊತೆಗೆ ಬಾಕಿ ಮೊತ್ತವನ್ನು ಬಡ್ಡಿ ಸಮೇತ ಕಟ್ಟಬೇಕಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!