AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧಾರ್, ಪ್ಯಾನ್ ಲಿಂಕ್ ಮಾಡದಿರುವವರಿಗೆ ದುಬಾರಿ ತೆರಿಗೆ; ಬರಲಿದೆ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್

PAN-Aadhaar link and tax demand: ಪ್ಯಾನ್ ಹೊಂದಿರುವವರು ಆಧಾರ್​ಗೆ ಲಿಂಕ್​ಗೆ ಮಾಡಬೇಕೆಂದು ಸರ್ಕಾರ ಸಾಕಷ್ಟು ಕಾಲಾವಕಾಶ ಕೊಟ್ಟಿತ್ತು. ಆದಾಗ್ಯೂ ಲಿಂಕ್ ಮಾಡದವರು ಈಗ ಆದಾಯ ತೆರಿಗೆ ಇಲಾಖೆಯಿಂದ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್ ಪಡೆಯಬೇಕಾಗಬಹುದು. ನಿರ್ದಿಷ್ಟ ಮಟ್ಟಕ್ಕಿಂತ ಹೆಚ್ಚಿನ ಆದಾಯ ಹೊಂದಿರುವವರು ಇನಾಪರೇಟಿವ್ ಪ್ಯಾನ್ ಹೊಂದಿದ್ದರೆ ಶೇ. 20ರಷ್ಟು ಟಿಡಿಎಸ್ ಕಡಿತ ಕಾಣಬೇಕಾಗುತ್ತದೆ.

ಆಧಾರ್, ಪ್ಯಾನ್ ಲಿಂಕ್ ಮಾಡದಿರುವವರಿಗೆ ದುಬಾರಿ ತೆರಿಗೆ; ಬರಲಿದೆ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್
ಪ್ಯಾನ್ ಆಧಾರ್ ಲಿಂಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 29, 2024 | 7:00 PM

Share

ನವದೆಹಲಿ, ಜುಲೈ 29: ಪ್ಯಾನ್ ನಂಬರ್ ಮತ್ತು ಆಧಾರ್ ನಂಬರ್ ಲಿಂಕ್ ಮಾಡದ ತೆರಿಗೆ ಪಾವತಿದಾರರು ಹೆಚ್ಚಿನ ಮೊತ್ತದ ತೆರಿಗೆ ಪಾತಿಸಬೇಕಾಗುತ್ತದೆ. ಮೇ 31ರೊಳಗೆ ಆಧಾರ್ ಜೊತೆ ಲಿಂಕ್ ಆಗದ ಪ್ಯಾನ್ ನಂಬರ್ ನಿಷ್ಕ್ರಿಯಗೊಂಡಿರುತ್ತದೆ. ಇಂಥ ಪ್ಯಾನ್ ನಂಬರ್ ಬಳಸಿದರೂ ಬಳಸದೇ ಇದ್ದರೂ ಎರಡೂ ಒಂದೆ. ಪ್ಯಾನ್ ಇಲ್ಲದೇ ಐಟಿಆರ್ ಸಲ್ಲಿಕೆ ಮಡಿದರೆ ಹೆಚ್ಚಿನ ತೆರಿಗೆ ಅನ್ವಯ ಆಗುತ್ತದೆ. 2023ರ ಮಾರ್ಚ್ 28, ಹಾಗೂ 2024ರ ಏಪ್ರಿಲ್ 23ರಂದು ಸಿಬಿಡಿಟಿ ಈ ಸಂಬಂಧ ಒಂದು ಸುತ್ತೋಲೆ ಹೊರಡಿಸಿತ್ತು. ಅದರ ಪ್ರಕಾರ ಸೆಕ್ಷನ್ 206ಎಎ ಅಡಿಯಲ್ಲಿ ಇನಾಪರೇಟಿವ್ ಪ್ಯಾನ್ ಬಳಸಿದ ತೆರಿಗೆ ಪಾವತಿದಾರರಿಗೆ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್ ಕೊಡಲಾಗುತ್ತಿದೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.

ವರ್ಷಕ್ಕೆ 2.5 ಲಕ್ಷ ರೂ ಒಳಗೆ ಸಂಬಳ ಇರುವವರಿಗೆ ವಿನಾಯಿತಿ ಇದೆ. ಅವರ ಪ್ಯಾನ್ ನಿಷ್ಕ್ರಿಯಗೊಂಡಿದ್ದರೂ ಅವರನ್ನು ಟ್ಯಾಕ್ಸ್ ಡಿಮ್ಯಾಂಡ್​ಗೆ ಪರಿಗಣಿಸಲಾಗುವುದಿಲ್ಲ. ಆದರೆ, ವಿನಾಯಿತಿ ಮಿತಿಗಿಂತ ಹೆಚ್ಚಿನ ಆದಾಯ ಇರುವವರು ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡದೇ ಇದ್ದರೆ ಕ್ರಮ ಎದುರಿಸಬೇಕಾಗುತ್ತದೆ.

ನಿಷ್ಕ್ರಿಯ ಪ್ಯಾನ್ ಇದ್ದರೆ ದುಪ್ಪಟ್ಟು ತೆರಿಗೆ?

ಇನಾಪರೇಟಿವ್ ಪ್ಯಾನ್, ಅಥವಾ ಆಧಾರ್​ಗೆ ಲಿಂಕ್ ಆಗದ ಪ್ಯಾನ್ ಅನ್ನು ಯಾರಾದರೂ ಬಳಸುತ್ತಿದ್ದರೆ ಅವರಿಗೆ ಶೇ. 20ರಷ್ಟು ಟಿಡಿಎಸ್ ತೆರಿಗೆ ಮುರಿದುಕೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಅಂಥ ತೆರಿಗೆ ಪಾವತಿದಾರರಿಗೆ ಟ್ಯಾಕ್ಸ್ ಡಿಮ್ಯಾಂಡ್ ಜಾರಿ ಮಾಡಲಾಗುತ್ತಿದೆ ಎಂದು ತೆರಿಗೆ ತಜ್ಞರೊಬ್ಬರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಟೊಮೆಟೋ ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ; ಸಬ್ಸಿಡಿ ದರದಲ್ಲಿ ಸರ್ಕಾರದಿಂದಲೇ ಟೊಮೆಟೋ ಮಾರಾಟ

2024ರ ಮಾರ್ಚ್ 31ರವರೆಗೆ ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡಲು ಗಡುವು ಕೊಡಲಾಗಿತ್ತು. ಲಿಂಕ್ ಆಗದ ಪ್ಯಾನ್ ಇನಾಪರೇಟಿವ್ ಆಗಿತ್ತು. ಮೇ 31ಕ್ಕೆ ಮತ್ತೊಂದು ಗಡುವು ಕೊಡಲಾಗಿತ್ತು. ಅಷ್ಟಾಗಿಯೂ ಆಧಾರ್ ಪ್ಯಾನ್ ಲಿಂಕ್ ಮಾಡದವರು ಈಗ ಹೆಚ್ಚುವರಿ ತೆರಿಗೆ ಕಟ್ಟುವುದು ಅನಿವಾರ್ಯವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​