AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರ ಕಣಿವೆಯ ದುರ್ಗಮ ಹಾದಿಯಲ್ಲಿ ರೈಲು ಪ್ರಯೋಗ ಯಶಸ್ವಿ; ಶೀಘ್ರದಲ್ಲೇ ಜಮ್ಮು-ಕಾಶ್ಮೀರಕ್ಕೆ ನೇರ ರೈಲು ಸಂಪರ್ಕ

Katra-Banihal section in Jammu and Kashmir: ಜಮ್ಮು ಮತ್ತು ಕಾಶ್ಮೀರದ ರೈಲು ಹಾದಿಯಲ್ಲಿ ಪ್ರಮುಖ ಕೊಂಡಿಯಾಗಿರುವ ಕಟರಾ ಮತ್ತು ಬನಿಹಾಲ್ ಸೆಕ್ಷನ್​ನಲ್ಲಿ ಲೈನ್ ಸಿದ್ಧಗೊಂಡಿದೆ. ಈ ದುರ್ಗಮ ಕಣಿವೆಯಲ್ಲಿನ ರೈಲ್ವೆ ಲೈನ್​ನಲ್ಲಿ ಟ್ರೈನನ್ನು ಯಶಸ್ವಿಯಾಗಿ ಓಡಿಸಲಾಗಿದೆ. ಭಾರತೀಯ ರೈಲ್ವೇಸ್​ನ ಇತಿಹಾಸದಲ್ಲೇ ಇದೊಂದು ಹೊಸ ಅಧ್ಯಾಯ ಎಂದು ಬಣ್ಣಿಸಲಾಗಿದೆ. ಶೀಘ್ರದಲ್ಲೇ ದೇಶದ ಇತರ ಭಾಗದಿಂದ ಜಮ್ಮು ಕಾಶ್ಮೀರಕ್ಕೆ ರೈಲು ಸಂಪರ್ಕ ಸಾಧ್ಯವಾಗಲಿದೆ.

ಕಾಶ್ಮೀರ ಕಣಿವೆಯ ದುರ್ಗಮ ಹಾದಿಯಲ್ಲಿ ರೈಲು ಪ್ರಯೋಗ ಯಶಸ್ವಿ; ಶೀಘ್ರದಲ್ಲೇ ಜಮ್ಮು-ಕಾಶ್ಮೀರಕ್ಕೆ ನೇರ ರೈಲು ಸಂಪರ್ಕ
ಜಮ್ಮು ಮತ್ತು ಕಾಶ್ಮೀರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 11, 2025 | 3:10 PM

Share

ಶ್ರೀನಗರ್, ಜನವರಿ 11: ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ದೇಶದ ಇತರ ಭಾಗದಿಂದ ನೇರ ರೈಲು ಸಂಪರ್ಕ ಸದ್ಯದಲ್ಲೇ ಆರಂಭವಾಗಲಿದೆ. ಇದಾದರೆ ಕಣಿವೆ ರಾಜ್ಯದ ಹಾಗು ರೈಲ್ವೇ ಇಲಾಖೆಯ ಪಾಲಿಗೆ ಹೊಸ ಇತಿಹಾಸವೇ ಆಗಲಿದೆ. ಎರಡು ದಶಕಗಳಿಂದ ಆಗುತ್ತಿರುವ ಪ್ರಯತ್ನ ಶೀಘ್ರದಲ್ಲೇ ಫಲಪ್ರದವಾಗಲಿದೆ. ಇಂಡಿಯನ್ ಎಕ್ಸ್​ಪ್ರೆಸ್ ವರದಿ ಪ್ರಕಾರ ಕಟರಾ ಮತ್ತು ಬನಿಹಾಲ್ ಸೆಕ್ಷನ್​ನ ಬಹಳ ದುರ್ಗಮ ಸ್ಥಳದಲ್ಲಿ ನಿರ್ಮಾಣವಾಗಿರುವ ರೈಲು ಹಾದಿಯಲ್ಲಿ ಪ್ರಯೋಗ ಯಶಸ್ವಿಯಾಗಿದೆ. ಈ ಟ್ರಯಲ್ ರನ್​ನಲ್ಲಿ ವಂದೇ ಭಾರತ್ ಟ್ರೈನ್​ವೊಂದು 110 ಕಿಮೀ ವೇಗದಲ್ಲಿ ಸಾಗಿ ಹೋಗಿದೆ.

ಸಂಗಲ​ದಾನ್ ಮತ್ತು ರಿಯಾಸಿ ನಡುವಿನ ರೈಲು ಹಾದಿಯಲ್ಲಿ ಪ್ರಯೋಗಗಳು ನಡೆಯುತ್ತಿವೆ. ಇದರ ಭಾಗವಾಗಿ ಕಟರ-ಬನಿಹಾಲ್ ಸೆಕ್ಷನ್ ಕೂಡ ಇದೆ. ಇಲ್ಲಿ ರೈಲು ಹಳಿ ನಿರ್ಮಿಸುವುದು ಬಹಳ ದೊಡ್ಡ ಸವಾಲಿನ ಕೆಲಸವಾಗಿತ್ತು. ಆಳದ ಮತ್ತು ಅಪಾಯಕಾರಿ ಕಣಿವೆಗಳಿರುವ ಈ ಜಾಗದಲ್ಲಿ ರೈಲ್ವೆ ಎಂಜಿನಿಯರುಗಳು ಬಲಿಷ್ಠ ಮೇಲ್ಸೇತುವೆಗಳನ್ನು ನಿರ್ಮಿಸಿದ್ದಾರೆ. ರೈಲ್ವೆ ಇಲಾಖೆಯ ನಾರ್ತರ್ನ್ ಸರ್ಕಲ್​ನ ರೈಲ್ವೆ ಸುರಕ್ಷತಾ ಆಯುಕ್ತರಾದ ದಿನೇಶ್ ಚಂದ್ ದೇಶವಾಲ್ ಅವರು ರೈಲ್ವೆ ಎಂಜಿನಿಯರುಗಳ ಕಾರ್ಯವನ್ನು ಶ್ಲಾಘಿಸಿದ್ದಾರೆ. ರೈಲ್ವೇಸ್​ನ ಇತಿಹಾಸದಲ್ಲೇ ಇದೊಂದು ಹೊಸ ಅಧ್ಯಾಯ ಎಂದಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ವಿಶ್ವದರ್ಜೆ ಲ್ಯಾಪ್​ಟಾಪ್ ನಿರ್ಮಾಣಕ್ಕೆ ಹೊಸ ಘಟಕ; ಕೇಂದ್ರ ಸಚಿವ ಎ ವೈಷ್ಣವ್​ರಿಂದ ಅಡಿಗಲ್ಲು

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕೂಡ ಪ್ರಶಂಸೆ

ಜಮ್ಮು ಕಾಶ್ಮೀರಕ್ಕೆ ಹೊಸ ರೈಲು ಹಾದಿ ನಿರ್ಮಾಣ ಮಾಡಿದ ಇಲಾಖೆಯ ಎಂಜಿನಿಯರುಗಳ ಕೌಶಲ್ಯವನ್ನು ಕೇಂದ್ರ ರೈಲ್ವೆ ಸಚಿವ ಡಾ. ಅಶ್ವಿನಿ ವೈಷ್ಣವ್ ಕೊಂಡಾಡಿದ್ದಾರೆ. ದುರ್ಗಮ ಕಣಿವೆಗಳಿರುವ ಈ ಪ್ರದೇಶದ ಭೌಗೋಳಿಕ ಮತ್ತು ಹವಾಮಾನ ಸವಾಲುಗಳ ನಡುವೆಯೂ ಈ ಯೋಜನೆ ಯಶಸ್ವಿಯಾಗಿರುವುದು ಎಂಜಿನಿಯರುಗಳ ಬದ್ಧತೆಯನ್ನು ತೋರಿಸುತ್ತದೆ ಎಂದಿರುವ ವೈಷ್ಣವ್, ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರ ಕಣಿವೆ ನಡುವೆ ಟ್ರೈನು ಸಂಚಾರ ಆರಂಭವಾಗಲಿದೆ ಎಂದಿದ್ದಾರೆ.

111 ಕಿಮೀ ರೈಲು ಹಾದಿ ಅಂತಿಂಥದ್ದಲ್ಲ…

ಜಮ್ಮು ಮತ್ತು ಕಾಶ್ಮೀರವು ಕಠಿಣ ಮತ್ತು ದುರ್ಗಮ ಕಣಿವೆಗಳಿಂದ ಕೂಡಿದೆ. ಇಲ್ಲಿ ಉಷ್ಣಾಂಶ ಮೈನಸ್ 20 ಡಿಗ್ರಿವರೆಗೂ ಹೋಗುತ್ತದೆ. ಇಲ್ಲಿ 111 ಕಿಮೀ ರೈಲು ಹಾದಿಯಲ್ಲಿ 97 ಕಿಮೀಯಷ್ಟು ಹಾದಿಯು ಸುರಂಗಗಳಲ್ಲೇ ಸಾಗಿ ಹೋಗುತ್ತದೆ. 6 ಕಿಮೀಯಷ್ಟು ಹಾದಿಯು ಮೇಲ್ಸೇತುವೆಗಳಲ್ಲಿ ಸಾಗುತ್ತದೆ. ಹೀಗಾಗಿ, ಈ ರೈಲ್ವೆ ಲೈನ್​ನ ಪ್ರಾಜೆಕ್ಟ್ ಅನ್ನು ಮುಕ್ತಾಯಗೊಳಿಸಲು ಎರಡು ದಶಕಕ್ಕಿಂತ ಹೆಚ್ಚಿನ ಅವಧಿ ತೆಗೆದುಕೊಂಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು