AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ ಪ್ರಕರಣ: 538 ಕೋಟಿ ರೂ ಮೌಲ್ಯದ ಜೆಟ್ ಏರ್​ವೇಸ್ ಆಸ್ತಿ ಮುಟ್ಟುಗೋಲು

ED Seizes Jet Airways Properties: ಇಡಿ ಅಧಿಕಾರಿಗಳು ಜೆಟ್ ಏರ್​ವೇಸ್​ನ ಸಂಸ್ಥಾಪಕ ನರೇಶ್ ಗೋಲ್ ಹಾಗೂ ಅವರ ಕುಟುಂಬ ಸದಸ್ಯರು ಮತ್ತಿತರರಿಗೆ ಸೇರಿದ 538 ಕೋಟಿ ರೂಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಜಫ್ತಿ ಮಾಡಿದೆ ಎನ್ನಲಾಗಿದೆ. ಕೆನರಾ ಬ್ಯಾಂಕ್ ದಾಖಲಿಸಿದ ವಂಚನೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ಗೋಯಲ್ ಹಾಗೂ ಐವರು ಇತರರ ವಿರುದ್ಧ ನಿನ್ನೆ ಮಂಗಳವಾರ ಚಾರ್ಜ್​ಶೀಟ್ ಸಲ್ಲಿಕೆ ಮಾಡಿತ್ತು. ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ (ಪಿಎಂಎಲ್​ಎ ಆ್ಯಕ್ಟ್) ಅಡಿಯಲ್ಲಿ ಇಡಿಯಿಂದ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: 538 ಕೋಟಿ ರೂ ಮೌಲ್ಯದ ಜೆಟ್ ಏರ್​ವೇಸ್ ಆಸ್ತಿ ಮುಟ್ಟುಗೋಲು
ನರೇಶ್ ಗೋಯಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 01, 2023 | 6:42 PM

Share

ನವದೆಹಲಿ, ನವೆಂಬರ್ 1: ಜೆಟ್ ಏರ್ವೇಸ್ ಸಂಸ್ಥೆ ಭಾಗಿಯಾಗಿರುವ ಆರೋಪ ಇರುವ ಮನಿ ಲಾಂಡರಿಂಗ್ (money laundering) ಅಥವಾ ಅಕ್ರಮ ಹಣ ನಿರ್ವಹಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಹಲವು ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದು ಮಾಧ್ಯಮಗಳಿಗೆ ಮಾಹಿತಿ ಬಂದಿದೆ. ವರದಿ ಪ್ರಕಾರ ಇಡಿ ಅಧಿಕಾರಿಗಳು ಜೆಟ್ ಏರ್​ವೇಸ್​ನ ಸಂಸ್ಥಾಪಕ ನರೇಶ್ ಗೋಯಲ್ ಹಾಗೂ ಅವರ ಕುಟುಂಬ ಸದಸ್ಯರು ಮತ್ತಿತರರಿಗೆ ಸೇರಿದ 538 ಕೋಟಿ ರೂಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಜಫ್ತಿ ಮಾಡಿದೆ ಎನ್ನಲಾಗಿದೆ.

ಭಾರತದ ಕೆಲ ರಾಜ್ಯಗಳಲ್ಲಿ ಹಾಗೂ ಲಂಡನ್ ಮತ್ತು ದುಬೈನಲ್ಲಿರುವ 17 ಫ್ಲ್ಯಾಟ್, ಬಂಗಲೆ ಹಾಗೂ ಕಮರ್ಷಿಯಲ್ ಬಿಲ್ಡಿಂಗ್​ಗಳನ್ನು ಸೀಜ್ ಮಾಡಲಾಗಿದೆ. ಗೋಯಲ್ ಕುಟುಂಬದವರು ಹಾಗೂ ಜೆಟ್ ಏರ್ ಪ್ರೈ ಲಿ, ಜೆಟ್ ಎಂಟರ್ಪ್ರೈಸಸ್ ಹೆಸರುಗಳಲ್ಲಿ ಈ ಕಟ್ಟಡಗಳನ್ನು ನೊಂದಾಯಿಸಲಾಗಿದೆ.

ಕೆನರಾ ಬ್ಯಾಂಕ್ ದಾಖಲಿಸಿದ ವಂಚನೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ಗೋಯಲ್ ಹಾಗೂ ಐವರು ಇತರರ ವಿರುದ್ಧ ನಿನ್ನೆ ಮಂಗಳವಾರ ಚಾರ್ಜ್​ಶೀಟ್ ಸಲ್ಲಿಕೆ ಮಾಡಿತ್ತು. ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ (ಪಿಎಂಎಲ್​ಎ ಆ್ಯಕ್ಟ್) ಅಡಿಯಲ್ಲಿ ಇಡಿಯಿಂದ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Bank Holidays: ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ಬ್ಯಾಂಕುಗಳಿಗೆ 15 ದಿನ ರಜೆ; ಕರ್ನಾಟಕದಲ್ಲಿ ಎಷ್ಟು?; ಇಲ್ಲಿದೆ ಪಟ್ಟಿ

ಜೆಟ್ ಏರ್ವೇಸ್​ನ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಸೆಪ್ಟೆಂಬರ್ 1ರಂದು ಇಡಿ ಅಧಿಕಾರಿಗಳು ಬಂಧಿಸಿದ್ದರು. ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ಸದ್ಯ ಅವರನ್ನು ಇರಿಸಲಾಗಿದೆ.

ಈ ಪ್ರಕರಣವನ್ನು ಮೊದಲು ಬಹಿರಂಪಡಿಸಿದ ಕೆನರಾ ಬ್ಯಾಂಕ್ ಸಲ್ಲಿಸಿದ ಎಫ್​ಐಆರ್​ನಲ್ಲಿ, ಬ್ಯಾಂಕ್​ನಿಂದ ನೀಡಲಾದ 848 ಕೋಟಿ ರೂ ಒಟ್ಟು ಸಾಲದ ಪೈಕಿ 538 ಕೋಟಿ ರೂ ಸಾಲ ಪಾವತಿಯಾಗದೇ ಬಾಕಿ ಉಳಿದಿದೆ ಎಂದು ಆರೋಪಿಸಲಾಗಿತ್ತು.

ಈ ವೇಳೆ ಜೆಟ್ ಏರ್ವೇಸ್ ಸಂಸ್ಥೆ ಬ್ಯಾಂಕ್​ನ ಸಾಲದ ಹಣವನ್ನು ಬೇರೆ ಬೇರೆ ಉದ್ದೇಶಗಳಿಗೆ ಬಳಸಿ ಅಕ್ರಮ ಎಸಗಿದೆ. ಬೇರೆ ದೇಶಗಳಲ್ಲಿ ಟ್ರಸ್ಟ್​​ಗಳನ್ನು ರಚಿಸಿ ಹಣವನ್ನು ಅಲ್ಲಿಗೆ ವರ್ಗಾಯಿಸಿದೆ. ಆ ಟ್ರಸ್ಟ್​ಗಳ ಮೂಲಕ ಚಿರಾಸ್ತಿಗಳನ್ನು ಖರೀದಿಸಲಾಗಿದೆ. ಆಸ್ತಿ ಮಾತ್ರವಲ್ಲ, ಈ ಸಾಲದ ಹಣವನ್ನೇ ಬಳಸಿ ಬಟ್ಟೆಬರೆ, ಪೀಠೋಪಕರಣ, ಒಡವೆ ಇತ್ಯಾದಿಗಳನ್ನು ಗೋಯಲ್ ಕುಟುಂಬ ಸದಸ್ಯರು ಖರೀದಿ ಮಾಡಿರುವುದು ಆಡಿಟಿಂಗ್ ವೇಳೆ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ಎಲ್ ಅಂಡ್ ಟಿಯಿಂದ ಫ್ಯಾಬ್ಲೆಸ್ ಸೆಮಿಕಂಡಕ್ಟರ್ ಡಿಸೈನ್ ಘಟಕ; ಪ್ರತ್ಯೇಕ ಉಪಸಂಸ್ಥೆ ರಚನೆಗೆ ಅನುಮೋದನೆ

ಈ ಪ್ರಕರಣ ಕೋರ್ಟ್ ವಿಚಾರಣೆಯಲ್ಲಿದೆ. ಎರಡು ತಿಂಗಳ ಹಿಂದೆ ನಡೆದ ವಿಚಾರಣೆ ವೇಳೆ ನರೇಶ್ ಗೋಯಲ್ ಅವರು ತಮ್ಮ ಹಣ ಬಳಕೆಯ ರೀತಿಯನ್ನು ಸಮರ್ಥಿಸಿಕೊಂಡಿದ್ದರು. ವೈಮಾನಿಕ ವಲಯವು ಬ್ಯಾಂಕ್ ಸಾಲದ ಮೇಲೆ ನಿಂತಿರುತ್ತವೆ. ಸಾಲದ ಹಣದ ಬಳಕೆಯನ್ನು ಮನಿ ಲಾಂಡರಿಂಗ್ ಎನ್ನಲಾಗದು ಎಂಬುದು ಅವರ ವಾದ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ