AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಜಿ20 ನಾಯಕತ್ವದ ಎಫೆಕ್ಟ್; ಚೀನಾದ ಸಿಲ್ಕ್ ರೋಡ್ ಪ್ರಾಜೆಕ್ಟ್​ನಿಂದ ಹೊರಬಿದ್ದ ಇಟಲಿ

Italy To Exit China's Silk Road Project: ಚೀನಾದ ಮಹತ್ವಾಕಾಂಕ್ಷಿ ಸಿಲ್ಕ್ ರೋಡ್ ಪ್ರಾಜೆಕ್ಟ್​ನಿಂದ ಹೊರಬೀಳಲು ಇಟಲಿ ನಿರ್ಧರಿಸಿದಂತಿದೆ. ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯ ವೇಳೆ ಚೀನಾ ಪ್ರಧಾನಿಯನ್ನು ಭೇಟಿ ಮಾಡಿದ ಇಟಲಿ ಪಿಎಂ ಜಾರ್ಜಿಯಾ ಮೆಲೋನಿ ಅವರು ಬಿಆರ್​ಐ ಯೋಜನೆಯಿಂದ ಇಟಲಿ ಹೊರಬೀಳಲಿದೆ ಎಂದು ತಿಳಿಸಿದರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದೇ ಜಿ20 ಸಭೆಯಲ್ಲಿ ಭಾರತ ಘೋಷಿಸಿದ ಹೊಸ ಎಕನಾನಿಕ್ ಕಾರಿಡಾರ್ ಯೋಜನೆಗೆ ಸಹಿಹಾಕಿದ ಹಲವು ದೇಶಗಳಲ್ಲಿ ಇಟಲಿಯೂ ಇದೆ.

ಭಾರತದ ಜಿ20 ನಾಯಕತ್ವದ ಎಫೆಕ್ಟ್; ಚೀನಾದ ಸಿಲ್ಕ್ ರೋಡ್ ಪ್ರಾಜೆಕ್ಟ್​ನಿಂದ ಹೊರಬಿದ್ದ ಇಟಲಿ
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 10, 2023 | 5:00 PM

Share

ನವದೆಹಲಿ, ಸೆಪ್ಟೆಂಬರ್ 10: ಏಷ್ಯಾ, ಯೂರೋಪ್ ಮತ್ತು ಆಫ್ರಿನ್ ದೇಶಗಳೊಂದಿಗೆ ಸರಾಗ ವ್ಯವಹಾರ ಸ್ಥಾಪಿಸಲು ಚೀನಾ ಕೈಗೊಂಡಿರುವ ಮಹತ್ವಾಕಾಂಕ್ಷಿ ಬೆಲ್ಟ್ ಅಂಡ್ ರೋಡ್ ಇನಿಷಿಯೇಟಿವ್ (BRI- Belt and Road Initiative) ಯೋಜನೆಗೆ ಮುಂದಿನ ದಿನಗಳು ಹೆಚ್ಚೆಚ್ಚು ತೊಡಕುಗಳನ್ನು ನಿರ್ಮಿಸುವ ಸಾಧ್ಯತೆ ಕಾಣುತ್ತಿದೆ. ಭಾರತದ ನೇತೃತ್ವದಲ್ಲಿ ನಡೆಯುವ ಇಂಡಿಯಾ ಮಿಡಲ್ ಈಸ್ಟ್ ಯೂರೋಪ್ ಎಕನಾಮಿಕ್ ಕಾರಿಡಾರ್ ಯೋಜನೆಯ ಘೋಷಣೆ ಆಗುತ್ತಿರುವಂತೆಯೇ ಚೀನಾದ ಸಿಲ್ಕ್ ರೋಡ್ ಪ್ರಾಜೆಕ್ಟ್​ಗೆ ಒಂದು ಪ್ರಮುಖ ವಿಕೆಟ್ ಪತನಗೊಂಡಿದೆ. ಜಿ20 ಶೃಂಗಸಭೆಯ ಮೊದಲ ದಿನವಾದ ನಿನ್ನೆ (ಸೆ. 9) ಭಾರತ ಯೂರೋಪ್ ಇಕನಾಮಿಕ್ ಕಾರಿಡಾರ್​ಗೆ ಎಂಒಯುಗೆ ಸಹಿಹಾಕಿದ ಬೆನ್ನಲ್ಲೇ ಇಟಲಿ ದೇಶ ಬಿಅರ್​ಐನಿಂದ ಹೊರಬೀಳಲು ನಿರ್ಧರಿಸಿದೆ.

ಜಿ20 ಶೃಂಗಸಭೆಯ ವೇಳೆ ಚೀನಾದ ಪ್ರಧಾನಿ ಲಿ ಕಿಯಾಂಗ್ ಅವರನ್ನು ಖಾಸಗಿಯಾಗಿ ಭೇಟಿ ಮಾಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮಿಲೋನಿ ಬೆಲ್ಟ್ ಅಂಡ್ ರೋಡ್ ಪ್ರಾಜೆಕ್ಟ್​ನಿಂದ ಹೊರಬೀಳುವ ಆಲೋಚನೆಯಲ್ಲಿರುವುದಾಗಿ ತಿಳಿಸಿದರೆಂದು ಬ್ಲೂಮ್​ಬರ್ಗ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಚೀನಾದ ಈ ಸಿಲ್ಕ್ ರೋಡ್ ಯೋಜನೆಯಿಂದ ಹೊರಬೀಳಲು ಇಟಲಿ ದಿಢೀರ್ ಆಗಿ ಕೈಗೊಂಡ ನಿರ್ಧಾರ ಅಲ್ಲ. ಬಿಆರ್​ಐ ಯೋಜನೆಯಲ್ಲಿ ಇಟಲಿ ಜೋಡಿತವಾಗಿದ್ದು ಅಮೆರಿಕಕ್ಕೆ ಇರಿಸುಮುರುಸು ತಂದಿತ್ತು. ಅಮೆರಿಕ ಮತ್ತು ಇಟಲಿ ನಡುವಿನ ಸಂಬಂಧದಲ್ಲಿ ಬಿರುಕು ಮೂಡಬಹುದೇನೋ ಎಂದನಿಸಿತ್ತು. ಇದೇ ಹೊತ್ತಿನಲ್ಲಿ ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಹೊಸ ಎಕನಾಮಿಕ್ ಕಾರಿಡಾರ್ ಯೋಜನೆಯ ಘೋಷಣೆ ಆಗಿದ್ದು, ಇಟಲಿ ಸೇರಿದಂತೆ ಹಲವು ದೇಶಗಳು ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿವೆ. ಹೀಗಾಗಿ, ಚೀನಾದ ಬಿಆರ್​​ಐ ಯೋಜನೆಯಿಂದ ಹೊರಬರುವುದು ಇಟಲಿ ನಿರ್ಧರಿಸುವುದು ಅನಿವಾರ್ಯ ಎಂದೆನ್ನಲಾಗಿದೆ.

ಇದನ್ನೂ ಓದಿ: ಚೀನಾದ ಮಹತ್ವಾಕಾಂಕ್ಷಿ ಸಿಲ್ಕ್ ರೋಡ್ ಯೋಜನೆಗೆ ಎದುರಾಗಿ ಭಾರತದಿಂದ ಪರ್ಯಾಯ ಎಕನಾಮಿಕ್ ಕಾರಿಡಾರ್ ಪ್ರಾಜೆಕ್ಟ್

ಚೀನಾದ ಅಧಿಪತ್ಯಕ್ಕೆ ಕಾರಣವಾಗುವ ಬೆಲ್ಟ್ ಅಂಡ್ ರೋಡ್ ಪ್ರಾಜೆಕ್ಟ್

ಚೀನಾದ ಬೆಲ್ಟ್ ಅಂಡ್ ರೋಡ್ ಪ್ರಾಜೆಕ್ಟ್ ಬಹಳ ದೊಡ್ಡ ಮಹತ್ವಾಕಾಂಕ್ಷಿ ಯೋಜನೆ ಎನಿಸಿದೆ. ಶತಮಾನಗಳ ಹಿಂದೆ ಚೀನಾ ಮತ್ತು ಯೂರೋಪ್ ನಡುವೆ ಸಾಕಷ್ಟು ವ್ಯವಹಾರಗಳ ಹರಿವು ಇತ್ತು. ಉದ್ದಕ್ಕೂ ಆರ್ಥಿಕ ಕಾರಿಡಾರ್ ಆಗಲೇ ನಿರ್ಮಾಣವಾಗಿತ್ತು. ಈಗ ಚೀನಾ ಗತ ಇತಿಹಾಸಕ್ಕೆ ಮರುಜೀವ ಕೊಡುತ್ತಿದೆ.

ಕೆಲವು ಟ್ರಿಲಿಯನ್ ಡಾಲರ್​ನಷ್ಟು ಮೊತ್ತದ ಈ ಯೋಜನೆಯ ಮೂಲಕ ಚೀನಾ 2047ರಷ್ಟರಲ್ಲಿ 65 ದೇಶಗಳ ಕಾರಿಡಾರ್ ನಿರ್ಮಿಸಹೊರಟಿದೆ. ಪಾಕಿಸ್ತಾನ, ಶ್ರೀಲಂಕಾ ಮೊದಲಾದ ದೇಶಗಳಿಗೆ ಕಾರಿಡಾರ್​ಗೆ ಪೂರಕವಾದ ಇನ್​ಫ್ರಾಸ್ಟ್ರಕ್ಚರ್ ನಿರ್ಮಿಸಲು ಸಾಲಗಳನ್ನು ಒದಗಿಸುತ್ತದೆ. ದೊಡ್ಡ ವ್ಯವಹಾರದಿಂದ ಭವಿಷ್ಯದಲ್ಲಿ ಭರ್ಜರಿ ಲಾಭ ಸಿಗುವ ನಿರೀಕ್ಷೆಯಲ್ಲಿ ತಮ್ಮ ಆದಾಯಕ್ಕೆ ಮೀರಿದ ಸಾಲಗಳನ್ನು ಮಾಡಿ ಪಾಕಿಸ್ತಾನದಂಥ ದೇಶಗಳು ಶೂಲಕ್ಕೆ ಸಿಲುಕುವಂತಾಗಿವೆ.

ಇದನ್ನೂ ಓದಿ: ಪ್ಯಾರಿಸ್ ಒಪ್ಪಂದದ ಹವಾಮಾನ ಗುರಿ ಈಡೇರಿಸಲು ಅಭಿವೃದ್ಧಿಶೀಲ ದೇಶಗಳಿಗೆ ಬೇಕು 5.9 ಟ್ರಿಲಿಯನ್ ಡಾಲರ್: ಜಿ20 ಸಭೆ ಅನಿಸಿಕೆ

ಸಾಲ ನೀಡಿ ಶೂಲಕ್ಕೆ ಸಿಲುಕಿಸುವ ತಂತ್ರ ಅನುಸರಿಸುತ್ತಿರುವ ಚೀನಾ, ಆ ಮೂಲಕ ಒಂದು ದೇಶದ ಮೇಲೆ ಹಿಡಿತ ಸಾಧಿಸುವ ಪ್ರಯತ್ನ ಮಾಡುತ್ತಿದೆ ಎಂಬ ಆರೋಪ ಇದೆ. ಜಿ20 ಶೃಂಗಸಭೆಯಲ್ಲಿ ಅಧ್ಯಕ್ಷನಾಗಿ ಭಾರತ ಈ ವಿಚಾರವನ್ನು ಪರೋಕ್ಷವಾಗಿ ಪ್ರಸ್ತಾಪಿಸಿ ಚೀನಾವನ್ನು ಕುಟುಕಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ