AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ITR Filing: ಶೀಘ್ರ ರೀಫಂಡ್​ನಿಂದ ಸಲೀಸು ಪಾವತಿ ತನಕ ಆದಾಯ ತೆರಿಗೆ ಇ ಪೋರ್ಟಲ್​ನಲ್ಲಿ ಏನೆಲ್ಲ ಅನುಕೂಲ?

ಆದಾಯ ತೆರಿಗೆ ಇಲಾಖೆಯಿಂದ ಹೊಸ ಇ- ಪೋರ್ಟಲ್ ಆರಂಭವಾಗಲಿದೆ. ಇದರಿಂದ ಏನೆಲ್ಲ ಅನುಕೂಲಗಳಿವೆ ಎಂಬ ಮಾಹಿತಿ ಇಲ್ಲಿದೆ.

ITR Filing:  ಶೀಘ್ರ ರೀಫಂಡ್​ನಿಂದ ಸಲೀಸು ಪಾವತಿ ತನಕ ಆದಾಯ ತೆರಿಗೆ ಇ ಪೋರ್ಟಲ್​ನಲ್ಲಿ ಏನೆಲ್ಲ ಅನುಕೂಲ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 04, 2021 | 5:02 PM

Share

ಮೇ 31, 2021ರ ಮಧ್ಯರಾತ್ರಿಯಿಂದ ಆದಾಯ ತೆರಿಗೆ ಇಲಾಖೆಯ ಇ- ಫೈಲಿಂಗ್​ ವೆಬ್​ಸೈಟ್​ ಆದ incometaxindiaefiling.gov.in ಕಾರ್ಯ ನಿರ್ವಹಣೆಯನ್ನು ನಿಲ್ಲಿಸಿದೆ. ಇನ್ನು ಹೊಸ ಇ- ಫೈಲಿಂಗ್ ವೆಬ್​ಸೈಟ್ incometax.gov.in – ಇದು ಜೂನ್ 6, 2021ರಂದು ಆರಂಭವಾಗಲಿದೆ. ಈ ಮಧ್ಯದ ಅವಧಿಯಲ್ಲಿ ಹಳೆ ವೆಬ್​ಸೈಟ್​ ಹೊಸದಕ್ಕೆ ಬದಲಾವಣೆ ಆಗಲಿದೆ. ಈ ಸಮಯದಲ್ಲಿ ತೆರಿಗೆ ಪಾವತಿದಾರರಿಗೆ ಯಾವುದೇ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಕಂದಾಯ ಇಲಾಖೆಯಿಂದ ಸೂಚನೆ ನೀಡಲಾಗಿದ್ದು, ತೆರಿಗೆ ನಿಯಮಾವಳಿಗಳು ಹಾಗೂ ತೆರಿಗೆಗೆ ಸಂಬಂಧಿಸಿದ ಅಹವಾಲು ಆಲಿಕೆ ಇದ್ದಲ್ಲಿ ಜೂನ್ 10, 2021ರ ನಂತರ ನಡೆಸಲು ಕೇಳಲಾಗಿದೆ. ಹೊಸ ಇ-ಫೈಲಿಂಗ್ ಸೈಟ್ ತೆರಿಗೆ ಪಾವತಿದಾರರಿಗೆ ಆಧುನಿಕವಾದ, ಅಡೆತಡೆ ಇಲ್ಲದಂಥ ಅನುಭವವನ್ನು ದೊರಕಿಸುತ್ತದೆ. ಹಲವು ಬಗೆಯಲ್ಲಿ ತಾಂತ್ರಿಕ ವೈಶಿಷ್ಟ್ಯಗಳನ್ನು ಸಹ ಈ ಪೋರ್ಟಲ್ ಹೊಂದಿದೆ.

ಪರಿಣತರ ಪ್ರಕಾರ, ಆದಾಯ ತೆರಿಗೆ ಇಲಾಖೆಯು ಈ ವೆಬ್​ಸೈಟ್​ ಅನ್ನು ಐಟಿಆರ್​ ಫೈಲಿಂಗ್ ಮತ್ತು ಪ್ರಶ್ನೆಗಳಿಗೆ ಉತ್ತರಿಸುವುದಕ್ಕೆ, ಅಸೆಸ್​ಮೆಂಟ್​ಗಳಿವೆ, ಮನವಿಗೆ, ದಂಡದಿಂದ ವಿನಾಯಿತಿಗೆ ಬಳಸಲಾಗುತ್ತದೆ. ಇಷ್ಟು ಮಾತ್ರವಲ್ಲದೆ, ಹೊಸ ಇ- ಫೈಲಿಂಗ್ ಪೋರ್ಟಲ್​ನಿಂದ ಈ ಕೆಳಕಂಡ ಅನುಕೂಲಗಳಿವೆ.

ಶೀಘ್ರ ರೀಫಂಡ್ ತಕ್ಷಣ ಪ್ರೊಸೆಸ್ ಆಗುವಂತೆ ಇನ್​ಕಮ್ ಟ್ಯಾಕ್ಸ್ ರಿಟರ್ನ್ಸ್ (ಐಟಿಆರ್) ಜತೆಗೆ ಹೊಸ ಇ- ಫೈಲಿಂಗ್ ಪೋರ್ಟಲ್ ಅನ್ನು ಇಂಟಿಗ್ರೇಟ್ ಮಾಡಲಾಗಿದೆ. ಇದರಿಂದಾಗಿ ತೆರಿಗೆಪಾವತಿದಾರರಿಗೆ ಶೀಘ್ರವಾಗಿ ರೀಫಂಡ್ ದೊರೆಯುತ್ತದೆ.

ಮೊಬೈಲ್ ಅಪ್ಲಿಕೇಷನ್ ಇ- ಪೋರ್ಟಲ್ ಆರಂಭವಾದ ಮೇಲೆ ಮೊಬೈಲ್ ಅಪ್ಲಿಕೇಷನ್ ಶುರುವಾಗಲಿದೆ. ಈ ಮೂಲಕ ಪೋರ್ಟಲ್​ನಲ್ಲಿ ಸಿಗುವಂಥ ಎಲ್ಲ ಕಾರ್ಯ ನಿರ್ವಹಣೆಯು ಮೊಬೈಲ್ ಆ್ಯಪ್​ನಲ್ಲೂ ದೊರೆಯುತ್ತದೆ. ಸದ್ಯಕ್ಕೆ ಯಾವುದೇ ಮೊಬೈಲ್ ಆ್ಯಪ್ ಇಲ್ಲ ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬೇಕು.

ಹೊಸ ಡ್ಯಾಶ್ ಬೋರ್ಡ್ ಹೊಸ ಇ- ಪೋರ್ಟಲ್ ಒಂದು ಹೊಸ ಸಿಂಗಲ್ ಡ್ಯಾಶ್​ ಬೋರ್ಡ್ ಒದಗಿಸುತ್ತದೆ. ಎಲ್ಲ ಇಂಟರಾಕ್ಷನ್, ಅಪ್​ಲೋಡ್​ಗಳು ಅಥವಾ ಬಾಕಿ ಕಾರ್ಯಗಳನ್ನು ತೆರಿಗೆ ಪಾವತಿದಾರರಿಗೆ ಅದು ತೋರಿಸುತ್ತದೆ.

ಇಂಟರಾಕ್ಟಿವ್ ಐಟಿಆರ್ ಸಿದ್ಧತೆ ಸಾಫ್ಟ್​ವೇರ್ ಐಟಿಆರ್ ಸಿದ್ಧತೆ ಸಾಫ್ಟ್​ವೇರ್ ಅನ್ನು ಆಫ್​ಲೈನ್ ಹಾಗೂ ಆನ್​ಲೈನ್ ಎರಡಕ್ಕೂ ಉಚಿತವಾಗಿ ತೆರಿಗೆದಾರರಿಗೆ ಒದಗಿಸಲಾಗುತ್ತದೆ. ತೆರಿಗೆದಾರ ಸ್ನೇಹಿ ಸಾಫ್ಟ್​ವೇರ್ ಆದ ಇದರಲ್ಲಿ ಇಂಟರ್​ ಆಕ್ಟಿವ್ ಪ್ರಶ್ನೆಗಳಿದ್ದು, ಇದರಿಂದ ಅನುಕೂಲ ಆಗಲಿದೆ. ತೆರಿಗೆ ಬಗ್ಗೆ ಯಾವುದೇ ಜ್ಞಾನ ಇಲ್ಲದಿದ್ದರೂ ಈ ಪೋರ್ಟಲ್ ಅನ್ನು ರಿಟರ್ನ್ಸ್ ಪ್ರೀ- ಫಿಲ್ಲಿಂಗ್​ಗೆ ಬಳಸಬಹುದು. ಆ ಮೂಲಕ ಐಟಿಆರ್​ನಲ್ಲಿ ಹೆಚ್ಚು ಭರ್ತಿ ಮಾಡಬೇಕು ಅಂತೇನೂ ಇರಲ್ಲ.

ತೆರಿಗೆದಾರರ ಪ್ರಶ್ನೆಗಳಿಗೆ ಉತ್ತರಿಸುವುದು ಸಲೀಸು ಟ್ಯುಟೋರಿಯರಲ್​ಗಳು, ವಿಡಿಯೋಗಳು, ಕಾಲ್​ಸೆಂಟರ್, ಚಾಟ್​ಬಾಟ್ ಅಥವಾ ಲೈವ್ ಏಜೆಂಟ್​ಗಳು ಈ ಸೈಟ್​ನಲ್ಲಿ ಇದ್ದು, ತೆರಿಗೆ ಪಾವತಿದಾರರ ಎಲ್ಲ ಪ್ರಶ್ನೆಗಳಿಗೂ ಉತ್ತರ ದೊರೆಯುತ್ತದೆ. ಹೊಸ ಕಾಲ್​ಸೆಂಟರ್ ಫ್ರೀಕ್ವೆಂಟ್ಲಿ ಆಸ್ಕಡ್ ಕ್ವೆಶ್ಚನ್ಸ್ (FAQs) ಮೂಲಕ ತೆರಿಗೆದಾರರಿಗೆ ನೆರವಾಗುತ್ತದೆ.

ಹೊಸ ಆನ್​ಲೈನ್ ತೆರಿಗೆ ಪಾವತಿ ಪದ್ಧತಿ ಬಹಳ ಸುಲಭವಾಗಿ ಪಾವತಿಯನ್ನು ಖಾತರಿ ಮಾಡಬೇಕು ಅನ್ನೋ ಕಾರಣಕ್ಕೆ ಹೊಸ ಐಟಿಆರ್ ವೆಬ್​ಸೈಟ್ ತೆರಿಗೆ ಸಂದಾಯ ಮಾಡಲು ಆನ್​ಲೈನ್ ಪಾವತಿ ವ್ಯವಸ್ಥೆಯನ್ನು ಸಹ ಹೊಂದಿದೆ. ನೆಟ್​ ಬ್ಯಾಂಕಿಂಗ್, ಯುಪಿಐ, ಕ್ರೆಡಿಟ್ ಕಾರ್ಡ್, ಆರ್​ಟಿಜಿಎಸ್​ ಅಥವಾ ಎನ್​ಇಎಫ್​ಟಿ ಹೀಗೆ ತೆರಿಗೆದಾರರ ಯಾವುದೇ ಖಾತೆಯಿಂದ ಮತ್ತು ಯಾವುದೇ ಬ್ಯಾಂಕ್​ನಿಂದ ತೆರಿಗೆ ಪಾವತಿಸಬಹುದು. ಈಗಿನ ವ್ಯವಸ್ಥೆಯಲ್ಲಿ ಯುಪಿಐ, ಕ್ರೆಡಿಟ್ ಕಾರ್ಡ್ ಮಾತ್ರ ಇತ್ತು.

ಇದನ್ನೂ ಓದಿ: ಜೂನ್ 7ಕ್ಕೆ ಆದಾಯ ತೆರಿಗೆ ಇಲಾಖೆ ಇ- ಪೋರ್ಟಲ್ ಶುರು; ಜೂನ್ 1ರಿಂದ 6ರ ತನಕ ಈಗಿನ ಪೋರ್ಟಲ್ ಮಾಡಲ್ಲ ಕೆಲಸ

(ITR filing new e portal will be launched by Income Tax department. Here is the features of portal)

Published On - 2:59 pm, Fri, 4 June 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ